ETV Bharat / state

27 ಕೋಟಿ ನಗದು, 4 ಲಕ್ಷ ಲೀಟರ್ ಮದ್ಯ, 25 ಕೆಜಿ ಚಿನ್ನ ವಶಕ್ಕೆ

author img

By

Published : Apr 6, 2023, 8:22 PM IST

ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಇಡೀ ರಾಜ್ಯದಲ್ಲಿ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್​ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಸೇರಿ ಒಟ್ಟು 27 ಕೋಟಿಗೂ ಹೆಚ್ಚು ನಗದು ವಶಪಡಿಸಿಕೊಂಡಿದ್ದಾರೆ.

ನಗದು ಹಾಗೂ ಚಿನ್ನ ವಶ
ನಗದು ಹಾಗೂ ಚಿನ್ನ ವಶ

ಬೆಂಗಳೂರು : ಚುನಾವಣೆಯ ವಿವಿಧ ಜಾಗೃತ ದಳಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಮಾದರಿ ನೀತಿ ಸಂಹಿತೆ, ಚುನಾವಣಾ ವೆಚ್ಚ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲಂಘಿಸಿರುವ ಕುರಿತು ಮಾರ್ಚ್ 29 ರಿಂದ ಇಲ್ಲಿಯವರೆಗೆ ಈ ಕೆಳಗಿನ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಸೇರಿ ಒಟ್ಟು 27,38,21,221 ರೂ. ನಗದು ವಶಪಡಿಸಿಕೊಂಡಿವೆ. ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್‌ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಸೇರಿ 26,38,67,100 ರೂ. ಮೌಲ್ಯದ 4,25,127 ಲೀಟರ್ ಮದ್ಯ ವಶಪಡಿಸಿಕೊಂಡಿವೆ. 87,89,910 ರೂ. ಮೌಲ್ಯದ 131.12 ಕೆಜಿ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿವೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ವಿವಿಧ ಮಾದರಿಯ ವಾಹನಗಳು ವಶಕ್ಕೆ: ಅಬಕಾರಿ ಇಲಾಖೆಯು 792 ಗಂಭೀರ ಪ್ರಕರಣಗಳನ್ನು ಹಾಗೂ ಮದ್ಯದ ಪರವಾನಗಿ ಉಲ್ಲಂಘಿಸಿದ ಪ್ರಕರಣಗಳು 28 ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1965ರ ಪರಿಚ್ಛೇದ 15 (a) ಅನ್ವಯ ಒಟ್ಟು 2,090 ಪ್ರಕರಣಗಳನ್ನು ದಾಖಲಿಸಿದೆ. ವಿವಿಧ ಮಾದರಿಯ ವಾಹನಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ವಿಚಕ್ಷಣ ದಳ, ಕಣ್ಗಾವಲು ತಂಡಗಳು ಮತ್ತು ಪೊಲೀಸ್ 9,87,01,791 ರೂ. ಮೌಲ್ಯದ 25.24 ಕೆಜಿ ಚಿನ್ನ, 92,90,980 ರೂ. ಮೌಲ್ಯದ 134.42 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಂಡಿವೆ. 12,48,57,991ರೂ ಮೌಲ್ಯದ ಕೊಡುಗೆ/ಉಡುಗೊರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ನಗದು, ಮದ್ಯ, ಮಾದಕ ದ್ರವ್ಯ, ಅಮೂಲ್ಯ ಲೋಹ ಮತ್ತು ಉಡುಗೊರೆ ವಸ್ತುಗಳನ್ನು ಜಪ್ತಿ ಮಾಡಿರುವ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 627 ಪ್ರಥಮ ವರ್ತಮಾನ ವರದಿ (FIR) ದಾಖಲಿಸಿದ್ದಾರೆ.

