ETV Bharat / state

ಚುನಾವಣಾ ಪ್ರಚಾರಕ್ಕೆ ಪ್ರಧಾನಿ ಮೋದಿ ಎಂಟ್ರಿ: ಆರು ದಿನ 23 ಕಡೆ ಮೋದಿ ಪ್ರಚಾರ

author img

By

Published : Apr 26, 2023, 1:31 PM IST

ಈಗಾಗಲೇ ರಾಜ್ಯದಲ್ಲಿ ಚುನಾವಣಾ ಪ್ರಚಾರ ಪ್ರಾರಂಭಗೊಂಡಿದ್ದು, ಅಭ್ಯರ್ಥಿಗಳ ಪರ ರಾಜಕೀಯ ನಾಯಕರುಗಳು ಹಾಗೂ ಚಿತ್ರರಂಗದ ತಾರೆಗಳು ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

PM Modi entry into the election campaign
ಚುನಾವಣಾ ಪ್ರಚಾರಕ್ಕೆ ಪ್ರಧಾನಿ ಮೋದಿ ಎಂಟ್ರಿ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಕಣ ರಂಗೇರಿದ್ದು, ಏಪ್ರಿಲ್ 29 ರಿಂದ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಒಟ್ಟು 6 ದಿನ ರಾಜ್ಯದಲ್ಲಿ ಪ್ರವಾಸ ಮಾಡಲಿರುವ ಪಿಎಂ 23 ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ವಲಯವಾರು ಆದ್ಯತೆ ಮೇರೆಗೆ ಹಳೇ ಮೈಸೂರು, ಕಿತ್ತೂರ ಕರ್ನಾಟಕ, ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕ ಕೇಂದ್ರಿತ ಪ್ರವಾಸ ಮಾಡಲಿದ್ದಾರೆ.

ಏಪ್ರಿಲ್ 29 ರಂದು 11.00 ರಿಂದ 11.40 ರವರೆಗೆ ಹುಮ್ನಾಬಾದ್​ನಲ್ಲಿ ಸಾರ್ವಜನಿಕ ಸಭೆ, ಮಧ್ಯಾಹ್ನ 1 ರಿಂದ 1.40 ರವರೆಗೆ ವಿಜಯಪುರದಲ್ಲಿ ಸಾರ್ವಜನಿಕ ಸಭೆ, 2.45 ರಿಂದ 3.25 ರವರೆಗೆ ಕುಡಚಿ ಕ್ಷೇತ್ರಗಳಲ್ಲಿ ಬಹಿರಂಗ ಸಮಾವೇಶ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 6.15 ರಿಂದ 7 ಗಂಟೆವರೆಗೆ ಬೆಂಗಳೂರಿನಲ್ಲಿ ರೋಡ್ ಶೋ, ಯಶವಂತಪುರ ಕ್ಷೇತ್ರದ ನೈಸ್ ಜಂಕ್ಷನ್​ನಿಂದ ಸುಮನಹಳ್ಳಿ ಜಂಕ್ಷನ್ ವರೆಗೆ ಮೋದಿ ರೋಡ್ ಶೋ ನಡೆಸಲಿದ್ದಾರೆ. ನಂತರ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಏಪ್ರಿಲ್ 30 ರಂದು ಮೋದಿಯವರ ಮುಂದುವರೆದ ಪ್ರಚಾರ ಕಾರ್ಯಕ್ರಮ ನಡೆಯಲಿದ್ದು, 11.30 ರಿಂದ 12.15 ರವರೆಗೆ ಕೋಲಾರದಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮೋದಿ ಭಾಷಣ ಮಾಡಲಿದ್ದಾರೆ. 1.30 ರಿಂದ 2.15 ರವರೆಗೆ ಚನ್ನಪಟ್ಟಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. 3.45 ರಿಂದ 4.15 ರವರೆಗೆ ಬೇಲೂರಿನಲ್ಲಿ ನಡೆಯುವ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕ್ಷೇತ್ರಗಳಲ್ಲಿ ಪ್ರಧಾನಿ ಸಾರ್ವಜನಿಕ ಬಹಿರಂಗ ಸಮಾವೇಶ ಸಂಜೆ ಮೈಸೂರಿನಲ್ಲಿ ಸಂಜೆ 5.45 ರಿಂದ 6.30 ರವರೆಗೆ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಮೈಸೂರು ರೋಡ್ ಶೋ‌ ಮುಗಿಸಿ ದೆಹಲಿಗೆ ವಾಪಸ್ ಆಗಲಿದ್ದಾರೆ.

