ಬೆಂಗಳೂರು: ಸರ್ಕಾರ ರಚನೆ ಮಾಡಿರುವ ಮರಾಠ ಪ್ರಾಧಿಕಾರ ವಿರುದ್ದ ಕನ್ನಡ ಪರ ಸಂಘಟನೆಗಳ ಕಿಚ್ಚು ಜೋರಾಗಿಯೇ ನಡೆಯುತ್ತಿದೆ.
ಕಳೆದ ಒಂದು ವಾರದಿಂದ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಇಂದು ಕೂಡಾ ಕನ್ನಡ ಪರ ಸಂಘಟನೆಗಳು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವು.
ನಗರದ ಚಾಲುಕ್ಯ ಸರ್ಕಲ್ ಬಳಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮರಾಠಿ ಪ್ರಾಧಿಕಾರ ವಿರುದ್ದ ಪ್ರತಿಭಟನೆ ನಡೆಸಿ, ರಸ್ತೆ ತಡೆ ಮಾಡುವ ಯತ್ನ ನಡೆಸಿದರು. ಈ ವೇಳೆ, ಪೊಲೀಸರು ವಾಟಾಳ್ ನಾಗರಾಜ್ ಸೇರಿದಂತೆ ಹಲವು ಕನ್ನಡ ಹೋರಾಟಗಾರರನ್ನ ವಶಕ್ಕೆ ಪಡೆದರು.