ETV Bharat / state

ಸಾರಿಗೆ ನಿಗಮದ ನೌಕರರ ಅಂತರ್‌ನಿಗಮ ವರ್ಗಾವಣೆಗೆ ಅವಕಾಶ ನೀಡಿ ಸರ್ಕಾರದ ಆದೇಶ - government to allow inter-Corporation transfer of employees of the transport corporation

ಇದೇ ಮೊದಲ ಬಾರಿಗೆ ಸಾರಿಗೆ ನಿಗಮದ ನೌಕರರ ಅಂತರ್‌ನಿಗಮ ವರ್ಗಾವಣೆಗೆ ಆದೇಶ ಹೊರಡಿಸಿರುವ ಸರ್ಕಾರ, ಈ ಬಗ್ಗೆ ಸೂಕ್ತ ನೀತಿ ರೂಪಿಸಿದೆ.

government
ವಿಧಾನಸೌಧ
author img

By

Published : Mar 10, 2021, 3:15 PM IST

ಬೆಂಗಳೂರು: ಕರ್ನಾಟಕದ ಸಾರಿಗೆ ನಿಗಮಗಳಲ್ಲಿ ಅಂತರ್‌ನಿಗಮ ವರ್ಗಾವಣೆಗೆ ಈವರೆಗೆ ಸೂಕ್ತ ಅವಕಾಶಗಳಿರಲಿಲ್ಲ. ಇದೀಗ ಸರ್ಕಾರವು ಸಾರಿಗೆ ಸಿಬ್ಬಂದಿ ಬೇಡಿಕೆಗಳಿಗೆ ಸ್ಪಂದಿಸಿ, ಇದೇ ಮೊದಲ ಬಾರಿಗೆ ಸಾರಿಗೆ ನಿಗಮದ ನೌಕರರ ಅಂತರ್‌ನಿಗಮ ವರ್ಗಾವಣೆಗೆ ಆದೇಶ ಹೊರಡಿಸಿದ್ದು, ಈ ಬಗ್ಗೆ ಸೂಕ್ತ ನೀತಿ ರೂಪಿಸಿದೆ.

2016ರಲ್ಲಿ ಕೇವಲ ಒಮ್ಮೆ ಮಾತ್ರ ಅಂತರ್ ನಿಗಮ ವರ್ಗಾವಣೆ ಕೈಗೊಳ್ಳಲಾಗಿತ್ತು. ಆದರೆ, ಅಂತರ್ ನಿಗಮ ವರ್ಗಾವಣೆ ಬಯಸಿ ಅನೇಕ ಸಿಬ್ಬಂದಿ ಬೇಡಿಕೆ ಇಟ್ಟಿರುವುದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ, ಪ್ರತಿವರ್ಷವೂ ಈ ಅಂತರ್ ನಿಗಮ ವರ್ಗಾವಣೆಯನ್ನು ನಿರಂತರ ಪ್ರಕ್ರಿಯೆಯಂತೆ ಕೈಗೊಳ್ಳಲು ಈಗ ಅವಕಾಶ ಮಾಡಿಕೊಡಲಾಗಿದೆ. ಈ ಬಗ್ಗೆ ಸೂಕ್ತ ಮಾರ್ಗಸೂಚಿಯನ್ನೂ ಹೊರಡಿಸಲಾಗಿದೆ.

ಅಂತರ ನಿಗಮ ವರ್ಗಾವಣೆಯ ಪ್ರಕ್ರಿಯೆಯು ಒಂದು ಬಾರಿಗೆ ಮಾತ್ರವಲ್ಲದೆ, ಪ್ರತಿ ವರ್ಷವೂ ಏಪ್ರಿಲ್ 1 ರಿಂದ 30 ರವರೆಗೆ ನಡೆಯುವಂತೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ನಿಗಮಗಳಿಂದಲೂ ಪ್ರತಿ ವರ್ಷ ಒಟ್ಟು ಸಿಬ್ಬಂದಿ ಪ್ರಮಾಣದ ಮೇಲೆ ಶೇ 2 ರಷ್ಟು ಸಿಬ್ಬಂದಿಗೆ ವರ್ಗಾವಣೆಗೆ ಅವಕಾಶವಾಗುವಂತೆ ಆದೇಶಿಸಲಾಗಿದೆ.

