ಬೆಂಗಳೂರು: ಹಿಜಾಬ್ ವಿವಾದ ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಈ ಸಂಬಂಧ ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಸುತ್ತಿದೆ. ಈ ಮಧ್ಯೆ ರಾಜ್ಯ ಆಂತರಿಕ ಭದ್ರತಾ ಘಟಕ (ಐಎಸ್ಡಿ) ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕುವಂತೆ ಸೂಚಿಸಿದ ಬೆನ್ನಲೇ ವಿದ್ಯಾರ್ಥಿಗಳಿಂದ ಆಕ್ಷೇಪ ಕೇಳಿ ಬಂದಿದೆ.
![Police Commissioner clarification about Kashmir student data collection](https://etvbharatimages.akamaized.net/etvbharat/prod-images/kn-bng-06-police-commisoner-tweet-7202806_15022022170207_1502f_1644924727_412.jpg)
ರಾಜ್ಯದಲ್ಲಿ ಹಿಜಬ್- ಕೇಸರಿ ವಿವಾದ ಬಿಸಿಯಾಗಿರುವಾಗಲೇ ರಾಜ್ಯದ ಶೈಕ್ಷಣಿಕ ಸಂಸ್ಥೆಗಳ ವ್ಯಾಸಂಗ ಮಾಡುತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿರುವುದಕ್ಕೆ ಜಮ್ಮು ಮತ್ತು ಕಾಶ್ಮೀರಿ ಸ್ಟೂಡೆಂಟ್ ಅಸೋಸಿಯೇಷನ್ ಅಸಮಾಧಾನ ವ್ಯಕ್ತಪಡಿಸಿದೆ.
![Police Commissioner clarification about Kashmir student data collection](https://etvbharatimages.akamaized.net/etvbharat/prod-images/kn-bng-06-police-commisoner-tweet-7202806_15022022170207_1502f_1644924727_199.jpg)