ETV Bharat / state

ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ: 8 ಶಾಸಕರಿಗೆ ಮೊದಲ ಬಾರಿ ಒಲಿದ ಸಚಿವ ಸ್ಥಾನ

author img

By

Published : May 27, 2023, 10:19 AM IST

11.45 ಕ್ಕೆ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.

Cabinet expansion
ಸಚಿವ ಸಂಪುಟ ವಿಸ್ತರಣೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು ಎಂಟು ಮಂದಿ ಶಾಸಕರು ಇದೇ ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಇಂದು ಪೂರ್ಣ ಪ್ರಮಾಣದಲ್ಲಿ ರಚನೆಗೊಳ್ಳಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಎಂಟು ಸಚಿವರು ಕಳೆದ ವಾರ ಪ್ರಮಾಣವಚನ ಸ್ವೀಕರಿಸಿದ್ದರು.

ಇದೀಗ ಬಾಕಿ ಉಳಿದಿರುವ 24 ಸಚಿವ ಸ್ಥಾನಗಳನ್ನು ಪೂರ್ತಿ ಮಾಡಲಾಗುತ್ತಿದೆ. ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಬೆಳಗ್ಗೆ 11.45 ಕ್ಕೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. ರಾಜಭವನದ ಒಳಗಿನ ಗಾಜಿನ ಮನೆಯಲ್ಲಿ ಸಮಾರಂಭಕ್ಕೆ ವೇದಿಕೆ ಸಿದ್ಧಪಡಿಸಲಾಗಿದೆ.

ನೂತನ ಸಚಿವರಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಮತ್ತು ಪಾಸ್ ಇದ್ದವರಿಗೆ ಮಾತ್ರ ರಾಜಭವನದ ಒಳಗೆ ಪ್ರವೇಶ ಅವಕಾಶ ಇದೆ. ಅಗತ್ಯ ಪ್ರಮಾಣದ ಪಾಸುಗಳನ್ನು ಈಗಾಗಲೇ ವಿತರಿಸಲಾಗಿದ್ದು ಪಾಸ್ ನೊಂದಿಗೆ ಬಂದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಹೊರ ಭಾಗದಲ್ಲಿ ಸಹ ಅಭಿಮಾನಿಗಳಿಗೆ ಪ್ರಮಾಣವಚನ ಸ್ವೀಕಾರವನ್ನು ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತಿದೆ. ಬೃಹತ್ ಡಿಜಿಟಲ್ ಡಿಸ್ಪ್ಲೇಗಳನ್ನು ಅಳವಡಿಸಿ ವೀಕ್ಷಕರಿಗೆ ಅವಕಾಶ ಮಾಡಿಕೊಡಲಾಗುತ್ತಿದೆ.

ಮೊದಲ ಬಾರಿ ಸಚಿವರಾಗುತ್ತಿರುವವರು: ನೂತನ ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕರಿಸುತ್ತಿರುವವರಲ್ಲಿ ಎಂಟು ಮಂದಿ ಇದೇ ಮೊದಲ ಬಾರಿಗೆ ಸಚಿವರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಪಿರಿಯಾಪಟ್ಟಣ ವೆಂಕಟೇಶ್, ಲಕ್ಷ್ಮೀ ಹೆಬ್ಬಾಳ್ಕರ್, ಮಂಕಾಳು ವೈದ್ಯ, ಬೈರತಿ ಸುರೇಶ್, ಡಾ.ಎಂ ಸಿ ಸುಧಾಕರ್, ಬೋಸರಾಜು, ಮಧು ಬಂಗಾರಪ್ಪ ಹಾಗೂ ಬಿ ನಾಗೇಂದ್ರ ಸಚಿವರಾಗಿ ಮೊದಲ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.

ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ತನ್ವೀರ್ ಸೇಠ್ ಈ ಸಾರಿ ಸಚಿವ ಸ್ಥಾನ ಸಿಕ್ಕಿಲ್ಲ ಇದರ ಜೊತೆ ಆರ್ ವಿ ದೇಶಪಾಂಡೆ, ಎಂ ಕೃಷ್ಣಪ್ಪ, ಹೆಚ್ ವೈ ಮೇಟಿ, ಲಕ್ಷ್ಮಣ್ ಸವದಿ, ಅಜಯ್ ಸಿಂಗ್, ಎನ್ ಎ ಹ್ಯಾರಿಸ್, ಪುಟ್ಟರಂಗಶೆಟ್ಟಿ, ಹರಿಪ್ರಸಾದ್, ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ಸಲೀಂ ಅಹಮದ್ ಮತ್ತಿತರಿಗೆ ತೀವ್ರ ನಿರಾಸೆ ಉಂಟಾಗಿದೆ.

