ಬೆಂಗಳೂರು: ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಸಮಾಧಿ ಸ್ಥಳ ವೀಕ್ಷಣೆಗೆ ಸಾರ್ವಜನಿಕರಿಗೆ ಈಗಾಗಲೇ ಅವಕಾಶ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯತನಕ ಸಮಾಧಿ ವೀಕ್ಷಿಸಬಹುದು. ಇಂದು ಬೆಳಗ್ಗೆಯಿಂದಲೇ ಅಭಿಮಾನಿಗಳು, ಅಪ್ಪು ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಶ್ರದ್ಧಾಂಜಲಿ ಕಾರ್ಯಕ್ರಮ:
ಪುನೀತ್ ರಾಜ್ಕುಮಾರ್ಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವನ್ನು ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸ್ಯಾಂಡಲ್ವುಡ್, ಟಾಲಿವುಡ್, ಕಾಲಿವುಡ್, ಬಾಲಿವುಡ್ ನಟ-ನಟಿಯರು ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರ ಹಾಗೂ ಗ್ರಾಮಗಳಲ್ಲಿ ವೃತ್ತ ಹಾಗೂ ರಸ್ತೆಗಳಿಗೆ ಪುನೀತ್ ರಾಜ್ಕುಮಾರ್ ಹೆಸರು ನಾಮಕರಣ ಮಾಡಲಾಗುತ್ತಿದೆ. ನಗರದ ವೃತ್ತಗಳಲ್ಲಿ ಪುನೀತ್ ಕಂಚಿನ ಪ್ರತಿಮೆ ನಿರ್ಮಿಸಲು ಶಿಲ್ಪ ಕಲಾವಿದರಿಗೆ ಆರ್ಡರ್ ನೀಡಲಾಗುತ್ತಿದೆ. ಬೆಂಗಳೂರಿನ ಹಲವು ಶಿಲ್ಪ ಕಲಾವಿದರು ಅಪ್ಪುವಿನ ಕಂಚಿನ ಪ್ರತಿಮೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾರೆ.