ETV Bharat / state

ಚುನಾವಣಾ ಅಖಾಡದಲ್ಲಿ ಮಹಿಳೆಯರು: ಗೆದ್ದವರಾರು, ಬಿದ್ದವರಾರು?

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ 184 ಮಂದಿ ಮಹಿಳಾ ಅಭ್ಯರ್ಥಿಗಳು ಅಖಾಡದಲ್ಲಿದ್ದರು.

author img

By

Published : May 13, 2023, 8:51 AM IST

Updated : May 13, 2023, 5:57 PM IST

womens candidate
ಅಖಾಡದಲ್ಲಿ 184 ನಾರಿಯರು

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ 184 ಮಹಿಳಾ ಅಭ್ಯರ್ಥಿಗಳು ಎಲೆಕ್ಷನ್​ನಲ್ಲಿ ಸ್ಪರ್ಧಿಸಿದ್ದರು. ಇದರಲ್ಲಿ ಕಾಂಗ್ರೆಸ್​ 11, ಬಿಜೆಪಿ 12, ಜೆಡಿಎಸ್​ 13 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಫಲಿತಾಂಶದಲ್ಲಿ ಹಾಲಿ ಶಾಸಕಿಯರಲ್ಲಿ ಸೌಮ್ಯಾ ರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ್​, ಎಂ.ರೂಪ ಕಲಾ, ಖನೀಜಾ ಫಾತಿಮಾ, ಶಶಿಕಲಾ ಜೊಲ್ಲೆ ಗೆಲುವಿನ ನಗೆ ಬೀರಿದ್ದಾರೆ. ಡಾ.ಅಂಜಲಿ ನಿಂಬಾಳ್ಕರ್​, ಕುಸುಮಾ ಎಚ್, ಪೂರ್ಣಿಮಾ ಶ್ರೀನಿವಾಸ್​, ರೂಪಾಲಿ ನಾಯ್ಕ್ ಸ್ಪರ್ಧೆಯಲ್ಲಿ ಸೋತು ಅಧಿಕಾರ ಕಳೆದುಕೊಂಡಿದ್ದಾರೆ.

ಸೌಮ್ಯಾ ರೆಡ್ಡಿ: ಕಾಂಗ್ರೆಸ್​ ಹಿರಿಯ ರಾಜಕಾರಣಿ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಅವರು ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಇವರು ಜಯನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕಿ. 2018 ರ ಚುನಾವಣೆಯಲ್ಲಿ ಬಿಜೆಪಿಯ ಬಿ.ಎನ್.ಪ್ರಹ್ಲಾದ್​ ಬಾಬು ಅವರ ವಿರುದ್ಧ 2 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಸಿ.ಕೆ.ರಾಮಮೂರ್ತಿ ಅವರ ವಿರುದ್ಧ ಸ್ಪರ್ಧಿಸಿದ್ದು, ಸೌಮ್ಯಾ ರೆಡ್ಡಿ 9000 ಮತಗಳ ಅಂತರದಿಂದ ಗೆದ್ದಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್​: ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್​ ಅವರು, 2ನೇ ಸಲ ಅಖಾಡಕ್ಕಿಳಿದು ಗೆಲುವು ಸಾಧಿಸಿದ್ದಾರೆ. ಈ ಬಾರಿ ಬಿಜೆಪಿ ಅಭ್ಯರ್ಥಿ ನಾಗೇಶ್​ ಮುನ್ನೋಳ್​ಕರ್​ ಅವರ ವಿರುದ್ಧ 56 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿ ಮತ್ತೊಮ್ಮೆ ಶಾಸಕಿಯಾಗಿದ್ದಾರೆ. 2018 ರ ಚುನಾವಣೆಯಲ್ಲಿ ಬಿಜೆಪಿಯ ಸಂಜಯ್​ ಪಾಟೀಲ್​ ಅವರ ವಿರುದ್ಧ ಗೆಲುವು ಸಾಧಿಸಿ ಶಾಸಕಿಯಾಗಿದ್ದರು. 2013 ರ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿದು ಸೋಲನುಭವಿಸಿದ್ದರು. 2014 ಲೋಕಸಭೆ ಚುನಾವಣೆಯಲ್ಲಿ ಕೇಂದ್ರದ ಮಾಜಿ ಸಚಿವ ದಿವಂಗತ ಸುರೇಶ್​ ಅಂಗಡಿ ಅವರ ವಿರುದ್ಧ ಸೋತಿದ್ದರು.

