ETV Bharat / state

ಐತಿಹಾಸಿಕ ಬೆಂಗಳೂರು ಕರಗಕ್ಕೆ ಸಿದ್ಧತೆ: ನಾಳೆಯಿಂದ 11 ದಿನ ಅದ್ದೂರಿ ಉತ್ಸವ

ಲೋಕಸಭಾ ಚುನಾವಣೆಯ ನಡುವೆಯೂ ವಿಶ್ವ ಪ್ರಸಿದ್ಧ ಕರಗ ಮಹೋತ್ಸವವನ್ನ ಅದ್ಧೂರಿಯಾಗಿ ನಡೆಸಲಾಗುತ್ತಿದೆ. ಲಕ್ಷಾಂತರ ಜನರು ಕರಗವನ್ನ ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.

author img

By

Published : Apr 10, 2019, 5:09 PM IST

ಬೆಂಗಳೂರು ಕರಗಕ್ಕೆ ಸಿದ್ಧತೆ

ಬೆಂಗಳೂರು: ದ್ರೌಪದಿ ಕರಗ ಅಥವಾ ಬೆಂಗಳೂರು ಕರಗ ಬೆಂಗಳೂರಿನ ಚಾರಿತ್ರಿಕ ಹಾಗೂ ಸಾಂಸ್ಕಂತಿಕ ಹಬ್ಬ. ಚೈತ್ರ ಪೂರ್ಣಿಮಾ ದಿನದಂದು ನಡೆಯುವ ಕರಗ ಉತ್ಸವಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಬೆಂಗಳೂರು ಕರಗ ತನ್ನದೇ ಆದ ಧಾರ್ಮಿಕ ಹಿನ್ನೆಲೆ, ಪಾವಿತ್ರ್ಯತೆ ಹೊಂದಿದೆ. 11 ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಹೂವಿನ ಕರಗವೇ ಮುಖ್ಯ ಕೇಂದ್ರ ಬಿಂದುವಾಗಿದ್ದು, ಈಗಾಗಲೇ ತಯಾರಿಗಳು ನಡೆದಿವೆ. ನಾಳೆಯಿಂದ ಶುರುವಾಗುವ ಬೆಂಗಳೂರು ಕರಗ ಪ್ರಕ್ರಿಯೆ ಏಪ್ರಿಲ್ 21ರವರೆಗೆ ನಡೆಯಲಿದೆ. ‌ಈ ಬಾರಿ ಕರಗದ ಪೂಜಾರಿಯಾಗಿ ಮನು ನಾಗರಾಜ್ ಅವರನ್ನ ಸರ್ಕಾರ ಆಯ್ಕೆ ಮಾಡಿದೆ.‌

ಐತಿಹಾಸಿಕ ಬೆಂಗಳೂರು ಕರಗಕ್ಕೆ ಸಿದ್ಧತೆ

ನಾಳೆ ರಾತ್ರಿ ದೇವರ ರಥೋತ್ಸವ ಮತ್ತು ‌ಅದೇ ದಿನ ಬೆಳಗಿನ ಜಾವ 4 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದೆ. ಈ 11 ದಿನಗಳಲ್ಲಿ ಪ್ರತಿ ದಿನ ಸಂಜೆ 7:30ಕ್ಕೆ ಮಹಾಮಂಗಳಾರತಿ ನಡೆಯಲಿದೆ. ದಿನಾಂಕ 19ರಂದು ಕರಗ ಶಕ್ತ್ಯೋತ್ಸವ ನಡೆಯಲಿದೆ.

ನಾಳೆಯ ಕಾರ್ಯಕ್ಕಾಗಿ ಈಗಾಗಲೇ ತಿರಳಪೇಟೆಯಲ್ಲಿರುವ ಧರ್ಮರಾಯ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ಭರದಿಂದ ಸಾಗಿದ್ದು, ರಸ್ತೆಯ ಉದ್ದಕ್ಕೂ ವಿದ್ಯುತ್ ದೀಪಾಲಂಕರ ಮಾಡಲಾಗುತ್ತಿದೆ.

