ETV Bharat / state

ಅಪಘಾತದಲ್ಲಿ ಮಡಿದ KSRTC ಸಿಬ್ಬಂದಿಗೆ ₹1 ಕೋಟಿ ಅಪಘಾತ ವಿಮೆ; ಇಬ್ಬರು ಸಿಬ್ಬಂದಿಯ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ

author img

By

Published : Jul 16, 2023, 8:35 AM IST

ರಸ್ತೆ ಅಪಘಾತದಲ್ಲಿ ಮೃತಪಟ್ಟ ಇಬ್ಬರು ಕೆಎಸ್ಆರ್​ಟಿಸಿ ಸಿಬ್ಬಂದಿಯ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರದ ಚೆಕ್ ವಿತರಿಸಲಾಗಿದೆ.

Minister Ramalingareddy
ರಾಮಲಿಂಗಾ ರೆಡ್ಡಿ
ಕೆಎಸ್ಆರ್​ಟಿಸಿ ಸಿಬ್ಬಂದಿ ಕುಟುಂಬಕ್ಕೆ ಚೆಕ್‌ ವಿತರಿಸಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ದೇಶದ ರಸ್ತೆ ಸಾರಿಗೆ ನಿಗಮಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಸಿಬ್ಬಂದಿಗೆ ಒಂದು ಕೋಟಿ ರೂಪಾಯಿ ಅಪಘಾತ ಪರಿಹಾರ ವಿಮೆ ಪರಿಚಯಿಸಿರುವ ಕೆಎಸ್ಆರ್​ಟಿಸಿ, ಇಬ್ಬರು ಸಿಬ್ಬಂದಿಯ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರದ ಚೆಕ್ ವಿತರಿಸಿತು. ಇದರ ಜೊತೆಗೆ, ಅನುಕಂಪದ ಆಧಾರದಲ್ಲಿ ಉದ್ಯೋಗ ಭರವಸೆ ನೀಡಲಾಗಿದೆ.

ಕೆಎಸ್ಆರ್​ಟಿಸಿ ಸಿಬ್ಬಂದಿಗೆ ಒಂದು ಕೋಟಿ ರೂ. ಗಳ ಅಪಘಾತ ವಿಮೆ ಜಾರಿಗೆ ತಂದ ನಂತರ ಬೆಂಗಳೂರಿನ ಚಾಲಕ ಮತ್ತು ನಿರ್ವಾಹಕ ಜಿ.ವಿ.ಚಲಪತಿ, ಹಾಸನ ವಿಭಾಗದ ಚಾಲಕ ಮತ್ತು ನಿರ್ವಾಹಕ ಪಿ.ಎನ್. ನಾಗರಾಜು ಬಸ್​ ಅಪಘಾತದಲ್ಲಿ ನಿಧನರಾಗಿದ್ದರು. ಶನಿವಾರ ಅವರ ಕುಟುಂಬಕ್ಕೆ ತಲಾ ಒಂದು ಕೋಟಿ ರೂ.ಗಳ ಪರಿಹಾರಧನ ವಿತರಿಸಲಾಯಿತು. ಶಾಂತಿನಗರದಲ್ಲಿರುವ ಕೆಎಸ್ಆರ್​ಟಿಸಿ ಕೇಂದ್ರ ಕಚೇರಿಯಲ್ಲಿ ಚಾಲನಾ ಸಿಬ್ಬಂದಿ ಕುಟುಂಬಸ್ಥರಿಗೆ ಅಪಘಾತ ಪರಿಹಾರ ವಿಮಾದ ತಲಾ ರೂ.1 ಕೋಟಿಗಳ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ನಂತರ ಮಾತನಾಡಿದ ಸಚಿವರು, "ಸಿಬ್ಬಂದಿಯ ಕುಟುಂಬಗಳ ಸುಭದ್ರತೆಗಾಗಿ ಕೆಎಸ್ಆರ್​ಟಿಸಿ ಜಾರಿಗೊಳಿಸಿರುವ ಒಂದು ಕೋಟಿ ರೂ.ಗಳ ಅಪಘಾತ ಪರಿಹಾರ ವಿಮಾ ಯೋಜನೆಯು ಬಹಳ ಉತ್ತಮವಾಗಿದೆ. ಯೋಜನೆಯನ್ನು ಸದ್ಯದಲ್ಲೇ ಇತರೆ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಜಾರಿಗೊಳಿಸಲು ಸೂಚಿಸುತ್ತೇನೆ. ಇದರಿಂದ ಬಿಎಂಟಿಸಿ, ವಾಯುವ್ಯ ಸಾರಿಗೆ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಸಿಬ್ಬಂದಿಗೂ ಒಂದು ಕೋಟಿ ರೂ.ಗಳ ಅಪಘಾತ ವಿಮೆ ಸೌಲಭ್ಯ ಲಭ್ಯವಾಗಲಿದೆ" ಎಂದರು.