ಡಾ.ಅಂಜಲಿ ನಿಂಬಾಳ್ಕರ್​: ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರ ಪತ್ನಿ, ಕಾಂಗ್ರೆಸ್​ ಪಕ್ಷದ ಹಾಲಿ ಶಾಸಕಿಯಾಗಿರುವ ಡಾ.ಅಂಜಲಿ ನಿಂಬಾಳ್ಕರ್​ 39 ಸಾವಿರ ಮತಗಳಿಂದ ಸೋತಿದ್ದಾರೆ. ಖಾನಾಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಂಜಲಿ, ಬಿಜೆಪಿ ಪಕ್ಷದ ವಿಠ್ಠಲ್​ ಹಳಗೇಕರ್ ವಿರುದ್ಧ ಹೀನಾಯ ಸೋಲು ಕಂಡಿದ್ದಾರೆ.​ ಇವರು 2018 ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಗೆದ್ದ ಇಬ್ಬರು ಶಾಸಕಿಯರಲ್ಲಿ ಇವರೂ ಒಬ್ಬರು. ​

ಎಂ.ರೂಪ ಕಲಾ: ಎಂ.ರೂಪ ಕಲಾ ಶಶಿಧರ್​ ಅವರು ಕೋಲಾರದ ಕೆಜಿಎಫ್​ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ನ ಹಾಲಿ ಶಾಸಕಿಯಾಗಿದ್ದು, ಈ ಬಾರಿಯೂ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಕೇಂದ್ರದ ಮಾಜಿ ಸಚಿವ ಮುನಿಯಪ್ಪ ಅವರ ಪುತ್ರಿಯಾದ ರೂಪಕಲಾ 2018 ರ ಚುನಾವಣೆಯಲ್ಲಿ ಮೊದಲ ಬಾರಿಗೆ ಕೆಜಿಎಫ್​ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ವಿಧಾನಸಭೆ ಪ್ರವೇಶಿಸಿದ್ದರು. ಈ ಬಾರಿಯೂ ಅದೇ ಕ್ಷೇತ್ರದಿಂದ ಮತ್ತೆ ಅಖಾಡಕ್ಕಿಳಿದಿದ್ದರು. ಕಳೆದ ಬಾರಿ ಅಶ್ವಿನಿ ಸಂಪಂಗಿ ಅವರ ವಿರುದ್ಧ ಗೆದ್ದಿದ್ದರು. ಈ ಬಾರಿಯೂ ಅಶ್ವಿನಿ ಸಂಪಂಗಿ ವಿರುದ್ಧವೇ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.

ಖನೀಜಾ ಫಾತಿಮಾ: ಮಾಜಿ ಸಚಿವ ದಿವಂಗತ ಖಮರುಲ್​ ಇಸ್ಲಾಂ ಅವರ ಪತ್ನಿ ಖನೀಜಾ ಫಾತಿಮಾ ಅವರು ಕಲಬುರಗಿ ಉತ್ತರ ಕ್ಷೇತ್ರದ ಹಾಲಿ ಶಾಸಕಿ. ಈ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸಿ ತಮ್ಮ ಅಧಿಕಾರವನ್ನು ಉಳಿಸಿಕೊಂಡಿದ್ದಾರೆ. ಖಮರುಲ್​ ಇಸ್ಲಾಂ ಅವರ ನಿಧನದ ಕಾಂಗ್ರೆಸ್​ ನಾಯಕರ ಒತ್ತಾಸೆ ಮೇರೆಗೆ ಅವರು 2018 ರಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಬಿಜೆಪಿಯ ಚಂದ್ರಕಾಂತ್​ ಪಾಟೀಲ್​ ಅವರ ವಿರುದ್ಧ 5 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಈ ಬಾರಿಯೂ ಅವರು ಅದೇ ಕ್ಷೇತ್ರದಲ್ಲಿ ಚಂದ್ರಕಾಂತ್​ ಪಾಟೀಲ್ ವಿರುದ್ಧ​ 2 ಸಾವಿರ ಮತಗಳ ಅಂತರದಿಂದ ಜಯಿಸಿದ್ದಾರೆ.

ಕುಸುಮಾ ಎಚ್​: ಕುಸುಮಾ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದಿಂದ ಮತ್ತೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದಾರೆ. 2020 ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಮುನಿರತ್ನ ಅವರ ವಿರುದ್ಧಅವರು ಸೋಲು ಕಂಡಿದ್ದರು. ಈ ಬಾರಿ ಅದೇ ಕ್ಷೇತ್ರದಿಂದ ಮತ್ತೆ ಅಖಾಡಕ್ಕಿಳಿದಿದ್ದು, ಮುನಿರತ್ನ ವಿರುದ್ಧವೇ ಸೆಣಸಾಟ ನಡೆಸಿದ್ದರು. ಕುಸುಮಾರ ಯಾವುದೇ ಪ್ರಯತ್ನವೂ ಕ್ಷೇತ್ರದಲ್ಲಿ ಫಲಿಸದೆ, 11 ಸಾವಿರ ಮತಗಳ ಅಂತರದಿಂದ ಸೋಲುಂಡಿದ್ದಾರೆ.

ಪ್ರಭಾವತಿ ಮಸ್ತಮರಡಿ: ಬೆಳಗಾವಿ ದಕ್ಷಿಣದಲ್ಲಿ ಈ ಬಾರಿ ಕಾಂಗ್ರೆಸ್​​ ಪ್ರಭಾವತಿ ಮಸ್ತಮರಡಿ ಅವರಿಗೆ ಟಿಕೆಟ್ ನೀಡಲಾಗಿತ್ತು. ಇಲ್ಲಿ ಬಿಜೆಪಿಯ ಹಾಲಿ ಶಾಸಕರಾಗಿದ್ದ ಅಭಯ ಪಾಟೀಲ್​, ಪ್ರಭಾವತಿ ಅವರಿಗೆ ಪ್ರಬಲ ಪೈಪೋಟಿ ನೀಡಿ ಅವರನ್ನು ಸೋಲಿಸಿದ್ದಾರೆ. ಹೀಗಾಗಿ ಮಸ್ತಮರಡಿ 64 ಸಾವಿರ ಮತಗಳ ಅಂತರದಿಂದ ಹೀನಾಯ ಸೋಲು ಕಂಡಿದ್ದಾರೆ.

