ETV Bharat / state

ಜಿಂದಾಲ್​ಗೆ ಭೂಮಿ ಪರಭಾರೆ ವಿಚಾರ: ಸಮಸ್ಯೆ ಬಗೆಹರಿಸಲು ಕೆಪಿಸಿಸಿಯಲ್ಲಿ ಸಭೆ

author img

By

Published : Jun 8, 2019, 4:59 PM IST

ಭೂಮಿ ಪರಭಾರೆ ಸಂಬಂಧ ಸಂಪುಟದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಹೆಚ್.ಕೆ.ಪಾಟೀಲ್​ರು ತಮ್ಮ ಹೋರಾಟ ಆರಂಭಿಸಿದ್ದರು.

ಸಮಸ್ಯೆ ಬಗೆಹರಿಸಲು ಕೆಪಿಸಿಸಿಯಲ್ಲಿ ಸಭೆ ಅರಂಭ

ಬೆಂಗಳೂರು: ಜಿಂದಾಲ್​ಗೆ ರಾಜ್ಯ ಸಮ್ಮಿಶ್ರ ಸರ್ಕಾರದಿಂದ ಭೂಮಿ ಪರಭಾರೆ ಮಾಡಿರುವ ಸಂಬಂಧ ಕಾಂಗ್ರೆಸ್ ನಾಯಕರ ನಡುವೆ ಉಂಟಾಗಿರುವ ಗೊಂದಲಕ್ಕೆ ತೆರೆ ಎಳೆಯಲು ಕೆಪಿಸಿಸಿ ಮುಂದಾಗಿದ್ದು, ಈ ನಿಟ್ಟಿನಲ್ಲಿ ಪ್ರಮುಖ ನಾಯಕರ ಸಭೆ ಕರೆಯಲಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆಗೆ ಸಚಿವ ಕೆ.ಜೆ.ಜಾರ್ಜ್ ಹಾಗೂ ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಆಗಮಿಸಿದ್ದು, ಅಧ್ಯಕ್ಷರ ಜೊತೆ ಚರ್ಚೆ ಆರಂಭಿಸಿದ್ದಾರೆ. ರಾಜ್ಯ ಸಮ್ಮಿಶ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕಳೆದ ಕೆಲ ದಿನಗಳಿಂದ ಹೆಚ್​.ಕೆ.ಪಾಟೀಲ್ ಅವರು ಪಕ್ಷ ಹಾಗೂ ಸರ್ಕಾರದ ನಿಲುವು ಖಂಡಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಅಲ್ಲದೆ, ಸಚಿವ ಕೃಷ್ಣಬೈರೇಗೌಡ, ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜಿಂದಾಲ್ ಭೂಮಿ ಪರಭಾರೆ ಸಂಬಂಧ ನಿರ್ಧಾರ ಕೈಗೊಂಡಿರುವ ಪ್ರತಿಯೊಬ್ಬರಿಗೂ ಪತ್ರ ಬರೆಯುತ್ತಿದ್ದಾರೆ. ಇದರಿಂದ ಮೈತ್ರಿ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ಮುಜುಗರ ಉಂಟು ಮಾಡುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಧ್ಯಸ್ಥಿಕೆಯಲ್ಲಿ ಈ ವಿಚಾರಕ್ಕೆ ಒಂದು ತಾರ್ಕಿಕ ಅಂತ್ಯ ಕಾಣಿಸಲು ಮುಂದಾಗಿದ್ದಾರೆ.