ಬೆಂಗಳೂರು ಕರಗ ಹಿನ್ನೆಲೆ:

ದ್ವಾಪರ ಯುಗದಲ್ಲಿ ರಾಕ್ಷಸರ ಪಡೆಗಳನ್ನು ಸದೆಬಡಿಯಲು ದ್ರೌಪದಿ ಜನ್ಮ ತಾಳಿದ್ದಳು ಎಂಬುದು ಇಲ್ಲಿನ ನಂಬಿಕೆ. ಆದರೆ ಪಾಂಡವರು ಕುರುಕ್ಷೇತ್ರ ಕದನ ಮುಗಿಸಿ, ಯುಗ ಸಮಾಪ್ತಿಯಾಗಿ ಸ್ವರ್ಗಕ್ಕೆ ಹಿಂತಿರುಗುವಾಗ ತಿಮಿರಾಸುರ ಅನ್ನೋ ರಾಕ್ಷಸ ಮಾತ್ರ ಬದುಕುಳಿದಿರುತ್ತಾನೆ. ಆಗ ದ್ರೌಪದಿ ತನ್ನ ಬೆವರಿನಿಂದ ವೀರಕುಮಾರರನ್ನು ಸೃಷ್ಟಿ ಮಾಡಿ ತಿಮಿರಾಸುರನನ್ನು ಸಂಹರಿಸುತ್ತಾಳೆ ಅನ್ನೋ ಪ್ರತೀತಿ ಇದೆ.

ಬೆಂಗಳೂರು: ದ್ರೌಪದಿ ಕರಗ ಅಥವಾ ಬೆಂಗಳೂರು ಕರಗ ಬೆಂಗಳೂರಿನ ಚಾರಿತ್ರಿಕ ಹಾಗೂ ಸಾಂಸ್ಕಂತಿಕ ಹಬ್ಬ. ಚೈತ್ರ ಪೂರ್ಣಿಮಾ ದಿನದಂದು ನಡೆಯುವ ಕರಗ ಉತ್ಸವಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಬೆಂಗಳೂರು ಕರಗ ತನ್ನದೇ ಆದ ಧಾರ್ಮಿಕ ಹಿನ್ನೆಲೆ, ಪಾವಿತ್ರ್ಯತೆ ಹೊಂದಿದೆ. 11 ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಹೂವಿನ ಕರಗವೇ ಮುಖ್ಯ ಕೇಂದ್ರ ಬಿಂದುವಾಗಿದ್ದು, ಈಗಾಗಲೇ ತಯಾರಿಗಳು ನಡೆದಿವೆ. ನಾಳೆಯಿಂದ ಶುರುವಾಗುವ ಬೆಂಗಳೂರು ಕರಗ ಪ್ರಕ್ರಿಯೆ ಏಪ್ರಿಲ್ 21ರವರೆಗೆ ನಡೆಯಲಿದೆ. ‌ಈ ಬಾರಿ ಕರಗದ ಪೂಜಾರಿಯಾಗಿ ಮನು ನಾಗರಾಜ್ ಅವರನ್ನ ಸರ್ಕಾರ ಆಯ್ಕೆ ಮಾಡಿದೆ.‌

ಐತಿಹಾಸಿಕ ಬೆಂಗಳೂರು ಕರಗಕ್ಕೆ ಸಿದ್ಧತೆ

ನಾಳೆ ರಾತ್ರಿ ದೇವರ ರಥೋತ್ಸವ ಮತ್ತು ‌ಅದೇ ದಿನ ಬೆಳಗಿನ ಜಾವ 4 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದೆ. ಈ 11 ದಿನಗಳಲ್ಲಿ ಪ್ರತಿ ದಿನ ಸಂಜೆ 7:30ಕ್ಕೆ ಮಹಾಮಂಗಳಾರತಿ ನಡೆಯಲಿದೆ. ದಿನಾಂಕ 19ರಂದು ಕರಗ ಶಕ್ತ್ಯೋತ್ಸವ ನಡೆಯಲಿದೆ.

