ETV Bharat / state

ನವದೆಹಲಿಯಲ್ಲಿ ಕೇಂದ್ರ ಸಂಸದೀಯ ಮಂಡಳಿ ಸಭೆ: ಯಾವುದೇ ಕ್ಷಣದಲ್ಲೂ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ

author img

By

Published : Apr 9, 2023, 8:11 PM IST

ಗೆಲ್ಲುವ ಸಾಮರ್ಥ್ಯಕ್ಕೆ ಅನುಗುಣವಾಗಿ ಸಮೀಕ್ಷಾ ವರದಿಯನ್ನು ಪೂರಕವಾಗಿರಿಸಿಕೊಂಡು ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಚರ್ಚಿಸಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಗೊಳಿಸಲಾಗುತ್ತದೆ ಎಂಬ ಮಾಹಿತಿ ದೊರೆತಿದೆ.

ಕೇಂದ್ರ ಸಂಸದೀಯ ಮಂಡಳಿ ಸಭೆ
ಕೇಂದ್ರ ಸಂಸದೀಯ ಮಂಡಳಿ ಸಭೆ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಬಿಜೆಪಿ ವರಿಷ್ಠ ಮಂಡಳಿಯಾಗಿರುವ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯುತ್ತಿದ್ದು, ಯಾವುದೇ ಕ್ಷಣದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಕುರಿತು ರಾಜ್ಯ ಸಮಿತಿ ಕಳುಹಿಸಿರುವ ಆಕಾಂಕ್ಷಿಗಳ ಪಟ್ಟಿಯನ್ನು 15 ಜನ ಸದಸ್ಯರುಳ್ಳ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಪರಾಮರ್ಶೆ ನಡೆಸಿದ್ದು, ಪಕ್ಷದ ವರಿಷ್ಠ ಮಂಡಳಿಯಾಗಿರುವ ಸಂಸದೀಯ ಮಂಡಳಿಗೆ ಕಳುಹಿಸಿಕೊಟ್ಟಿದೆ. ಇಂದು ಜೆ.ಪಿ.ನಡ್ಡಾ ಅಧ್ಯಕ್ಷತೆಯಲ್ಲಿ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್.ಯಡಿಯೂರಪ್ಪ, ಸರ್ಬಾನಂದ್ ಸೋನವಾಲ, ಕೆ.ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್ ಪುರ, ಸುಧಾ ಯಾದವ್, ಸತ್ಯನಾರಾಯಣ ಜಟಿಯಾ ಹಾಗು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭಾಗಿಯಾಗಿದ್ದಾರೆ.

ಸಮೀಕ್ಷಾ ವರದಿಗೆ ಪೂರಕವಾಗಿ ಪಟ್ಟಿ ಬಿಡುಗಡೆ: ರಾಜ್ಯ ಸಮಿತಿ ಶಿಫಾರಸು ಮಾಡಿರುವ ಪಟ್ಟಿ ಹಾಗೂ ಅದಕ್ಕೆ ಕೇಂದ್ರ ಚುನಾವಣಾ ಸಮಿತಿ ನೀಡಿರುವ ಮರುಪರಿಶೀಲನಾ ಅಭಿಪ್ರಾಯವನ್ನು ಒಳಗೊಂಡಂತೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಕುರಿತು ಮಹತ್ವದ ಸಭೆ ನಡೆಯುತ್ತಿದೆ. ಎರಡೂ ಸಮಿತಿಗಳಲ್ಲಿ ರಾಜ್ಯದ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಇದ್ದು, ಯಡಿಯೂರಪ್ಪ ಬೆಂಬಲಿಗರಿಗೆ ಟಿಕೆಟ್ ಮಿಸ್ ಆಗುವುದಿಲ್ಲ ಎನ್ನುವ ನಿರೀಕ್ಷೆ ಮೂಡಿಸಿದೆ. ಆದರೆ ಟಿಕೆಟ್ ಆಯ್ಕೆಗೆ ಹೈಕಮಾಂಡ್ ತನ್ನದೇ ಆದ ಮಾನದಂಡವನ್ನು ಅನುಸರಿಸುತ್ತಿದ್ದು, ಗೆಲ್ಲುವ ಸಾಮರ್ಥ್ಯಕ್ಕೆ ತನ್ನದೇ ಆದ ಸಮೀಕ್ಷಾ ವರದಿಯನ್ನು ಪೂರಕವಾಗಿರಿಸಿಕೊಂಡು ಚರ್ಚಿಸಿ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಿದೆ. ಹಾಗಾಗಿ ಇಲ್ಲಿ ಯಾರ ಬೆಂಬಲಿಗರು ಎನ್ನುವುದಕ್ಕಿಂತ ಹೈಕಮಾಂಡ್ ತನ್ನದೇ ಆದ ರೀತಿಯಲ್ಲಿ ಪಟ್ಟಿ ಅಂತಿಮಗೊಳಿಸಲಿದೆ ಎಂಬುದು ತಿಳಿದುಬಂದಿದೆ.