ವರ್ಗಾವಣೆಗೆ ಯಾವೆಲ್ಲ ಸಿಬ್ಬಂದಿಗಳು ಅರ್ಹರು?

  • ವರ್ಗಾವಣೆ ಕೋರುವ ನೌಕರರು ಖಾಯಂ ನೌಕರರಾಗಿದ್ದು, ಕನಿಷ್ಠ 10 ವರ್ಷಗಳ ಸೇವೆಯನ್ನು ಮಾತೃ ಸಂಸ್ಥೆಯಲ್ಲಿ
    ಸಲ್ಲಿಸಿರಬೇಕು.
  • ವರ್ಗಾವಣೆ ಕೋರಿ ಸಲ್ಲಿಸುವ ನೌಕರರು ಅರ್ಜಿಗಳನ್ನು ಸೇವಾ ಹಿರಿತನದ ಆಧಾರದ ಮೇಲೆ ಮಾತ್ರ ಆದ್ಯತೆಯ ಮೇಲೆ ಪರಿಗಣಿಸಲಾಗುವುದು.
  • ಅಂತರ್‌ನಿಗಮ ವರ್ಗಾವಣೆ ಕೋರುವ ನೌಕರರು ಆನ್‌ಲೈನ್ ಪೋರ್ಟಲ್ ತಂತ್ರಾಂಶದ ಮೂಲಕ ನಿಗದಿಪಡಿಸಿದ ಅರ್ಜಿ ನಮೂನೆ/ಇಚ್ಛಾಪತ್ರವನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವುದು.
  • ನೌಕರನು ಒಂದು ಬಾರಿಗೆ ಶಾಶ್ವತವಾಗಿ ವರ್ಗಾವಣೆಯಾದ ನಂತರ ಯಾವುದೇ ಕಾರಣಕ್ಕೂ ವರ್ಗಾವಣೆಯನ್ನು
    ಹಿಂಪಡೆಯಲು ಬದಲಾಯಿಸಲು ಅವಕಾಶವಿರುವುದಿಲ್ಲ.
  • ನೌಕರರ ಮೇಲೆ ಶಿಸ್ತು ಪ್ರಕರಣಗಳು ಬಾಕಿ ಇದ್ದಲ್ಲಿ, ಅವರು ವರ್ಗಾವಣೆಗೆ ಅರ್ಹರಾಗಿರುವುದಿಲ್ಲ. ಒಮ್ಮೆ ವರ್ಗಾವಣೆಯಾದ ನೌಕರರು ಸೇವಾವಧಿಯಲ್ಲಿ ಪುನಃ ಅಂತರ್​ ನಿಗಮ ವರ್ಗಾವಣೆಗೆ ಅರ್ಹರಾಗುವುದಿಲ್ಲ.
  • ಹೈದರಾಬಾದ್-ಕರ್ನಾಟಕ ಸ್ಥಳೀಯ ಅಭ್ಯರ್ಥಿ ಎಂದು ಮೀಸಲಾತಿ ಬಯಸುವ ನೌಕರರು ಕಡ್ಡಾಯವಾಗಿ ಸ್ಥಳೀಯ ಅಭ್ಯರ್ಥಿ ಎಂಬ ಬಗ್ಗೆ ಸೂಕ್ತ ಪ್ರಾಧಿಕಾರ ನೀಡಿರುವ ಪ್ರಮಾಣ ಪತ್ರ ಸಲ್ಲಿಸಬೇಕು.
  • ಪ್ರತಿ ವೃಂದದಲ್ಲಿನ ಅಂತರ್​ನಿಗಮ ವರ್ಗಾವಣೆಯ ಶೇ 5 ರಷ್ಟು ಹುದ್ದೆಗಳನ್ನು ಪತಿ-ಪತ್ನಿ ನೌಕರರಿಗೆ (ಇಬ್ಬರು ನಿಗಮದ ನೌಕರರಾಗಿರತಕ್ಕದ್ದು) ಜೇಷ್ಠತೆಯ ಆಧಾರದ ಮೇಲೆ ಪರಿಗಣಿಸಲಾಗುತ್ತೆ.

