ETV Bharat / state

ಭ್ರಷ್ಟ ಬಿಜೆಪಿ ಸರ್ಕಾರವನ್ನು ಜನರು ಕಿತ್ತೊಗೆಯಬೇಕಿದೆ: ಡಿಕೆಶಿ

author img

By

Published : Apr 14, 2022, 4:48 PM IST

ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ತೆರಳುವ ಮುನ್ನ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಮತ್ತು ಡಿ.ಕೆ.ಶಿವಕುಮಾರ್​​ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

Joint news conference of the leaders at the Congress House on Race Course Road, Bangalore
ಜಂಟಿ ಸುದ್ದಿಗೋಷ್ಠಿ

ಬೆಂಗಳೂರು: ಈಶ್ವರಪ್ಪ ವಿರುದ್ಧದ ಹೋರಾಟವನ್ನು ದೊಡ್ಡಮಟ್ಟದಲ್ಲಿ ಮಾಡಬೇಕಾದ ಅನಿವಾರ್ಯತೆ ಇದ್ದರೂ, ಕೋರ್ಟ್ ನಿರ್ಬಂಧವಿದೆ. ಆದರೂ ದೇಶ ಹಾಗೂ ರಾಜ್ಯಕ್ಕೆ ನ್ಯಾಯ ಒದಗಿಸಿ, ಭ್ರಷ್ಟ ಬಿಜೆಪಿ ಸರ್ಕಾರವನ್ನು ಜನರು ಕಿತ್ತೊಗೆಯಬೇಕಿದೆ. ಹೀಗಾಗಿ ಜನರಲ್ಲಿ ಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.


ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಕೇಂದ್ರ, ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳು ಸಂವಿಧಾನದ ಧ್ಯೇಯೋದ್ದೇಶದಂತೆ ಆಡಳಿತ ನಡೆಸಬೇಕು ಎಂದರು. ಇನ್ನು, ಬಿಜೆಪಿ ಹಾಗೂ ಅದರ ಸರ್ಕಾರದ ಹಿರಿಯ ಸಚಿವ ಈಶ್ವರಪ್ಪನವರು ಸಂತೋಷ್ ಕೆ.ಪಾಟೀಲ್ ಸಾವಿಗೆ ಕಾರಣರಾಗಿದ್ದಾರೆ. ಈ ಬಗ್ಗೆ ಮೃತ ಸಂತೋಷ್ ಅವರೇ ತಿಳಿಸಿದ್ದಾರೆ ಎಂದರು.


ಇದನ್ನೂ ಓದಿ:ಗುತ್ತಿಗೆದಾರ ಆತ್ಮಹತ್ಯೆ ಕೇಸ್​... ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ಅಹೋರಾತ್ರಿ​ ಧರಣಿಗೆ ಕಾಂಗ್ರೆಸ್ ನಿರ್ಧಾರ

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಮಾತನಾಡಿ, ಸಂವಿಧಾನದ ಹೆಸರಲ್ಲಿ ಪ್ರಮಾಣ ಮಾಡಿದ ಸಚಿವ ಕೊಲೆ ಆರೋಪ ಹೊತ್ತುಕೊಂಡಾಗ ಅಧಿಕಾರದಲ್ಲಿ ಮುಂದುವರಿಯಲು ಹೇಗೆ ಸಾಧ್ಯ? ಸಂವಿಧಾನದಲ್ಲಿ ಇದಕ್ಕೆ ಎಲ್ಲಿ ಅವಕಾಶ ಕಲ್ಪಿಸಿದೆ? ಅವರನ್ನು ಬಂಧಿಸಿ, ಜೈಲಿಗೆ ಹಾಕದಿರಲು ಹೇಗೆ ಸಾಧ್ಯ? ಎಂದರು.

ಬೆಂಗಳೂರು: ಈಶ್ವರಪ್ಪ ವಿರುದ್ಧದ ಹೋರಾಟವನ್ನು ದೊಡ್ಡಮಟ್ಟದಲ್ಲಿ ಮಾಡಬೇಕಾದ ಅನಿವಾರ್ಯತೆ ಇದ್ದರೂ, ಕೋರ್ಟ್ ನಿರ್ಬಂಧವಿದೆ. ಆದರೂ ದೇಶ ಹಾಗೂ ರಾಜ್ಯಕ್ಕೆ ನ್ಯಾಯ ಒದಗಿಸಿ, ಭ್ರಷ್ಟ ಬಿಜೆಪಿ ಸರ್ಕಾರವನ್ನು ಜನರು ಕಿತ್ತೊಗೆಯಬೇಕಿದೆ. ಹೀಗಾಗಿ ಜನರಲ್ಲಿ ಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.


ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಕೇಂದ್ರ, ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳು ಸಂವಿಧಾನದ ಧ್ಯೇಯೋದ್ದೇಶದಂತೆ ಆಡಳಿತ ನಡೆಸಬೇಕು ಎಂದರು. ಇನ್ನು, ಬಿಜೆಪಿ ಹಾಗೂ ಅದರ ಸರ್ಕಾರದ ಹಿರಿಯ ಸಚಿವ ಈಶ್ವರಪ್ಪನವರು ಸಂತೋಷ್ ಕೆ.ಪಾಟೀಲ್ ಸಾವಿಗೆ ಕಾರಣರಾಗಿದ್ದಾರೆ. ಈ ಬಗ್ಗೆ ಮೃತ ಸಂತೋಷ್ ಅವರೇ ತಿಳಿಸಿದ್ದಾರೆ ಎಂದರು.


ಇದನ್ನೂ ಓದಿ:ಗುತ್ತಿಗೆದಾರ ಆತ್ಮಹತ್ಯೆ ಕೇಸ್​... ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ಅಹೋರಾತ್ರಿ​ ಧರಣಿಗೆ ಕಾಂಗ್ರೆಸ್ ನಿರ್ಧಾರ

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಮಾತನಾಡಿ, ಸಂವಿಧಾನದ ಹೆಸರಲ್ಲಿ ಪ್ರಮಾಣ ಮಾಡಿದ ಸಚಿವ ಕೊಲೆ ಆರೋಪ ಹೊತ್ತುಕೊಂಡಾಗ ಅಧಿಕಾರದಲ್ಲಿ ಮುಂದುವರಿಯಲು ಹೇಗೆ ಸಾಧ್ಯ? ಸಂವಿಧಾನದಲ್ಲಿ ಇದಕ್ಕೆ ಎಲ್ಲಿ ಅವಕಾಶ ಕಲ್ಪಿಸಿದೆ? ಅವರನ್ನು ಬಂಧಿಸಿ, ಜೈಲಿಗೆ ಹಾಕದಿರಲು ಹೇಗೆ ಸಾಧ್ಯ? ಎಂದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.