ಮೇ ತಿಂಗಳಿನಲ್ಲಿ ನಾಲ್ಕು ಬಾರಿ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಮೇ 2 ರಂದು, ಚಿತ್ರದುರ್ಗ, ವಿಜಯನಗರ, ಸಿಂಧನೂರು, ಕಲಬುರಗಿಯಲ್ಲಿ ಮೋದಿ ಪ್ರಚಾರ ನಡೆಸಲಿದ್ದು, ಮೇ 3 ರಂದು ಮೂಡುಬಿದರೆ, ಕಾರವಾರ, ಕಿತ್ತೂರು ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯ ನಡೆಸಿ ಮೋಡಿ ಮಾಡಲಿದ್ದಾರೆ. ಮೇ 6 ರಂದು ಚಿತ್ತಾಪುರ, ನಂಜನಗೂಡು, ತುಮಕೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಿಂಚಿನ ಪ್ರಚಾರ ನಡೆಸಲಿರುವ ಮೋದಿ, ಮೇ 7 ರಂದು ಬಾದಾಮಿ, ಹಾವೇರಿ, ಶಿವಮೊಗ್ಗ ಗ್ರಾಮಾಂತರ, ಬೆಂಗಳೂರು ಕೇಂದ್ರದಲ್ಲಿ ಭರ್ಜರಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ಈ ನಡುವೆ ಇಂದು ರಾಜ್ಯದ ವಿವಿಧೆಡೆ 98 ರಾಷ್ಟ್ರೀಯ ನಾಯಕರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಮಂಡ್ಯದಲ್ಲಿ ಯೋಗಿ ಆದಿತ್ಯನಾಥ ಪ್ರಚಾರ ಕೈಗೊಂಡಿದ್ದಾರೆ. ಇನ್ನು ಚಿಕ್ಕೋಡಿಯಲ್ಲಿ ಮಧ್ಯಪ್ರದೇಶ ಸಿಎಂ ಶಿವರಾಜ ಸಿಂಗ್​ ಚೌಹಾಣ್​​ ಮತಯಾಚನೆ ನಡೆಸಿದರು. ಉಳಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಗೃಹ ಸಚಿವ ಅಮಿತ್​ ಶಾ ಸೇರಿದಂತೆ ಗಣ್ಯರು ಪ್ರಚಾರದ ನೇತೃತ್ವ ವಹಿಸಿದ್ದು, ಎಲ್ಲ ಕ್ಷೇತ್ರಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ.

ಇದನ್ನೂ ಓದಿ: ರಾಮನಗರದಲ್ಲಿ ಘಟಾನುಘಟಿಗಳ ಸ್ಪರ್ಧೆ: ಪತಿ ಪರವಾಗಿ ಅಖಾಡಕ್ಕಿಳಿದ ಮಡದಿಯರು!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರದ ಕಣ ರಂಗೇರಿದ್ದು, ಏಪ್ರಿಲ್ 29 ರಿಂದ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಕಾರ್ಯ ಆರಂಭವಾಗಲಿದೆ. ಒಟ್ಟು 6 ದಿನ ರಾಜ್ಯದಲ್ಲಿ ಪ್ರವಾಸ ಮಾಡಲಿರುವ ಪಿಎಂ 23 ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ವಲಯವಾರು ಆದ್ಯತೆ ಮೇರೆಗೆ ಹಳೇ ಮೈಸೂರು, ಕಿತ್ತೂರ ಕರ್ನಾಟಕ, ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕ ಕೇಂದ್ರಿತ ಪ್ರವಾಸ ಮಾಡಲಿದ್ದಾರೆ.