ಚುನಾವಣೆ ಘೋಷಣೆಯಾದ ದಿನಾಂಕದಿಂದ ಇಲ್ಲಿಯವರೆಗೆ ಒಟ್ಟಾರೆ 47,718 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 10 ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. 11 ಶಸ್ತ್ರಾಸ್ತ್ರಗಳ ಪರವಾನಗಿ ರದ್ದುಪಡಿಸಲಾಗಿದೆ. ಸಿಆ‌ರ್​ಪಿಸಿ ಕಾಯ್ದೆಯಡಿ 2,106 ಪ್ರಕರಣಗಳನ್ನು ದಾಖಲಿಸಲಾಗಿದೆ. ಅವುಗಳಲ್ಲಿ 3,222 ವ್ಯಕ್ತಿಗಳಿಂದ ಮುಚ್ಚಳಿಕೆ ಪತ್ರ ಪಡೆಯಲಾಗಿದೆ. 5,218 ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿಗೊಳಿಸಲಾಗಿದೆ. ಎಲ್ಲಾ ತಂಡಗಳು ಒಟ್ಟು 77,93,28,993 ರೂ. ನಗದು ಸೇರಿದಂತೆ ಮದ್ಯ, ಮಾದಕ ದ್ರವ್ಯ ಇತ್ಯಾದಿ ವಸ್ತುಗಳನ್ನು ವಶಪಡಿಸಿಕೊಂಡಿವೆ ಎಂದು ಆಯೋಗ ತಿಳಿಸಿದೆ.

ಅಬಕಾರಿ ಇಲಾಖೆಯು 1,88,70,424 ರೂ. ಮೌಲ್ಯದ 62.826 ಲೀಟರ್ ಮದ್ಯ ವಶಪಡಿಸಿಕೊಂಡಿದೆ.
ಸ್ಥಿರ ಕಣ್ಗಾವಲು ತಂಡ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಕ್ಷೇತ್ರದಲ್ಲಿ 1,50,00,000 ರೂ. ನಗದು ವಶಪಡಿಸಿಕೊಂಡಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರದಲ್ಲಿ 1,49,66,340 ರೂ.ನಗದು, ಗದಗ ಕ್ಷೇತ್ರದಲ್ಲಿ 95,00,000 ರೂ. ನಗದು ವಶಪಡಿಸಿಕೊಂಡಿದೆ.

ಸಾರ್ವಜನಿಕ ಕುಂದುಕೊರತೆಗಳು ಇತ್ಯರ್ಥ: ಮತದಾರರ ಸಹಾಯವಾಣಿ ಮೂಲಕ ಸ್ವೀಕರಿಸಲಾದ 2,099 ಕರೆಗಳಲ್ಲಿ 2,061 ಸಾರ್ವಜನಿಕರು ಮಾಹಿತಿ ಕೋರಿದ್ದಾರೆ. ಮೂವರು ಪ್ರತಿಕ್ರಿಯೆ (ಫೀಡ್‌ಬ್ಯಾಕ್) ನೀಡಿದ್ದಾರೆ. 6 ಜನರು ಸಲಹೆಗಳನ್ನು ನೀಡಿದ್ದಾರೆ. 29 ಜನರು ದೂರುಗಳನ್ನು ದಾಖಲಿಸಿದ್ದಾರೆ. ಸ್ವೀಕರಿಸಿದ ಎಲ್ಲಾ 2,099 ಕರೆಗಳ ದೂರುಗಳನ್ನು ಇತ್ಯರ್ಥಪಡಿಸಲಾಗಿದೆ. ಇದಲ್ಲದೇ ಎನ್‌ಜಿರ್‌ಎಸ್‌ ಪೋರ್ಟ್‌ನಲ್ಲಿ 2,147 ದೂರುಗಳನ್ನು ನಾಗರಿಕರು ಇತ್ಯರ್ಥಪಡಿಸಲಾಗಿದೆ. ಇವುಗಳಲ್ಲಿ 1,831 ದೂರುಗಳನ್ನು ಇತ್ಯರ್ಥಪಡಿಸಲಾಗಿದೆ.