"ಪರಿಹಾರದ ಚೆಕ್ ಪಡೆದ ಕುಟುಂಬದವರು ಹಣವನ್ನು‌ ಅನಗತ್ಯ ವ್ಯಯ ಮಾಡದೇ ಬ್ಯಾಂಕಿನಲ್ಲಿ ಸ್ಥಿರ ಠೇವಣಿ ಇಟ್ಟು ಮಕ್ಕಳ ವಿದ್ಯಾಭ್ಯಾಸ ಹಾಗೂ ತಮ್ಮ ಮುಂದಿನ ಜೀವನಕ್ಕಾಗಿ ಕಾಪಾಡಿಕೊಳ್ಳಬೇಕು. ಇದರ ಜೊತೆಗೆ ಅನುಕಂಪ‌‌ ಆಧಾರದ‌ ಮೇಲಿನ‌ ಕೆಲಸಕ್ಕೆ ಅರ್ಜಿ ಸಲ್ಲಿಸಿ. ನಿಗಮದ ಸಿಬ್ಬಂದಿ ಹಾಗೂ ಕುಟುಂಬದವರ ಹಿತಾಸಕ್ತಿ ಕಾಪಾಡಲು ನಾವು ನಿಮ್ಮೊಡನೆ ಸದಾ ಇರುತ್ತೇವೆ" ಎಂದು ಭರವಸೆ ಕೊಟ್ಟರು.

ಕೆಎಸ್ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಮಾತನಾಡಿ, "ಸಾರಿಗೆ ಸಚಿವರು ಆದೇಶಿಸಿರುವಂತೆ ಕೂಡಲೇ ಅನುಕಂಪದ ಆಧಾರದ ಮೇಲೆ ಕೆಲಸ ನೀಡಲು ಕ್ರಮ ಕೈಗೊಳ್ಳುತ್ತೇವೆ" ಎಂದರು.

ಇದನ್ನೂ ಓದಿ : ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಮತ್ತೆ ಅಪಘಾತ: ಬಸ್​ ಕಂಡಕ್ಟರ್​ ಸಾವು

ಏನಿದು ಪರಿಹಾರ ವಿಮಾ ಯೋಜನೆ? : ಕೆ.ಎಸ್.ಆರ್.ಟಿ.ಸಿ ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣದ ವಿನೂತನ ಯೋಜನೆ ಅಡಿಯಲ್ಲಿ ತನ್ನ ಸಿಬ್ಬಂದಿಗೆ ರೂ.1 ಕೋಟಿ ಮೊತ್ತದ ಅಪಘಾತ ವಿಮೆಯನ್ನು (On duty & Off Duty ಅಪಘಾತ) ಜಾರಿಗೊಳಿಸಿದೆ. ಈ ಯೋಜನೆಯಲ್ಲಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ವತಿಯಿಂದ ಪ್ರೀಮಿಯಂರಹಿತ 50 ಲಕ್ಷಗಳ ವಿಮೆ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಅವರಿಂದ ವಾರ್ಷಿಕ ರೂ.885/- ಪ್ರೀಮಿಯಂ (ನೌಕರರಿಂದ) ಪಾವತಿಯ ಮೇರೆಗೆ ರೂ.50 ಲಕ್ಷಗಳ ವಿಮೆಯು ಒಳಗೊಂಡಿರುತ್ತದೆ. ಯೋಜನೆಯಡಿ ಸಿಬ್ಬಂದಿ ಕರ್ತವ್ಯದ ಮೇಲಿದ್ದಾಗ ಹಾಗೂ ಕರ್ತವ್ಯದಲ್ಲಿ ಇಲ್ಲದ ಸಂದರ್ಭಗಳಲ್ಲಿಯೂ ಉಂಟಾಗುವ ಅಪಘಾತಗಳಿಂದ ಮೃತಪಟ್ಟರೆ ವಿಮಾ ಸೌಲಭ್ಯ ಅನ್ವಯಿಸುತ್ತದೆ.

