ETV Bharat / state

ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ರಿಜ್ವಾನ್, ಪಿಸಿ ಮೋಹನ್ - counting centre

ಮತ ಎಣಿಕೆ ಕೇಂದ್ರಕ್ಕೆ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ ಆಗಮಿಸಿ, ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ರಿಜ್ವಾನ್ ಹಾಗೂ ಪಿಸಿ ಮೋಹನ್
author img

By

Published : May 23, 2019, 10:42 AM IST

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರಕ್ಕೆ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ ಭೇಟಿ ನೀಡಿದರು.

ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ರಿಜ್ವಾನ್ ಹಾಗೂ ಪಿಸಿ ಮೋಹನ್

ಮತಗಳ ಎಣಿಕೆ ಆರಂಭದ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ ಆಗಮಿಸಿದ್ದು, ತಮ್ಮ ಬೆಂಬಲಿಗರೊಂದಿಗೆ ಮತ ಎಣಿಕೆ ಕೇಂದ್ರದ ಒಳಗೆ ತೆರಳಿದ್ದಾರೆ. ಕ್ಷೇತ್ರದಲ್ಲಿ ಸೋಲು, ಗೆಲುವು ಸಾಕಷ್ಟು ಕುತೂಹಲ ಕೆರಳಿಸಿದ್ದು, ಈ ಇಬ್ಬರ ಆಗಮನ ಇನ್ನಷ್ಟು ಕೌತುಕ ಮೂಡಿಸಿದೆ.

ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಮಾತನಾಡಿ, ಪರ್ಸೆಂಟೇಜ್​ ಮೇಲೆ ಎಕ್ಸಿಟ್ ಪೋಲ್ ಮಾಡಿದ್ದಾರೆ ಹೊರತು ಕ್ಷೇತ್ರವಾರು ಸಮೀಕ್ಷೆ ಮಾಡಿಲ್ಲ. ಇನ್ನೂ 50ರಿಂದ 60 ಸಾವಿರ ಅಂತರದಲ್ಲಿ ಗೆಲ್ಲೋ ವಿಶ್ವಾಸ ಇದೆ ಎಂದರು.

ಈ ಸಂದರ್ಭ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಹಾಗೂ ಹಿರಿಯ ಸರ್ಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ.

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರಕ್ಕೆ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ ಭೇಟಿ ನೀಡಿದರು.

ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ರಿಜ್ವಾನ್ ಹಾಗೂ ಪಿಸಿ ಮೋಹನ್

ಮತಗಳ ಎಣಿಕೆ ಆರಂಭದ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ ಆಗಮಿಸಿದ್ದು, ತಮ್ಮ ಬೆಂಬಲಿಗರೊಂದಿಗೆ ಮತ ಎಣಿಕೆ ಕೇಂದ್ರದ ಒಳಗೆ ತೆರಳಿದ್ದಾರೆ. ಕ್ಷೇತ್ರದಲ್ಲಿ ಸೋಲು, ಗೆಲುವು ಸಾಕಷ್ಟು ಕುತೂಹಲ ಕೆರಳಿಸಿದ್ದು, ಈ ಇಬ್ಬರ ಆಗಮನ ಇನ್ನಷ್ಟು ಕೌತುಕ ಮೂಡಿಸಿದೆ.

ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಮಾತನಾಡಿ, ಪರ್ಸೆಂಟೇಜ್​ ಮೇಲೆ ಎಕ್ಸಿಟ್ ಪೋಲ್ ಮಾಡಿದ್ದಾರೆ ಹೊರತು ಕ್ಷೇತ್ರವಾರು ಸಮೀಕ್ಷೆ ಮಾಡಿಲ್ಲ. ಇನ್ನೂ 50ರಿಂದ 60 ಸಾವಿರ ಅಂತರದಲ್ಲಿ ಗೆಲ್ಲೋ ವಿಶ್ವಾಸ ಇದೆ ಎಂದರು.

ಈ ಸಂದರ್ಭ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಹಾಗೂ ಹಿರಿಯ ಸರ್ಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ.

Intro:newsBody:ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ ರಿಜ್ವಾನ್ ಹಾಗೂ ಪಿಸಿ ಮೋಹನ್

ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರಕ್ಕೆ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ ಆಗಮಿಸಿದರು.
ಅಂಚೆ ಮತಗಳ ಎಣಿಕೆ ಆರಂಭಕ್ಕೆ ಸಂದರ್ಭದಲ್ಲಿ ಇಬ್ಬರು ಅಭ್ಯರ್ಥಿಗಳು ಆಗಮಿಸಿದ್ದು, ಮೊದಲು ರಿಜ್ವಾನ್ ಆಗಮಿಸಿದರೆ ನಂತರ ಪಿಸಿ ಮೋಹನ್ ಪ್ರವೇಶಿಸಿದರು. ಆಯ್ದ ಬೆಂಬಲಿಗರೊಂದಿಗೆ ಇಬ್ಬರೂ ಅಭ್ಯರ್ಥಿಗಳು ಮತ ಎಣಿಕೆ ಕೇಂದ್ರದ ಅವಳಗೆ ತೆರಳಿದ್ದಾರೆ.
ಕ್ಷೇತ್ರದಲ್ಲಿ ಸೋಲು, ಗೆಲುವು ಸಾಕಷ್ಟು ಕುತೂಹಲ ಕೆರಳಿಸಿದ್ದು ಇಬ್ಬರೂ ಅಭ್ಯರ್ಥಿಗಳು ಆಗಮಿಸಿದ್ದು ಹೆಚ್ಚು ಕೌತುಕ ಮೂಡಿಸಿದೆ.
ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಹಾಗೂ ಹಿರಿಯ ಸರ್ಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ.Conclusion:news

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.