ಸಮಸ್ಯೆ ಬಗೆಹರಿಸಲು ಕೆಪಿಸಿಸಿಯಲ್ಲಿ ಸಭೆ ಅರಂಭ

ಇದಕ್ಕಾಗಿಯೇ ಅತ್ಯಂತ ಮಹತ್ವದ ಸಭೆಯನ್ನು ದಿನೇಶ್ ಗುಂಡೂರಾವ್ ಕರೆದಿದ್ದು, ಸಮ್ಮಿಶ್ರ ಸರ್ಕಾರದ ನಿರ್ಧಾರದ ಪರವಾಗಿ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟೀಕರಣ ನೀಡಲಿದ್ದಾರೆ. ಇದೇ ಸಂದರ್ಭ ಹೆಚ್​.ಕೆ.ಪಾಟೀಲರು ತಮ್ಮ ಮಾಹಿತಿ ಹಾಗೂ ದಾಖಲೆಗಳನ್ನು ಪಕ್ಷದ ಅಧ್ಯಕ್ಷರ ಮುಂದಿಡಲಿದ್ದಾರೆ. ಉಭಯ ನಾಯಕರು ತಮ್ಮ ಬಳಿ ಇರುವ ದಾಖಲೆಯನ್ನು ದಿನೇಶ್ ಗುಂಡೂರಾವ್ ಅವರ ಮುಂದಿಡಲಿದ್ದಾರೆ. ಉಭಯ ನಾಯಕರಲ್ಲಿ ಮಾಹಿತಿ ಪಡೆದ ನಂತರ ಅಧ್ಯಕ್ಷರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ.

ಏನಿದು ಭೂಮಿ ಪರಭಾರೆ?
ಜಿಂದಾಲ್​ಗೆ ರಾಜ್ಯ ಸಮ್ಮಿಶ್ರ ಸರ್ಕಾರ ಕಳೆದ ಸಚಿವ ಸಂಪುಟ ಸಭೆಯಲ್ಲಿ 3669 ಎಕರೆ ಭೂಮಿ ಪರಭಾರೆ ಮಾಡುವ ತೀರ್ಮಾನ ಕೈಗೊಂಡಿತ್ತು. ಸಂಪುಟದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಹೆಚ್.ಕೆ.ಪಾಟೀಲ್​ರು ತಮ್ಮ ಹೋರಾಟ ಆರಂಭಿಸಿದ್ದರು. ಹೆಚ್​ಕೆಪಿ ಅಸಮಾಧಾನದಿಂದ ಬಿಜೆಪಿ ಕೂಡ ಹೋರಾಟ ಕೈಗೆತ್ತಿಕೊಂಡಿತ್ತು. ಇದರಿಂದ ಪಕ್ಷ, ಸರ್ಕಾರಕ್ಕೂ ಮುಜುಗರ ತಂದಿತ್ತು. ಹೀಗಾಗಿ ಇಬ್ಬರ ನಡುವೆ ಸಂಧಾನಕ್ಕೆ ಮುಂದಾದ ದಿನೇಶ್, ಸಭೆ ಕರೆದಿದ್ದಾರೆ.