ನಾಳೆಯ ಕಾರ್ಯಕ್ಕಾಗಿ ಈಗಾಗಲೇ ತಿರಳಪೇಟೆಯಲ್ಲಿರುವ ಧರ್ಮರಾಯ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ಭರದಿಂದ ಸಾಗಿದ್ದು, ರಸ್ತೆಯ ಉದ್ದಕ್ಕೂ ವಿದ್ಯುತ್ ದೀಪಾಲಂಕರ ಮಾಡಲಾಗುತ್ತಿದೆ.

ಬೆಂಗಳೂರು ಕರಗ ಹಿನ್ನೆಲೆ:

ದ್ವಾಪರ ಯುಗದಲ್ಲಿ ರಾಕ್ಷಸರ ಪಡೆಗಳನ್ನು ಸದೆಬಡಿಯಲು ದ್ರೌಪದಿ ಜನ್ಮ ತಾಳಿದ್ದಳು ಎಂಬುದು ಇಲ್ಲಿನ ನಂಬಿಕೆ. ಆದರೆ ಪಾಂಡವರು ಕುರುಕ್ಷೇತ್ರ ಕದನ ಮುಗಿಸಿ, ಯುಗ ಸಮಾಪ್ತಿಯಾಗಿ ಸ್ವರ್ಗಕ್ಕೆ ಹಿಂತಿರುಗುವಾಗ ತಿಮಿರಾಸುರ ಅನ್ನೋ ರಾಕ್ಷಸ ಮಾತ್ರ ಬದುಕುಳಿದಿರುತ್ತಾನೆ. ಆಗ ದ್ರೌಪದಿ ತನ್ನ ಬೆವರಿನಿಂದ ವೀರಕುಮಾರರನ್ನು ಸೃಷ್ಟಿ ಮಾಡಿ ತಿಮಿರಾಸುರನನ್ನು ಸಂಹರಿಸುತ್ತಾಳೆ ಅನ್ನೋ ಪ್ರತೀತಿ ಇದೆ.

Intro:ಐತಿಹಾಸಿಕ ಬೆಂಗಳೂರು ಕರಗಕ್ಕೆ ಸಿದ್ಧತೆ; ಈ ಸಲ ಕರಗ ಹೊರಲಿರುವ ಮನು ನಾಗರಾಜ್..

ಬೆಂಗಳೂರು: ದ್ರೌಪದಿ ಕರಗ ಅಥವಾ ಬೆಂಗಳೂರು ಕರಗವೂ ಬೆಂಗಳೂರಿನ ಚಾರಿತ್ರಿಕ ಹಾಗೂ ಸಾಂಸ್ಕಂತಿಕ ಹಬ್ಬ.. ಚೈತ್ರ ಪೂರ್ಣಿಮಾ ದಿನದಂದು ನಡೆಯುವ ಕರಗ ಉತ್ಸವಕ್ಕೆ ಸಕಾಲವು ಸಜ್ಜಾಗಿವೆ.. ವಿಶ್ವ ಪ್ರಸಿದ್ಧ ಕರಗ ಮಹೋತ್ಸವ ಲೋಕಸಭಾ ಚುನಾವಣೆಯ ನಡುವೆಯೂ ಈ ವರ್ಷವೂ ಬಹಳ ಅದ್ಧೂರಿಯಾಗಿ ನಡೆಸಲಾಗುತ್ತಿದೆ.. ಲಕ್ಷಾಂತರ ಜನರು ಕರಗದ ಅದ್ಧೂರಿತನದ ಉತ್ಸವವನ್ನು ಕಣ್ತುಂಬಿ ಕೊಳ್ಳಲಿದ್ದಾರೆ. 
Body:ಬೆಂಗಳೂರು ಕರಗ ತನ್ನದೇ ಆದ ಧಾರ್ಮಿಕ ಹಿನ್ನೆಲೆ, ಪಾವಿತ್ರ್ಯತೆ ಕೂಡಾ ಹೊಂದಿದೆ.. 11 ದಿನಗಳ ಕಾಲ ಈ ಉತ್ಸವದಲ್ಲಿ ಹೂವಿನ ಕರಗವೇ ಮುಖ್ಯ ಕೇಂದ್ರ ಬಿಂದುವಾಗಿದ್ದು, ಇದಕ್ಕೆ ಈಗಾಗಲೇ ತಯಾರಿಗಳು ನಡೆದಿವೆ.. ನಾಳೆಯಿಂದ ಶುರುವಾಗುವ ಬೆಂಗಳೂರು ಕರಗದ ಪ್ರಕ್ರಿಯೆಯೂ, ಏಪ್ರಿಲ್ 21 ರವರೆಗೆ ನಡೆಯಲಿದೆ..‌