ಅಪಘಾತದ ವಿವರ : 1 ಕೋಟಿ ರೂ.ಗಳ ಅಪಘಾತ ವಿಮಾ ಯೋಜನೆ ಜಾರಿಯ ನಂತರದಲ್ಲಿ ಬೆಂಗಳೂರು ಕೇಂದ್ರೀಯ ವಿಭಾಗದಲ್ಲಿ 11 ವರ್ಷಗಳ ಸೇವೆ ಸಲ್ಲಿಸಿದ್ದ 41 ವರ್ಷದ ಚಾಲಕ ಕಂ ನಿರ್ವಾಹಕ ಜಿ.ವಿ.ಚಲಪತಿ ಅಪಘಾತದಲ್ಲಿ ನಿಧನರಾಗಿದ್ದರು. ಪ್ರಸ್ತುತ ವರ್ಷದ ಜನವರಿ 29ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಮೃತಪಟ್ಟಿದ್ದರು. ಇವರು ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ವಿಮಾ ಪರಿಹಾರ ರೂ.1 ಕೋಟಿ ಹೊರತುಪಡಿಸಿ, ನಿಗಮದ ವತಿಯಿಂದ ರೂ.17.21 ಲಕ್ಷ ಪರಿಹಾರಕ್ಕೆ ಅರ್ಹರಿದ್ದು, ಈ ಪೈಕಿ 12.71 ಲಕ್ಷ ರೂ. ಪರಿಹಾರ ಈಗಾಗಲೇ ವಿತರಿಸಲಾಗಿದೆ. ಬಾಕಿ ಮೊತ್ತ 4.50 ಲಕ್ಷವನ್ನು ಮೃತರ ಅವಲಂಬಿತರು ಸೂಕ್ತ ದಾಖಲಾತಿ ಸಲ್ಲಿಸಿದೊಡನೆ ಭವಿಷ್ಯ ನಿಧಿ ಇಲಾಖೆಯಿಂದ ಶೀಘ್ರದಲ್ಲಿ ಪಾವತಿಯಾಗಲಿದೆ ಎಂದು ಕೆಎಸ್ಆರ್​ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಹಾಸನ ವಿಭಾಗದಲ್ಲಿ 17 ವರ್ಷಗಳ ಸೇವೆ ಸಲ್ಲಿಸಿದ್ದ 52 ವರ್ಷದ ಚಾಲಕ ಕಂ ನಿರ್ವಾಹಕ ಪಿ.ಎನ್. ನಾಗರಾಜು ಅಪಘಾತದಲ್ಲಿ ನಿಧನರಾಗಿದ್ದು, ಪ್ರಸಕ್ತ ವರ್ಷದ ಫೆಬ್ರವರಿ 1 ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಮರಣ ಹೊಂದಿದ್ದರು. ಇವರು ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ವಿಮಾ ಪರಿಹಾರ ರೂ.1 ಕೋಟಿ ಹೊರತುಪಡಿಸಿ, ನಿಗಮದ ವತಿಯಿಂದ 21.94 ಲಕ್ಷ ರೂ. ಪರಿಹಾರಕ್ಕೆ ಅರ್ಹರಿದ್ದು, ಈ ಪೈಕಿ 16.19 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಬಾಕಿ ಮೊತ್ತ 5.75 ಲಕ್ಷ ರೂ. ಮೃತರ ಅವಲಂಬಿತರು ಸೂಕ್ತ ದಾಖಲಾತಿ ಸಲ್ಲಿಸಿದೊಡನೆ ಭವಿಷ್ಯ ನಿಧಿ ಇಲಾಖೆಯಿಂದ‌ ಶೀಘ್ರದಲ್ಲಿಯೇ ಪಾವತಿಯಾಗಲಿದೆ ಎಂದು ಕೆಎಸ್ಆರ್​ಟಿಸಿ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ : ಕೆಎಸ್ಆರ್​ಟಿಸಿ ಡ್ರೈವರ್ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸಿಐಡಿ ತನಿಖೆ ನಡೆಯುತ್ತಿದೆ: ಸಚಿವ ಚಲುವರಾಯಸ್ವಾಮಿ

