ETV Bharat / state

ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಅಗತ್ಯ: ಸಚಿವ ಕೃಷ್ಣಭೈರೇಗೌಡ

author img

By ETV Bharat Karnataka Team

Published : Oct 30, 2023, 9:24 PM IST

ಮುಂದಿನ ದಿನಗಳಲ್ಲಿ ಅಗ್ನಿ ದುರಂತ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಅಗತ್ಯವಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು.

ಕಂದಾಯ ಸಚಿವ ಕೃಷ್ಣಭೈರೇಗೌಡ
ಕಂದಾಯ ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ಬೆಂಗಳೂರು ನಗರದಲ್ಲಿ ಸಂಭವಿಸುತ್ತಿರುವ ಅಗ್ನಿ ದುರಂತಗಳಿಂದ ಪ್ರಾಣಾಪಾಯಗಳು ಹೆಚ್ಚುತ್ತಿವೆ. ಜನಸಾಮಾನ್ಯರಲ್ಲಿ ಆತಂಕ ಮನೆ ಮಾಡಿದೆ. ಮುಂದಿನ ದಿನಗಳಲ್ಲಿ ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿಶಾಮಕದಳವನ್ನು ಉನ್ನತೀಕರಣಗೊಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಇಂದು ಅಗ್ನಿ ಶಾಮಕದಳ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂತ್ ಅವರೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಸಚಿವರು, ಕಳೆದ 20 ದಿನಗಳ ಅವಧಿಯಲ್ಲಿ ಬೆಂಗಳೂರಿನಲ್ಲೇ ಮೂರು ಕಡೆಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸಿವೆ. ನಗರ ಪ್ರದೇಶಗಳೂ ಸೇರಿದಂತೆ ರಾಜ್ಯಾದ್ಯಂತ ಅಗ್ನಿ ದುರಂತಗಳು ಸಂಭವಿಸದಂತೆ ಅಗ್ನಿಶಾಮಕ ದಳ ತಡೆಯುವಂತಾಗಬೇಕು ಎಂದು ಹೇಳಿದರು.

ಕಂದಾಯ ಸಚಿವ ಕೃಷ್ಣಭೈರೇಗೌಡ
ಕಂದಾಯ ಸಚಿವ ಕೃಷ್ಣಭೈರೇಗೌಡ

ಅತ್ತಿಬೆಲೆ ಪಟಾಕಿ ಗೋದಾಮಿನ ದುರಂತದಲ್ಲಿ ತಮಿಳುನಾಡು ಮೂಲದ ಕಾರ್ಮಿಕರು ಮೃತಪಟ್ಟಿದ್ದರು. ಅಕ್ಟೋಬರ್ 19ರಂದು ಕೋರಮಂಗಲದ ಮಡ್‌ಪೈಪ್ ಅನ್ನೋ ರೆಸ್ಟೋಕೆಫೆ ಅಗ್ನಿ ದುರಂತದಲ್ಲಿ ಹಲವರು ಗಾಯಗೊಂಡಿದ್ದರು. ಹಜ್ ಭವನದ ಬೆಂಕಿ ಆಹುತಿಗೆ, 3 ಕೋಟಿ ರೂ. ನಷ್ಟವಾಗಿದೆ ಎಂದರು.

ದುರಂತಗಳನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಅಗ್ನಿಶಾಮಕ ದಳ ಚಿಂತನೆ ನಡೆಸಬೇಕು. ಅಗ್ನಿಶಾಮಕ ದಳದ ಉನ್ನತೀಕರಣಗಳ ಬಗ್ಗೆಯೂ ಗಮನವಹಿಸುವ ಜೊತೆಗೆ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಾಗಲೇ ಅಗ್ನಿದುರಂತ ತಡೆಗೆ ತೆಗೆದುಕೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿ, ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಗ್ನಿಶಾಮಕ ದಳದ ಉನ್ನತೀಕರಣ ಹಾಗೂ ಹೊಸ ಅಗ್ನಿಶಾಮಕ ದಳಗಳನ್ನು ಸ್ಥಾಪಿಸುವ ಕುರಿತ ಕ್ರಿಯಾ ಯೋಜನೆ ಮಂಡಿಸಿದ ಕಮಲ್ ಪಂತ್, ಉಡುಪಿ ಜಿಲ್ಲೆಯ ಮಣಿಪಾಲ್, ದಾವಣಗೆರೆಯ-ನ್ಯಾಮತಿ, ವಿಜಯಪುರ ಜಿಲ್ಲೆಯ ನಿಡಗುಂದಿ-ಬಬಲೇಶ್ವರ್, ರಾಯಚೂರಿನ ಮಸ್ಕಿ, ಬೆಳಗಾವಿಯ ಮುದಲಗಿ, ಬಳ್ಳಾರಿಯ ಕಂಪ್ಲಿ ಹಾಗೂ ಕಲಬುರಗಿ ಷಹಾಬಾದ್ ಭಾಗದಲ್ಲಿ ನೂತನ ಅಗ್ನಿಶಾಮಕ ದಳ ಸ್ಥಾಪಿಸುವ ಸಂಬಂಧ ಯೋಜನೆ ಬಗ್ಗೆ ತಿಳಿಸಿದರು.

ಬೆಂಗಳೂರು ಸೇರಿದಂತೆ ನಗರ ಭಾಗದಲ್ಲಿ ಸಂಭವಿಸುತ್ತಿರುವ ಅಗ್ನಿ ಅವಘಡಗಳ ತಡೆಗೆ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂಬುದರ ಕುರಿತು ಶೀಘ್ರ ಇಲಾಖೆಗೆ ವರದಿ ನೀಡುವುದಾಗಿ ತಿಳಿಸಿದರು. ಸಭೆಯಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್ ಸೇರಿದಂತೆ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಂಗಳೂರು ಹಜ್ ಭವನದಲ್ಲಿನ ಬೆಂಕಿ ಅವಘಡದಿಂದ 3 ಕೋಟಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿ: ಕೆಆರ್​​ಡಿಎಲ್ ಅಧಿಕಾರಿಗಳಿಂದ ಮಾಹಿತಿ

ಬೆಂಗಳೂರು: ಬೆಂಗಳೂರು ನಗರದಲ್ಲಿ ಸಂಭವಿಸುತ್ತಿರುವ ಅಗ್ನಿ ದುರಂತಗಳಿಂದ ಪ್ರಾಣಾಪಾಯಗಳು ಹೆಚ್ಚುತ್ತಿವೆ. ಜನಸಾಮಾನ್ಯರಲ್ಲಿ ಆತಂಕ ಮನೆ ಮಾಡಿದೆ. ಮುಂದಿನ ದಿನಗಳಲ್ಲಿ ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿಶಾಮಕದಳವನ್ನು ಉನ್ನತೀಕರಣಗೊಳಿಸಬೇಕು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಇಂದು ಅಗ್ನಿ ಶಾಮಕದಳ ಪೊಲೀಸ್ ಮಹಾನಿರ್ದೇಶಕ ಕಮಲ್ ಪಂತ್ ಅವರೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಸಚಿವರು, ಕಳೆದ 20 ದಿನಗಳ ಅವಧಿಯಲ್ಲಿ ಬೆಂಗಳೂರಿನಲ್ಲೇ ಮೂರು ಕಡೆಗಳಲ್ಲಿ ಅಗ್ನಿ ಅನಾಹುತಗಳು ಸಂಭವಿಸಿವೆ. ನಗರ ಪ್ರದೇಶಗಳೂ ಸೇರಿದಂತೆ ರಾಜ್ಯಾದ್ಯಂತ ಅಗ್ನಿ ದುರಂತಗಳು ಸಂಭವಿಸದಂತೆ ಅಗ್ನಿಶಾಮಕ ದಳ ತಡೆಯುವಂತಾಗಬೇಕು ಎಂದು ಹೇಳಿದರು.