ಒಂದೆಡೆ ಹೊಸದಾಗಿ ಸಚಿವ ಸಂಪುಟ ಸೇರುತ್ತಿರುವವರ ಸಂಭ್ರಮ ಹಾಗೂ ಇನ್ನೊಂದೆಡೆ ಸಂಪುಟದಲ್ಲಿ ಅವಕಾಶ ಸಿಗದವರ ಬೇಸರ ಎರಡು ಕಾಂಗ್ರೆಸ್ ನಾಯಕರಿಗೆ ಎದುರಾಗಿದೆ. ಸಂತಸದ ಜೊತೆ ಬೇಸರವು ದೊಡ್ಡಮಟ್ಟದಲ್ಲಿಯೇ ಇದ್ದು ಅದನ್ನು ಹೇಗೆ ನಿಭಾಯಿಸುತ್ತಾರೆ ಎಂಬುದನ್ನ ಕಾದು ನೋಡಬೇಕಿದೆ.

ಎಲ್ಲಕ್ಕೂ ಮುಖ್ಯವಾಗಿ ಹೈಕಮಾಂಡ್ ನಾಯಕರ ಸಂಪೂರ್ಣ ಬೆಂಬಲವಿದ್ದರೂ ಸಹ ಸಚಿವ ಸಂಪುಟ ಸೇರುವಲ್ಲಿ ವಿಫಲರಾಗಿರುವ ಬಿಕೆ ಹರಿಪ್ರಸಾದ್ ಬೇಸರ ದೊಡ್ಡ ಮಟ್ಟದಲ್ಲಿದೆ. ವಿಧಾನಪರಿಷತ್ ಪ್ರತಿಪಕ್ಷ ನಾಯಕರು ಆಗಿರುವ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರೆಯಲು ತೀರ್ಮಾನಿಸಿದ್ದಾಗಿ ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಪಾಲಿಗೆ ಇದು ದೊಡ್ಡ ಮಟ್ಟದ ಸಮಸ್ಯೆ ತಂದಿಡುವ ಸಾಧ್ಯತೆ ಇದೆ.

ಇದನ್ನೂ ಓದಿ: 24 ಶಾಸಕರಿಗೆ ಮಂತ್ರಿ ಭಾಗ್ಯ... ರಾಜಭವನದಲ್ಲಿ ಇಂದು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದ್ದು ಎಂಟು ಮಂದಿ ಶಾಸಕರು ಇದೇ ಮೊದಲ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಇಂದು ಪೂರ್ಣ ಪ್ರಮಾಣದಲ್ಲಿ ರಚನೆಗೊಳ್ಳಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಎಂಟು ಸಚಿವರು ಕಳೆದ ವಾರ ಪ್ರಮಾಣವಚನ ಸ್ವೀಕರಿಸಿದ್ದರು.

ಇದೀಗ ಬಾಕಿ ಉಳಿದಿರುವ 24 ಸಚಿವ ಸ್ಥಾನಗಳನ್ನು ಪೂರ್ತಿ ಮಾಡಲಾಗುತ್ತಿದೆ. ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಬೆಳಗ್ಗೆ 11.45 ಕ್ಕೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. ರಾಜಭವನದ ಒಳಗಿನ ಗಾಜಿನ ಮನೆಯಲ್ಲಿ ಸಮಾರಂಭಕ್ಕೆ ವೇದಿಕೆ ಸಿದ್ಧಪಡಿಸಲಾಗಿದೆ.

ನೂತನ ಸಚಿವರಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಮತ್ತು ಪಾಸ್ ಇದ್ದವರಿಗೆ ಮಾತ್ರ ರಾಜಭವನದ ಒಳಗೆ ಪ್ರವೇಶ ಅವಕಾಶ ಇದೆ. ಅಗತ್ಯ ಪ್ರಮಾಣದ ಪಾಸುಗಳನ್ನು ಈಗಾಗಲೇ ವಿತರಿಸಲಾಗಿದ್ದು ಪಾಸ್ ನೊಂದಿಗೆ ಬಂದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಹೊರ ಭಾಗದಲ್ಲಿ ಸಹ ಅಭಿಮಾನಿಗಳಿಗೆ ಪ್ರಮಾಣವಚನ ಸ್ವೀಕಾರವನ್ನು ವೀಕ್ಷಿಸುವ ಅವಕಾಶ ಕಲ್ಪಿಸಲಾಗುತ್ತಿದೆ. ಬೃಹತ್ ಡಿಜಿಟಲ್ ಡಿಸ್ಪ್ಲೇಗಳನ್ನು ಅಳವಡಿಸಿ ವೀಕ್ಷಕರಿಗೆ ಅವಕಾಶ ಮಾಡಿಕೊಡಲಾಗುತ್ತಿದೆ.