ಎಸ್‌ಬಿಐ ವ್ಯವಸ್ಥಾಪಕರು ಹಾಗೂ ಕಾರ್ಮಿಕ ಸಂಘಟನೆಗಳ ಮುಖಂಡರಾದ ಹೆಚ್.ವಿ. ಅನಂತ ಸುಬ್ಬರಾವ್, ಬಿ. ಜಯದೇವರಾಜೇ ಅರಸು, ಜಿ.ಎಸ್. ಮಹದೇವಯ್ಯ, ಹೆಚ್.ಡಿ. ರೇವಪ್ಪ,ಎಸ್. ನಾಗರಾಜ, ವೆಂಕಟರಮಣಪ್ಪ ಮತ್ತು ಇತರರು ಹಾಗೂ ನಿಗಮದ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕೆಎಸ್ಆರ್​ಟಿಸಿ ಸಿಬ್ಬಂದಿ ಕುಟುಂಬಕ್ಕೆ ಚೆಕ್‌ ವಿತರಿಸಿ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ದೇಶದ ರಸ್ತೆ ಸಾರಿಗೆ ನಿಗಮಗಳ ಇತಿಹಾಸದಲ್ಲೇ ಮೊದಲ ಬಾರಿಗೆ ಸಿಬ್ಬಂದಿಗೆ ಒಂದು ಕೋಟಿ ರೂಪಾಯಿ ಅಪಘಾತ ಪರಿಹಾರ ವಿಮೆ ಪರಿಚಯಿಸಿರುವ ಕೆಎಸ್ಆರ್​ಟಿಸಿ, ಇಬ್ಬರು ಸಿಬ್ಬಂದಿಯ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರದ ಚೆಕ್ ವಿತರಿಸಿತು. ಇದರ ಜೊತೆಗೆ, ಅನುಕಂಪದ ಆಧಾರದಲ್ಲಿ ಉದ್ಯೋಗ ಭರವಸೆ ನೀಡಲಾಗಿದೆ.

ಕೆಎಸ್ಆರ್​ಟಿಸಿ ಸಿಬ್ಬಂದಿಗೆ ಒಂದು ಕೋಟಿ ರೂ. ಗಳ ಅಪಘಾತ ವಿಮೆ ಜಾರಿಗೆ ತಂದ ನಂತರ ಬೆಂಗಳೂರಿನ ಚಾಲಕ ಮತ್ತು ನಿರ್ವಾಹಕ ಜಿ.ವಿ.ಚಲಪತಿ, ಹಾಸನ ವಿಭಾಗದ ಚಾಲಕ ಮತ್ತು ನಿರ್ವಾಹಕ ಪಿ.ಎನ್. ನಾಗರಾಜು ಬಸ್​ ಅಪಘಾತದಲ್ಲಿ ನಿಧನರಾಗಿದ್ದರು. ಶನಿವಾರ ಅವರ ಕುಟುಂಬಕ್ಕೆ ತಲಾ ಒಂದು ಕೋಟಿ ರೂ.ಗಳ ಪರಿಹಾರಧನ ವಿತರಿಸಲಾಯಿತು. ಶಾಂತಿನಗರದಲ್ಲಿರುವ ಕೆಎಸ್ಆರ್​ಟಿಸಿ ಕೇಂದ್ರ ಕಚೇರಿಯಲ್ಲಿ ಚಾಲನಾ ಸಿಬ್ಬಂದಿ ಕುಟುಂಬಸ್ಥರಿಗೆ ಅಪಘಾತ ಪರಿಹಾರ ವಿಮಾದ ತಲಾ ರೂ.1 ಕೋಟಿಗಳ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ನಂತರ ಮಾತನಾಡಿದ ಸಚಿವರು, "ಸಿಬ್ಬಂದಿಯ ಕುಟುಂಬಗಳ ಸುಭದ್ರತೆಗಾಗಿ ಕೆಎಸ್ಆರ್​ಟಿಸಿ ಜಾರಿಗೊಳಿಸಿರುವ ಒಂದು ಕೋಟಿ ರೂ.ಗಳ ಅಪಘಾತ ಪರಿಹಾರ ವಿಮಾ ಯೋಜನೆಯು ಬಹಳ ಉತ್ತಮವಾಗಿದೆ. ಯೋಜನೆಯನ್ನು ಸದ್ಯದಲ್ಲೇ ಇತರೆ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಜಾರಿಗೊಳಿಸಲು ಸೂಚಿಸುತ್ತೇನೆ. ಇದರಿಂದ ಬಿಎಂಟಿಸಿ, ವಾಯುವ್ಯ ಸಾರಿಗೆ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಸಿಬ್ಬಂದಿಗೂ ಒಂದು ಕೋಟಿ ರೂ.ಗಳ ಅಪಘಾತ ವಿಮೆ ಸೌಲಭ್ಯ ಲಭ್ಯವಾಗಲಿದೆ" ಎಂದರು.

