ETV Bharat / state

ಕನ್ನಡಿಗರಿಗೆ ಪದ್ಮ ಪುರಸ್ಕಾರ: ಅಭಿನಂದನೆ ಸಲ್ಲಿಸಿದ ಬಿಎಸ್​ವೈ, ಸಚಿವ ನಿರಾಣಿ

author img

By

Published : Jan 26, 2023, 12:51 PM IST

ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮ ಪುರಸ್ಕಾರಗಳನ್ನು ಕೇಂದ್ರ ಸರ್ಕಾರ ಬುಧವಾರ ಘೋಷಿಸಿದೆ. ಈ ಪಟ್ಟಿಯಲ್ಲಿ ಎಂಟು ಮಂದಿ ಕನ್ನಡಿಗರಿದ್ದಾರೆ.

Padma Award
ಎಂಟು ಕನ್ನಡಿಗರಿಗೆ ಪದ್ಮ ಪುರಸ್ಕಾರ

ಬೆಂಗಳೂರು: ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತರಿಗೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿ ಟ್ವೀಟ್​ ಮಾಡಿದ್ದಾರೆ. "ರಾಜ್ಯದ ಕೀರ್ತಿ ಹೆಚ್ಚಿಸಿರುವ ಪದ್ಮವಿಭೂಷಣ ಪ್ರಶಸ್ತಿ ಭಾಜನರಾದ ಎಸ್.ಎಂ.ಕೃಷ್ಣ, ಪದ್ಮಭೂಷಣ ಪ್ರಶಸ್ತಿ ಪಡೆದ ಎಸ್.ಎಲ್.ಭೈರಪ್ಪ, ಶ್ರೀಮತಿ ಸುಧಾಮೂರ್ತಿ, ಪದ್ಮಶ್ರೀ ಪ್ರಶಸ್ತಿ ಪಡೆದ ಖಾದರ್, ನೃತ್ಯಗಾರ್ತಿ ರಾಣಿ ಮಾಚಯ್ಯ, ಮುನಿವೆಂಕಟಪ್ಪ, ಅಹ್ಮದ್ ಖಾದ್ರಿ, ಸುಬ್ಬರಾಮನ್ ಅವರಿಗೆ ಹೆಮ್ಮೆಯ ಅಭಿನಂದನೆಗಳು" ಎಂದು ಟ್ವೀಟ್​ನಲ್ಲಿ ಬರೆದುಕೊಂಡು ಶುಭಾಶಯ ಕೋರಿದ್ದಾರೆ.

  • ರಾಜ್ಯದ ಕೀರ್ತಿ ಹೆಚ್ಚಿಸಿರುವ ಪದ್ಮವಿಭೂಷಣ ಪ್ರಶಸ್ತಿ ಭಾಜನರಾದ ಶ್ರೀ ಎಸ್.ಎಂ.ಕೃಷ್ಣ, ಪದ್ಮಭೂಷಣ ಪ್ರಶಸ್ತಿ ಪಡೆದ ಶ್ರೀ ಎಸ್.ಎಲ್.ಭೈರಪ್ಪ, ಶ್ರೀಮತಿ ಸುಧಾಮೂರ್ತಿ, ಪದ್ಮಶ್ರೀ ಪ್ರಶಸ್ತಿ ಪಡೆದ ಶ್ರೀ ಖಾದರ್, ನೃತ್ಯಗಾರ್ತಿ ರಾಣಿ ಮಾಚಯ್ಯ, ಶ್ರೀ ಮುನಿವೆಂಕಟಪ್ಪ, ಶ್ರೀ ಅಹ್ಮದ್ ಖಾದ್ರಿ, ಶ್ರೀ ಸುಬ್ಬರಾಮನ್ ಅವರಿಗೆ ಹೆಮ್ಮೆಯ ಅಭಿನಂದನೆಗಳು.

