ETV Bharat / state

ಪದ್ಮಶ್ರೀ ಪ್ರಶಸ್ತಿ ಕನ್ನಡ ಜನತೆಗೆ ಅರ್ಪಣೆ: ಮಂಜಮ್ಮ ಜೋಗತಿ

author img

By

Published : Feb 4, 2021, 8:26 PM IST

ತಂದೆ, ತಾಯಿಯಿಂದ ದೂರವಾಗಿ ಸಂತೆ, ಮಾರುಕಟ್ಟೆ, ದೇವಸ್ಥಾನ, ರೈಲ್ವೆ ನಿಲ್ದಾಣಗಳಲ್ಲಿ ಮಲಗಿ ಬದುಕು ರೂಪಿಸಿಕೊಂಡೆ. ಜನರ ಕಿರುಕುಳದ ನಡುವೆ ಬದುಕು ನನ್ನದಾಗಿಸಿಕೊಂಡೆ. ನನಗೆ ಸಂದಿರುವ ಈ ಪ್ರಶಸ್ತಿಯನ್ನು ನಾನು ಕನ್ನಡ ನಾಡಿನ ಜನತೆಗೆ ಅರ್ಪಿಸುತ್ತೇನೆ ಎಂದು ಕಲಾವಿದೆ ಮಂಜಮ್ಮ ಜೋಗತಿ ಹೇಳಿದ್ದಾರೆ.

Padma Shri Award dedicate to Kannada people
ರಾಜ್ಯ ಬಿಜೆಪಿ ವತಿಯಿಂದ ಅಭಿನಂದನೆ ಸ್ವೀಕಾರ

ಬೆಂಗಳೂರು: ತಮಗೆ ಲಭಿಸಿದ ಪದ್ಮಶ್ರೀ ಪ್ರಶಸ್ತಿಯನ್ನು ಕನ್ನಡ ನಾಡಿನ ಜನತೆಗೆ, ತಂದೆ, ತಾಯಿ, ಗುರುಗಳು, ಜೋಗತಿ ಸಂಪ್ರದಾಯಕ್ಕೆ ಸಮರ್ಪಿಸುವುದಾಗಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಕಲಾವಿದೆ ಮಂಜಮ್ಮ ಜೋಗತಿ ತಿಳಿಸಿದ್ದಾರೆ.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ"ದಲ್ಲಿ ರಾಜ್ಯ ಬಿಜೆಪಿ ವತಿಯಿಂದ ಅಭಿನಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ತಂದೆ, ತಾಯಿಯಿಂದ ದೂರವಾಗಿ ಸಂತೆ, ಮಾರುಕಟ್ಟೆ, ದೇವಸ್ಥಾನ, ರೈಲ್ವೆ ನಿಲ್ದಾಣಗಳಲ್ಲಿ ಮಲಗಿ ಬದುಕು ರೂಪಿಸಿಕೊಂಡೆ. ಜನರ ಕಿರುಕುಳದ ನಡುವೆ ಬದುಕು ನನ್ನದಾಗಿಸಿಕೊಂಡೆ. ಹಿಂದೆ ಬಸ್ಸಿನ ಸೀಟಿನಲ್ಲಿ ನನ್ನ ಬಳಿ ಕುಳಿತುಕೊಳ್ಳಲು ಪುರುಷರಾಗಲೀ, ಸ್ತ್ರೀಯರಾಗಲೀ ಮುಂದಾಗುತ್ತಿರಲಿಲ್ಲ. ಈಗ ಆ ಮನೋಭಾವದಲ್ಲಿ ಬದಲಾವಣೆ ಬಂದಿದೆ ಎಂದು ವಿವರಿಸಿದರು.

ರಾಜ್ಯ ಬಿಜೆಪಿ ವತಿಯಿಂದ ಅಭಿನಂದನೆ ಸ್ವೀಕಾರ
ರಾಜ್ಯ ಬಿಜೆಪಿ ವತಿಯಿಂದ ಅಭಿನಂದನೆ ಸ್ವೀಕಾರ

ಜೋಗತಿ ಕಲಾವಿದೆಯಾದ ನನಗೆ ರಾಷ್ಟ್ರಮಟ್ಟದ ಪ್ರಶಸ್ತಿ ಬರುವುದನ್ನು ಕನಸಿನಲ್ಲೂ ನೆನೆಸಿರಲಿಲ್ಲ. ಹಿಂದೆ ಬಿಜೆಪಿ ಸರ್ಕಾರವಿದ್ದಾಗ ರಾಜ್ಯೋತ್ಸವ ಪ್ರಶಸ್ತಿ ಬಂದಿತ್ತು. ಈಗ ರಾಷ್ಟ್ರ ಮಟ್ಟದ ಗೌರವ ಸಿಗುತ್ತಿದೆ ಎಂದು ತಿಳಿಸಿದರು.

