ETV Bharat / state

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳ ಪ್ರಗತಿ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ

ನಿನ್ನೆ ನಡೆದ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ವಸ್ತುಗಳನ್ನು ಒದಗಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು.

author img

By ETV Bharat Karnataka Team

Published : Oct 1, 2023, 6:55 AM IST

CM Siddaramaiah
ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಿನ್ನೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಕೃಷ್ಣಾದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಸತಿ ನಿಲಯಗಳ 5,48,000 ವಿದ್ಯಾರ್ಥಿಗಳಿಗೆ ಟೂತ್ ಪೇಸ್ಟ್, ಬ್ರಶ್, ಕೊಬ್ಬರಿ ಎಣ್ಣೆ, ಮೈಸೋಪು, ಬಟ್ಟೆ ಸೋಪು ಒಳಗೊಂಡ 93 ರೂ.ಗಳ ಕಿಟ್ ಗಂಡುಮಕ್ಕಳಿಗೆ ಹಾಗೂ ಹೆಣ್ಣು ಮಕ್ಕಳಿಗೆ 135 ರೂ.ಗಳ ವೆಚ್ಚದಲ್ಲಿ ಶುಚಿ ಸಂಭ್ರಮ ಕಿಟ್ ನೀಡಲು ಟೆಂಡರ್ ಕರೆಯಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.

ಕಿಟ್​ಗಳ ವಿತರಣೆಗೆ ವರ್ಷಕ್ಕೆ 90 ಕೋಟಿ ರೂ.ಗಳ ವೆಚ್ಚವಾಗಲಿದೆ. ಕಿಟ್​ನಲ್ಲಿನ ವಸ್ತುಗಳ ಗುಣಮಟ್ಟ ಹೆಚ್ಚಿಸಲು ಸೂಚನೆ ನೀಡಲಾಗಿದೆ. 75 ಗ್ರಾಮ್​ ಬದಲಿಗೆ 125 ಗ್ರಾಮ್​ಗಳ ಸೋಪು ಒದಗಿಸುವಂತೆ ಹಾಗೂ ಇದರಲ್ಲಿ ಕೇವಲ ಶೇ. 5 ರಷ್ಟು ಮಾತ್ರ ಲಾಭ ಇಟ್ಟುಕೊಳ್ಳಬೇಕೆಂದು ಮೈಸೂರು ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ಟೂತ್ ಪೇಸ್ಟ್ ಪ್ರಮಾಣವನ್ನು ಹೆಚ್ಚಿಸುವಂತೆ ಹಾಗೂ ಹಲ್ಲುಜ್ಜುವ ಬ್ರಶ್​ಗಳ ಗುಣಮಟ್ಟ ಸೇರಿದಂತೆ ಇತರೆ ಗುಣಮಟ್ಟದ ವಸ್ತುಗಳನ್ನು ಮಕ್ಕಳಿಗೆ ಒದಗಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.‌ ಜೊತೆಗೆ, ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ ಪಿ.ಜಿ, ಪಿಹೆಚ್​ಡಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಸಲು ತೀರ್ಮಾನಿಸಲಾಯಿತು.

ಗುಣಮಟ್ಟದ ಆಹಾರಧಾನ್ಯಗಳನ್ನು ವಿತರಿಸಿ : ಪ್ರಸ್ತುತ ತಲಾ 1650 ರೂ. ಪ್ರೀ ಮೆಟ್ರಿಕ್, 1750 ರೂ.ಗಳನ್ನು ಪೋಸ್ಟ್ ಮೆಟ್ರಿಕ್ ಮಕ್ಕಳಿಗೆ ಆಹಾರಧಾನ್ಯಗಳಿಗಾಗಿ ನಿಗದಿಪಡಿಸಿದೆ. ರಾಗಿ, ಧಾನ್ಯ, ಎಣ್ಣೆಯನ್ನು ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ತಾಲೂಕುವಾರು ಪ್ಯಾಕೇಜ್​ಗಳ ಟೆಂಡರ್ ಕರೆದು ಪಡೆಯಲಾಗುತ್ತಿದೆ. ಈ ವ್ಯವಸ್ಥೆಯನ್ನು ಸರಿಪಡಿಸಿ ಗುಣಮಟ್ಟದ ಆಹಾರ ಪದಾರ್ಥಗಳನ್ನು ಒದಗಿಸಬೇಕು ಎಂದು ಸಿಎಂ ಸೂಚಿಸಿದರು.

ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಟೆಂಡರ್ ಕರೆಯುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಲು ಪ್ರಸ್ತಾವನೆ ಸಲ್ಲಿಸುವಂತೆ ಹಾಗೂ ಆಹಾರಧ್ಯಾನ ಪಡೆಯುವ ಕುರಿತ ಸಾಫ್ಟ್​ವೇರ್ ಅಭಿವೃದ್ಧಿ ಪಡಿಸಬೇಕು. ಮೈಸೂರು ಜಿಲ್ಲೆಯ ಬುಡಕಟ್ಟು ವಿದ್ಯಾರ್ಥಿನಿಲಯಕ್ಕೆ ಟೆಂಡರ್ ಅವಧಿ ಮುಕ್ತಾಯವಾಗಿದ್ಧು, ಆಹಾರ ಧಾನ್ಯಗಳ ಟೆಂಡರ್ ಕರೆಯುವಂತೆ ತಿಳಿಸಿದರು.

ಹೋಬಳಿಗೊಂದರಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಶಾಲೆ ಇರಬೇಕು ಎಂದು ಆದೇಶಿಸಿದ್ದು, 178 ಹೋಬಳಿಗಳಲ್ಲಿ ಕ್ರೈಸ್ ಶಾಲೆಗಳಿಲ್ಲ. ಕೆಲವು ಹೋಬಳಿಗಳಲ್ಲಿ 3-4 ಶಾಲೆಗಳಿವೆ. ಕಸಬಾ ಹೋಬಳಿ ತೆಗೆದರೆ 134 ಶಾಲೆಗಳನ್ನು ತೆರೆಯಬೇಕಿದೆ. ಸ್ವಂತ ಕಟ್ಟಡ ಇಲ್ಲದ ಶಾಲೆಗಳಿದ್ದರೆ ಅದೇ ಕ್ಷೇತ್ರದ ಮತ್ತೊಂದು ಹೋಬಳಿಗೆ ಶಾಲೆಯನ್ನು ಸ್ಥಳಾಂತರ ಮಾಡುವಂತೆ ಸೂಚಿಸಿದರು.

ಗುಣಮಟ್ಟದ ಶಿಕ್ಷಣ ಕಡ್ಡಾಯ: ಮೊರಾರ್ಜಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವಂತೆ ಸೂಚಿಸಿದ್ದು, ಶಿಕ್ಷಕರ ಗುಣಮಟ್ಟವೂ ಮುಖ್ಯ. ಶಿಕ್ಷಕರಿಗೆ ತರಬೇತಿ (ಓರಿಯೆಂಟೇಷನ್) ಕಾರ್ಯಕ್ರಮ ನೀಡಿ ಗುಣಮಟ್ಟದ ಶಿಕ್ಷಣ ನೀಡುವ ಮಟ್ಟಕ್ಕೆ ತರಬೇಕು. ಐಸೆಕ್ ಮತ್ತು ಐ ಐ ಎಸ್ ಸಿ ಸಂಸ್ಥೆಗಳ ಮೂಲಜ ಕ್ರೈಸ್ ಶಾಲೆಗಳ ಶಿಕ್ಷಕರ ಮೌಲ್ಯಮಾಪನ ಮಾಡಬೇಕು. ಶಾಲೆಗೆ ಪ್ರವೇಶ ನೀಡುವ ಸಂದರ್ಭದಲ್ಲಿ ಶೇ. 80 ರಷ್ಟು ಅರ್ಹತೆಯಾಧಾರದ ಮೇಲೆ ಹಾಗೂ ಶೇ. 20 ರಷ್ಟು ಸ್ಥಳೀಯರಿಗೆ ಮೀಸಲಿಡಬೇಕು. ಈ ನಿಟ್ಟಿನಲ್ಲಿ ಸಾಧಕ ಬಾಧಕಗಳನ್ನು ಪರಿಶೀಲಿಸಬೇಕು. ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎನ್ನುವುದು ಪ್ರಥಮ ಆದ್ಯತೆಯಾಗಿರಲಿ ಎಂದು ಹೇಳಿದರು.