ಶಶಿಕಲಾ ಜೊಲ್ಲೆ: ನಿಪ್ಪಾಣಿ ಕ್ಷೇತ್ರದ ಹಾಲಿ ಶಾಸಕಿ ಆಗಿರುವ ಶಶಿಕಲಾ ಜೊಲ್ಲೆ ಬಿಜೆಪಿ ಸರ್ಕಾರದ ಏಕೈಕ ಮಹಿಳಾ ಸಚಿವೆ ಮತ್ತೊಮ್ಮೆ ಶಾಸಕಿಯಾಗಿ ಮಿಂಚಿದ್ದಾರೆ. 2008 ರಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಬಳಿಕ 2013ರ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 2018 ರಲ್ಲಿ ಸತತ 2ನೇ ಬಾರಿಗೆ ಆಯ್ಕೆಯಾಗಿ ಮಾಜಿ ಸಿಎಂ ಬಿ.ಎಸ್.​ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಸಚಿವೆಯಾಗಿ ಕೆಲಸ ಮಾಡಿದ್ದರು. ಈ ಬಾರಿ ಮತ್ತೆ ನಿಪ್ಪಾಣಿ ಕ್ಷೇತ್ರದಿಂದ ಮೂರನೇ ಬಾರಿಗೆ ಸ್ಪರ್ಧಿಸಿ ಜಯ ಸಾಧಿಸಿದ್ದಾರೆ. ಈ ಬಾರಿಯೂ ಕಾಂಗ್ರೆಸ್​ನ ಕಾಕಾ ಸಾಹೇಬ ಪಾಟೀಲ್​ ವಿರುದ್ಧ 29 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.

ಪೂರ್ಣಿಮಾ ಶ್ರೀನಿವಾಸ್: ಚಿತ್ರದುರ್ಗದ ಹಿರಿಯೂರು ಕ್ಷೇತ್ರದ ಹಾಲಿ ಶಾಸಕಿಯಾಗಿರುವ ಪೂರ್ಣಿಮಾ ಶ್ರೀನಿವಾಸ್​ ಚುನಾವಣೆಯಲ್ಲಿ ಸೋತು ತಮ್ಮ ಅಧಿಕಾರವನ್ನು ಕಳೆದುಕೊಂಡಿದ್ದಾರೆ. 2018 ರಲ್ಲಿ ಕಾಂಗ್ರೆಸ್​ ಅಭ್ಯರ್ಥಿ ವಿರುದ್ಧ 12 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಕೈ ಅಭ್ಯರ್ಥಿ ಸುಧಾಕರ್​ ವಿರುದ್ಧ ಸೋತಿದ್ದಾರೆ.

ರೂಪಾಲಿ ನಾಯ್ಕ್: ಉತ್ತರ ಕನ್ನಡ ಜಿಲ್ಲೆಯ ಕಾರವಾರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕಿಯಾಗಿರುವ ರೂಪಾಲಿ ನಾಯ್ಕ್​ ಈ ಬಾರಿ ಸೋಲುಂಡಿದ್ದಾರೆ. 2018 ರ ಚುನಾವಣೆಯಲ್ಲಿ ಕಾಂಗ್ರೆಸ್​ನ ಆನಂದ್​ ಅಸ್ನೋಟಿಕರ್​ ವಿರುದ್ಧ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಬಾರಿಯೂ ಕಣಕ್ಕಿಳಿದು ಕಾಂಗ್ರೆಸ್​ ಅಭ್ಯರ್ಥಿ ಸತೀಶ್​ ಕೃಷ್ಣ ವಿರುದ್ಧ 2 ಸಾವಿರ ಮತಗಳಿಂದ ಅಧಿಕಾರ ಕಳೆದುಕೊಂಡಿದ್ದಾರೆ.

ಮಂಜುಳಾ ಅರವಿಂದ್​: ಈ ಬಾರಿಯ ಚುನಾವಣೆಗೆ ಬಿಜೆಪಿಯಲ್ಲಿ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಒರ್ವ ಮಹಿಳೆಗೆ ಮಾತ್ರ ಟಿಕೆಟ್​ ನೀಡಲಾಗಿತ್ತು. ಮಹದೇವಪುರ ಕ್ಷೇತ್ರದಲ್ಲಿ ಹಾಲಿ ಶಾಸಕ, ಮಾಜಿ ಸಚಿವ ಅರವಿಂದ ಲಿಂಬಾವಳಿ ಬದಲು ಅವರ ಪತ್ನಿ ಮಂಜುಳಾ ಅವರನ್ನು ಕಣಕ್ಕೆ ಇಳಿಸಲಾಗಿತ್ತು. ಅವಕಾಶವನ್ನು ಸದುಪಯೋಗಪಡಿಸಿಕೊಂಡ ಮಂಜುಳಾ 44 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್​ ಅಭ್ಯರ್ಥಿ ನಾಗೇಶ್​ ವಿರುದ್ಧ ಗೆದ್ದಿದ್ದಾರೆ.

ರತ್ನಾ ಮಾಮನಿ: ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕರಾಗಿದ್ದ ಆನಂದ ಮಾಮನಿ ಅವರ ಅಕಾಲಿಕ ನಿಧನದಿಂದಾಗಿ ಅವರ ಪತ್ನಿ ರತ್ನಾ ಮಾಮನಿ ಅವರು ಬಿಜೆಪಿಯಿಂದ ಚುನಾವಣಾ ರಾಜಕೀಯಕ್ಕೆ ಎಂಟ್ರಿ ನೀಡಿದ್ದರು. ಮೊದಲ ಬಾರಿಗೆ ಅವರು ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧೆ ಮಾಡಿದ್ದು, ಸೋಲು ಕಂಡಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ವಿಶ್ವಾಸ್​ ವಸಂತ್​ ವಿರುದ್ಧ 14 ಸಾವಿರ ಮತಗಳ ಅಂತರದಿಂದ ಅಧಿಕಾರ ಕಳೆದುಕೊಂಡಿದ್ದಾರೆ.

ಅಶ್ವಿನಿ ಸಿಂಗಯ್ಯ ಪೂಜೆರಾ: ರಾಷ್ಟ್ರೀಯ ಪಕ್ಷಗಳ ಭರಾಟೆಯ ಜೊತೆಗೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಕೂಡ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಕಿತ್ತೂರು ಕ್ಷೇತ್ರದಿಂದ ಅಶ್ವಿನಿ ಸಿಂಗಯ್ಯ ಪೂಜೆರಾ ಅವರನ್ನು ಅಭ್ಯರ್ಥಿಯನ್ನಾಗಿ ನಿಲ್ಲಿಸಿತ್ತು. ಆದರೆ ಇವರು ಕೇವಲ 775 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

ಅನುರಾಧಾ: ಜೆಡಿಎಸ್ ಪಕ್ಷದಿಂದ ಅನುರಾಧ ಎಂಬುವರನ್ನು ಪುಲಿಕೇಶಿನಗರ ಕ್ಷೇತ್ರದಿಂದ ಅಭ್ಯರ್ಥಿಯಾಗಿ ನಿಲ್ಲಿಸಲಾಗಿತ್ತು. ಇವರು ಕೇವಲ 884 ಮತಗಳನ್ನು ಪಡೆದು ಬಿಜೆಪಿ ಮತ್ತು ಕಾಂಗ್ರೆಸ್​ಗೆ ಯಾವುದೇ ಪೈಪೋಟಿ ನೀಡದೆ ಸೋತಿದ್ದಾರೆ.

ಭಾಗೀರಥಿ ಮುರುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿ ಕ್ಷೇತ್ರದಲ್ಲಿ ಅವರೇ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಕೃಷ್ಣಪ್ಪ ರಾಮಕುಂಜ ವಿರುದ್ಧ 28 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಜ್ಯೋತಿ ಗಣೇಶ್​: ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಬಿ ಜ್ಯೋತಿ ಗಣೇಶ್ ಗೆಲುವು ಸಾಧಿಸಿದ್ದಾರೆ. ಜೆಡಿಎಸ್​ ಅಭ್ಯರ್ಥಿ ಗೋವಿಂದರಾಜು ವಿರುದ್ಧ 3 ಸಾವಿರ ಮತಗಳ ಅಂತರದಿಂದ ಜಯಿಸಿದ್ದಾರೆ.​

ಆಶಾ ತಿಮ್ಮಪ್ಪ: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಪೈಪೋಟಿಯಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಸೋಲುಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಅರುಣ್​ ಕುಮಾರ್​ ಪುತ್ತಿಲ ಅವರಿಗಿಂತ ಹೆಚ್ಚು ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಅಶೋಕ್​ ರೈ ಗೆದ್ದಿದ್ದಾರೆ.

ನಯನಾ ಮೊಟ್ಟಮ್ಮ: ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ನಯನಾ ಮೊಟ್ಟಮ್ಮ ಗೆದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ ದೀಪಕ್​ ದೊಡ್ಡಯ್ಯ ವಿರುದ್ಧ ಭಾರಿ ಪೈಪೋಟಿಯೊಂದಿಗೆ 1 ಸಾವಿರ ಮತಗಳಿಂದ ಜಯಿಸಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 219 ಮಹಿಳಾ ಅಭ್ಯರ್ಥಿಗಳ ಪೈಕಿ ಆರು ಮಹಿಳಾ ಅಭ್ಯರ್ಥಿಗಳು ಮಾತ್ರ ಆಯ್ಕೆಯಾಗಿದ್ದರು. ಈ ಬಾರಿ 184 ಅಭ್ಯರ್ಥಿಗಳಲ್ಲಿ 9 ಮಹಿಳಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅವರಲ್ಲಿ 5 ಮಂದಿ ಹಾಲಿ ಶಾಸಕಿಯರಾಗಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರದ ಏಳು-ಬೀಳಿನ ಕತೆ ಏನು? ಮೈತ್ರಿ ಸರ್ಕಾರದ ಆಸಕ್ತಿಕರ ಸಂಗತಿ!

