ETV Bharat / state

ಬೀದಿಯಲ್ಲಿ ಪ್ರತಿಭಟನೆ ಮಾಡಿದ್ರೆ ತೀರ್ಪು ಬದಲಾಗಲ್ಲ: ಕಾಂಗ್ರೆಸ್ ನಡೆಗೆ ಕಿಡಿಕಾರಿದ ಸಿಟಿ ರವಿ

author img

By

Published : Mar 25, 2023, 6:49 AM IST

ಮೀಸಲಾತಿ ವಿಚಾರದಲ್ಲಿ ಐತಿಹಾಸಿಕ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿದೆ.

c t ravi
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ

ಬೆಂಗಳೂರು: ಕೋರ್ಟ್ ತೀರ್ಪು ಅವರ ಪರ ಬಂದರೆ ನ್ಯಾಯಾಂಗದ ಜಯ ಎನ್ನುತ್ತಾರೆ.. ಅದೇ ವಿರುದ್ಧ ಬಂದರೆ ಬೀದಿಗಿಳಿದು ಹೋರಾಟ ಮಾಡುತ್ತಾರೆ. ಬೀದಿಯಲ್ಲಿ ಪ್ರತಿಭಟನೆ ಮಾಡಿದ್ರೆ ನ್ಯಾಯಾಲಯದ ತೀರ್ಪು ಬದಲಾಗುತ್ತಾ..? ನಿಮ್ಮಲ್ಲಿ ಘಟಾನುಘಟಿ ವಕೀಲರು ಇದ್ದಾರೆ. ನಿಮಗೆ ತೀರ್ಪು ಸರಿಯಾಗಿಲ್ಲ ಅಂದರೆ ಹೈಯರ್ ಕೋರ್ಟ್ ಇದೆ. ಅಲ್ಲಿಗೆ ಹೋಗಿ ಎಂದು ರಾಹುಲ್ ಗಾಂಧಿ ಪ್ರಕರಣದಲ್ಲಿ ಕಾಂಗ್ರೆಸ್ ಅನುಸರಿಸುತ್ತಿರುವ ನಡೆ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕಿಡಿಕಾರಿದ್ದಾರೆ.

ಅಧಿಕೃತ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಂಸದರಾಗಿದ್ದ ರಾಹುಲ್ ಗಾಂಧಿ ಅವರಿಗೆ ಸಾರ್ವಜನಿಕವಾಗಿ ಯಾವ ಸ್ಟೇಟ್​​​ಮೆಂಟ್ ಕೊಡಬೇಕು ಎನ್ನುವ ವಿಚಾರ ಗೊತ್ತಿಲ್ಲದೇ ಕೋಲಾರದಲ್ಲಿ 2019ರಲ್ಲಿ ಮಾಡಿದ ಭಾಷಣಕ್ಕೆ ಸೂರತ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯದ ಆದೇಶ ಮೇಲೆ ಸಂಸದ ಸ್ಥಾನದಿಂದ ಅನರ್ಹ ಆಗಿದೆ. ಆದರೂ ಕಾಂಗ್ರೆಸ್ ಬೀದಿಗೆ ಇಳಿದಿದೆ ಎಂದು ಟೀಕಿಸಿದರು.

ತಮ್ಮ ಹೇಳಿಕೆಗೆ ಕ್ಷಮೆಯಾಚನೆ ಮಾಡದಿರುವುದಕ್ಕೆ ಜೈಲು ಶಿಕ್ಷೆ ವಿಧಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಅವಧಿಯಲ್ಲಿ ಎರಡು ವರ್ಷ ಜೈಲು ಶಿಕ್ಷೆ ಆಗಿದ್ದ ಅತನ ಸಂಸದರನ್ನು ಅನರ್ಹ ಮಾಡುವ ಕುರಿತ ನಿರ್ಧಾರ ಬದಲಾವಣೆ ಮಾಡುವ ಪ್ರಸ್ತಾಪವಾದಾಗ ರಾಹುಲ್ ಗಾಂಧಿ ಸಾರ್ವಜನಿಕ ಪ್ರತಿಯನ್ನು ಹರಿದು ಹಾಕಿದ್ದರು. ಆಗ ಇದನ್ನು ಅವರೇ ಅಸಂಬದ್ಧ ಅಂತ ಹೇಳಿದ್ದರು. ನಿಮ್ಮದೇ ಸರ್ಕಾರ ಇದ್ದರೂ ಕೂಡ ಈ ರೀತಿಯ ನಿರ್ಧಾರ ತೆಗೆದುಕೊಂಡಿತು. ಇದೀಗ ಪ್ರತಿಭಟನೆ ಯಾಕೆ ಮಾಡಬೇಕು ಎಂದು ಪ್ರಶ್ನಿಸಿದರು.