ಹಿಂದೆ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆಯಾಗಿ ಆಯ್ಕೆಯಾದ ಸುದ್ದಿ ತಿಳಿದಾಗ ಕೈಕಾಲು ಥರಥರ ನಡುಗಿತ್ತು. ಈ ಸುದ್ದಿಯೂ ನನ್ನನ್ನು ಒಮ್ಮೆ "ತಮಾಷೆ ಇರಬಹುದೇ" ಎಂದು ಚಿಂತಿಸುವಂತೆ ಮಾಡಿತು ಎಂದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕಾರದ ಪ್ರಕಟಣೆ ಬಂದಾಗ ರಾತ್ರಿಯಿಡೀ ಮಾತ್ರವಲ್ಲದೆ ಮರುದಿನವಿಡೀ ಅಭಿನಂದನೆಯ ಫೋನ್ ಕರೆ ಬಂದುದನ್ನು ಅವರು ನೆನಪಿಸಿಕೊಂಡರು.

ಓದಿ:ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿಗೆ ಗಾಲಿ ಜನಾರ್ದನ ರೆಡ್ಡಿ ಕುಟುಂಬದಿಂದ ಸನ್ಮಾನ

ವಿಷ ಕುಡಿದರೂ ಬದುಕಿದೆ. ಬಳಿಕ ರೈಲಿಗೆ ತಲೆ ಕೊಟ್ಟು ಸಾಯುವ ಯೋಚನೆಯೂ ಬಂದಿತ್ತು. ಆದರೆ ಬದುಕಿ ಸಾಧಿಸಬಾರದೇಕೆ ಎಂಬ ಚಿಂತನೆಯಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು. "ನಾ ಒಂದು ಬಯಸಿದೆ. ವಿಧಿಯೊಂದು ಮಾಡಿದೆ", "ಆಡಿ ಬಾ ಮಗನೆ ರಾಮಾ ನೋಡುವೆ ಕಣ್ಣಿನ ತುಂಬಾ" ಎಂಬ ಎರಡು ಹಾಡುಗಳನ್ನೂ ಅವರು ಹಾಡಿದರು.

ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‍ಕುಮಾರ್ ಮಾತನಾಡಿ, ಕೇಂದ್ರದ ಜನಪ್ರಿಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಆಯ್ಕೆ ಸಮಿತಿಯು ಮಂಗಳಮುಖಿಯರ ಕಲೆ, ಪ್ರತಿಭೆ, ಆತ್ಮವಿಶ್ವಾಸವನ್ನು ಗುರುತಿಸುವ ಕಾರ್ಯ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬೆಂಗಳೂರು: ತಮಗೆ ಲಭಿಸಿದ ಪದ್ಮಶ್ರೀ ಪ್ರಶಸ್ತಿಯನ್ನು ಕನ್ನಡ ನಾಡಿನ ಜನತೆಗೆ, ತಂದೆ, ತಾಯಿ, ಗುರುಗಳು, ಜೋಗತಿ ಸಂಪ್ರದಾಯಕ್ಕೆ ಸಮರ್ಪಿಸುವುದಾಗಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಕಲಾವಿದೆ ಮಂಜಮ್ಮ ಜೋಗತಿ ತಿಳಿಸಿದ್ದಾರೆ.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ"ದಲ್ಲಿ ರಾಜ್ಯ ಬಿಜೆಪಿ ವತಿಯಿಂದ ಅಭಿನಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ತಂದೆ, ತಾಯಿಯಿಂದ ದೂರವಾಗಿ ಸಂತೆ, ಮಾರುಕಟ್ಟೆ, ದೇವಸ್ಥಾನ, ರೈಲ್ವೆ ನಿಲ್ದಾಣಗಳಲ್ಲಿ ಮಲಗಿ ಬದುಕು ರೂಪಿಸಿಕೊಂಡೆ. ಜನರ ಕಿರುಕುಳದ ನಡುವೆ ಬದುಕು ನನ್ನದಾಗಿಸಿಕೊಂಡೆ. ಹಿಂದೆ ಬಸ್ಸಿನ ಸೀಟಿನಲ್ಲಿ ನನ್ನ ಬಳಿ ಕುಳಿತುಕೊಳ್ಳಲು ಪುರುಷರಾಗಲೀ, ಸ್ತ್ರೀಯರಾಗಲೀ ಮುಂದಾಗುತ್ತಿರಲಿಲ್ಲ. ಈಗ ಆ ಮನೋಭಾವದಲ್ಲಿ ಬದಲಾವಣೆ ಬಂದಿದೆ ಎಂದು ವಿವರಿಸಿದರು.