ಬೆಂಗಳೂರು: ಜಿಂದಾಲ್​ಗೆ ರಾಜ್ಯ ಸಮ್ಮಿಶ್ರ ಸರ್ಕಾರದಿಂದ ಭೂಮಿ ಪರಭಾರೆ ಮಾಡಿರುವ ಸಂಬಂಧ ಕಾಂಗ್ರೆಸ್ ನಾಯಕರ ನಡುವೆ ಉಂಟಾಗಿರುವ ಗೊಂದಲಕ್ಕೆ ತೆರೆ ಎಳೆಯಲು ಕೆಪಿಸಿಸಿ ಮುಂದಾಗಿದ್ದು, ಈ ನಿಟ್ಟಿನಲ್ಲಿ ಪ್ರಮುಖ ನಾಯಕರ ಸಭೆ ಕರೆಯಲಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆಗೆ ಸಚಿವ ಕೆ.ಜೆ.ಜಾರ್ಜ್ ಹಾಗೂ ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಆಗಮಿಸಿದ್ದು, ಅಧ್ಯಕ್ಷರ ಜೊತೆ ಚರ್ಚೆ ಆರಂಭಿಸಿದ್ದಾರೆ. ರಾಜ್ಯ ಸಮ್ಮಿಶ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕಳೆದ ಕೆಲ ದಿನಗಳಿಂದ ಹೆಚ್​.ಕೆ.ಪಾಟೀಲ್ ಅವರು ಪಕ್ಷ ಹಾಗೂ ಸರ್ಕಾರದ ನಿಲುವು ಖಂಡಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಅಲ್ಲದೆ, ಸಚಿವ ಕೃಷ್ಣಬೈರೇಗೌಡ, ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜಿಂದಾಲ್ ಭೂಮಿ ಪರಭಾರೆ ಸಂಬಂಧ ನಿರ್ಧಾರ ಕೈಗೊಂಡಿರುವ ಪ್ರತಿಯೊಬ್ಬರಿಗೂ ಪತ್ರ ಬರೆಯುತ್ತಿದ್ದಾರೆ. ಇದರಿಂದ ಮೈತ್ರಿ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ಮುಜುಗರ ಉಂಟು ಮಾಡುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಧ್ಯಸ್ಥಿಕೆಯಲ್ಲಿ ಈ ವಿಚಾರಕ್ಕೆ ಒಂದು ತಾರ್ಕಿಕ ಅಂತ್ಯ ಕಾಣಿಸಲು ಮುಂದಾಗಿದ್ದಾರೆ.

ಸಮಸ್ಯೆ ಬಗೆಹರಿಸಲು ಕೆಪಿಸಿಸಿಯಲ್ಲಿ ಸಭೆ ಅರಂಭ

ಇದಕ್ಕಾಗಿಯೇ ಅತ್ಯಂತ ಮಹತ್ವದ ಸಭೆಯನ್ನು ದಿನೇಶ್ ಗುಂಡೂರಾವ್ ಕರೆದಿದ್ದು, ಸಮ್ಮಿಶ್ರ ಸರ್ಕಾರದ ನಿರ್ಧಾರದ ಪರವಾಗಿ ಸಚಿವ ಕೆ.ಜೆ.ಜಾರ್ಜ್ ಸ್ಪಷ್ಟೀಕರಣ ನೀಡಲಿದ್ದಾರೆ. ಇದೇ ಸಂದರ್ಭ ಹೆಚ್​.ಕೆ.ಪಾಟೀಲರು ತಮ್ಮ ಮಾಹಿತಿ ಹಾಗೂ ದಾಖಲೆಗಳನ್ನು ಪಕ್ಷದ ಅಧ್ಯಕ್ಷರ ಮುಂದಿಡಲಿದ್ದಾರೆ. ಉಭಯ ನಾಯಕರು ತಮ್ಮ ಬಳಿ ಇರುವ ದಾಖಲೆಯನ್ನು ದಿನೇಶ್ ಗುಂಡೂರಾವ್ ಅವರ ಮುಂದಿಡಲಿದ್ದಾರೆ. ಉಭಯ ನಾಯಕರಲ್ಲಿ ಮಾಹಿತಿ ಪಡೆದ ನಂತರ ಅಧ್ಯಕ್ಷರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ.

ಏನಿದು ಭೂಮಿ ಪರಭಾರೆ?
ಜಿಂದಾಲ್​ಗೆ ರಾಜ್ಯ ಸಮ್ಮಿಶ್ರ ಸರ್ಕಾರ ಕಳೆದ ಸಚಿವ ಸಂಪುಟ ಸಭೆಯಲ್ಲಿ 3669 ಎಕರೆ ಭೂಮಿ ಪರಭಾರೆ ಮಾಡುವ ತೀರ್ಮಾನ ಕೈಗೊಂಡಿತ್ತು. ಸಂಪುಟದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಹೆಚ್.ಕೆ.ಪಾಟೀಲ್​ರು ತಮ್ಮ ಹೋರಾಟ ಆರಂಭಿಸಿದ್ದರು. ಹೆಚ್​ಕೆಪಿ ಅಸಮಾಧಾನದಿಂದ ಬಿಜೆಪಿ ಕೂಡ ಹೋರಾಟ ಕೈಗೆತ್ತಿಕೊಂಡಿತ್ತು. ಇದರಿಂದ ಪಕ್ಷ, ಸರ್ಕಾರಕ್ಕೂ ಮುಜುಗರ ತಂದಿತ್ತು. ಹೀಗಾಗಿ ಇಬ್ಬರ ನಡುವೆ ಸಂಧಾನಕ್ಕೆ ಮುಂದಾದ ದಿನೇಶ್, ಸಭೆ ಕರೆದಿದ್ದಾರೆ.

