ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡ ಬಳಿಕ ಮೊದಲ ಬಾರಿಗೆ ಎನ್.ಆರ್.ಸಂತೋಷ್, ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದರು.
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಆಗಮಿಸಿದ ಸಂತೋಷ್, ಸಿಎಂ ಬಿಎಸ್ವೈ ಅವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಅಧಿಕೃತವಾಗಿ ಕೆಲಸ ಆರಂಭಿಸುವ ಮೊದಲ ಕೆಲವೊಂದು ಸೂಚನೆಗಳನ್ನು ಪಡೆದುಕೊಂಡರು.
ಸಂಪುಟ ದರ್ಜೆಯ ಸ್ಥಾನಮಾನ ಹೊಂದಿರುವ ಅನುಭವಿ ರಾಜಕಾರಣಿಗಳಿಗೆ ನೀಡುವ ಹುದ್ದೆಯನ್ನು ನೀಡಿ ಅವಕಾಶ ಕಲ್ಪಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುವ ಭರವಸೆ ನೀಡಿ ಅಧಿಕೃತವಾಗಿ ಕೆಲಸ ಆರಂಭಿಸಿದರು.