ಬೆಂಗಳೂರು: ಕರ್ನಾಟಕದ ಸಾರಿಗೆ ನಿಗಮಗಳಲ್ಲಿ ಅಂತರ್‌ನಿಗಮ ವರ್ಗಾವಣೆಗೆ ಈವರೆಗೆ ಸೂಕ್ತ ಅವಕಾಶಗಳಿರಲಿಲ್ಲ. ಇದೀಗ ಸರ್ಕಾರವು ಸಾರಿಗೆ ಸಿಬ್ಬಂದಿ ಬೇಡಿಕೆಗಳಿಗೆ ಸ್ಪಂದಿಸಿ, ಇದೇ ಮೊದಲ ಬಾರಿಗೆ ಸಾರಿಗೆ ನಿಗಮದ ನೌಕರರ ಅಂತರ್‌ನಿಗಮ ವರ್ಗಾವಣೆಗೆ ಆದೇಶ ಹೊರಡಿಸಿದ್ದು, ಈ ಬಗ್ಗೆ ಸೂಕ್ತ ನೀತಿ ರೂಪಿಸಿದೆ.

2016ರಲ್ಲಿ ಕೇವಲ ಒಮ್ಮೆ ಮಾತ್ರ ಅಂತರ್ ನಿಗಮ ವರ್ಗಾವಣೆ ಕೈಗೊಳ್ಳಲಾಗಿತ್ತು. ಆದರೆ, ಅಂತರ್ ನಿಗಮ ವರ್ಗಾವಣೆ ಬಯಸಿ ಅನೇಕ ಸಿಬ್ಬಂದಿ ಬೇಡಿಕೆ ಇಟ್ಟಿರುವುದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ, ಪ್ರತಿವರ್ಷವೂ ಈ ಅಂತರ್ ನಿಗಮ ವರ್ಗಾವಣೆಯನ್ನು ನಿರಂತರ ಪ್ರಕ್ರಿಯೆಯಂತೆ ಕೈಗೊಳ್ಳಲು ಈಗ ಅವಕಾಶ ಮಾಡಿಕೊಡಲಾಗಿದೆ. ಈ ಬಗ್ಗೆ ಸೂಕ್ತ ಮಾರ್ಗಸೂಚಿಯನ್ನೂ ಹೊರಡಿಸಲಾಗಿದೆ.

ಅಂತರ ನಿಗಮ ವರ್ಗಾವಣೆಯ ಪ್ರಕ್ರಿಯೆಯು ಒಂದು ಬಾರಿಗೆ ಮಾತ್ರವಲ್ಲದೆ, ಪ್ರತಿ ವರ್ಷವೂ ಏಪ್ರಿಲ್ 1 ರಿಂದ 30 ರವರೆಗೆ ನಡೆಯುವಂತೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ನಿಗಮಗಳಿಂದಲೂ ಪ್ರತಿ ವರ್ಷ ಒಟ್ಟು ಸಿಬ್ಬಂದಿ ಪ್ರಮಾಣದ ಮೇಲೆ ಶೇ 2 ರಷ್ಟು ಸಿಬ್ಬಂದಿಗೆ ವರ್ಗಾವಣೆಗೆ ಅವಕಾಶವಾಗುವಂತೆ ಆದೇಶಿಸಲಾಗಿದೆ.

ವರ್ಗಾವಣೆಗೆ ಯಾವೆಲ್ಲ ಸಿಬ್ಬಂದಿಗಳು ಅರ್ಹರು?