    — B.S.Yediyurappa (@BSYBJP) January 25, 2023 " class="align-text-top noRightClick twitterSection" data=" ">

ಸಚಿವ ಮುರುಗೇಶ್ ನಿರಾಣಿ ಅಭಿನಂದನೆ: ರಾಜಕೀಯ, ಸಾಹಿತ್ಯ, ಸಮಾಜಸೇವೆ, ಸಾರ್ವಜನಿಕ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಪ್ರತಿಷ್ಠಿತ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಕರ್ನಾಟಕದ ಹೆಮ್ಮೆಯ ಸಾಧಕರನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಅಭಿನಂದಿಸಿದ್ದಾರೆ.

  • ಕನ್ನಡನಾಡಿನ ಹೆಮ್ಮೆಯ ಸಾಧಕರಿಗೆ ಸಂದ ಹೆಮ್ಮೆಯ ಗೌರವ.

    ಪದ್ಮ ವಿಭೂಷಣ ಪ್ರಶಸ್ತಿ ಭೂಷಿತರಾದ ಸನ್ಮಾನ್ಯ ಎಸ್.ಎಂ. ಕೃಷ್ಣ ಜೀ ಅವರು ಹಾಗೂ ಪದ್ಮ ಭೂಷಣ ಭೂಷಿತರಾದ ಮಾನ್ಯ ಶ್ರೀ ಎಸ್.ಎಲ್ ಭೈರಪ್ಪನವರು ಮತ್ತು ಶ್ರೀಮತಿ ಸುಧಾಮೂರ್ತಿ ಅವರು, #PadmaAwards #PeoplesPadma pic.twitter.com/1j5tvHhasL

    — Dr. Murugesh R Nirani (@NiraniMurugesh) January 25, 2023 " class="align-text-top noRightClick twitterSection" data=" ">

ಕೇಂದ್ರ ಸರ್ಕಾರದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಎನಿಸಿರುವ ಪದ್ಮವಿಭೂಷಣ ಪ್ರಶಸ್ತಿಗೆ ಪಾತ್ರರಾದ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಪದ್ಮಭೂಷಣ ಪಡೆದ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ, ತಮ್ಮ ಸರಳತೆಯ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿ, ಸಮಾಜಸೇವೆಗಾಗಿ ಪದ್ಮಭೂಷಣ ಪ್ರಶಸ್ತಿ ಪಡೆದ ಸುಧಾ ಮೂರ್ತಿ, ಹಾಗೆಯೇ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ರಾಣಿ ಮಾಚಯ್ಯ(ಕಲೆ), ಶ್ರೀ ಶಾ.ರಶೀದ್ ಅಹ್ಮದ್ ಖಾದ್ರಿ(ಕಲೆ), ಶ್ರೀ ಎಸ್.ಸುಬ್ಬರಾಮನ್(ಪುರಾತತ್ವ ಶಾಸ್ತ್ರ), ಶ್ರೀ ಖಾದರ್ ವಲ್ಲಿ ದುಡೇಕುಲ(ವಿಜ್ಞಾನ ಮತ್ತು ಇಂಜಿನಿಯರಿಂಗ್), ಶ್ರೀ ಪಿಂಡಿಪಾಪನಹಳ್ಳಿ ವೆಂಕಟಪ್ಪ(ಕಲೆ)ನವರಿಗೆ ಪ್ರಶಸ್ತಿ ಲಭಿಸಿರುವುದು ರಾಜ್ಯದ ಗರಿಮೆಯನ್ನು ಹೆಚ್ಚಿಸಿದೆ ಎಂದಿದ್ದಾರೆ.

ಇದನ್ನೂ ಓದಿ: ಎಂಟು ಕನ್ನಡಿಗರಿಗೆ ಪದ್ಮ ಪುರಸ್ಕಾರ: ಎಸ್​ಎಂ ಕೃಷ್ಣಗೆ ಪದ್ಮವಿಭೂಷಣ, ಭೈರಪ್ಪ, ಸುಧಾಮೂರ್ತಿಗೆ ಪದ್ಮಭೂಷಣ

"ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಐಟಿಬಿಟಿ ಕ್ಷೇತ್ರಕ್ಕೆ ಸಾಕಷ್ಟು ಮನ್ನಣೆ ನೀಡಿ, ಬೆಂಗಳೂರಿಗೆ 'ಸಿಲಿಕಾನ್ ವ್ಯಾಲಿ' ಎಂದು ಗುರುತಿಸಿಕೊಳ್ಳುವಲ್ಲಿ ಕೃಷ್ಣ ಅವರ ದೂರದೃಷ್ಟಿ ಸಾಕಷ್ಟಿತ್ತು. ಜೊತೆಗೆ ವಿಧಾನಸಭೆಯ ಸಭಾಪತಿಯಾಗಿ ವಿವಿಧ ಖಾತೆಗಳನ್ನು ಹೊಂದಿದ್ದ ಅವರು ರಾಜ್ಯದ ಮಟ್ಟಿಗೆ ಓರ್ವ ಮುತ್ಸದ್ದಿ ರಾಜಕಾರಣಿಯಾಗಿದ್ದರು. ಅಂತಹ ಮೇರು ವ್ಯಕ್ತಿತ್ವ ಹೊಂದಿದ್ದ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಸುಧೀರ್ಘ ಸೇವೆಯನ್ನು ಗುರುತಿಸಿ ಪದ್ಮವಿಭೂಷಣ ಪ್ರಶಸ್ತಿ ನೀಡಿರುವುದು ಸಮಸ್ತ ಕನ್ನಡಿಗರಿಗೆ ಸಿಕ್ಕ ಗೌರವ" ಎಂದು ಹೇಳಿದ್ದಾರೆ.

ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಮತದಾನ, ಪರ್ವ ಸೇರಿದಂತೆ ಅನೇಕ ಹೆಸರಾಂತ ಕಾದಂಬರಿಗಳನ್ನು ಬರೆದು ಮನೆಮಾತಾಗಿರುವ ಹೆಸರಾಂತ ಸಾಹಿತಿ ಎಸ್.ಎಲ್. ಬೈರಪ್ಪ ಅವರಿಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಲಭಿಸಿರುವುದು ಸೂಕ್ತವಾಗಿದೆ. ಅಲ್ಲದೇ ತಮ್ಮ ಸರಳತೆಯ ಮೂಲಕ ಕರ್ನಾಟಕ ಮಾತ್ರವಲ್ಲದೆ ದೇಶ-ವಿದೇಶಗಳಲ್ಲೂ ಹೆಸರವಾಸಿಯಾಗಿರುವ ಸಾಹಿತಿ ಹಾಗೂ ಸಮಾಜ ಸೇವೆಯನ್ನು ಉಸಿರಾಗಿಸಿಕೊಂಡಿರುವ ಸುಧಾ ಮೂರ್ತಿ ಅವರಿಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಲಭಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

"ಸುಧಾ ಮೂರ್ತಿ ಅವರು ಕರ್ನಾಟಕ ಕಂಡ ಶ್ರೇಷ್ಠ ಮಹಿಳೆಯರಲ್ಲಿ ಒಬ್ಬರು. ತನ್ನ ಮಾತೃ ಹೃದಯದಲ್ಲಿರುವ ಅಪಾರ ಪ್ರೀತಿಯನ್ನು ಬಡವರಿಗೆ, ನೊಂದವರಿಗೆ ಅದೆಷ್ಟೋ ಮಂದಿ ಸಂತ್ರಸ್ತರಿಗೆ ನೆರವು ನೀಡುವುದರ ಮೂಲಕ ಹಂಚುತ್ತಿದ್ದಾರೆ. ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಉನ್ನತ ಸ್ಥಾನದಲ್ಲಿದ್ದರೂ ತಾಯಿಭಾಷೆ, ನೆಲದ ಋಣ ತೀರಿಸುವ ಕೆಲಸ ಮಾಡುತ್ತಲೇ ಇರುತ್ತಾರೆ. ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದ ಅಗ್ರಜನೆನಿಸಿಕೊಂಡಿರುವ ಇನ್ಫೋಸಿಸ್ ಸಂಸ್ಥೆಯ ಒಡತಿಯಾಗಿದ್ದರೂ ತನ್ನನು ತಾನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದಲ್ಲದೇ ಬರಹಗಾರ್ತಿಯಾಗಿ ಕನ್ನಡ ಸಾಹಿತ್ಯ ಕ್ಷೇತ್ರದಲ್ಲೂ ಛಾಪು ಮೂಡಿಸಿ ಹಣ, ಶ್ರೀಮಂತಿಕೆ ಬದುಕಿನ ಒಂದು ಭಾಗವಷ್ಟೇ ಎನ್ನುವುದನ್ನು ಸದಾ ನಿರೂಪಿಸುತ್ತಿದ್ದಾರೆ" ಎಂದರು.

ಇನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಸೇವೆಗಾಗಿ ‌ಪದ್ಮಶ್ರೀ ಪ್ರಶಸ್ತಿ ಪಡೆದ ಖಾದರ್ ವಲ್ಲಿ ದುಡೇಕುಲ, ಕೊಡಗಿನ ಉಮ್ಮತ್ತಾಟ್ ಜಾನಪದ ನೃತ್ಯ ಕಲೆಯ (ಜಾನಪದ ನೃತ್ಯ) ನರ್ತಕಿ ರಾಣಿ ಮಾಚಯ್ಯ ಪದ್ಮಶ್ರೀ ಹಾಗೂ ಸಂಗೀತ ಕ್ಷೇತ್ರದಲ್ಲಿ ಚಿಕ್ಕಬಳ್ಳಾಪುರದ ಮುನಿವೆಂಕಟಪ್ಪ ಅವರಿಗೂ ಪದ್ಮಶ್ರೀ ಪ್ರಶಸ್ತಿ ಬಂದಿರುವುದಕ್ಕೆ ‌ಸಚಿವ ನಿರಾಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಅಭಿನಂದನೆ ಹೇಳಿದ್ದಾರೆ. ಕೈಗಾರಿಕೆ ಹಾಗೂ ವ್ಯಾಪಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಭಾರತದ ಕೀರ್ತಿಪತಾಕೆಯನ್ನು ವಿದೇಶಗಳಲ್ಲೂ ಹೆಚ್ಚಿಸಿದ ಆದಿತ್ಯ ಬಿರ್ಲಾ ಗ್ರೂಪ್‌ನ ಅಧ್ಯಕ್ಷರು ಹಾಗೂ ಪ್ರಸಕ್ತ ವರ್ಷ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿರುವ ಕುಮಾರ್ ಮಂಗಳಂ ಬಿರ್ಲಾ ಅವರಿಗೂ ಶುಭಾಶಯ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಪ್ರಥಮ ಬಾರಿಗೆ ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಂಗಳೂರು: ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತರಿಗೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್​ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿ ಟ್ವೀಟ್​ ಮಾಡಿದ್ದಾರೆ. "ರಾಜ್ಯದ ಕೀರ್ತಿ ಹೆಚ್ಚಿಸಿರುವ ಪದ್ಮವಿಭೂಷಣ ಪ್ರಶಸ್ತಿ ಭಾಜನರಾದ ಎಸ್.ಎಂ.ಕೃಷ್ಣ, ಪದ್ಮಭೂಷಣ ಪ್ರಶಸ್ತಿ ಪಡೆದ ಎಸ್.ಎಲ್.ಭೈರಪ್ಪ, ಶ್ರೀಮತಿ ಸುಧಾಮೂರ್ತಿ, ಪದ್ಮಶ್ರೀ ಪ್ರಶಸ್ತಿ ಪಡೆದ ಖಾದರ್, ನೃತ್ಯಗಾರ್ತಿ ರಾಣಿ ಮಾಚಯ್ಯ, ಮುನಿವೆಂಕಟಪ್ಪ, ಅಹ್ಮದ್ ಖಾದ್ರಿ, ಸುಬ್ಬರಾಮನ್ ಅವರಿಗೆ ಹೆಮ್ಮೆಯ ಅಭಿನಂದನೆಗಳು" ಎಂದು ಟ್ವೀಟ್​ನಲ್ಲಿ ಬರೆದುಕೊಂಡು ಶುಭಾಶಯ ಕೋರಿದ್ದಾರೆ.