ಸಿ-ವಿಜಿಲ್: ಸಿ ವಿಜಿಲ್ ಅಪ್ಲಿಕೇಷನ್ ಮೂಲಕ 886 ದೂರು ಸ್ವೀಕರಿಸಲಾಗಿದ್ದು ಅವುಗಳಲ್ಲಿ ಪ್ರಮುಖವಾದವು, ಪರವಾನಗಿ ಇಲ್ಲದ ಪೋಸ್ಟರ್/ಬ್ಯಾನರ್ ಅಂಟಿಸಿದ 451 ಪ್ರಕರಣಗಳು, ಹಣ ಹಂಚಿಕೆ 19, ಪಾವತಿಸಿದ ಸುದ್ದಿ 03, ಉಡುಗೊರೆ ಕೂಪನ್ ಹಂಚಿಕೆ 16. ಮದ್ಯ ಹಂಚಿಕೆ 12. ಆಸ್ತಿ ಹಾನಿಗೊಳಿಸಿದ 05, ಪರವಾನಿಗೆ ಇಲ್ಲದ ವಾಹನ ಅಥವಾ ಬೆಂಗಾವಲು ಪಡೆ 15 ಪ್ರಕರಣಗಳು ಸೇರಿದಂತೆ ಈ ಪೈಕಿ 562 ದೂರುಗಳು ನಿಜವೆಂದು ಕಂಡುಬಂದಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಮಾಧ್ಯಮಗಳ ಮೂಲಕ ದೂರುಗಳನ್ನು ಸ್ವೀಕರಿಸಲಾಗಿದ್ದು, ಇಮೇಲ್ ಮೂಲಕ 87 ಮತ್ತು ಪತ್ರಗಳ ಮೂಲಕ 75, ಸುದ್ದಿಪತ್ರಿಕೆಗಳಿಂದ 19, ಟಿ.ವಿ ಚಾನಲ್‌ಗಳಿಂದ 22 ಮತ್ತು ಸಾಮಾಜಿಕ ಜಾಲತಾಣಗಳಿಂದ 32 ಸೇರಿದಂತೆ ಒಟ್ಟು 235 ದೂರುಗಳು ಬಂದಿದ್ದು, 111 ದೂರುಗಳನ್ನು ವಿಲೇವಾರಿ ಮಾಡಲಾಗಿದೆ.

ಸುವಿಧಾ: ಆನ್‌ಲೈನ್‌ ವ್ಯವಸ್ಥೆ ಸುವಿಧಾ ಮೂಲಕ ವಿವಿಧ ಅನುಮತಿ ಕೋರಿ ಈವರೆಗೆ ಒಟ್ಟು 1,471 ಅರ್ಜಿ ಸ್ವೀಕರಿಸಲಾಗಿದೆ. ಅದರಲ್ಲಿ 764 ಅರ್ಜಿಗಳಿಗೆ ಅನುಮತಿ ನೀಡಲಾಗಿದ್ದು, 421 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಅವುಗಳಲ್ಲಿ 8 ಅರ್ಜಿಗಳು ಪ್ರಗತಿಯಲ್ಲಿವೆ. 260 ಬಾಕಿ ಉಳಿದಿದ್ದು, 18 ಅರ್ಜಿಗಳನ್ನು ಅರ್ಜಿದಾರರೇ ರದ್ದುಪಡಿಸಿದ್ದಾರೆ.

ಇದನ್ನೂ ಓದಿ : ಚುನಾವಣಾ ಅಕ್ರಮ : ರಾಜ್ಯದಲ್ಲಿ 22 ಕೋಟಿ ರೂ. ನಗದು, 23 ಕೆಜಿ ಚಿನ್ನ ವಶಕ್ಕೆ

ಬೆಂಗಳೂರು : ಚುನಾವಣೆಯ ವಿವಿಧ ಜಾಗೃತ ದಳಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಮಾದರಿ ನೀತಿ ಸಂಹಿತೆ, ಚುನಾವಣಾ ವೆಚ್ಚ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಉಲ್ಲಂಘಿಸಿರುವ ಕುರಿತು ಮಾರ್ಚ್ 29 ರಿಂದ ಇಲ್ಲಿಯವರೆಗೆ ಈ ಕೆಳಗಿನ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಸೇರಿ ಒಟ್ಟು 27,38,21,221 ರೂ. ನಗದು ವಶಪಡಿಸಿಕೊಂಡಿವೆ. ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು, ಪೊಲೀಸ್‌ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಸೇರಿ 26,38,67,100 ರೂ. ಮೌಲ್ಯದ 4,25,127 ಲೀಟರ್ ಮದ್ಯ ವಶಪಡಿಸಿಕೊಂಡಿವೆ. 87,89,910 ರೂ. ಮೌಲ್ಯದ 131.12 ಕೆಜಿ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿವೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