ಏಪ್ರಿಲ್ 29 ರಂದು 11.00 ರಿಂದ 11.40 ರವರೆಗೆ ಹುಮ್ನಾಬಾದ್​ನಲ್ಲಿ ಸಾರ್ವಜನಿಕ ಸಭೆ, ಮಧ್ಯಾಹ್ನ 1 ರಿಂದ 1.40 ರವರೆಗೆ ವಿಜಯಪುರದಲ್ಲಿ ಸಾರ್ವಜನಿಕ ಸಭೆ, 2.45 ರಿಂದ 3.25 ರವರೆಗೆ ಕುಡಚಿ ಕ್ಷೇತ್ರಗಳಲ್ಲಿ ಬಹಿರಂಗ ಸಮಾವೇಶ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 6.15 ರಿಂದ 7 ಗಂಟೆವರೆಗೆ ಬೆಂಗಳೂರಿನಲ್ಲಿ ರೋಡ್ ಶೋ, ಯಶವಂತಪುರ ಕ್ಷೇತ್ರದ ನೈಸ್ ಜಂಕ್ಷನ್​ನಿಂದ ಸುಮನಹಳ್ಳಿ ಜಂಕ್ಷನ್ ವರೆಗೆ ಮೋದಿ ರೋಡ್ ಶೋ ನಡೆಸಲಿದ್ದಾರೆ. ನಂತರ ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಏಪ್ರಿಲ್ 30 ರಂದು ಮೋದಿಯವರ ಮುಂದುವರೆದ ಪ್ರಚಾರ ಕಾರ್ಯಕ್ರಮ ನಡೆಯಲಿದ್ದು, 11.30 ರಿಂದ 12.15 ರವರೆಗೆ ಕೋಲಾರದಲ್ಲಿ ನಡೆಯುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮೋದಿ ಭಾಷಣ ಮಾಡಲಿದ್ದಾರೆ. 1.30 ರಿಂದ 2.15 ರವರೆಗೆ ಚನ್ನಪಟ್ಟಣದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. 3.45 ರಿಂದ 4.15 ರವರೆಗೆ ಬೇಲೂರಿನಲ್ಲಿ ನಡೆಯುವ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕ್ಷೇತ್ರಗಳಲ್ಲಿ ಪ್ರಧಾನಿ ಸಾರ್ವಜನಿಕ ಬಹಿರಂಗ ಸಮಾವೇಶ ಸಂಜೆ ಮೈಸೂರಿನಲ್ಲಿ ಸಂಜೆ 5.45 ರಿಂದ 6.30 ರವರೆಗೆ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಮೈಸೂರು ರೋಡ್ ಶೋ‌ ಮುಗಿಸಿ ದೆಹಲಿಗೆ ವಾಪಸ್ ಆಗಲಿದ್ದಾರೆ.

ಮೇ ತಿಂಗಳಿನಲ್ಲಿ ನಾಲ್ಕು ಬಾರಿ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ. ಮೇ 2 ರಂದು, ಚಿತ್ರದುರ್ಗ, ವಿಜಯನಗರ, ಸಿಂಧನೂರು, ಕಲಬುರಗಿಯಲ್ಲಿ ಮೋದಿ ಪ್ರಚಾರ ನಡೆಸಲಿದ್ದು, ಮೇ 3 ರಂದು ಮೂಡುಬಿದರೆ, ಕಾರವಾರ, ಕಿತ್ತೂರು ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯ ನಡೆಸಿ ಮೋಡಿ ಮಾಡಲಿದ್ದಾರೆ. ಮೇ 6 ರಂದು ಚಿತ್ತಾಪುರ, ನಂಜನಗೂಡು, ತುಮಕೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಮಿಂಚಿನ ಪ್ರಚಾರ ನಡೆಸಲಿರುವ ಮೋದಿ, ಮೇ 7 ರಂದು ಬಾದಾಮಿ, ಹಾವೇರಿ, ಶಿವಮೊಗ್ಗ ಗ್ರಾಮಾಂತರ, ಬೆಂಗಳೂರು ಕೇಂದ್ರದಲ್ಲಿ ಭರ್ಜರಿ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ಈ ನಡುವೆ ಇಂದು ರಾಜ್ಯದ ವಿವಿಧೆಡೆ 98 ರಾಷ್ಟ್ರೀಯ ನಾಯಕರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಮಂಡ್ಯದಲ್ಲಿ ಯೋಗಿ ಆದಿತ್ಯನಾಥ ಪ್ರಚಾರ ಕೈಗೊಂಡಿದ್ದಾರೆ. ಇನ್ನು ಚಿಕ್ಕೋಡಿಯಲ್ಲಿ ಮಧ್ಯಪ್ರದೇಶ ಸಿಎಂ ಶಿವರಾಜ ಸಿಂಗ್​ ಚೌಹಾಣ್​​ ಮತಯಾಚನೆ ನಡೆಸಿದರು. ಉಳಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಗೃಹ ಸಚಿವ ಅಮಿತ್​ ಶಾ ಸೇರಿದಂತೆ ಗಣ್ಯರು ಪ್ರಚಾರದ ನೇತೃತ್ವ ವಹಿಸಿದ್ದು, ಎಲ್ಲ ಕ್ಷೇತ್ರಗಳ ಮೇಲೆ ಬಿಜೆಪಿ ಕಣ್ಣಿಟ್ಟಿದೆ.

ಇದನ್ನೂ ಓದಿ: ರಾಮನಗರದಲ್ಲಿ ಘಟಾನುಘಟಿಗಳ ಸ್ಪರ್ಧೆ: ಪತಿ ಪರವಾಗಿ ಅಖಾಡಕ್ಕಿಳಿದ ಮಡದಿಯರು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.