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ 184 ಮಹಿಳಾ ಅಭ್ಯರ್ಥಿಗಳು ಎಲೆಕ್ಷನ್​ನಲ್ಲಿ ಸ್ಪರ್ಧಿಸಿದ್ದರು. ಇದರಲ್ಲಿ ಕಾಂಗ್ರೆಸ್​ 11, ಬಿಜೆಪಿ 12, ಜೆಡಿಎಸ್​ 13 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಫಲಿತಾಂಶದಲ್ಲಿ ಹಾಲಿ ಶಾಸಕಿಯರಲ್ಲಿ ಸೌಮ್ಯಾ ರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ್​, ಎಂ.ರೂಪ ಕಲಾ, ಖನೀಜಾ ಫಾತಿಮಾ, ಶಶಿಕಲಾ ಜೊಲ್ಲೆ ಗೆಲುವಿನ ನಗೆ ಬೀರಿದ್ದಾರೆ. ಡಾ.ಅಂಜಲಿ ನಿಂಬಾಳ್ಕರ್​, ಕುಸುಮಾ ಎಚ್, ಪೂರ್ಣಿಮಾ ಶ್ರೀನಿವಾಸ್​, ರೂಪಾಲಿ ನಾಯ್ಕ್ ಸ್ಪರ್ಧೆಯಲ್ಲಿ ಸೋತು ಅಧಿಕಾರ ಕಳೆದುಕೊಂಡಿದ್ದಾರೆ.

ಸೌಮ್ಯಾ ರೆಡ್ಡಿ: ಕಾಂಗ್ರೆಸ್​ ಹಿರಿಯ ರಾಜಕಾರಣಿ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ ಅವರು ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಇವರು ಜಯನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕಿ. 2018 ರ ಚುನಾವಣೆಯಲ್ಲಿ ಬಿಜೆಪಿಯ ಬಿ.ಎನ್.ಪ್ರಹ್ಲಾದ್​ ಬಾಬು ಅವರ ವಿರುದ್ಧ 2 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಸಿ.ಕೆ.ರಾಮಮೂರ್ತಿ ಅವರ ವಿರುದ್ಧ ಸ್ಪರ್ಧಿಸಿದ್ದು, ಸೌಮ್ಯಾ ರೆಡ್ಡಿ 9000 ಮತಗಳ ಅಂತರದಿಂದ ಗೆದ್ದಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್​: ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್​ ಅವರು, 2ನೇ ಸಲ ಅಖಾಡಕ್ಕಿಳಿದು ಗೆಲುವು ಸಾಧಿಸಿದ್ದಾರೆ. ಈ ಬಾರಿ ಬಿಜೆಪಿ ಅಭ್ಯರ್ಥಿ ನಾಗೇಶ್​ ಮುನ್ನೋಳ್​ಕರ್​ ಅವರ ವಿರುದ್ಧ 56 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿ ಮತ್ತೊಮ್ಮೆ ಶಾಸಕಿಯಾಗಿದ್ದಾರೆ. 2018 ರ ಚುನಾವಣೆಯಲ್ಲಿ ಬಿಜೆಪಿಯ ಸಂಜಯ್​ ಪಾಟೀಲ್​ ಅವರ ವಿರುದ್ಧ ಗೆಲುವು ಸಾಧಿಸಿ ಶಾಸಕಿಯಾಗಿದ್ದರು. 2013 ರ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿದು ಸೋಲನುಭವಿಸಿದ್ದರು. 2014 ಲೋಕಸಭೆ ಚುನಾವಣೆಯಲ್ಲಿ ಕೇಂದ್ರದ ಮಾಜಿ ಸಚಿವ ದಿವಂಗತ ಸುರೇಶ್​ ಅಂಗಡಿ ಅವರ ವಿರುದ್ಧ ಸೋತಿದ್ದರು.

ಡಾ.ಅಂಜಲಿ ನಿಂಬಾಳ್ಕರ್​: ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರ ಪತ್ನಿ, ಕಾಂಗ್ರೆಸ್​ ಪಕ್ಷದ ಹಾಲಿ ಶಾಸಕಿಯಾಗಿರುವ ಡಾ.ಅಂಜಲಿ ನಿಂಬಾಳ್ಕರ್​ 39 ಸಾವಿರ ಮತಗಳಿಂದ ಸೋತಿದ್ದಾರೆ. ಖಾನಾಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಂಜಲಿ, ಬಿಜೆಪಿ ಪಕ್ಷದ ವಿಠ್ಠಲ್​ ಹಳಗೇಕರ್ ವಿರುದ್ಧ ಹೀನಾಯ ಸೋಲು ಕಂಡಿದ್ದಾರೆ.​ ಇವರು 2018 ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಗೆದ್ದ ಇಬ್ಬರು ಶಾಸಕಿಯರಲ್ಲಿ ಇವರೂ ಒಬ್ಬರು. ​