ವಿವಿಧ ಮಾದರಿಯ ವಾಹನಗಳು ವಶಕ್ಕೆ: ಅಬಕಾರಿ ಇಲಾಖೆಯು 792 ಗಂಭೀರ ಪ್ರಕರಣಗಳನ್ನು ಹಾಗೂ ಮದ್ಯದ ಪರವಾನಗಿ ಉಲ್ಲಂಘಿಸಿದ ಪ್ರಕರಣಗಳು 28 ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1965ರ ಪರಿಚ್ಛೇದ 15 (a) ಅನ್ವಯ ಒಟ್ಟು 2,090 ಪ್ರಕರಣಗಳನ್ನು ದಾಖಲಿಸಿದೆ. ವಿವಿಧ ಮಾದರಿಯ ವಾಹನಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ವಿಚಕ್ಷಣ ದಳ, ಕಣ್ಗಾವಲು ತಂಡಗಳು ಮತ್ತು ಪೊಲೀಸ್ 9,87,01,791 ರೂ. ಮೌಲ್ಯದ 25.24 ಕೆಜಿ ಚಿನ್ನ, 92,90,980 ರೂ. ಮೌಲ್ಯದ 134.42 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಂಡಿವೆ. 12,48,57,991ರೂ ಮೌಲ್ಯದ ಕೊಡುಗೆ/ಉಡುಗೊರೆ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ನಗದು, ಮದ್ಯ, ಮಾದಕ ದ್ರವ್ಯ, ಅಮೂಲ್ಯ ಲೋಹ ಮತ್ತು ಉಡುಗೊರೆ ವಸ್ತುಗಳನ್ನು ಜಪ್ತಿ ಮಾಡಿರುವ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 627 ಪ್ರಥಮ ವರ್ತಮಾನ ವರದಿ (FIR) ದಾಖಲಿಸಿದ್ದಾರೆ.

ಚುನಾವಣೆ ಘೋಷಣೆಯಾದ ದಿನಾಂಕದಿಂದ ಇಲ್ಲಿಯವರೆಗೆ ಒಟ್ಟಾರೆ 47,718 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 10 ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. 11 ಶಸ್ತ್ರಾಸ್ತ್ರಗಳ ಪರವಾನಗಿ ರದ್ದುಪಡಿಸಲಾಗಿದೆ. ಸಿಆ‌ರ್​ಪಿಸಿ ಕಾಯ್ದೆಯಡಿ 2,106 ಪ್ರಕರಣಗಳನ್ನು ದಾಖಲಿಸಲಾಗಿದೆ. ಅವುಗಳಲ್ಲಿ 3,222 ವ್ಯಕ್ತಿಗಳಿಂದ ಮುಚ್ಚಳಿಕೆ ಪತ್ರ ಪಡೆಯಲಾಗಿದೆ. 5,218 ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿಗೊಳಿಸಲಾಗಿದೆ. ಎಲ್ಲಾ ತಂಡಗಳು ಒಟ್ಟು 77,93,28,993 ರೂ. ನಗದು ಸೇರಿದಂತೆ ಮದ್ಯ, ಮಾದಕ ದ್ರವ್ಯ ಇತ್ಯಾದಿ ವಸ್ತುಗಳನ್ನು ವಶಪಡಿಸಿಕೊಂಡಿವೆ ಎಂದು ಆಯೋಗ ತಿಳಿಸಿದೆ.

ಅಬಕಾರಿ ಇಲಾಖೆಯು 1,88,70,424 ರೂ. ಮೌಲ್ಯದ 62.826 ಲೀಟರ್ ಮದ್ಯ ವಶಪಡಿಸಿಕೊಂಡಿದೆ.
ಸ್ಥಿರ ಕಣ್ಗಾವಲು ತಂಡ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಕ್ಷೇತ್ರದಲ್ಲಿ 1,50,00,000 ರೂ. ನಗದು ವಶಪಡಿಸಿಕೊಂಡಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಕ್ಷೇತ್ರದಲ್ಲಿ 1,49,66,340 ರೂ.ನಗದು, ಗದಗ ಕ್ಷೇತ್ರದಲ್ಲಿ 95,00,000 ರೂ. ನಗದು ವಶಪಡಿಸಿಕೊಂಡಿದೆ.

ಸಾರ್ವಜನಿಕ ಕುಂದುಕೊರತೆಗಳು ಇತ್ಯರ್ಥ: ಮತದಾರರ ಸಹಾಯವಾಣಿ ಮೂಲಕ ಸ್ವೀಕರಿಸಲಾದ 2,099 ಕರೆಗಳಲ್ಲಿ 2,061 ಸಾರ್ವಜನಿಕರು ಮಾಹಿತಿ ಕೋರಿದ್ದಾರೆ. ಮೂವರು ಪ್ರತಿಕ್ರಿಯೆ (ಫೀಡ್‌ಬ್ಯಾಕ್) ನೀಡಿದ್ದಾರೆ. 6 ಜನರು ಸಲಹೆಗಳನ್ನು ನೀಡಿದ್ದಾರೆ. 29 ಜನರು ದೂರುಗಳನ್ನು ದಾಖಲಿಸಿದ್ದಾರೆ. ಸ್ವೀಕರಿಸಿದ ಎಲ್ಲಾ 2,099 ಕರೆಗಳ ದೂರುಗಳನ್ನು ಇತ್ಯರ್ಥಪಡಿಸಲಾಗಿದೆ. ಇದಲ್ಲದೇ ಎನ್‌ಜಿರ್‌ಎಸ್‌ ಪೋರ್ಟ್‌ನಲ್ಲಿ 2,147 ದೂರುಗಳನ್ನು ನಾಗರಿಕರು ಇತ್ಯರ್ಥಪಡಿಸಲಾಗಿದೆ. ಇವುಗಳಲ್ಲಿ 1,831 ದೂರುಗಳನ್ನು ಇತ್ಯರ್ಥಪಡಿಸಲಾಗಿದೆ.