ಅಂದಹಾಗೇ, ಈ ಬಾರಿ ಕರಗದ ಪೂಜಾರಿಯಾಗಿ ಮನು ನಾಗರಾಜ್ ಅವರನ್ನ ಸರ್ಕಾರ ಆಯ್ಕೆ ಮಾಡಿದೆ.‌ ನಾಳೆ ರಾತ್ರಿ ಗಂಟೆಗೆ ದೇವರ ರಥೋತ್ಸವ ಮತ್ತು‌ಅದೇ ದಿನ ರಾತ್ರಿ 4 ಘಂಟಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ.. ಈ 11 ದಿನಗಳಲ್ಲಿ ಪ್ರತಿ ದಿನ ಸಂಜೆ 7-30 ಕ್ಕೆ ಮಹಾ ಮಂಗಳಾರತಿ ನಡೆಯಲಿದೆ..ದಿನಾಂಕ 19ರಂದು ಕರಗ ಶಕ್ತ್ಯೋತ್ಸವ ನಡೆಯಲಿದೆ..
Conclusion:ನಾಳೆಯ ಕಾರ್ಯಕ್ಕಾಗಿ ಈಗಾಗಲೇ ತಿರಳಪೇಟೆಯಲ್ಲಿರುವ ಧರ್ಮರಾಯ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ ಬರದಿಂದ ಸಾಗಿದ್ದು, ರಸ್ತೆಯುದ್ದ ವಿದ್ಯುತ್ ದೀಪಾಲಂಕರ ಮಾಡಲಾಗುತ್ಯಿದೆ.. ಒಟ್ಟಾರೆ, ಐತಿಹಾಸಿಕ ಕರಗದ ಮಹೋತ್ಸವ ನಡೆಯಲಿದ್ದು, ಮತ್ತೆ ಗೋವಿಂದ ಗೋವಿಂದ ಎಂಬ ಜೈಕಾರದೊಂದಿಗೆ ಭಕ್ತಾಧಿಗಳು ಭಕ್ತಿ ಭಾವದಿಂದ ಮಿಂದೆಳ್ಳಲಿದ್ದಾರೆ..
-------------

ಹಿನ್ನೆಲೆ: ದ್ವಾಪರಯುಗದಲ್ಲಿ ರಾಕ್ಷಸರ ಪಡೆಗಳನ್ನು ಸದೆ ಬಡಿಯಲು ದ್ರೌಪದಿ ಜನ್ಮತಾಳಿದ್ದಳು ಅನ್ನುತ್ತದೆ ಇಲ್ಲಿನ ನಂಬಿಕೆ.. ಆದರೆ ಪಾಂಡವರು ಕುರುಕ್ಷೇತ್ರ ಕದನ ಮುಗಿಸಿ, ಯುಗ ಸಮಾಪ್ತಿಯಾಗಿ, ಸ್ವರ್ಗಕ್ಕೆ ಹಿಂತಿರುಗುವಾಗ ತಿಮಿರಾಸುರ ಅನ್ನೋ ರಾಕ್ಷಸ ಮಾತ್ರ ಬದುಕುಳಿದಿರುತ್ತಾನೆ.. ಆಗ ದ್ರೌಪದಿ ತನ್ನ ಬೆವರಿನಿಂದ ವೀರಕುಮಾರರನ್ನು ಸೃಷ್ಟಿ ಮಾಡಿ ತಿಮಿರಾಸುರನನ್ನು ಸಂಹರಿಸುತ್ತಾಳೆ ಅನ್ನೋದು ಕಥೆಯ ಸಾರಾಂಶ.. 

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.