ಎಂ.ರೂಪ ಕಲಾ: ಎಂ.ರೂಪ ಕಲಾ ಶಶಿಧರ್​ ಅವರು ಕೋಲಾರದ ಕೆಜಿಎಫ್​ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ನ ಹಾಲಿ ಶಾಸಕಿಯಾಗಿದ್ದು, ಈ ಬಾರಿಯೂ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಕೇಂದ್ರದ ಮಾಜಿ ಸಚಿವ ಮುನಿಯಪ್ಪ ಅವರ ಪುತ್ರಿಯಾದ ರೂಪಕಲಾ 2018 ರ ಚುನಾವಣೆಯಲ್ಲಿ ಮೊದಲ ಬಾರಿಗೆ ಕೆಜಿಎಫ್​ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ವಿಧಾನಸಭೆ ಪ್ರವೇಶಿಸಿದ್ದರು. ಈ ಬಾರಿಯೂ ಅದೇ ಕ್ಷೇತ್ರದಿಂದ ಮತ್ತೆ ಅಖಾಡಕ್ಕಿಳಿದಿದ್ದರು. ಕಳೆದ ಬಾರಿ ಅಶ್ವಿನಿ ಸಂಪಂಗಿ ಅವರ ವಿರುದ್ಧ ಗೆದ್ದಿದ್ದರು. ಈ ಬಾರಿಯೂ ಅಶ್ವಿನಿ ಸಂಪಂಗಿ ವಿರುದ್ಧವೇ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.

ಖನೀಜಾ ಫಾತಿಮಾ: ಮಾಜಿ ಸಚಿವ ದಿವಂಗತ ಖಮರುಲ್​ ಇಸ್ಲಾಂ ಅವರ ಪತ್ನಿ ಖನೀಜಾ ಫಾತಿಮಾ ಅವರು ಕಲಬುರಗಿ ಉತ್ತರ ಕ್ಷೇತ್ರದ ಹಾಲಿ ಶಾಸಕಿ. ಈ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸಿ ತಮ್ಮ ಅಧಿಕಾರವನ್ನು ಉಳಿಸಿಕೊಂಡಿದ್ದಾರೆ. ಖಮರುಲ್​ ಇಸ್ಲಾಂ ಅವರ ನಿಧನದ ಕಾಂಗ್ರೆಸ್​ ನಾಯಕರ ಒತ್ತಾಸೆ ಮೇರೆಗೆ ಅವರು 2018 ರಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಬಿಜೆಪಿಯ ಚಂದ್ರಕಾಂತ್​ ಪಾಟೀಲ್​ ಅವರ ವಿರುದ್ಧ 5 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಈ ಬಾರಿಯೂ ಅವರು ಅದೇ ಕ್ಷೇತ್ರದಲ್ಲಿ ಚಂದ್ರಕಾಂತ್​ ಪಾಟೀಲ್ ವಿರುದ್ಧ​ 2 ಸಾವಿರ ಮತಗಳ ಅಂತರದಿಂದ ಜಯಿಸಿದ್ದಾರೆ.

ಕುಸುಮಾ ಎಚ್​: ಕುಸುಮಾ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದಿಂದ ಮತ್ತೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದಾರೆ. 2020 ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಮುನಿರತ್ನ ಅವರ ವಿರುದ್ಧಅವರು ಸೋಲು ಕಂಡಿದ್ದರು. ಈ ಬಾರಿ ಅದೇ ಕ್ಷೇತ್ರದಿಂದ ಮತ್ತೆ ಅಖಾಡಕ್ಕಿಳಿದಿದ್ದು, ಮುನಿರತ್ನ ವಿರುದ್ಧವೇ ಸೆಣಸಾಟ ನಡೆಸಿದ್ದರು. ಕುಸುಮಾರ ಯಾವುದೇ ಪ್ರಯತ್ನವೂ ಕ್ಷೇತ್ರದಲ್ಲಿ ಫಲಿಸದೆ, 11 ಸಾವಿರ ಮತಗಳ ಅಂತರದಿಂದ ಸೋಲುಂಡಿದ್ದಾರೆ.

ಪ್ರಭಾವತಿ ಮಸ್ತಮರಡಿ: ಬೆಳಗಾವಿ ದಕ್ಷಿಣದಲ್ಲಿ ಈ ಬಾರಿ ಕಾಂಗ್ರೆಸ್​​ ಪ್ರಭಾವತಿ ಮಸ್ತಮರಡಿ ಅವರಿಗೆ ಟಿಕೆಟ್ ನೀಡಲಾಗಿತ್ತು. ಇಲ್ಲಿ ಬಿಜೆಪಿಯ ಹಾಲಿ ಶಾಸಕರಾಗಿದ್ದ ಅಭಯ ಪಾಟೀಲ್​, ಪ್ರಭಾವತಿ ಅವರಿಗೆ ಪ್ರಬಲ ಪೈಪೋಟಿ ನೀಡಿ ಅವರನ್ನು ಸೋಲಿಸಿದ್ದಾರೆ. ಹೀಗಾಗಿ ಮಸ್ತಮರಡಿ 64 ಸಾವಿರ ಮತಗಳ ಅಂತರದಿಂದ ಹೀನಾಯ ಸೋಲು ಕಂಡಿದ್ದಾರೆ.

