ETV Bharat / state

ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 40 ಮಕ್ಕಳು ಸೇರಿ 204 ಮಂದಿ ರಕ್ಷಣೆ

author img

By

Published : Feb 12, 2020, 3:45 AM IST

Updated : Feb 12, 2020, 7:02 AM IST

ಯಲಹಂಕ ತಾಲೂಕು ಹೆಸರಘಟ್ಟ ಹೊಬಳಿಯ ಕೊಂಡಶೆಟ್ಟಿಹಳ್ಳಿ ಗ್ರಾಮದಲ್ಲಿನ ಇಟ್ಟಿಗೆ ತಯಾರಿಕಾ ಕೇಂದ್ರದಲ್ಲಿ ಜೀತ ಕಾರ್ಯ ಮಾಡುತ್ತಿದ್ದ 204 ಜನರನ್ನು ರಕ್ಷಣೆ ಮಾಡಲಾಗಿದೆ.

Protection of laborers working in the system of slavery
Protection of laborers working in the system of slavery

ಬೆಂಗಳೂರು: ಜೀತಪದ್ಧತಿಯನ್ನು ಬುಡ ಸಮೇತ ನಿರ್ಮೂಲನೆ ಮಾಡಲು ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತಂದರೂ ಕೂಡ ಇನ್ನೂ ಈ ಅನಿಷ್ಠ ಪದ್ಧತಿ ತೊಡೆದುಹಾಕಲು ಸಾಧ್ಯವಾಗುತ್ತಿದ್ದಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಒಂದೇ ಸ್ಥಳದಲ್ಲಿ ಜೀತ ಕಾರ್ಯ ಮಾಡುತ್ತಿದ್ದ 204 ಜನರನ್ನು ರಕ್ಷಣೆ ಮಾಡಲಾಗಿದೆ.

ಜೀತ ವ್ಯವಸ್ಥೆಯಲ್ಲಿ ಕೆಲಸ ಮಾಡುವ ಕಾರ್ಮಿಕರ ರಕ್ಷಣೆ

ಯಲಹಂಕ ತಾಲೂಕು ಹೆಸರಘಟ್ಟ ಹೊಬಳಿಯ ಕೊಂಡಶೆಟ್ಟಿಹಳ್ಳಿ ಗ್ರಾಮದಲ್ಲಿನ ಇಟ್ಟಿಗೆ ತಯಾರಿಕಾ ಕೇಂದ್ರದಲ್ಲಿ 204 ಜನ ಕಾರ್ಮಿಕರನ್ನ ಕೂಡಿ ಹಾಕಿಕೊಂಡು ದುಡಿಸಿಕೊಳ್ಳಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ತಹಶೀಲ್ದಾರ್ ರಘುಮೂರ್ತಿ ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಅಧಿಕಾರಿಗಳು ಸೇರಿದಂತೆ ಪೊಲೀಸರ ತಂಡ ಇಟ್ಟಿಗೆ ತಯಾರಿಕಾ ಕೇಂದ್ರದ ಮೇಲೆ ದಾಳಿ ನಡೆಸಿ 40 ಮಕ್ಕಳು ಸೇರಿದಂತೆ ಒಡಿಶಾ ಮೂಲದ 204 ಕಾರ್ಮಿಕರನ್ನ ರಕ್ಷಣೆ ಮಾಡಿದ್ದಾರೆ.

ದಿನಕ್ಕೆ 50 ರೂಪಾಯಿ ಸೇರಿದಂತೆ ವಾರಕ್ಕೆ 350ರೂ. ವೇತನದ ಆಧಾರದಲ್ಲಿ ಒಡಿಶಾದಿಂದ ಕಾರ್ಮಿಕರನ್ನ ಕರೆತಂದು ಇಲ್ಲಿ ದುಡಿಸಿಕೊಳ್ಳಲಾಗುತ್ತಿತ್ತು. ಕಾರ್ಮಿಕರಿಗೆ ವಾಸಿಸಲು ಕೋಳಿ ಗೂಡಿನಷ್ಟು ಪ್ರದೇಶದಲ್ಲಿ ಚಿಕ್ಕ ಚಿಕ್ಕ ಗುಡಿಸಲು ನಿರ್ಮಾಣ ಮಾಡಿಕೊಡಲಾಗಿತ್ತು. ಸರಿಯಾದ ಶೌಚ ವ್ಯವಸ್ಥೆ ಕೂಡಾ ಕಲ್ಪಿಸಿರಲಿಲ್ಲ. ಇದರಿಂದಾಗಿ ಕಾರ್ಮಿಕರ ಸ್ಥಿತಿ ದಯನೀಯವಾಗಿತ್ತು ಎಂದು ಖಚಿತ ಮಾಹಿತಿ ಪಡೆದುಕೊಂಡ ಎನ್.ಜಿ.ಒ ಸಂಸ್ಥೆಯೊಂದು ನ್ಯಾಯಾಲಯದಲ್ಲಿ ದೂರು ದಾಖಲು ಮಾಡಿತ್ತು. ಈ ಹಿನ್ನೆಲೆ ದಾಳಿ ನಡೆಸಲಾಗಿದೆ.