ಯಾರೂ ದಡ್ಡರಲ್ಲ : ಇವತ್ತು ಯಾವ ಮಕ್ಕಳೂ ದಡ್ಡರಲ್ಲ, ಅವಕಾಶ ಮತ್ತು ಉತ್ತಮ ಕಲಿಕೆಯ ವಾತಾವರಣ ಸಿಕ್ಕರೆ ಎಲ್ಲರೂ ರ‍್ಯಾಂಕ್ ಪಡೆಯುತ್ತಾರೆ. ಕಲಿಕೆಯ ವಾತಾವರಣ ಪರಿಣಾಮ ಬೀರುತ್ತದೆ. ಮೊರಾರ್ಜಿ ಶಾಲೆಗಳನ್ನು ಪ್ರಾರಂಭಿಸಿದ್ದೇ ಬಡವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು, ದಡ್ಡರನ್ನು ಜಾಣರನ್ನಾಗಿ ಮಾಡಬೇಕೆಂಬ ಉದ್ದೇಶದಿಂದ. ಇದನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡುವಂತೆ ಸಿಎಂ ಸೂಚಿಸಿದರು.

ಇದನ್ನೂ ಓದಿ : ಕಾವೇರಿ ವಿವಾದ: ಸುಪ್ರೀಂ ಕೋರ್ಟ್​ನ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ಸಭೆ ನಡೆಸುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಿನ್ನೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಕೃಷ್ಣಾದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಸತಿ ನಿಲಯಗಳ 5,48,000 ವಿದ್ಯಾರ್ಥಿಗಳಿಗೆ ಟೂತ್ ಪೇಸ್ಟ್, ಬ್ರಶ್, ಕೊಬ್ಬರಿ ಎಣ್ಣೆ, ಮೈಸೋಪು, ಬಟ್ಟೆ ಸೋಪು ಒಳಗೊಂಡ 93 ರೂ.ಗಳ ಕಿಟ್ ಗಂಡುಮಕ್ಕಳಿಗೆ ಹಾಗೂ ಹೆಣ್ಣು ಮಕ್ಕಳಿಗೆ 135 ರೂ.ಗಳ ವೆಚ್ಚದಲ್ಲಿ ಶುಚಿ ಸಂಭ್ರಮ ಕಿಟ್ ನೀಡಲು ಟೆಂಡರ್ ಕರೆಯಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.

