ETV Bharat / state

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರುದ್ಧ ಕನ್ನಡ ಪರ ಸಂಘಟನೆಗಳ ಪ್ರತಿಭಟನೆ - ವಾಟಾಳ್ ನಾಗರಾಜ್​​ ಪ್ರತಿಭಟನೆ

ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ನೀಡಿರುವ ಹಿನ್ನೆಲೆಯಲ್ಲಿ ಇಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

protest against Formation of Maratha Development Authority
ಕನ್ನಡ ಪರ ಸಂಘಟನೆಗಳಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರುದ್ಧ ಹೋರಾಟ
author img

By

Published : Nov 17, 2020, 1:59 PM IST

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರುದ್ಧ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್ ಕರೆ ಕೊಡಲು ತೀರ್ಮಾನಿಸಿವೆ. ನಾಡಿದ್ದು ಎಲ್ಲ ಕನ್ನಡಪರ ಸಂಘಟನೆಗಳ ಅಧ್ಯಕ್ಷರ ಸಭೆ ನಡೆಯಲ್ಲಿದ್ದು, ಸಿಎಂ ಬಿಎಸ್​​ ಯಡಿಯೂರಪ್ಪ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಪ್ರತಿಭಟನೆ

ರಾಜೀನಾಮೆ ನೀಡಿ ಇಲ್ಲವೇ ಮರಾಠ ಪ್ರಾಧಿಕಾರ ಆದೇಶವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ ತಡೆಗೆ ವಾಟಾಳ್ ನಾಗರಾಜ್ ಹಾಗೂ ಸಾ.ರ ಗೋವಿಂದ್ ನೇತೃತ್ವದಲ್ಲಿ ಕನ್ನಡ ಸಂಘಟನೆಗಳು ಮುಂದಾಗಿದ್ದವು. ಸರ್ಕಲ್ ಮಧ್ಯ ಭಾಗದಲ್ಲಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಸತ್ತೋದ್ನಪ್ಪ, ಸತ್ತೋದ್ನಪ್ಪ, ಯಡಿಯೂರಪ್ಪ ಸತ್ತೋದ್ದ ಅಂತಾ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಈ ಸಂದರ್ಭದಲ್ಲಿ ವಾಟಾಳ್ ನಾಗರಾಜ್​ ಅವ​ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಸಾ.ರಾ ಗೊವಿಂದ್ ಮಾತನಾಡಿ, ಸರ್ಕಾರ ಕನ್ನಡಿಗರಿಗೆ ಮೋಸ ಮಾಡುತ್ತಿದೆ. ಮಾರಾಠಿಗರ ಪ್ರಾಧಿಕಾರಕ್ಕೆ 50 ಕೋಟಿ ರೂ. ಹಣ ನೀಡುತ್ತಿರುವುದು ಸರಿ ಇಲ್ಲ. ಕನ್ನಡ ನಾಡು ನುಡಿಯ ಉಳಿವಿಗಾಗಿ ಶ್ರಮಿಸದೆ ಮರಾಠಿಗರ ಒಳತಿಗಾಗಿ ಶ್ರಮಿಸುತ್ತಿರುವುದು ವಿಪರ್ಯಾಸ. ಇವೆಲ್ಲವು ರಾಜಕೀಯ ಪ್ರೇರಿತ ಎಂದು ತಿಳಿಸಿದರು.

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರುದ್ಧ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಡಿಸೆಂಬರ್ 5ಕ್ಕೆ ಕರ್ನಾಟಕ ಬಂದ್ ಕರೆ ಕೊಡಲು ತೀರ್ಮಾನಿಸಿವೆ. ನಾಡಿದ್ದು ಎಲ್ಲ ಕನ್ನಡಪರ ಸಂಘಟನೆಗಳ ಅಧ್ಯಕ್ಷರ ಸಭೆ ನಡೆಯಲ್ಲಿದ್ದು, ಸಿಎಂ ಬಿಎಸ್​​ ಯಡಿಯೂರಪ್ಪ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಪ್ರತಿಭಟನೆ

ರಾಜೀನಾಮೆ ನೀಡಿ ಇಲ್ಲವೇ ಮರಾಠ ಪ್ರಾಧಿಕಾರ ಆದೇಶವನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ ತಡೆಗೆ ವಾಟಾಳ್ ನಾಗರಾಜ್ ಹಾಗೂ ಸಾ.ರ ಗೋವಿಂದ್ ನೇತೃತ್ವದಲ್ಲಿ ಕನ್ನಡ ಸಂಘಟನೆಗಳು ಮುಂದಾಗಿದ್ದವು. ಸರ್ಕಲ್ ಮಧ್ಯ ಭಾಗದಲ್ಲಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಸತ್ತೋದ್ನಪ್ಪ, ಸತ್ತೋದ್ನಪ್ಪ, ಯಡಿಯೂರಪ್ಪ ಸತ್ತೋದ್ದ ಅಂತಾ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಈ ಸಂದರ್ಭದಲ್ಲಿ ವಾಟಾಳ್ ನಾಗರಾಜ್​ ಅವ​ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸಂದರ್ಭದಲ್ಲಿ ಸಾ.ರಾ ಗೊವಿಂದ್ ಮಾತನಾಡಿ, ಸರ್ಕಾರ ಕನ್ನಡಿಗರಿಗೆ ಮೋಸ ಮಾಡುತ್ತಿದೆ. ಮಾರಾಠಿಗರ ಪ್ರಾಧಿಕಾರಕ್ಕೆ 50 ಕೋಟಿ ರೂ. ಹಣ ನೀಡುತ್ತಿರುವುದು ಸರಿ ಇಲ್ಲ. ಕನ್ನಡ ನಾಡು ನುಡಿಯ ಉಳಿವಿಗಾಗಿ ಶ್ರಮಿಸದೆ ಮರಾಠಿಗರ ಒಳತಿಗಾಗಿ ಶ್ರಮಿಸುತ್ತಿರುವುದು ವಿಪರ್ಯಾಸ. ಇವೆಲ್ಲವು ರಾಜಕೀಯ ಪ್ರೇರಿತ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.