ಬೆಂಗಳೂರು: ನಗರದ ಫ್ರೀಡಂ ಪಾರ್ಕ್ನಲ್ಲಿ ಸಮಾವೇಶದ ಬಳಿಕ, ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ರಾಜಭವನ ಮುತ್ತಿಗೆ ಹಾಕಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜಿ.ಪರಮೇಶ್ವರ್, ಎನ್.ಎ. ಹ್ಯಾರಿಸ್ ಸೇರಿದಂತೆ ಹಲವು ನಾಯಕರು, ಕಾರ್ಯಕರ್ತರು ಸೇರಿದಂತೆ ರೈತರನ್ನು ಪೊಲೀಸರು ಮಹಾರಾಣಿ ಕಾಲೇಜು ವೃತ್ತದಲ್ಲಿ ವಶಕ್ಕೆ ಪಡೆದರು.
ವಶಪಡಿಸಿಕೊಂಡ ಎಲ್ಲರನ್ನೂ ಬಿಎಂಟಿಸಿ ಬಸ್ನಲ್ಲಿ ಆಡುಗೋಡಿ ಮೈದಾನದತ್ತ ಕರೆದೊಯ್ದರು.