  • ರಾಜ್ಯದ ಕೀರ್ತಿ ಹೆಚ್ಚಿಸಿರುವ ಪದ್ಮವಿಭೂಷಣ ಪ್ರಶಸ್ತಿ ಭಾಜನರಾದ ಶ್ರೀ ಎಸ್.ಎಂ.ಕೃಷ್ಣ, ಪದ್ಮಭೂಷಣ ಪ್ರಶಸ್ತಿ ಪಡೆದ ಶ್ರೀ ಎಸ್.ಎಲ್.ಭೈರಪ್ಪ, ಶ್ರೀಮತಿ ಸುಧಾಮೂರ್ತಿ, ಪದ್ಮಶ್ರೀ ಪ್ರಶಸ್ತಿ ಪಡೆದ ಶ್ರೀ ಖಾದರ್, ನೃತ್ಯಗಾರ್ತಿ ರಾಣಿ ಮಾಚಯ್ಯ, ಶ್ರೀ ಮುನಿವೆಂಕಟಪ್ಪ, ಶ್ರೀ ಅಹ್ಮದ್ ಖಾದ್ರಿ, ಶ್ರೀ ಸುಬ್ಬರಾಮನ್ ಅವರಿಗೆ ಹೆಮ್ಮೆಯ ಅಭಿನಂದನೆಗಳು.

    — B.S.Yediyurappa (@BSYBJP) January 25, 2023 " class="align-text-top noRightClick twitterSection" data=" ">

ಸಚಿವ ಮುರುಗೇಶ್ ನಿರಾಣಿ ಅಭಿನಂದನೆ: ರಾಜಕೀಯ, ಸಾಹಿತ್ಯ, ಸಮಾಜಸೇವೆ, ಸಾರ್ವಜನಿಕ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಪ್ರತಿಷ್ಠಿತ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಕರ್ನಾಟಕದ ಹೆಮ್ಮೆಯ ಸಾಧಕರನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಅಭಿನಂದಿಸಿದ್ದಾರೆ.

  • ಕನ್ನಡನಾಡಿನ ಹೆಮ್ಮೆಯ ಸಾಧಕರಿಗೆ ಸಂದ ಹೆಮ್ಮೆಯ ಗೌರವ.

    ಪದ್ಮ ವಿಭೂಷಣ ಪ್ರಶಸ್ತಿ ಭೂಷಿತರಾದ ಸನ್ಮಾನ್ಯ ಎಸ್.ಎಂ. ಕೃಷ್ಣ ಜೀ ಅವರು ಹಾಗೂ ಪದ್ಮ ಭೂಷಣ ಭೂಷಿತರಾದ ಮಾನ್ಯ ಶ್ರೀ ಎಸ್.ಎಲ್ ಭೈರಪ್ಪನವರು ಮತ್ತು ಶ್ರೀಮತಿ ಸುಧಾಮೂರ್ತಿ ಅವರು, #PadmaAwards #PeoplesPadma pic.twitter.com/1j5tvHhasL

    — Dr. Murugesh R Nirani (@NiraniMurugesh) January 25, 2023 " class="align-text-top noRightClick twitterSection" data=" ">

ಕೇಂದ್ರ ಸರ್ಕಾರದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಎನಿಸಿರುವ ಪದ್ಮವಿಭೂಷಣ ಪ್ರಶಸ್ತಿಗೆ ಪಾತ್ರರಾದ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಪದ್ಮಭೂಷಣ ಪಡೆದ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ, ತಮ್ಮ ಸರಳತೆಯ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿ, ಸಮಾಜಸೇವೆಗಾಗಿ ಪದ್ಮಭೂಷಣ ಪ್ರಶಸ್ತಿ ಪಡೆದ ಸುಧಾ ಮೂರ್ತಿ, ಹಾಗೆಯೇ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ರಾಣಿ ಮಾಚಯ್ಯ(ಕಲೆ), ಶ್ರೀ ಶಾ.ರಶೀದ್ ಅಹ್ಮದ್ ಖಾದ್ರಿ(ಕಲೆ), ಶ್ರೀ ಎಸ್.ಸುಬ್ಬರಾಮನ್(ಪುರಾತತ್ವ ಶಾಸ್ತ್ರ), ಶ್ರೀ ಖಾದರ್ ವಲ್ಲಿ ದುಡೇಕುಲ(ವಿಜ್ಞಾನ ಮತ್ತು ಇಂಜಿನಿಯರಿಂಗ್), ಶ್ರೀ ಪಿಂಡಿಪಾಪನಹಳ್ಳಿ ವೆಂಕಟಪ್ಪ(ಕಲೆ)ನವರಿಗೆ ಪ್ರಶಸ್ತಿ ಲಭಿಸಿರುವುದು ರಾಜ್ಯದ ಗರಿಮೆಯನ್ನು ಹೆಚ್ಚಿಸಿದೆ ಎಂದಿದ್ದಾರೆ.

