ETV Bharat / state

ಲಗೇಜ್ ವಿಚಾರಕ್ಕೆ ಜಗಳ: ಕೆಎಸ್​​ಆರ್​ಟಿಸಿ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕರಿಂದ ಹಲ್ಲೆ - ವಿಡಿಯೋ

ದೊಡ್ಡಬಳ್ಳಾಪುರದಲ್ಲಿರುವ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಲಗೇಜ್​​ ವಿಚಾರವಾಗಿ ಬಸ್​​ ಕಂಡಕ್ಟರ್​ ಮೇಲೆ ಪ್ರಯಾಣಿಕರು ಹಲ್ಲೆ ನಡೆಸಿರುವ ಆರೋಪ ಪ್ರಕರಣ ಬೆಳಕಿಗೆ ಬಂದಿದೆ.

author img

By

Published : Jan 24, 2021, 9:52 AM IST

ಲಾಗೇಜ್ ವಿಚಾರಕ್ಕೆ ಕೆಎಸ್​​ಆರ್​ಟಿಸಿ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕರಿಂದ ಹಲ್ಲೆ
Passengers attacked on bus conductor for luggage issue at Doddaballapur

ದೊಡ್ಡಬಳ್ಳಾಪುರ: ಲಗೇಜ್​​ ವಿಚಾರಕ್ಕೆ ಕೆಎಸ್​ಆರ್​ಟಿಸಿ ಬಸ್​​ ಕಂಡಕ್ಟರ್​ ಮೇಲೆ ಪ್ರಯಾಣಿಕರು ಹಲ್ಲೆ ನಡೆಸಿರುವ ಆರೋಪ ಪ್ರಕರಣ ಕೆಎಸ್ಆರ್​​​ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಕೆಎಸ್​​ಆರ್​ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ ಪ್ರಯಾಣಿಕರು

ನಗರದ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಿಂದ ಬೆಂಗಳೂರಿಗೆ ಹೊರಟಿದ್ದ ಬಸ್​​ನಲ್ಲಿ ಕುಟುಂಬವೊಂದು ಪ್ರಯಾಣಿಸುತ್ತಿತ್ತು. ಈ ವೇಳೆ ಲಗೇಜ್ ವಿಚಾರವಾಗಿ ಸದಸ್ಯನೊಬ್ಬ ಕಂಡಕ್ಟರ್​​ನೊಂದಿಗೆ ಜಗಳವಾಡಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಕುಟುಂಬಸ್ಥರು ಕಂಡಕ್ಟರ್​ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದೆ.

ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ: ಇಂದು ನಡೆಯಬೇಕಿದ್ದ ಎಫ್​ಡಿಎ ಪರೀಕ್ಷೆ ಮುಂದೂಡಿಕೆ

ಘಟನೆಯಲ್ಲಿ ಕಂಡಕ್ಟರ್​ ಹರೀಶ್​ ಎಂಬುವರು ಗಾಯಗೊಂಡಿದ್ದು, ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೊಡ್ಡಬಳ್ಳಾಪುರ: ಲಗೇಜ್​​ ವಿಚಾರಕ್ಕೆ ಕೆಎಸ್​ಆರ್​ಟಿಸಿ ಬಸ್​​ ಕಂಡಕ್ಟರ್​ ಮೇಲೆ ಪ್ರಯಾಣಿಕರು ಹಲ್ಲೆ ನಡೆಸಿರುವ ಆರೋಪ ಪ್ರಕರಣ ಕೆಎಸ್ಆರ್​​​ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಕೆಎಸ್​​ಆರ್​ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ ಪ್ರಯಾಣಿಕರು

ನಗರದ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಿಂದ ಬೆಂಗಳೂರಿಗೆ ಹೊರಟಿದ್ದ ಬಸ್​​ನಲ್ಲಿ ಕುಟುಂಬವೊಂದು ಪ್ರಯಾಣಿಸುತ್ತಿತ್ತು. ಈ ವೇಳೆ ಲಗೇಜ್ ವಿಚಾರವಾಗಿ ಸದಸ್ಯನೊಬ್ಬ ಕಂಡಕ್ಟರ್​​ನೊಂದಿಗೆ ಜಗಳವಾಡಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಕುಟುಂಬಸ್ಥರು ಕಂಡಕ್ಟರ್​ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದೆ.

ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ: ಇಂದು ನಡೆಯಬೇಕಿದ್ದ ಎಫ್​ಡಿಎ ಪರೀಕ್ಷೆ ಮುಂದೂಡಿಕೆ

ಘಟನೆಯಲ್ಲಿ ಕಂಡಕ್ಟರ್​ ಹರೀಶ್​ ಎಂಬುವರು ಗಾಯಗೊಂಡಿದ್ದು, ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.