ಕಂದಾಯ ಸಚಿವ ಕೃಷ್ಣಭೈರೇಗೌಡ
ಕಂದಾಯ ಸಚಿವ ಕೃಷ್ಣಭೈರೇಗೌಡ

ಅತ್ತಿಬೆಲೆ ಪಟಾಕಿ ಗೋದಾಮಿನ ದುರಂತದಲ್ಲಿ ತಮಿಳುನಾಡು ಮೂಲದ ಕಾರ್ಮಿಕರು ಮೃತಪಟ್ಟಿದ್ದರು. ಅಕ್ಟೋಬರ್ 19ರಂದು ಕೋರಮಂಗಲದ ಮಡ್‌ಪೈಪ್ ಅನ್ನೋ ರೆಸ್ಟೋಕೆಫೆ ಅಗ್ನಿ ದುರಂತದಲ್ಲಿ ಹಲವರು ಗಾಯಗೊಂಡಿದ್ದರು. ಹಜ್ ಭವನದ ಬೆಂಕಿ ಆಹುತಿಗೆ, 3 ಕೋಟಿ ರೂ. ನಷ್ಟವಾಗಿದೆ ಎಂದರು.

ದುರಂತಗಳನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಅಗ್ನಿಶಾಮಕ ದಳ ಚಿಂತನೆ ನಡೆಸಬೇಕು. ಅಗ್ನಿಶಾಮಕ ದಳದ ಉನ್ನತೀಕರಣಗಳ ಬಗ್ಗೆಯೂ ಗಮನವಹಿಸುವ ಜೊತೆಗೆ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ನೀಡುವಾಗಲೇ ಅಗ್ನಿದುರಂತ ತಡೆಗೆ ತೆಗೆದುಕೊಳ್ಳಲಾಗಿರುವ ಕ್ರಮಗಳನ್ನು ಪರಿಶೀಲಿಸಿ, ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಗ್ನಿಶಾಮಕ ದಳದ ಉನ್ನತೀಕರಣ ಹಾಗೂ ಹೊಸ ಅಗ್ನಿಶಾಮಕ ದಳಗಳನ್ನು ಸ್ಥಾಪಿಸುವ ಕುರಿತ ಕ್ರಿಯಾ ಯೋಜನೆ ಮಂಡಿಸಿದ ಕಮಲ್ ಪಂತ್, ಉಡುಪಿ ಜಿಲ್ಲೆಯ ಮಣಿಪಾಲ್, ದಾವಣಗೆರೆಯ-ನ್ಯಾಮತಿ, ವಿಜಯಪುರ ಜಿಲ್ಲೆಯ ನಿಡಗುಂದಿ-ಬಬಲೇಶ್ವರ್, ರಾಯಚೂರಿನ ಮಸ್ಕಿ, ಬೆಳಗಾವಿಯ ಮುದಲಗಿ, ಬಳ್ಳಾರಿಯ ಕಂಪ್ಲಿ ಹಾಗೂ ಕಲಬುರಗಿ ಷಹಾಬಾದ್ ಭಾಗದಲ್ಲಿ ನೂತನ ಅಗ್ನಿಶಾಮಕ ದಳ ಸ್ಥಾಪಿಸುವ ಸಂಬಂಧ ಯೋಜನೆ ಬಗ್ಗೆ ತಿಳಿಸಿದರು.

ಬೆಂಗಳೂರು ಸೇರಿದಂತೆ ನಗರ ಭಾಗದಲ್ಲಿ ಸಂಭವಿಸುತ್ತಿರುವ ಅಗ್ನಿ ಅವಘಡಗಳ ತಡೆಗೆ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂಬುದರ ಕುರಿತು ಶೀಘ್ರ ಇಲಾಖೆಗೆ ವರದಿ ನೀಡುವುದಾಗಿ ತಿಳಿಸಿದರು. ಸಭೆಯಲ್ಲಿ ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್ ಸೇರಿದಂತೆ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಂಗಳೂರು ಹಜ್ ಭವನದಲ್ಲಿನ ಬೆಂಕಿ ಅವಘಡದಿಂದ 3 ಕೋಟಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿ: ಕೆಆರ್​​ಡಿಎಲ್ ಅಧಿಕಾರಿಗಳಿಂದ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.