ETV Bharat / state

ಕೇಂದ್ರ ದಾರ್ಶನಿಕ ಶ್ರೀ ನಾರಾಯಣಗುರು ಸ್ತಬ್ಧ ಚಿತ್ರ ಪ್ರದರ್ಶನ ನಿರಾಕರಣೆಗೆ ಪ್ರಿಯಾಂಕ್​ ಖರ್ಗೆ ಕಿಡಿ..

ಅವರ ಸಮಾನತೆಯ ತತ್ವಗಳ ಬಗ್ಗೆ ಅಸಡ್ಡೆಯೇ?. ಅವರ ಸಾಮಾಜಿಕ ಪರಿವರ್ತನೆಯ ಬಗ್ಗೆ ಅಸಹನೆಯೇ?. ಬಿಜೆಪಿ ತನ್ನ ಆಂತರ್ಯದ ಸತ್ಯ ಬಹಿರಂಗಪಡಿಸಲಿ ಎಂದಿದ್ದಾರೆ. ಇನ್ನೊಂದೆಡೆ ಕರ್ನಾಟಕ ರಾಜ್ಯ ಪ್ರಸ್ತಾಪ ಸಲ್ಲಿಸಿದ್ದ 'ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು' ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿದೆ..

author img

By

Published : Jan 16, 2022, 3:33 PM IST

Updated : Jan 16, 2022, 9:02 PM IST

priyank-kharge
ಮಾಜಿ ಸಚಿವ ಪ್ರಿಯಾಂಕ ಖರ್ಗೆ

ಬೆಂಗಳೂರು : ಕೇರಳ ರಾಜ್ಯ ಈ ಸಾರಿ ಗಣರಾಜ್ಯೋತ್ಸವ ಪರೇಡ್​ಗಾಗಿ ರೂಪಿಸಿದ್ದ ದಾರ್ಶನಿಕ ಶ್ರೀ ನಾರಾಯಣಗುರುಗಳ ಸ್ತಬ್ಧ ಚಿತ್ರ ಪ್ರದರ್ಶನವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವುದನ್ನು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತೀವ್ರವಾಗಿ ಖಂಡಿಸಿದ್ದಾರೆ.

ಟ್ವೀಟ್​ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಅವರು, ಅಸ್ಪೃಶ್ಯತೆ, ಅಸಮಾನತೆಯನ್ನ ತೊಡೆದು ಹಾಕುವ ಆದರ್ಶಗಳನ್ನ ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಶ್ರೀ ನಾರಾಯಣಗುರು ಅವರ ಸ್ತಬ್ಧ ಚಿತ್ರವನ್ನ ತಿರಸ್ಕರಿಸಿ ಕೇಂದ್ರ ಸರ್ಕಾರ ಈ ನೆಲದ ಅಸ್ಮಿತೆಗೆ ಅವಮಾನಿಸಿದೆ.

ಅವರ ಸಮಾನತೆಯ ತತ್ವಗಳ ಬಗ್ಗೆ ಅಸಡ್ಡೆಯೇ?. ಅವರ ಸಾಮಾಜಿಕ ಪರಿವರ್ತನೆಯ ಬಗ್ಗೆ ಅಸಹನೆಯೇ?. ಬಿಜೆಪಿ ತನ್ನ ಆಂತರ್ಯದ ಸತ್ಯ ಬಹಿರಂಗಪಡಿಸಲಿ ಎಂದಿದ್ದಾರೆ. ಇನ್ನೊಂದೆಡೆ ಕರ್ನಾಟಕ ರಾಜ್ಯ ಪ್ರಸ್ತಾಪ ಸಲ್ಲಿಸಿದ್ದ 'ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು' ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿದೆ.

ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದೆ. 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ. ಈ ಆಯ್ಕೆಯ ವಿಚಾರವನ್ನು ಪ್ರಸ್ತಾಪಿಸಿದ ಪ್ರತಿಪಕ್ಷ ಕಾಂಗ್ರೆಸ್​ನ ಮಾಜಿ ಸಚಿವರಾಗಿರುವ ಪ್ರಿಯಾಂಕ್ ಖರ್ಗೆ ಕೇರಳದ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ನಿರಾಕರಿಸಿರುವುದನ್ನು ಪ್ರಮುಖವಾಗಿ ಪರಿಗಣಿಸಿರುವುದು ವಿಪರ್ಯಾಸ.

ಮತ್ತೊಂದು ಟ್ವೀಟ್​ನಲ್ಲಿ ಪ್ರಿಯಾಂಕ್ ಖರ್ಗೆ, ಈ ದೇಶಕ್ಕೆ ಇಂದು ಬೇಕಾಗಿರುವುದು ಬಸವಣ್ಣ ಅವರ ಅನುಭವ ಮಂಟಪವೇ ಹೊರತು ಧರ್ಮ ಸಂಸದ್ ಅಲ್ಲ. ಅನುಭವ ಮಂಟಪವು ಅನುಯಾಯಿಗಳಿಗೆ ಕಾಯಕ ಧರ್ಮದ ಚಿಂತನೆ, ವಾಕ್ ಮತ್ತು ಕ್ರಿಯೆಯ ಸ್ವಾತಂತ್ರ್ಯವನ್ನು ನೀಡುತ್ತದೆ. ಧರ್ಮದ ಹೆಸರಿಟ್ಟುಕೊಂಡು ಸಮಾಜವನ್ನು ಒಡೆಯುವ ಮೂಲ ಉದ್ದೇಶ ಹೊಂದಿರುವ 'ಧರ್ಮಸಂಸದ್' ನಮ್ಮ ದೇಶಕ್ಕೆ ಬೇಕಾಗಿಲ್ಲ ಎಂದು ಹೇಳಿದ್ದಾರೆ.