ಸಿ-ವಿಜಿಲ್: ಸಿ ವಿಜಿಲ್ ಅಪ್ಲಿಕೇಷನ್ ಮೂಲಕ 886 ದೂರು ಸ್ವೀಕರಿಸಲಾಗಿದ್ದು ಅವುಗಳಲ್ಲಿ ಪ್ರಮುಖವಾದವು, ಪರವಾನಗಿ ಇಲ್ಲದ ಪೋಸ್ಟರ್/ಬ್ಯಾನರ್ ಅಂಟಿಸಿದ 451 ಪ್ರಕರಣಗಳು, ಹಣ ಹಂಚಿಕೆ 19, ಪಾವತಿಸಿದ ಸುದ್ದಿ 03, ಉಡುಗೊರೆ ಕೂಪನ್ ಹಂಚಿಕೆ 16. ಮದ್ಯ ಹಂಚಿಕೆ 12. ಆಸ್ತಿ ಹಾನಿಗೊಳಿಸಿದ 05, ಪರವಾನಿಗೆ ಇಲ್ಲದ ವಾಹನ ಅಥವಾ ಬೆಂಗಾವಲು ಪಡೆ 15 ಪ್ರಕರಣಗಳು ಸೇರಿದಂತೆ ಈ ಪೈಕಿ 562 ದೂರುಗಳು ನಿಜವೆಂದು ಕಂಡುಬಂದಿದ್ದು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಮಾಧ್ಯಮಗಳ ಮೂಲಕ ದೂರುಗಳನ್ನು ಸ್ವೀಕರಿಸಲಾಗಿದ್ದು, ಇಮೇಲ್ ಮೂಲಕ 87 ಮತ್ತು ಪತ್ರಗಳ ಮೂಲಕ 75, ಸುದ್ದಿಪತ್ರಿಕೆಗಳಿಂದ 19, ಟಿ.ವಿ ಚಾನಲ್‌ಗಳಿಂದ 22 ಮತ್ತು ಸಾಮಾಜಿಕ ಜಾಲತಾಣಗಳಿಂದ 32 ಸೇರಿದಂತೆ ಒಟ್ಟು 235 ದೂರುಗಳು ಬಂದಿದ್ದು, 111 ದೂರುಗಳನ್ನು ವಿಲೇವಾರಿ ಮಾಡಲಾಗಿದೆ.

ಸುವಿಧಾ: ಆನ್‌ಲೈನ್‌ ವ್ಯವಸ್ಥೆ ಸುವಿಧಾ ಮೂಲಕ ವಿವಿಧ ಅನುಮತಿ ಕೋರಿ ಈವರೆಗೆ ಒಟ್ಟು 1,471 ಅರ್ಜಿ ಸ್ವೀಕರಿಸಲಾಗಿದೆ. ಅದರಲ್ಲಿ 764 ಅರ್ಜಿಗಳಿಗೆ ಅನುಮತಿ ನೀಡಲಾಗಿದ್ದು, 421 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಅವುಗಳಲ್ಲಿ 8 ಅರ್ಜಿಗಳು ಪ್ರಗತಿಯಲ್ಲಿವೆ. 260 ಬಾಕಿ ಉಳಿದಿದ್ದು, 18 ಅರ್ಜಿಗಳನ್ನು ಅರ್ಜಿದಾರರೇ ರದ್ದುಪಡಿಸಿದ್ದಾರೆ.

ಇದನ್ನೂ ಓದಿ : ಚುನಾವಣಾ ಅಕ್ರಮ : ರಾಜ್ಯದಲ್ಲಿ 22 ಕೋಟಿ ರೂ. ನಗದು, 23 ಕೆಜಿ ಚಿನ್ನ ವಶಕ್ಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.