Intro:newsBody:ಜಿಂದಾಲ್ ಸಂಬಂಧ ಚರ್ಚೆಗೆ ಕೆಪಿಸಿಸಿ ಗೆ ಬಂದ ಎಚ್ಕೆಪಿ, ಜಾರ್ಜ್

ಬೆಂಗಳೂರು: ಜಿಂದಾಲ್ ಗೆ ರಾಜ್ಯ ಸಮ್ಮಿಶ್ರ ಸರ್ಕಾರದಿಂದ ಭೂಮಿ ಪರಭಾರೆ ಮಾಡಿರುವ ಸಂಬಂಧ ಕಾಂಗ್ರೆಸ್ ನಾಯಕರ ನಡುವೆ ಉಂಟಾಗಿರುವ ಗೊಂದಲಕ್ಕೆ ತೆರೆ ಎಳೆಯಲು ಕೆಪಿಸಿಸಿ ಮುಂದಾಗಿದ್ದು ಈ ನಿಟ್ಟಿನಲ್ಲಿ ಪ್ರಮುಖ ನಾಯಕರ ಸಭೆ ಕರೆಯಲಾಗಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪಕ್ಷದ ಕಚೇರಿಯಲ್ಲಿ ಕಾರ್ಯ ಸಭೆಗೆ ಸಚಿವ ಕೆಜೆ ಜಾರ್ಜ್ ಹಾಗೂ ಮಾಜಿ ಸಚಿವ ಎಚ್ ಕೆ ಪಾಟೀಲ್ ಈಗ ಆಗಮಿಸಿದ್ದು ಅಧ್ಯಕ್ಷರ ಜೊತೆ ಸಭೆ ಆರಂಭಿಸಿದ್ದಾರೆ.
ರಾಜ್ಯ ಸಮ್ಮಿಶ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕಳೆದ ಕೆಲದಿನಗಳಿಂದ ಎಚ್ ಕೆ ಪಾಟೀಲ್ ಅವರು ಪಕ್ಷ ಹಾಗೂ ಸರ್ಕಾರದ ನಿಲುವು ಖಂಡಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಸಚಿವ ಕೃಷ್ಣಬೈರೇಗೌಡ, ಸಿಎಂ ಹೆಚ್ ಡಿ ಕುಮಾರಸ್ವಾಮಿ ಸೇರಿದಂತೆ ಜಿಂದಾಲ್ ಭೂಮಿ ಪರಭಾರೆ ಸಂಬಂಧ ನಿರ್ಧಾರ ಕೈಗೊಂಡಿರುವ ಪ್ರತಿಯೊಬ್ಬರಿಗೂ ಪತ್ರ ಬರೆಯುತ್ತಿದ್ದಾರೆ. ಇದರಿಂದ ಮೈತ್ರಿ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ಮುಜುಗರ ಉಂಟು ಮಾಡುತ್ತಿದ್ದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಧ್ಯಸ್ಥಿಕೆಯಲ್ಲಿ ಈ ವಿಚಾರಕ್ಕೆ ಒಂದು ತಾತ್ವಿಕ ಅಂತ್ಯ ಕಾಣಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಇದಕ್ಕಾಗಿಯೇ ಅತ್ಯಂತ ಮಹತ್ವದ ಸಭೆಯನ್ನು ದಿನೇಶ್ ಗುಂಡೂರಾವ್ ಕರೆದಿದ್ದು ಸಮ್ಮಿಶ್ರ ಸರ್ಕಾರದ ನಿರ್ಧಾರದ ಪರವಾಗಿ ಸಚಿವ ಕೆಜೆ ಜಾರ್ಜ್ ಸ್ಪಷ್ಟೀಕರಣ ನೀಡಲಿದ್ದು ಇದೇ ಸಂದರ್ಭ ಎಚ್ ಕೆ ಪಾಟೀಲರು ತಮ್ಮ ಮಾಹಿತಿಗಳು ಹಾಗೂ ದಾಖಲೆಗಳನ್ನು ಪಕ್ಷದ ಅಧ್ಯಕ್ಷರ ಮುಂದಿಡಲಿದ್ದಾರೆ. ಉಭಯ ನಾಯಕರು ತಮ್ಮ ಬಳಿ ಇರುವ ದಾಖಲೆಯನ್ನು ದಿನೇಶ್ ಗುಂಡೂರಾವ್ ಅವರ ಮುಂದಿಡಲಿದ್ದಾರೆ.
ಉಭಯ ನಾಯಕರ ಮಾಹಿತಿ ಪಡೆದ ನಂತರ ಅಧ್ಯಕ್ಷರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ. ಸಮ್ಮಿಶ್ರ ಸರ್ಕಾರದ ಹಾಗೂ ಪಕ್ಷದ ನಿರ್ಧಾರಕ್ಕೆ ಮುಜುಗರ ಆಗದ ರೀತಿ ಒಂದು ತೀರ್ಮಾನಕ್ಕೆ ಬರಲಿದ್ದಾರೆ ಎನ್ನಲಾಗುತ್ತಿದೆ.
ಏನಾಗಿತ್ತು?
ಜಿಂದಾಲ್ ಗೆ ರಾಜ್ಯ ಸಮ್ಮಿಶ್ರ ಸರ್ಕಾರ ಕಳೆದ ಸಚಿವ ಸಂಪುಟ ಸಭೆಯಲ್ಲಿ 3669 ಎಕರೆ ಭೂಮಿ ಪರಭಾರೆ ಮಾಡುವ ತೀರ್ಮಾನ ಕೈಗೊಂಡಿತ್ತು.
ಸಂಪುಟ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಹೆಚ್ ಕೆ. ಪಾಟೀಲ್ ರು ತಮ್ಮ ಹೋರಾಟ ಆರಂಭಿಸಿದ್ದರು. ಹೆಚ್ಕೆಪಿ ಅಸಮಾಧಾನದಿಂದ ಬಿಜೆಪಿ ಕೂಡ ಹೋರಾಟ ಕೈಗೆತ್ತಿಕೊಂಡಿತ್ತು. ಇದರಿಂದ ಪಕ್ಷ, ಸರ್ಕಾರಕ್ಕೂ ಮುಜುಗರ ತಂದಿತ್ತು. ಹೀಗಾಗಿ ಇಬ್ಬರ ನಡುವೆ ಸಂಧಾನಕ್ಕೆ ಮುಂದಾದ ದಿನೇಶ್ ಸಭೆ ಕರೆದಿದ್ದಾರೆ.
ಪ್ರತಿ ಎಕರೆಗೆ 1.22 ಲಕ್ಷಕ್ಕೆ ನೀಡಿರುವ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು ಪಾಟೀಲರು. ಇಂದು ಸಭೆ ನಂತರ ಎಚ್.ಕೆ.ಪಾಟೀಲ್ ಸುಮ್ಮನಿರಿಸುವ ಸಾಧ್ಯತೆ ಇದೆ.Conclusion:news

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.