ಇದನ್ನೂ ಓದಿ: ಎಂಟು ಕನ್ನಡಿಗರಿಗೆ ಪದ್ಮ ಪುರಸ್ಕಾರ: ಎಸ್​ಎಂ ಕೃಷ್ಣಗೆ ಪದ್ಮವಿಭೂಷಣ, ಭೈರಪ್ಪ, ಸುಧಾಮೂರ್ತಿಗೆ ಪದ್ಮಭೂಷಣ

"ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಐಟಿಬಿಟಿ ಕ್ಷೇತ್ರಕ್ಕೆ ಸಾಕಷ್ಟು ಮನ್ನಣೆ ನೀಡಿ, ಬೆಂಗಳೂರಿಗೆ 'ಸಿಲಿಕಾನ್ ವ್ಯಾಲಿ' ಎಂದು ಗುರುತಿಸಿಕೊಳ್ಳುವಲ್ಲಿ ಕೃಷ್ಣ ಅವರ ದೂರದೃಷ್ಟಿ ಸಾಕಷ್ಟಿತ್ತು. ಜೊತೆಗೆ ವಿಧಾನಸಭೆಯ ಸಭಾಪತಿಯಾಗಿ ವಿವಿಧ ಖಾತೆಗಳನ್ನು ಹೊಂದಿದ್ದ ಅವರು ರಾಜ್ಯದ ಮಟ್ಟಿಗೆ ಓರ್ವ ಮುತ್ಸದ್ದಿ ರಾಜಕಾರಣಿಯಾಗಿದ್ದರು. ಅಂತಹ ಮೇರು ವ್ಯಕ್ತಿತ್ವ ಹೊಂದಿದ್ದ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಸುಧೀರ್ಘ ಸೇವೆಯನ್ನು ಗುರುತಿಸಿ ಪದ್ಮವಿಭೂಷಣ ಪ್ರಶಸ್ತಿ ನೀಡಿರುವುದು ಸಮಸ್ತ ಕನ್ನಡಿಗರಿಗೆ ಸಿಕ್ಕ ಗೌರವ" ಎಂದು ಹೇಳಿದ್ದಾರೆ.

ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಮತದಾನ, ಪರ್ವ ಸೇರಿದಂತೆ ಅನೇಕ ಹೆಸರಾಂತ ಕಾದಂಬರಿಗಳನ್ನು ಬರೆದು ಮನೆಮಾತಾಗಿರುವ ಹೆಸರಾಂತ ಸಾಹಿತಿ ಎಸ್.ಎಲ್. ಬೈರಪ್ಪ ಅವರಿಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಲಭಿಸಿರುವುದು ಸೂಕ್ತವಾಗಿದೆ. ಅಲ್ಲದೇ ತಮ್ಮ ಸರಳತೆಯ ಮೂಲಕ ಕರ್ನಾಟಕ ಮಾತ್ರವಲ್ಲದೆ ದೇಶ-ವಿದೇಶಗಳಲ್ಲೂ ಹೆಸರವಾಸಿಯಾಗಿರುವ ಸಾಹಿತಿ ಹಾಗೂ ಸಮಾಜ ಸೇವೆಯನ್ನು ಉಸಿರಾಗಿಸಿಕೊಂಡಿರುವ ಸುಧಾ ಮೂರ್ತಿ ಅವರಿಗೆ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಲಭಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