  • ವರ್ಗಾವಣೆ ಕೋರುವ ನೌಕರರು ಖಾಯಂ ನೌಕರರಾಗಿದ್ದು, ಕನಿಷ್ಠ 10 ವರ್ಷಗಳ ಸೇವೆಯನ್ನು ಮಾತೃ ಸಂಸ್ಥೆಯಲ್ಲಿ
    ಸಲ್ಲಿಸಿರಬೇಕು.
  • ವರ್ಗಾವಣೆ ಕೋರಿ ಸಲ್ಲಿಸುವ ನೌಕರರು ಅರ್ಜಿಗಳನ್ನು ಸೇವಾ ಹಿರಿತನದ ಆಧಾರದ ಮೇಲೆ ಮಾತ್ರ ಆದ್ಯತೆಯ ಮೇಲೆ ಪರಿಗಣಿಸಲಾಗುವುದು.
  • ಅಂತರ್‌ನಿಗಮ ವರ್ಗಾವಣೆ ಕೋರುವ ನೌಕರರು ಆನ್‌ಲೈನ್ ಪೋರ್ಟಲ್ ತಂತ್ರಾಂಶದ ಮೂಲಕ ನಿಗದಿಪಡಿಸಿದ ಅರ್ಜಿ ನಮೂನೆ/ಇಚ್ಛಾಪತ್ರವನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವುದು.
  • ನೌಕರನು ಒಂದು ಬಾರಿಗೆ ಶಾಶ್ವತವಾಗಿ ವರ್ಗಾವಣೆಯಾದ ನಂತರ ಯಾವುದೇ ಕಾರಣಕ್ಕೂ ವರ್ಗಾವಣೆಯನ್ನು
    ಹಿಂಪಡೆಯಲು ಬದಲಾಯಿಸಲು ಅವಕಾಶವಿರುವುದಿಲ್ಲ.
  • ನೌಕರರ ಮೇಲೆ ಶಿಸ್ತು ಪ್ರಕರಣಗಳು ಬಾಕಿ ಇದ್ದಲ್ಲಿ, ಅವರು ವರ್ಗಾವಣೆಗೆ ಅರ್ಹರಾಗಿರುವುದಿಲ್ಲ. ಒಮ್ಮೆ ವರ್ಗಾವಣೆಯಾದ ನೌಕರರು ಸೇವಾವಧಿಯಲ್ಲಿ ಪುನಃ ಅಂತರ್​ ನಿಗಮ ವರ್ಗಾವಣೆಗೆ ಅರ್ಹರಾಗುವುದಿಲ್ಲ.
  • ಹೈದರಾಬಾದ್-ಕರ್ನಾಟಕ ಸ್ಥಳೀಯ ಅಭ್ಯರ್ಥಿ ಎಂದು ಮೀಸಲಾತಿ ಬಯಸುವ ನೌಕರರು ಕಡ್ಡಾಯವಾಗಿ ಸ್ಥಳೀಯ ಅಭ್ಯರ್ಥಿ ಎಂಬ ಬಗ್ಗೆ ಸೂಕ್ತ ಪ್ರಾಧಿಕಾರ ನೀಡಿರುವ ಪ್ರಮಾಣ ಪತ್ರ ಸಲ್ಲಿಸಬೇಕು.
  • ಪ್ರತಿ ವೃಂದದಲ್ಲಿನ ಅಂತರ್​ನಿಗಮ ವರ್ಗಾವಣೆಯ ಶೇ 5 ರಷ್ಟು ಹುದ್ದೆಗಳನ್ನು ಪತಿ-ಪತ್ನಿ ನೌಕರರಿಗೆ (ಇಬ್ಬರು ನಿಗಮದ ನೌಕರರಾಗಿರತಕ್ಕದ್ದು) ಜೇಷ್ಠತೆಯ ಆಧಾರದ ಮೇಲೆ ಪರಿಗಣಿಸಲಾಗುತ್ತೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.