ಮೊದಲ ಬಾರಿ ಸಚಿವರಾಗುತ್ತಿರುವವರು: ನೂತನ ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕರಿಸುತ್ತಿರುವವರಲ್ಲಿ ಎಂಟು ಮಂದಿ ಇದೇ ಮೊದಲ ಬಾರಿಗೆ ಸಚಿವರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಪಿರಿಯಾಪಟ್ಟಣ ವೆಂಕಟೇಶ್, ಲಕ್ಷ್ಮೀ ಹೆಬ್ಬಾಳ್ಕರ್, ಮಂಕಾಳು ವೈದ್ಯ, ಬೈರತಿ ಸುರೇಶ್, ಡಾ.ಎಂ ಸಿ ಸುಧಾಕರ್, ಬೋಸರಾಜು, ಮಧು ಬಂಗಾರಪ್ಪ ಹಾಗೂ ಬಿ ನಾಗೇಂದ್ರ ಸಚಿವರಾಗಿ ಮೊದಲ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ.

ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ತನ್ವೀರ್ ಸೇಠ್ ಈ ಸಾರಿ ಸಚಿವ ಸ್ಥಾನ ಸಿಕ್ಕಿಲ್ಲ ಇದರ ಜೊತೆ ಆರ್ ವಿ ದೇಶಪಾಂಡೆ, ಎಂ ಕೃಷ್ಣಪ್ಪ, ಹೆಚ್ ವೈ ಮೇಟಿ, ಲಕ್ಷ್ಮಣ್ ಸವದಿ, ಅಜಯ್ ಸಿಂಗ್, ಎನ್ ಎ ಹ್ಯಾರಿಸ್, ಪುಟ್ಟರಂಗಶೆಟ್ಟಿ, ಹರಿಪ್ರಸಾದ್, ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ಸಲೀಂ ಅಹಮದ್ ಮತ್ತಿತರಿಗೆ ತೀವ್ರ ನಿರಾಸೆ ಉಂಟಾಗಿದೆ.

ಒಂದೆಡೆ ಹೊಸದಾಗಿ ಸಚಿವ ಸಂಪುಟ ಸೇರುತ್ತಿರುವವರ ಸಂಭ್ರಮ ಹಾಗೂ ಇನ್ನೊಂದೆಡೆ ಸಂಪುಟದಲ್ಲಿ ಅವಕಾಶ ಸಿಗದವರ ಬೇಸರ ಎರಡು ಕಾಂಗ್ರೆಸ್ ನಾಯಕರಿಗೆ ಎದುರಾಗಿದೆ. ಸಂತಸದ ಜೊತೆ ಬೇಸರವು ದೊಡ್ಡಮಟ್ಟದಲ್ಲಿಯೇ ಇದ್ದು ಅದನ್ನು ಹೇಗೆ ನಿಭಾಯಿಸುತ್ತಾರೆ ಎಂಬುದನ್ನ ಕಾದು ನೋಡಬೇಕಿದೆ.

ಎಲ್ಲಕ್ಕೂ ಮುಖ್ಯವಾಗಿ ಹೈಕಮಾಂಡ್ ನಾಯಕರ ಸಂಪೂರ್ಣ ಬೆಂಬಲವಿದ್ದರೂ ಸಹ ಸಚಿವ ಸಂಪುಟ ಸೇರುವಲ್ಲಿ ವಿಫಲರಾಗಿರುವ ಬಿಕೆ ಹರಿಪ್ರಸಾದ್ ಬೇಸರ ದೊಡ್ಡ ಮಟ್ಟದಲ್ಲಿದೆ. ವಿಧಾನಪರಿಷತ್ ಪ್ರತಿಪಕ್ಷ ನಾಯಕರು ಆಗಿರುವ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರೆಯಲು ತೀರ್ಮಾನಿಸಿದ್ದಾಗಿ ಆಪ್ತರ ಬಳಿ ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಪಾಲಿಗೆ ಇದು ದೊಡ್ಡ ಮಟ್ಟದ ಸಮಸ್ಯೆ ತಂದಿಡುವ ಸಾಧ್ಯತೆ ಇದೆ.

ಇದನ್ನೂ ಓದಿ: 24 ಶಾಸಕರಿಗೆ ಮಂತ್ರಿ ಭಾಗ್ಯ... ರಾಜಭವನದಲ್ಲಿ ಇಂದು ಪ್ರಮಾಣವಚನ ಸ್ವೀಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.