ETV Bharat / state

ಐಎಂಎ ಬಹುಕೋಟಿ ವಂಚನೆ ಪ್ರಕರಣ: ಸಿಬಿಐನಿಂದ ಮತ್ತೋರ್ವ ಆರೋಪಿಯ ಬಂಧನ

author img

By

Published : Nov 23, 2020, 8:08 PM IST

ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಬಿಐ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಭೂ ಸ್ವಾಧೀನ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಪಿ.ಡಿ.ಕುಮಾರ್ ಎಂಬಾತನನ್ನು ಬಂಧಿಸಿದೆ.

PD Kumar arrested by CBI
ಪಿ.ಡಿ.ಕುಮಾರ್

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಬಿಐ ಈ ಸಂಬಂಧ‌ ಮತ್ತೋರ್ವ ಆರೋಪಿಯನ್ನು ಬಂಧಿಸಿ ಮೂರು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಭೂ ಸ್ವಾಧೀನ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಪಿ.ಡಿ.ಕುಮಾರ್ ಬಂಧಿತ ಆರೋಪಿ. ಈತ ಮನ್ಸೂರ್ ಖಾನ್​​ನಿಂದ ಸುಮಾರು 5 ಕೋಟಿ‌ ಹಣ ಪಡೆದಿರುವ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ರಾಜ್ಯ ವಿಶೇಷ ತಂಡ (ಎಸ್ಐಟಿ) ತಂಡವು ಕುಮಾರ್​ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ 5 ಕೋಟಿ ರೂಪಾಯಿ ಪಡೆದಿರುವುದಾಗಿ ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದ ಎನ್ನಲಾಗಿತ್ತು.

ಮತ್ತೊಂದೆಡೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್​ನನ್ನು ಸಿಬಿಐ ಐದು‌ ದಿನಗಳ ಕಾಲ ವಶಕ್ಕೆ‌ ಪಡೆದುಕೊಂಡಿದೆ. ಬಂಧಿತ ಆರೋಪಿ ಕುಮಾರ್​​ನನ್ನು ಮನ್ಸೂರ್ ಖಾನ್ ಎದುರುಗಡೆ ಕೂರಿಸಿಕೊಂಡು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಬಿಐ ಈ ಸಂಬಂಧ‌ ಮತ್ತೋರ್ವ ಆರೋಪಿಯನ್ನು ಬಂಧಿಸಿ ಮೂರು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಭೂ ಸ್ವಾಧೀನ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಪಿ.ಡಿ.ಕುಮಾರ್ ಬಂಧಿತ ಆರೋಪಿ. ಈತ ಮನ್ಸೂರ್ ಖಾನ್​​ನಿಂದ ಸುಮಾರು 5 ಕೋಟಿ‌ ಹಣ ಪಡೆದಿರುವ ಆರೋಪ ಎದುರಿಸುತ್ತಿದ್ದಾರೆ. ಈ ಸಂಬಂಧ ರಾಜ್ಯ ವಿಶೇಷ ತಂಡ (ಎಸ್ಐಟಿ) ತಂಡವು ಕುಮಾರ್​ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ 5 ಕೋಟಿ ರೂಪಾಯಿ ಪಡೆದಿರುವುದಾಗಿ ತನಿಖಾಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದ ಎನ್ನಲಾಗಿತ್ತು.

ಮತ್ತೊಂದೆಡೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್​ನನ್ನು ಸಿಬಿಐ ಐದು‌ ದಿನಗಳ ಕಾಲ ವಶಕ್ಕೆ‌ ಪಡೆದುಕೊಂಡಿದೆ. ಬಂಧಿತ ಆರೋಪಿ ಕುಮಾರ್​​ನನ್ನು ಮನ್ಸೂರ್ ಖಾನ್ ಎದುರುಗಡೆ ಕೂರಿಸಿಕೊಂಡು ವಿಚಾರಣೆ ನಡೆಸುವ ಸಾಧ್ಯತೆಯಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.