"ಪರಿಹಾರದ ಚೆಕ್ ಪಡೆದ ಕುಟುಂಬದವರು ಹಣವನ್ನು‌ ಅನಗತ್ಯ ವ್ಯಯ ಮಾಡದೇ ಬ್ಯಾಂಕಿನಲ್ಲಿ ಸ್ಥಿರ ಠೇವಣಿ ಇಟ್ಟು ಮಕ್ಕಳ ವಿದ್ಯಾಭ್ಯಾಸ ಹಾಗೂ ತಮ್ಮ ಮುಂದಿನ ಜೀವನಕ್ಕಾಗಿ ಕಾಪಾಡಿಕೊಳ್ಳಬೇಕು. ಇದರ ಜೊತೆಗೆ ಅನುಕಂಪ‌‌ ಆಧಾರದ‌ ಮೇಲಿನ‌ ಕೆಲಸಕ್ಕೆ ಅರ್ಜಿ ಸಲ್ಲಿಸಿ. ನಿಗಮದ ಸಿಬ್ಬಂದಿ ಹಾಗೂ ಕುಟುಂಬದವರ ಹಿತಾಸಕ್ತಿ ಕಾಪಾಡಲು ನಾವು ನಿಮ್ಮೊಡನೆ ಸದಾ ಇರುತ್ತೇವೆ" ಎಂದು ಭರವಸೆ ಕೊಟ್ಟರು.

ಕೆಎಸ್ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಮಾತನಾಡಿ, "ಸಾರಿಗೆ ಸಚಿವರು ಆದೇಶಿಸಿರುವಂತೆ ಕೂಡಲೇ ಅನುಕಂಪದ ಆಧಾರದ ಮೇಲೆ ಕೆಲಸ ನೀಡಲು ಕ್ರಮ ಕೈಗೊಳ್ಳುತ್ತೇವೆ" ಎಂದರು.

ಇದನ್ನೂ ಓದಿ : ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಮತ್ತೆ ಅಪಘಾತ: ಬಸ್​ ಕಂಡಕ್ಟರ್​ ಸಾವು

ಏನಿದು ಪರಿಹಾರ ವಿಮಾ ಯೋಜನೆ? : ಕೆ.ಎಸ್.ಆರ್.ಟಿ.ಸಿ ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣದ ವಿನೂತನ ಯೋಜನೆ ಅಡಿಯಲ್ಲಿ ತನ್ನ ಸಿಬ್ಬಂದಿಗೆ ರೂ.1 ಕೋಟಿ ಮೊತ್ತದ ಅಪಘಾತ ವಿಮೆಯನ್ನು (On duty & Off Duty ಅಪಘಾತ) ಜಾರಿಗೊಳಿಸಿದೆ. ಈ ಯೋಜನೆಯಲ್ಲಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ವತಿಯಿಂದ ಪ್ರೀಮಿಯಂರಹಿತ 50 ಲಕ್ಷಗಳ ವಿಮೆ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಅವರಿಂದ ವಾರ್ಷಿಕ ರೂ.885/- ಪ್ರೀಮಿಯಂ (ನೌಕರರಿಂದ) ಪಾವತಿಯ ಮೇರೆಗೆ ರೂ.50 ಲಕ್ಷಗಳ ವಿಮೆಯು ಒಳಗೊಂಡಿರುತ್ತದೆ. ಯೋಜನೆಯಡಿ ಸಿಬ್ಬಂದಿ ಕರ್ತವ್ಯದ ಮೇಲಿದ್ದಾಗ ಹಾಗೂ ಕರ್ತವ್ಯದಲ್ಲಿ ಇಲ್ಲದ ಸಂದರ್ಭಗಳಲ್ಲಿಯೂ ಉಂಟಾಗುವ ಅಪಘಾತಗಳಿಂದ ಮೃತಪಟ್ಟರೆ ವಿಮಾ ಸೌಲಭ್ಯ ಅನ್ವಯಿಸುತ್ತದೆ.