ಕಿಟ್​ಗಳ ವಿತರಣೆಗೆ ವರ್ಷಕ್ಕೆ 90 ಕೋಟಿ ರೂ.ಗಳ ವೆಚ್ಚವಾಗಲಿದೆ. ಕಿಟ್​ನಲ್ಲಿನ ವಸ್ತುಗಳ ಗುಣಮಟ್ಟ ಹೆಚ್ಚಿಸಲು ಸೂಚನೆ ನೀಡಲಾಗಿದೆ. 75 ಗ್ರಾಮ್​ ಬದಲಿಗೆ 125 ಗ್ರಾಮ್​ಗಳ ಸೋಪು ಒದಗಿಸುವಂತೆ ಹಾಗೂ ಇದರಲ್ಲಿ ಕೇವಲ ಶೇ. 5 ರಷ್ಟು ಮಾತ್ರ ಲಾಭ ಇಟ್ಟುಕೊಳ್ಳಬೇಕೆಂದು ಮೈಸೂರು ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ಟೂತ್ ಪೇಸ್ಟ್ ಪ್ರಮಾಣವನ್ನು ಹೆಚ್ಚಿಸುವಂತೆ ಹಾಗೂ ಹಲ್ಲುಜ್ಜುವ ಬ್ರಶ್​ಗಳ ಗುಣಮಟ್ಟ ಸೇರಿದಂತೆ ಇತರೆ ಗುಣಮಟ್ಟದ ವಸ್ತುಗಳನ್ನು ಮಕ್ಕಳಿಗೆ ಒದಗಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.‌ ಜೊತೆಗೆ, ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ ಪಿ.ಜಿ, ಪಿಹೆಚ್​ಡಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಸಲು ತೀರ್ಮಾನಿಸಲಾಯಿತು.

ಗುಣಮಟ್ಟದ ಆಹಾರಧಾನ್ಯಗಳನ್ನು ವಿತರಿಸಿ : ಪ್ರಸ್ತುತ ತಲಾ 1650 ರೂ. ಪ್ರೀ ಮೆಟ್ರಿಕ್, 1750 ರೂ.ಗಳನ್ನು ಪೋಸ್ಟ್ ಮೆಟ್ರಿಕ್ ಮಕ್ಕಳಿಗೆ ಆಹಾರಧಾನ್ಯಗಳಿಗಾಗಿ ನಿಗದಿಪಡಿಸಿದೆ. ರಾಗಿ, ಧಾನ್ಯ, ಎಣ್ಣೆಯನ್ನು ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ತಾಲೂಕುವಾರು ಪ್ಯಾಕೇಜ್​ಗಳ ಟೆಂಡರ್ ಕರೆದು ಪಡೆಯಲಾಗುತ್ತಿದೆ. ಈ ವ್ಯವಸ್ಥೆಯನ್ನು ಸರಿಪಡಿಸಿ ಗುಣಮಟ್ಟದ ಆಹಾರ ಪದಾರ್ಥಗಳನ್ನು ಒದಗಿಸಬೇಕು ಎಂದು ಸಿಎಂ ಸೂಚಿಸಿದರು.

ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಟೆಂಡರ್ ಕರೆಯುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಲು ಪ್ರಸ್ತಾವನೆ ಸಲ್ಲಿಸುವಂತೆ ಹಾಗೂ ಆಹಾರಧ್ಯಾನ ಪಡೆಯುವ ಕುರಿತ ಸಾಫ್ಟ್​ವೇರ್ ಅಭಿವೃದ್ಧಿ ಪಡಿಸಬೇಕು. ಮೈಸೂರು ಜಿಲ್ಲೆಯ ಬುಡಕಟ್ಟು ವಿದ್ಯಾರ್ಥಿನಿಲಯಕ್ಕೆ ಟೆಂಡರ್ ಅವಧಿ ಮುಕ್ತಾಯವಾಗಿದ್ಧು, ಆಹಾರ ಧಾನ್ಯಗಳ ಟೆಂಡರ್ ಕರೆಯುವಂತೆ ತಿಳಿಸಿದರು.

ಹೋಬಳಿಗೊಂದರಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಶಾಲೆ ಇರಬೇಕು ಎಂದು ಆದೇಶಿಸಿದ್ದು, 178 ಹೋಬಳಿಗಳಲ್ಲಿ ಕ್ರೈಸ್ ಶಾಲೆಗಳಿಲ್ಲ. ಕೆಲವು ಹೋಬಳಿಗಳಲ್ಲಿ 3-4 ಶಾಲೆಗಳಿವೆ. ಕಸಬಾ ಹೋಬಳಿ ತೆಗೆದರೆ 134 ಶಾಲೆಗಳನ್ನು ತೆರೆಯಬೇಕಿದೆ. ಸ್ವಂತ ಕಟ್ಟಡ ಇಲ್ಲದ ಶಾಲೆಗಳಿದ್ದರೆ ಅದೇ ಕ್ಷೇತ್ರದ ಮತ್ತೊಂದು ಹೋಬಳಿಗೆ ಶಾಲೆಯನ್ನು ಸ್ಥಳಾಂತರ ಮಾಡುವಂತೆ ಸೂಚಿಸಿದರು.