ಹೊಸಬರಿಗೂ ಮಣೆ: ಎಲ್ಲಾ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯುತ್ತಿದೆ. ಎಷ್ಟು ಜನ ಹಾಲಿ ಶಾಸಕರಿಗೆ ಟಿಕೆಟ್ ಕೊಡಬೇಕು ಎನ್ನುವ ಕುರಿತು ಮೊದಲ ಚರ್ಚೆ ನಡೆಯಲಿದ್ದು, ಕೆಲ ಹಾಲಿಗಳಿಗೆ ಕೊಕ್ ನೀಡಿ ಅಲ್ಲಿ ಹೊಸಬರಿಗೆ ಅವಕಾಶ ನೀಡುವ ಕುರಿತು ಚರ್ಚೆ ನಡೆಯಲಿದೆ. ಕೆಲ ಹಿರಿಯರ ಬದಲಿಗೂ ಹೊಸಬರಿಗೂ ಮಣೆ ಹಾಕಲಾಗುತ್ತದೆ. ಇನ್ನು ಚುನಾವಣೆ ವೇಳೆ ಆಪರೇಷನ್ ಕಮಲದ ಮೂಲಕ ಬಂದವರಿಗೂ ಅವಕಾಶ ನೀಡುವ ಕುರಿತು ಚರ್ಚೆ ನಡೆಯಲಿದೆ. ಮಿಷನ್ 150 ಸಮೀಪಕ್ಕೆ ತಲುಪಲು ಬೇಕಾದ ರೀತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎನ್ನಲಾಗಿದೆ.

130 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ?: ಈ ಬಾರಿ ಎರಡು ಪಟ್ಟಿಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ಬಹುತೇಕ ಇಂದು ಅಥವಾ ನಾಳೆ ಬೆಳಗ್ಗೆ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. 130 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ ಇದ್ದು, ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳುವ ಏಪ್ರಿಲ್ 13 ರಂದು ಬಾಕಿ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರುಳ್ಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ : ಏಪ್ರಿಲ್ 9ರಂದು ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಬಿಜೆಪಿ ವರಿಷ್ಠ ಮಂಡಳಿಯಾಗಿರುವ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯುತ್ತಿದ್ದು, ಯಾವುದೇ ಕ್ಷಣದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಕುರಿತು ರಾಜ್ಯ ಸಮಿತಿ ಕಳುಹಿಸಿರುವ ಆಕಾಂಕ್ಷಿಗಳ ಪಟ್ಟಿಯನ್ನು 15 ಜನ ಸದಸ್ಯರುಳ್ಳ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಪರಾಮರ್ಶೆ ನಡೆಸಿದ್ದು, ಪಕ್ಷದ ವರಿಷ್ಠ ಮಂಡಳಿಯಾಗಿರುವ ಸಂಸದೀಯ ಮಂಡಳಿಗೆ ಕಳುಹಿಸಿಕೊಟ್ಟಿದೆ. ಇಂದು ಜೆ.ಪಿ.ನಡ್ಡಾ ಅಧ್ಯಕ್ಷತೆಯಲ್ಲಿ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್.ಯಡಿಯೂರಪ್ಪ, ಸರ್ಬಾನಂದ್ ಸೋನವಾಲ, ಕೆ.ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್ ಪುರ, ಸುಧಾ ಯಾದವ್, ಸತ್ಯನಾರಾಯಣ ಜಟಿಯಾ ಹಾಗು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭಾಗಿಯಾಗಿದ್ದಾರೆ.

