ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆಯ ಪ್ರಮಾಣ ದಿನೇ ದಿನೆ ಇಳಿಕೆಯಾಗುತ್ತಿದ್ದು, ಹೆಚ್ಚು ಪ್ರಕರಣಗಳು ಕಂಡುಬರುತ್ತಿರುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಲು ಮುಖ್ಯ ಆಯುಕ್ತ ಗೌರವ್ ಗುಪ್ತ ಪಾಲಿಕೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ಕೋವಿಡ್ ಸೋಂಕು ನಿಯಂತ್ರಿಸುವ ಸಂಬಂಧ ಗುರುವಾರ ನಡೆದ ವರ್ಚುಯಲ್ ಸಭೆ ಉದ್ದೇಶಿಸಿ ಮಾತನಾಡಿ, ಪಾಲಿಕೆಯ ಎಲ್ಲ 8 ವಲಯಗಳಲ್ಲಿ ಕಳೆದ ವಾರದ ಕೇಸ್ ಟ್ರೆಂಡ್ ಅನ್ನು ಪರಿಶೀಲಿಸಲಾಗಿದ್ದು, ನಿತ್ಯದ ಕೋವಿಡ್ ಪ್ರಕರಣಗಳ ಸಂಖ್ಯೆಗಳಲ್ಲಿ ಸುಮಾರು ಶೇ.30 ರಷ್ಟು ಇಳಿಕೆ ಕಂಡಿದೆ. ಪಾಸಿಟಿವಿಟಿ ಪ್ರಮಾಣವು ಕೂಡಾ ಶೇ 25 ರಿಂದ ಶೇ 17 ರಿಂದ 20ಕ್ಕೆ ಇಳಿಕೆಯಾಗಿದೆ.
ಬಿಟಿಎಂ ಬಡಾವಣೆ, ಮಲ್ಲೇಶ್ವರ, ಹೆಚ್.ಎಸ್.ಆರ್ ಬಾಡಾವಣೆ, ಕೋಣನಕುಂಟೆ ವಾರ್ಡ್ಗಳಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳಿದ್ದು, ಈ ಪ್ರದೇಶಗಳಲ್ಲಿ ಕಟ್ಟುನಿಟ್ಟಾದ ಕಂಟೈನ್ಮೆಂಟ್ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಬಿಬಿಎಂಪಿ ಕಚೇರಿ