"ಸುಧಾ ಮೂರ್ತಿ ಅವರು ಕರ್ನಾಟಕ ಕಂಡ ಶ್ರೇಷ್ಠ ಮಹಿಳೆಯರಲ್ಲಿ ಒಬ್ಬರು. ತನ್ನ ಮಾತೃ ಹೃದಯದಲ್ಲಿರುವ ಅಪಾರ ಪ್ರೀತಿಯನ್ನು ಬಡವರಿಗೆ, ನೊಂದವರಿಗೆ ಅದೆಷ್ಟೋ ಮಂದಿ ಸಂತ್ರಸ್ತರಿಗೆ ನೆರವು ನೀಡುವುದರ ಮೂಲಕ ಹಂಚುತ್ತಿದ್ದಾರೆ. ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಉನ್ನತ ಸ್ಥಾನದಲ್ಲಿದ್ದರೂ ತಾಯಿಭಾಷೆ, ನೆಲದ ಋಣ ತೀರಿಸುವ ಕೆಲಸ ಮಾಡುತ್ತಲೇ ಇರುತ್ತಾರೆ. ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದ ಅಗ್ರಜನೆನಿಸಿಕೊಂಡಿರುವ ಇನ್ಫೋಸಿಸ್ ಸಂಸ್ಥೆಯ ಒಡತಿಯಾಗಿದ್ದರೂ ತನ್ನನು ತಾನು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದಲ್ಲದೇ ಬರಹಗಾರ್ತಿಯಾಗಿ ಕನ್ನಡ ಸಾಹಿತ್ಯ ಕ್ಷೇತ್ರದಲ್ಲೂ ಛಾಪು ಮೂಡಿಸಿ ಹಣ, ಶ್ರೀಮಂತಿಕೆ ಬದುಕಿನ ಒಂದು ಭಾಗವಷ್ಟೇ ಎನ್ನುವುದನ್ನು ಸದಾ ನಿರೂಪಿಸುತ್ತಿದ್ದಾರೆ" ಎಂದರು.

ಇನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಸೇವೆಗಾಗಿ ‌ಪದ್ಮಶ್ರೀ ಪ್ರಶಸ್ತಿ ಪಡೆದ ಖಾದರ್ ವಲ್ಲಿ ದುಡೇಕುಲ, ಕೊಡಗಿನ ಉಮ್ಮತ್ತಾಟ್ ಜಾನಪದ ನೃತ್ಯ ಕಲೆಯ (ಜಾನಪದ ನೃತ್ಯ) ನರ್ತಕಿ ರಾಣಿ ಮಾಚಯ್ಯ ಪದ್ಮಶ್ರೀ ಹಾಗೂ ಸಂಗೀತ ಕ್ಷೇತ್ರದಲ್ಲಿ ಚಿಕ್ಕಬಳ್ಳಾಪುರದ ಮುನಿವೆಂಕಟಪ್ಪ ಅವರಿಗೂ ಪದ್ಮಶ್ರೀ ಪ್ರಶಸ್ತಿ ಬಂದಿರುವುದಕ್ಕೆ ‌ಸಚಿವ ನಿರಾಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಅಭಿನಂದನೆ ಹೇಳಿದ್ದಾರೆ. ಕೈಗಾರಿಕೆ ಹಾಗೂ ವ್ಯಾಪಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಭಾರತದ ಕೀರ್ತಿಪತಾಕೆಯನ್ನು ವಿದೇಶಗಳಲ್ಲೂ ಹೆಚ್ಚಿಸಿದ ಆದಿತ್ಯ ಬಿರ್ಲಾ ಗ್ರೂಪ್‌ನ ಅಧ್ಯಕ್ಷರು ಹಾಗೂ ಪ್ರಸಕ್ತ ವರ್ಷ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿರುವ ಕುಮಾರ್ ಮಂಗಳಂ ಬಿರ್ಲಾ ಅವರಿಗೂ ಶುಭಾಶಯ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಪ್ರಥಮ ಬಾರಿಗೆ ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.