ರಾಜ್ಯ ಬಿಜೆಪಿ ವತಿಯಿಂದ ಅಭಿನಂದನೆ ಸ್ವೀಕಾರ
ರಾಜ್ಯ ಬಿಜೆಪಿ ವತಿಯಿಂದ ಅಭಿನಂದನೆ ಸ್ವೀಕಾರ

ಜೋಗತಿ ಕಲಾವಿದೆಯಾದ ನನಗೆ ರಾಷ್ಟ್ರಮಟ್ಟದ ಪ್ರಶಸ್ತಿ ಬರುವುದನ್ನು ಕನಸಿನಲ್ಲೂ ನೆನೆಸಿರಲಿಲ್ಲ. ಹಿಂದೆ ಬಿಜೆಪಿ ಸರ್ಕಾರವಿದ್ದಾಗ ರಾಜ್ಯೋತ್ಸವ ಪ್ರಶಸ್ತಿ ಬಂದಿತ್ತು. ಈಗ ರಾಷ್ಟ್ರ ಮಟ್ಟದ ಗೌರವ ಸಿಗುತ್ತಿದೆ ಎಂದು ತಿಳಿಸಿದರು.

ಹಿಂದೆ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆಯಾಗಿ ಆಯ್ಕೆಯಾದ ಸುದ್ದಿ ತಿಳಿದಾಗ ಕೈಕಾಲು ಥರಥರ ನಡುಗಿತ್ತು. ಈ ಸುದ್ದಿಯೂ ನನ್ನನ್ನು ಒಮ್ಮೆ "ತಮಾಷೆ ಇರಬಹುದೇ" ಎಂದು ಚಿಂತಿಸುವಂತೆ ಮಾಡಿತು ಎಂದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕಾರದ ಪ್ರಕಟಣೆ ಬಂದಾಗ ರಾತ್ರಿಯಿಡೀ ಮಾತ್ರವಲ್ಲದೆ ಮರುದಿನವಿಡೀ ಅಭಿನಂದನೆಯ ಫೋನ್ ಕರೆ ಬಂದುದನ್ನು ಅವರು ನೆನಪಿಸಿಕೊಂಡರು.

ಓದಿ:ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿಗೆ ಗಾಲಿ ಜನಾರ್ದನ ರೆಡ್ಡಿ ಕುಟುಂಬದಿಂದ ಸನ್ಮಾನ

ವಿಷ ಕುಡಿದರೂ ಬದುಕಿದೆ. ಬಳಿಕ ರೈಲಿಗೆ ತಲೆ ಕೊಟ್ಟು ಸಾಯುವ ಯೋಚನೆಯೂ ಬಂದಿತ್ತು. ಆದರೆ ಬದುಕಿ ಸಾಧಿಸಬಾರದೇಕೆ ಎಂಬ ಚಿಂತನೆಯಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು. "ನಾ ಒಂದು ಬಯಸಿದೆ. ವಿಧಿಯೊಂದು ಮಾಡಿದೆ", "ಆಡಿ ಬಾ ಮಗನೆ ರಾಮಾ ನೋಡುವೆ ಕಣ್ಣಿನ ತುಂಬಾ" ಎಂಬ ಎರಡು ಹಾಡುಗಳನ್ನೂ ಅವರು ಹಾಡಿದರು.

ಪಕ್ಷದ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‍ಕುಮಾರ್ ಮಾತನಾಡಿ, ಕೇಂದ್ರದ ಜನಪ್ರಿಯ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಆಯ್ಕೆ ಸಮಿತಿಯು ಮಂಗಳಮುಖಿಯರ ಕಲೆ, ಪ್ರತಿಭೆ, ಆತ್ಮವಿಶ್ವಾಸವನ್ನು ಗುರುತಿಸುವ ಕಾರ್ಯ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.