ಶಶಿಕಲಾ ಜೊಲ್ಲೆ: ನಿಪ್ಪಾಣಿ ಕ್ಷೇತ್ರದ ಹಾಲಿ ಶಾಸಕಿ ಆಗಿರುವ ಶಶಿಕಲಾ ಜೊಲ್ಲೆ ಬಿಜೆಪಿ ಸರ್ಕಾರದ ಏಕೈಕ ಮಹಿಳಾ ಸಚಿವೆ ಮತ್ತೊಮ್ಮೆ ಶಾಸಕಿಯಾಗಿ ಮಿಂಚಿದ್ದಾರೆ. 2008 ರಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಬಳಿಕ 2013ರ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. 2018 ರಲ್ಲಿ ಸತತ 2ನೇ ಬಾರಿಗೆ ಆಯ್ಕೆಯಾಗಿ ಮಾಜಿ ಸಿಎಂ ಬಿ.ಎಸ್.​ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಸಚಿವೆಯಾಗಿ ಕೆಲಸ ಮಾಡಿದ್ದರು. ಈ ಬಾರಿ ಮತ್ತೆ ನಿಪ್ಪಾಣಿ ಕ್ಷೇತ್ರದಿಂದ ಮೂರನೇ ಬಾರಿಗೆ ಸ್ಪರ್ಧಿಸಿ ಜಯ ಸಾಧಿಸಿದ್ದಾರೆ. ಈ ಬಾರಿಯೂ ಕಾಂಗ್ರೆಸ್​ನ ಕಾಕಾ ಸಾಹೇಬ ಪಾಟೀಲ್​ ವಿರುದ್ಧ 29 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ.

ಪೂರ್ಣಿಮಾ ಶ್ರೀನಿವಾಸ್: ಚಿತ್ರದುರ್ಗದ ಹಿರಿಯೂರು ಕ್ಷೇತ್ರದ ಹಾಲಿ ಶಾಸಕಿಯಾಗಿರುವ ಪೂರ್ಣಿಮಾ ಶ್ರೀನಿವಾಸ್​ ಚುನಾವಣೆಯಲ್ಲಿ ಸೋತು ತಮ್ಮ ಅಧಿಕಾರವನ್ನು ಕಳೆದುಕೊಂಡಿದ್ದಾರೆ. 2018 ರಲ್ಲಿ ಕಾಂಗ್ರೆಸ್​ ಅಭ್ಯರ್ಥಿ ವಿರುದ್ಧ 12 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಕೈ ಅಭ್ಯರ್ಥಿ ಸುಧಾಕರ್​ ವಿರುದ್ಧ ಸೋತಿದ್ದಾರೆ.

ರೂಪಾಲಿ ನಾಯ್ಕ್: ಉತ್ತರ ಕನ್ನಡ ಜಿಲ್ಲೆಯ ಕಾರವಾರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕಿಯಾಗಿರುವ ರೂಪಾಲಿ ನಾಯ್ಕ್​ ಈ ಬಾರಿ ಸೋಲುಂಡಿದ್ದಾರೆ. 2018 ರ ಚುನಾವಣೆಯಲ್ಲಿ ಕಾಂಗ್ರೆಸ್​ನ ಆನಂದ್​ ಅಸ್ನೋಟಿಕರ್​ ವಿರುದ್ಧ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಬಾರಿಯೂ ಕಣಕ್ಕಿಳಿದು ಕಾಂಗ್ರೆಸ್​ ಅಭ್ಯರ್ಥಿ ಸತೀಶ್​ ಕೃಷ್ಣ ವಿರುದ್ಧ 2 ಸಾವಿರ ಮತಗಳಿಂದ ಅಧಿಕಾರ ಕಳೆದುಕೊಂಡಿದ್ದಾರೆ.

ಮಂಜುಳಾ ಅರವಿಂದ್​: ಈ ಬಾರಿಯ ಚುನಾವಣೆಗೆ ಬಿಜೆಪಿಯಲ್ಲಿ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ಒರ್ವ ಮಹಿಳೆಗೆ ಮಾತ್ರ ಟಿಕೆಟ್​ ನೀಡಲಾಗಿತ್ತು. ಮಹದೇವಪುರ ಕ್ಷೇತ್ರದಲ್ಲಿ ಹಾಲಿ ಶಾಸಕ, ಮಾಜಿ ಸಚಿವ ಅರವಿಂದ ಲಿಂಬಾವಳಿ ಬದಲು ಅವರ ಪತ್ನಿ ಮಂಜುಳಾ ಅವರನ್ನು ಕಣಕ್ಕೆ ಇಳಿಸಲಾಗಿತ್ತು. ಅವಕಾಶವನ್ನು ಸದುಪಯೋಗಪಡಿಸಿಕೊಂಡ ಮಂಜುಳಾ 44 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್​ ಅಭ್ಯರ್ಥಿ ನಾಗೇಶ್​ ವಿರುದ್ಧ ಗೆದ್ದಿದ್ದಾರೆ.

ರತ್ನಾ ಮಾಮನಿ: ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕರಾಗಿದ್ದ ಆನಂದ ಮಾಮನಿ ಅವರ ಅಕಾಲಿಕ ನಿಧನದಿಂದಾಗಿ ಅವರ ಪತ್ನಿ ರತ್ನಾ ಮಾಮನಿ ಅವರು ಬಿಜೆಪಿಯಿಂದ ಚುನಾವಣಾ ರಾಜಕೀಯಕ್ಕೆ ಎಂಟ್ರಿ ನೀಡಿದ್ದರು. ಮೊದಲ ಬಾರಿಗೆ ಅವರು ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧೆ ಮಾಡಿದ್ದು, ಸೋಲು ಕಂಡಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ವಿಶ್ವಾಸ್​ ವಸಂತ್​ ವಿರುದ್ಧ 14 ಸಾವಿರ ಮತಗಳ ಅಂತರದಿಂದ ಅಧಿಕಾರ ಕಳೆದುಕೊಂಡಿದ್ದಾರೆ.

ಅಶ್ವಿನಿ ಸಿಂಗಯ್ಯ ಪೂಜೆರಾ: ರಾಷ್ಟ್ರೀಯ ಪಕ್ಷಗಳ ಭರಾಟೆಯ ಜೊತೆಗೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಕೂಡ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಕಿತ್ತೂರು ಕ್ಷೇತ್ರದಿಂದ ಅಶ್ವಿನಿ ಸಿಂಗಯ್ಯ ಪೂಜೆರಾ ಅವರನ್ನು ಅಭ್ಯರ್ಥಿಯನ್ನಾಗಿ ನಿಲ್ಲಿಸಿತ್ತು. ಆದರೆ ಇವರು ಕೇವಲ 775 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

ಅನುರಾಧಾ: ಜೆಡಿಎಸ್ ಪಕ್ಷದಿಂದ ಅನುರಾಧ ಎಂಬುವರನ್ನು ಪುಲಿಕೇಶಿನಗರ ಕ್ಷೇತ್ರದಿಂದ ಅಭ್ಯರ್ಥಿಯಾಗಿ ನಿಲ್ಲಿಸಲಾಗಿತ್ತು. ಇವರು ಕೇವಲ 884 ಮತಗಳನ್ನು ಪಡೆದು ಬಿಜೆಪಿ ಮತ್ತು ಕಾಂಗ್ರೆಸ್​ಗೆ ಯಾವುದೇ ಪೈಪೋಟಿ ನೀಡದೆ ಸೋತಿದ್ದಾರೆ.

ಭಾಗೀರಥಿ ಮುರುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿ ಕ್ಷೇತ್ರದಲ್ಲಿ ಅವರೇ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಕೃಷ್ಣಪ್ಪ ರಾಮಕುಂಜ ವಿರುದ್ಧ 28 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಜ್ಯೋತಿ ಗಣೇಶ್​: ತುಮಕೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಬಿ ಜ್ಯೋತಿ ಗಣೇಶ್ ಗೆಲುವು ಸಾಧಿಸಿದ್ದಾರೆ. ಜೆಡಿಎಸ್​ ಅಭ್ಯರ್ಥಿ ಗೋವಿಂದರಾಜು ವಿರುದ್ಧ 3 ಸಾವಿರ ಮತಗಳ ಅಂತರದಿಂದ ಜಯಿಸಿದ್ದಾರೆ.​

ಆಶಾ ತಿಮ್ಮಪ್ಪ: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಭಾರೀ ಪೈಪೋಟಿಯಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಸೋಲುಂಡಿದ್ದಾರೆ. ಪಕ್ಷೇತರ ಅಭ್ಯರ್ಥಿ ಅರುಣ್​ ಕುಮಾರ್​ ಪುತ್ತಿಲ ಅವರಿಗಿಂತ ಹೆಚ್ಚು ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಅಶೋಕ್​ ರೈ ಗೆದ್ದಿದ್ದಾರೆ.

ನಯನಾ ಮೊಟ್ಟಮ್ಮ: ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ನಯನಾ ಮೊಟ್ಟಮ್ಮ ಗೆದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ ದೀಪಕ್​ ದೊಡ್ಡಯ್ಯ ವಿರುದ್ಧ ಭಾರಿ ಪೈಪೋಟಿಯೊಂದಿಗೆ 1 ಸಾವಿರ ಮತಗಳಿಂದ ಜಯಿಸಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 219 ಮಹಿಳಾ ಅಭ್ಯರ್ಥಿಗಳ ಪೈಕಿ ಆರು ಮಹಿಳಾ ಅಭ್ಯರ್ಥಿಗಳು ಮಾತ್ರ ಆಯ್ಕೆಯಾಗಿದ್ದರು. ಈ ಬಾರಿ 184 ಅಭ್ಯರ್ಥಿಗಳಲ್ಲಿ 9 ಮಹಿಳಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಅವರಲ್ಲಿ 5 ಮಂದಿ ಹಾಲಿ ಶಾಸಕಿಯರಾಗಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರದ ಏಳು-ಬೀಳಿನ ಕತೆ ಏನು? ಮೈತ್ರಿ ಸರ್ಕಾರದ ಆಸಕ್ತಿಕರ ಸಂಗತಿ!

Last Updated : May 13, 2023, 5:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.