ಅಪಘಾತದ ವಿವರ : 1 ಕೋಟಿ ರೂ.ಗಳ ಅಪಘಾತ ವಿಮಾ ಯೋಜನೆ ಜಾರಿಯ ನಂತರದಲ್ಲಿ ಬೆಂಗಳೂರು ಕೇಂದ್ರೀಯ ವಿಭಾಗದಲ್ಲಿ 11 ವರ್ಷಗಳ ಸೇವೆ ಸಲ್ಲಿಸಿದ್ದ 41 ವರ್ಷದ ಚಾಲಕ ಕಂ ನಿರ್ವಾಹಕ ಜಿ.ವಿ.ಚಲಪತಿ ಅಪಘಾತದಲ್ಲಿ ನಿಧನರಾಗಿದ್ದರು. ಪ್ರಸ್ತುತ ವರ್ಷದ ಜನವರಿ 29ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ಮೃತಪಟ್ಟಿದ್ದರು. ಇವರು ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ವಿಮಾ ಪರಿಹಾರ ರೂ.1 ಕೋಟಿ ಹೊರತುಪಡಿಸಿ, ನಿಗಮದ ವತಿಯಿಂದ ರೂ.17.21 ಲಕ್ಷ ಪರಿಹಾರಕ್ಕೆ ಅರ್ಹರಿದ್ದು, ಈ ಪೈಕಿ 12.71 ಲಕ್ಷ ರೂ. ಪರಿಹಾರ ಈಗಾಗಲೇ ವಿತರಿಸಲಾಗಿದೆ. ಬಾಕಿ ಮೊತ್ತ 4.50 ಲಕ್ಷವನ್ನು ಮೃತರ ಅವಲಂಬಿತರು ಸೂಕ್ತ ದಾಖಲಾತಿ ಸಲ್ಲಿಸಿದೊಡನೆ ಭವಿಷ್ಯ ನಿಧಿ ಇಲಾಖೆಯಿಂದ ಶೀಘ್ರದಲ್ಲಿ ಪಾವತಿಯಾಗಲಿದೆ ಎಂದು ಕೆಎಸ್ಆರ್​ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಹಾಸನ ವಿಭಾಗದಲ್ಲಿ 17 ವರ್ಷಗಳ ಸೇವೆ ಸಲ್ಲಿಸಿದ್ದ 52 ವರ್ಷದ ಚಾಲಕ ಕಂ ನಿರ್ವಾಹಕ ಪಿ.ಎನ್. ನಾಗರಾಜು ಅಪಘಾತದಲ್ಲಿ ನಿಧನರಾಗಿದ್ದು, ಪ್ರಸಕ್ತ ವರ್ಷದ ಫೆಬ್ರವರಿ 1 ರಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಮರಣ ಹೊಂದಿದ್ದರು. ಇವರು ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ವಿಮಾ ಪರಿಹಾರ ರೂ.1 ಕೋಟಿ ಹೊರತುಪಡಿಸಿ, ನಿಗಮದ ವತಿಯಿಂದ 21.94 ಲಕ್ಷ ರೂ. ಪರಿಹಾರಕ್ಕೆ ಅರ್ಹರಿದ್ದು, ಈ ಪೈಕಿ 16.19 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಬಾಕಿ ಮೊತ್ತ 5.75 ಲಕ್ಷ ರೂ. ಮೃತರ ಅವಲಂಬಿತರು ಸೂಕ್ತ ದಾಖಲಾತಿ ಸಲ್ಲಿಸಿದೊಡನೆ ಭವಿಷ್ಯ ನಿಧಿ ಇಲಾಖೆಯಿಂದ‌ ಶೀಘ್ರದಲ್ಲಿಯೇ ಪಾವತಿಯಾಗಲಿದೆ ಎಂದು ಕೆಎಸ್ಆರ್​ಟಿಸಿ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ : ಕೆಎಸ್ಆರ್​ಟಿಸಿ ಡ್ರೈವರ್ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸಿಐಡಿ ತನಿಖೆ ನಡೆಯುತ್ತಿದೆ: ಸಚಿವ ಚಲುವರಾಯಸ್ವಾಮಿ

ಎಸ್‌ಬಿಐ ವ್ಯವಸ್ಥಾಪಕರು ಹಾಗೂ ಕಾರ್ಮಿಕ ಸಂಘಟನೆಗಳ ಮುಖಂಡರಾದ ಹೆಚ್.ವಿ. ಅನಂತ ಸುಬ್ಬರಾವ್, ಬಿ. ಜಯದೇವರಾಜೇ ಅರಸು, ಜಿ.ಎಸ್. ಮಹದೇವಯ್ಯ, ಹೆಚ್.ಡಿ. ರೇವಪ್ಪ,ಎಸ್. ನಾಗರಾಜ, ವೆಂಕಟರಮಣಪ್ಪ ಮತ್ತು ಇತರರು ಹಾಗೂ ನಿಗಮದ ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.