ETV Bharat / state

ಬ್ರೈನ್ ಡೆಡ್ ಆದ ಯುವಕನ ಅಂಗಾಂಗ ದಾನ: ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಅಪಘಾತದಲ್ಲಿ ಗಾಯಗೊಂಡು ಮೆದುಳು ನಿಷ್ಕ್ರಿಯವಾಗಿದ್ದ ಮಗನ ಅಂಗಾಂಗಗಳ ದಾನಕ್ಕೆ ಪೋಷಕರು ಮುಂದಾಗಿದ್ದಾರೆ.

author img

By

Published : Nov 30, 2022, 11:14 AM IST

Organ donation from brain dead youth  brain dead youth in Bengaluru  Young man died in accident  ಬ್ರೈನ್ ಡೆತ್ ಆದ ಯುವಕನಿಂದ ಅಂಗಾಂಗ ದಾನ  ಸಾವಿನಲ್ಲೂ ಸಾರ್ಥಕತೆ ಕಂಡ ಮೃತ ಯುವಕನ ಕುಟುಂಬ  ಮೆದುಳು ನಿಷ್ಕ್ರಿಯವಾಗಿದ್ದ ಮಗನ ಅಂಗಾಂಗಗಳ ದಾನ  ಬೈಕ್ ಮತ್ತು ಕಾರು ಅಪಘಾತದಲ್ಲಿ ತೀವ್ರವಾಗಿ ಯುವಕ ಗಾಯ  ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಯುವಕ  ಅಗತ್ಯ ಇರುವ ರೋಗಿಗಳಿಗೆ ದಾನ
ಸಾವಿನಲ್ಲೂ ಸಾರ್ಥಕತೆ ಕಂಡ ಮೃತ ಯುವಕನ ಕುಟುಂಬ

ದೊಡ್ಡಬಳ್ಳಾಪುರ: ಬೈಕ್ ಮತ್ತು ಕಾರು ನಡುವೆ ಇತ್ತೀಚೆಗೆ ನಡೆದ ಅಪಘಾತದಲ್ಲಿ ಯುವಕನೊಬ್ಬ ತೀವ್ರವಾಗಿ ಗಾಯಗೊಂಡಿದ್ದ. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಆತ ಕೊನೆಗೂ ಬದುಕುಳಿಯಲಿಲ್ಲ. ಇದೀಗ ಮೃತ ಯುವಕನ ಕುಟುಂಬದವರು ಆತನ ಅಂಗಾಂಗ ದಾನ ಮಾಡುವ ಮೂಲಕ ಮಾನವೀಯತೆ ಮರೆದಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ಕಂಚಿಗನಾಳ ಗ್ರಾಮದ ಅನಿಲ್ ಕುಮಾರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನವೆಂಬರ್ 28 ರಂದು ರಾಜಘಟ್ಟದ ಪೆಟ್ರೋಲ್ ಬಂಕ್ ಬಳಿ ನಡೆದ ದುರ್ಘಟನೆಯಲ್ಲಿ ಇವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕ್ರಮೇಣ, ಪ್ರಜ್ಞೆ ಕಳೆದುಕೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಯುವಕನ ಬ್ರೈನ್ ಡೆಡ್ ಆಗಿದೆ. ಚೇತರಿಸಿಕೊಳ್ಳುವ ಯಾವುದೇ ಸಾಧ್ಯತೆ ಇಲ್ಲದೇ ಇದ್ದುದರಿಂದ ವೈದ್ಯರು ಯುವಕ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ್ದಾರೆ.

ಮಗನ ಸಾವಿನ ನೋವಿನ ನಡುವೆಯೂ ತಂದೆ ರಾಮಚಂದ್ರಪ್ಪ ಮತ್ತು ಕುಟುಂಬದವರು ಅಂಗಾಂಗ ದಾನ ಮಾಡುವ ತೀರ್ಮಾನ ಮಾಡಿದ್ದಾರೆ. ಹೃದಯ, ಹೃದಯದ ನಾಳ, ಲಿವರ್, ಶ್ವಾಸಕೋಶ, ಮೂತ್ರಪಿಂಡಗಳನ್ನು ಅಗತ್ಯವಿರುವ ರೋಗಿಗಳಿಗೆ ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ: ನಾ ಸತ್ತರೂ ಇನ್ನೊಬ್ಬರಲ್ಲಿ ಬದುಕಿರುವೆ.. ಅಂಗಾಂಗ ದಾನಕ್ಕೆ ವಿಜಯ್​ ದೇವರಕೊಂಡ ಪ್ರತಿಜ್ಞೆ

ದೊಡ್ಡಬಳ್ಳಾಪುರ: ಬೈಕ್ ಮತ್ತು ಕಾರು ನಡುವೆ ಇತ್ತೀಚೆಗೆ ನಡೆದ ಅಪಘಾತದಲ್ಲಿ ಯುವಕನೊಬ್ಬ ತೀವ್ರವಾಗಿ ಗಾಯಗೊಂಡಿದ್ದ. ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಆತ ಕೊನೆಗೂ ಬದುಕುಳಿಯಲಿಲ್ಲ. ಇದೀಗ ಮೃತ ಯುವಕನ ಕುಟುಂಬದವರು ಆತನ ಅಂಗಾಂಗ ದಾನ ಮಾಡುವ ಮೂಲಕ ಮಾನವೀಯತೆ ಮರೆದಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ಕಂಚಿಗನಾಳ ಗ್ರಾಮದ ಅನಿಲ್ ಕುಮಾರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನವೆಂಬರ್ 28 ರಂದು ರಾಜಘಟ್ಟದ ಪೆಟ್ರೋಲ್ ಬಂಕ್ ಬಳಿ ನಡೆದ ದುರ್ಘಟನೆಯಲ್ಲಿ ಇವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕ್ರಮೇಣ, ಪ್ರಜ್ಞೆ ಕಳೆದುಕೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಯುವಕನ ಬ್ರೈನ್ ಡೆಡ್ ಆಗಿದೆ. ಚೇತರಿಸಿಕೊಳ್ಳುವ ಯಾವುದೇ ಸಾಧ್ಯತೆ ಇಲ್ಲದೇ ಇದ್ದುದರಿಂದ ವೈದ್ಯರು ಯುವಕ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ್ದಾರೆ.

ಮಗನ ಸಾವಿನ ನೋವಿನ ನಡುವೆಯೂ ತಂದೆ ರಾಮಚಂದ್ರಪ್ಪ ಮತ್ತು ಕುಟುಂಬದವರು ಅಂಗಾಂಗ ದಾನ ಮಾಡುವ ತೀರ್ಮಾನ ಮಾಡಿದ್ದಾರೆ. ಹೃದಯ, ಹೃದಯದ ನಾಳ, ಲಿವರ್, ಶ್ವಾಸಕೋಶ, ಮೂತ್ರಪಿಂಡಗಳನ್ನು ಅಗತ್ಯವಿರುವ ರೋಗಿಗಳಿಗೆ ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ: ನಾ ಸತ್ತರೂ ಇನ್ನೊಬ್ಬರಲ್ಲಿ ಬದುಕಿರುವೆ.. ಅಂಗಾಂಗ ದಾನಕ್ಕೆ ವಿಜಯ್​ ದೇವರಕೊಂಡ ಪ್ರತಿಜ್ಞೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.