ಬೆಂಗಳೂರು: ಜೀತಪದ್ಧತಿಯನ್ನು ಬುಡ ಸಮೇತ ನಿರ್ಮೂಲನೆ ಮಾಡಲು ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತಂದರೂ ಕೂಡ ಇನ್ನೂ ಈ ಅನಿಷ್ಠ ಪದ್ಧತಿ ತೊಡೆದುಹಾಕಲು ಸಾಧ್ಯವಾಗುತ್ತಿದ್ದಲ್ಲ. ಇದಕ್ಕೆ ಉದಾಹರಣೆ ಎಂಬಂತೆ ಒಂದೇ ಸ್ಥಳದಲ್ಲಿ ಜೀತ ಕಾರ್ಯ ಮಾಡುತ್ತಿದ್ದ 204 ಜನರನ್ನು ರಕ್ಷಣೆ ಮಾಡಲಾಗಿದೆ.

ಜೀತ ವ್ಯವಸ್ಥೆಯಲ್ಲಿ ಕೆಲಸ ಮಾಡುವ ಕಾರ್ಮಿಕರ ರಕ್ಷಣೆ

ಯಲಹಂಕ ತಾಲೂಕು ಹೆಸರಘಟ್ಟ ಹೊಬಳಿಯ ಕೊಂಡಶೆಟ್ಟಿಹಳ್ಳಿ ಗ್ರಾಮದಲ್ಲಿನ ಇಟ್ಟಿಗೆ ತಯಾರಿಕಾ ಕೇಂದ್ರದಲ್ಲಿ 204 ಜನ ಕಾರ್ಮಿಕರನ್ನ ಕೂಡಿ ಹಾಕಿಕೊಂಡು ದುಡಿಸಿಕೊಳ್ಳಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ತಹಶೀಲ್ದಾರ್ ರಘುಮೂರ್ತಿ ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಅಧಿಕಾರಿಗಳು ಸೇರಿದಂತೆ ಪೊಲೀಸರ ತಂಡ ಇಟ್ಟಿಗೆ ತಯಾರಿಕಾ ಕೇಂದ್ರದ ಮೇಲೆ ದಾಳಿ ನಡೆಸಿ 40 ಮಕ್ಕಳು ಸೇರಿದಂತೆ ಒಡಿಶಾ ಮೂಲದ 204 ಕಾರ್ಮಿಕರನ್ನ ರಕ್ಷಣೆ ಮಾಡಿದ್ದಾರೆ.

ದಿನಕ್ಕೆ 50 ರೂಪಾಯಿ ಸೇರಿದಂತೆ ವಾರಕ್ಕೆ 350ರೂ. ವೇತನದ ಆಧಾರದಲ್ಲಿ ಒಡಿಶಾದಿಂದ ಕಾರ್ಮಿಕರನ್ನ ಕರೆತಂದು ಇಲ್ಲಿ ದುಡಿಸಿಕೊಳ್ಳಲಾಗುತ್ತಿತ್ತು. ಕಾರ್ಮಿಕರಿಗೆ ವಾಸಿಸಲು ಕೋಳಿ ಗೂಡಿನಷ್ಟು ಪ್ರದೇಶದಲ್ಲಿ ಚಿಕ್ಕ ಚಿಕ್ಕ ಗುಡಿಸಲು ನಿರ್ಮಾಣ ಮಾಡಿಕೊಡಲಾಗಿತ್ತು. ಸರಿಯಾದ ಶೌಚ ವ್ಯವಸ್ಥೆ ಕೂಡಾ ಕಲ್ಪಿಸಿರಲಿಲ್ಲ. ಇದರಿಂದಾಗಿ ಕಾರ್ಮಿಕರ ಸ್ಥಿತಿ ದಯನೀಯವಾಗಿತ್ತು ಎಂದು ಖಚಿತ ಮಾಹಿತಿ ಪಡೆದುಕೊಂಡ ಎನ್.ಜಿ.ಒ ಸಂಸ್ಥೆಯೊಂದು ನ್ಯಾಯಾಲಯದಲ್ಲಿ ದೂರು ದಾಖಲು ಮಾಡಿತ್ತು. ಈ ಹಿನ್ನೆಲೆ ದಾಳಿ ನಡೆಸಲಾಗಿದೆ.

Last Updated : Feb 12, 2020, 7:02 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.