ಸಮೀಕ್ಷಾ ವರದಿಗೆ ಪೂರಕವಾಗಿ ಪಟ್ಟಿ ಬಿಡುಗಡೆ: ರಾಜ್ಯ ಸಮಿತಿ ಶಿಫಾರಸು ಮಾಡಿರುವ ಪಟ್ಟಿ ಹಾಗೂ ಅದಕ್ಕೆ ಕೇಂದ್ರ ಚುನಾವಣಾ ಸಮಿತಿ ನೀಡಿರುವ ಮರುಪರಿಶೀಲನಾ ಅಭಿಪ್ರಾಯವನ್ನು ಒಳಗೊಂಡಂತೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಕುರಿತು ಮಹತ್ವದ ಸಭೆ ನಡೆಯುತ್ತಿದೆ. ಎರಡೂ ಸಮಿತಿಗಳಲ್ಲಿ ರಾಜ್ಯದ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಇದ್ದು, ಯಡಿಯೂರಪ್ಪ ಬೆಂಬಲಿಗರಿಗೆ ಟಿಕೆಟ್ ಮಿಸ್ ಆಗುವುದಿಲ್ಲ ಎನ್ನುವ ನಿರೀಕ್ಷೆ ಮೂಡಿಸಿದೆ. ಆದರೆ ಟಿಕೆಟ್ ಆಯ್ಕೆಗೆ ಹೈಕಮಾಂಡ್ ತನ್ನದೇ ಆದ ಮಾನದಂಡವನ್ನು ಅನುಸರಿಸುತ್ತಿದ್ದು, ಗೆಲ್ಲುವ ಸಾಮರ್ಥ್ಯಕ್ಕೆ ತನ್ನದೇ ಆದ ಸಮೀಕ್ಷಾ ವರದಿಯನ್ನು ಪೂರಕವಾಗಿರಿಸಿಕೊಂಡು ಚರ್ಚಿಸಿ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಿದೆ. ಹಾಗಾಗಿ ಇಲ್ಲಿ ಯಾರ ಬೆಂಬಲಿಗರು ಎನ್ನುವುದಕ್ಕಿಂತ ಹೈಕಮಾಂಡ್ ತನ್ನದೇ ಆದ ರೀತಿಯಲ್ಲಿ ಪಟ್ಟಿ ಅಂತಿಮಗೊಳಿಸಲಿದೆ ಎಂಬುದು ತಿಳಿದುಬಂದಿದೆ.

ಹೊಸಬರಿಗೂ ಮಣೆ: ಎಲ್ಲಾ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯುತ್ತಿದೆ. ಎಷ್ಟು ಜನ ಹಾಲಿ ಶಾಸಕರಿಗೆ ಟಿಕೆಟ್ ಕೊಡಬೇಕು ಎನ್ನುವ ಕುರಿತು ಮೊದಲ ಚರ್ಚೆ ನಡೆಯಲಿದ್ದು, ಕೆಲ ಹಾಲಿಗಳಿಗೆ ಕೊಕ್ ನೀಡಿ ಅಲ್ಲಿ ಹೊಸಬರಿಗೆ ಅವಕಾಶ ನೀಡುವ ಕುರಿತು ಚರ್ಚೆ ನಡೆಯಲಿದೆ. ಕೆಲ ಹಿರಿಯರ ಬದಲಿಗೂ ಹೊಸಬರಿಗೂ ಮಣೆ ಹಾಕಲಾಗುತ್ತದೆ. ಇನ್ನು ಚುನಾವಣೆ ವೇಳೆ ಆಪರೇಷನ್ ಕಮಲದ ಮೂಲಕ ಬಂದವರಿಗೂ ಅವಕಾಶ ನೀಡುವ ಕುರಿತು ಚರ್ಚೆ ನಡೆಯಲಿದೆ. ಮಿಷನ್ 150 ಸಮೀಪಕ್ಕೆ ತಲುಪಲು ಬೇಕಾದ ರೀತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎನ್ನಲಾಗಿದೆ.

130 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ?: ಈ ಬಾರಿ ಎರಡು ಪಟ್ಟಿಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ಬಹುತೇಕ ಇಂದು ಅಥವಾ ನಾಳೆ ಬೆಳಗ್ಗೆ ಮೊದಲ ಪಟ್ಟಿ ಬಿಡುಗಡೆಯಾಗಲಿದೆ. 130 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ ಇದ್ದು, ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳುವ ಏಪ್ರಿಲ್ 13 ರಂದು ಬಾಕಿ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರುಳ್ಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ : ಏಪ್ರಿಲ್ 9ರಂದು ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಸಾಧ್ಯತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.