ಗುಣಮಟ್ಟದ ಶಿಕ್ಷಣ ಕಡ್ಡಾಯ: ಮೊರಾರ್ಜಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವಂತೆ ಸೂಚಿಸಿದ್ದು, ಶಿಕ್ಷಕರ ಗುಣಮಟ್ಟವೂ ಮುಖ್ಯ. ಶಿಕ್ಷಕರಿಗೆ ತರಬೇತಿ (ಓರಿಯೆಂಟೇಷನ್) ಕಾರ್ಯಕ್ರಮ ನೀಡಿ ಗುಣಮಟ್ಟದ ಶಿಕ್ಷಣ ನೀಡುವ ಮಟ್ಟಕ್ಕೆ ತರಬೇಕು. ಐಸೆಕ್ ಮತ್ತು ಐ ಐ ಎಸ್ ಸಿ ಸಂಸ್ಥೆಗಳ ಮೂಲಜ ಕ್ರೈಸ್ ಶಾಲೆಗಳ ಶಿಕ್ಷಕರ ಮೌಲ್ಯಮಾಪನ ಮಾಡಬೇಕು. ಶಾಲೆಗೆ ಪ್ರವೇಶ ನೀಡುವ ಸಂದರ್ಭದಲ್ಲಿ ಶೇ. 80 ರಷ್ಟು ಅರ್ಹತೆಯಾಧಾರದ ಮೇಲೆ ಹಾಗೂ ಶೇ. 20 ರಷ್ಟು ಸ್ಥಳೀಯರಿಗೆ ಮೀಸಲಿಡಬೇಕು. ಈ ನಿಟ್ಟಿನಲ್ಲಿ ಸಾಧಕ ಬಾಧಕಗಳನ್ನು ಪರಿಶೀಲಿಸಬೇಕು. ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎನ್ನುವುದು ಪ್ರಥಮ ಆದ್ಯತೆಯಾಗಿರಲಿ ಎಂದು ಹೇಳಿದರು.

ಯಾರೂ ದಡ್ಡರಲ್ಲ : ಇವತ್ತು ಯಾವ ಮಕ್ಕಳೂ ದಡ್ಡರಲ್ಲ, ಅವಕಾಶ ಮತ್ತು ಉತ್ತಮ ಕಲಿಕೆಯ ವಾತಾವರಣ ಸಿಕ್ಕರೆ ಎಲ್ಲರೂ ರ‍್ಯಾಂಕ್ ಪಡೆಯುತ್ತಾರೆ. ಕಲಿಕೆಯ ವಾತಾವರಣ ಪರಿಣಾಮ ಬೀರುತ್ತದೆ. ಮೊರಾರ್ಜಿ ಶಾಲೆಗಳನ್ನು ಪ್ರಾರಂಭಿಸಿದ್ದೇ ಬಡವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು, ದಡ್ಡರನ್ನು ಜಾಣರನ್ನಾಗಿ ಮಾಡಬೇಕೆಂಬ ಉದ್ದೇಶದಿಂದ. ಇದನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡುವಂತೆ ಸಿಎಂ ಸೂಚಿಸಿದರು.

ಇದನ್ನೂ ಓದಿ : ಕಾವೇರಿ ವಿವಾದ: ಸುಪ್ರೀಂ ಕೋರ್ಟ್​ನ ನಿವೃತ್ತ ನ್ಯಾಯಮೂರ್ತಿಗಳೊಂದಿಗೆ ಸಭೆ ನಡೆಸುತ್ತೇನೆ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.