ಓದಿ: ಚಿಕ್ಕಮಗಳೂರಿನಲ್ಲಿ 27 ಜನ ಪೊಲೀಸರಿಗೆ ಕೊರೊನಾ ಸೋಂಕು

ಬೆಂಗಳೂರು : ಕೇರಳ ರಾಜ್ಯ ಈ ಸಾರಿ ಗಣರಾಜ್ಯೋತ್ಸವ ಪರೇಡ್​ಗಾಗಿ ರೂಪಿಸಿದ್ದ ದಾರ್ಶನಿಕ ಶ್ರೀ ನಾರಾಯಣಗುರುಗಳ ಸ್ತಬ್ಧ ಚಿತ್ರ ಪ್ರದರ್ಶನವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವುದನ್ನು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ತೀವ್ರವಾಗಿ ಖಂಡಿಸಿದ್ದಾರೆ.

ಟ್ವೀಟ್​ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಅವರು, ಅಸ್ಪೃಶ್ಯತೆ, ಅಸಮಾನತೆಯನ್ನ ತೊಡೆದು ಹಾಕುವ ಆದರ್ಶಗಳನ್ನ ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಶ್ರೀ ನಾರಾಯಣಗುರು ಅವರ ಸ್ತಬ್ಧ ಚಿತ್ರವನ್ನ ತಿರಸ್ಕರಿಸಿ ಕೇಂದ್ರ ಸರ್ಕಾರ ಈ ನೆಲದ ಅಸ್ಮಿತೆಗೆ ಅವಮಾನಿಸಿದೆ.

ಅವರ ಸಮಾನತೆಯ ತತ್ವಗಳ ಬಗ್ಗೆ ಅಸಡ್ಡೆಯೇ?. ಅವರ ಸಾಮಾಜಿಕ ಪರಿವರ್ತನೆಯ ಬಗ್ಗೆ ಅಸಹನೆಯೇ?. ಬಿಜೆಪಿ ತನ್ನ ಆಂತರ್ಯದ ಸತ್ಯ ಬಹಿರಂಗಪಡಿಸಲಿ ಎಂದಿದ್ದಾರೆ. ಇನ್ನೊಂದೆಡೆ ಕರ್ನಾಟಕ ರಾಜ್ಯ ಪ್ರಸ್ತಾಪ ಸಲ್ಲಿಸಿದ್ದ 'ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು' ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿದೆ.

ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದೆ. 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದಾಗಿದೆ. ಈ ಆಯ್ಕೆಯ ವಿಚಾರವನ್ನು ಪ್ರಸ್ತಾಪಿಸಿದ ಪ್ರತಿಪಕ್ಷ ಕಾಂಗ್ರೆಸ್​ನ ಮಾಜಿ ಸಚಿವರಾಗಿರುವ ಪ್ರಿಯಾಂಕ್ ಖರ್ಗೆ ಕೇರಳದ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ನಿರಾಕರಿಸಿರುವುದನ್ನು ಪ್ರಮುಖವಾಗಿ ಪರಿಗಣಿಸಿರುವುದು ವಿಪರ್ಯಾಸ.

ಮತ್ತೊಂದು ಟ್ವೀಟ್​ನಲ್ಲಿ ಪ್ರಿಯಾಂಕ್ ಖರ್ಗೆ, ಈ ದೇಶಕ್ಕೆ ಇಂದು ಬೇಕಾಗಿರುವುದು ಬಸವಣ್ಣ ಅವರ ಅನುಭವ ಮಂಟಪವೇ ಹೊರತು ಧರ್ಮ ಸಂಸದ್ ಅಲ್ಲ. ಅನುಭವ ಮಂಟಪವು ಅನುಯಾಯಿಗಳಿಗೆ ಕಾಯಕ ಧರ್ಮದ ಚಿಂತನೆ, ವಾಕ್ ಮತ್ತು ಕ್ರಿಯೆಯ ಸ್ವಾತಂತ್ರ್ಯವನ್ನು ನೀಡುತ್ತದೆ. ಧರ್ಮದ ಹೆಸರಿಟ್ಟುಕೊಂಡು ಸಮಾಜವನ್ನು ಒಡೆಯುವ ಮೂಲ ಉದ್ದೇಶ ಹೊಂದಿರುವ 'ಧರ್ಮಸಂಸದ್' ನಮ್ಮ ದೇಶಕ್ಕೆ ಬೇಕಾಗಿಲ್ಲ ಎಂದು ಹೇಳಿದ್ದಾರೆ.

ಓದಿ: ಚಿಕ್ಕಮಗಳೂರಿನಲ್ಲಿ 27 ಜನ ಪೊಲೀಸರಿಗೆ ಕೊರೊನಾ ಸೋಂಕು

Last Updated : Jan 16, 2022, 9:02 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.