ತೀರ್ಪು ಪ್ರತಿಯೊಬ್ಬರಿಗೂ ಎಚ್ಚರಿಕೆ ಪಾಠ:ಬೀದಿಯಲ್ಲಿ ಪ್ರತಿಭಟನೆ ಮಾಡಿದ್ರೆ ನ್ಯಾಯಾಲಯದ ತೀರ್ಪು ಬದಲಾಗುತ್ತಾ..? ನಿಮ್ಮಲ್ಲಿ ಘಟಾನುಘಟಿ ವಕೀಲರು ಇದ್ದಾರೆ. ಈ ತೀರ್ಪು ಪ್ರತಿಯೊಬ್ಬರಿಗೂ ಎಚ್ಚರಿಕೆ ಪಾಠ ಆಗಬೇಕು, ಇದೊಂದೆ ಸಲ ಅಲ್ಲ ಸಾಕಷ್ಟು ಬಾರಿ ರಾಹುಲ್ ಗಾಂಧಿ ಹೇಳಿಕೆ ಕೊಟ್ಟಿದ್ದಾರೆ.

ಈ ಹೇಳಿಕೆಯನ್ನು ಸರಿ ಮಾಡಿಕೊಳ್ಳದೇ ಪುನರಾವರ್ತನೆ ಮಾಡುವುದು ಸರಿಯಲ್ಲ. ನಿಮಗೆ ತೀರ್ಪು ಸರಿಯಾಗಿಲ್ಲ ಅಂದರೆ ಹೈಯರ್ ಕೋರ್ಟ್ ಇದೆ. ಅಲ್ಲಿಗೆ ಹೋಗಬಹುದು,ಕೋರ್ಟ್ ಅವರ ಪರವಾಗಿ ಕೊಟ್ಟರೆ ನ್ಯಾಯಾಂಗದ ಜಯ ಅಂತಾರೆ ಇಲ್ಲದೇ ಇದ್ದರೆ ಹಾದಿ ಬೀದಿಯಲ್ಲಿ ಪ್ರತಿಭಟನೆ ಮಾಡುತ್ತಾರೆ ಇದರಿಂದ ತೀರ್ಪು ಬದಲಾವಣೆ ಆಗಲ್ಲ ಎಂದು ಆರೋಪಿಸಿದರು.

ಮೀಸಲಾತಿ ವಿಚಾರದಲ್ಲಿ ಐತಿಹಾಸಿಕ ತೀರ್ಮಾನ:ಮೀಸಲಾತಿ ನೀಡಲಿರುವ ವಿಚಾರದಲ್ಲಿ ಐತಿಹಾಸಿಕ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿದೆ. ಇದೊಂದು ಕ್ರಾಂತಿಕಾರಿ ಗೆಲುವು. ಒಳ ಸಮುದಾಯಕ್ಕೆ ಮೀಸಲಾತಿ ನೀಡುವ ಮೂಲಕ ಒಳ ಮೀಸಲಾತಿ ವರ್ಗೀಕರಣ ಮಾಡುವ ಜೊತೆಗೆ ಎಲ್ಲಾ ವರ್ಗದವರಿಗೆ ನ್ಯಾಯ ಕೊಡುವ ಕೆಲಸ ಮಾಡಿದ್ದಾರೆ. ಒಕ್ಕಲಿಗ, ಲಿಂಗಾಯತ ಸಮುದಾಯಕ್ಕೆ‌ ಮೀಸಲಾತಿ ತೀರ್ಪು ಒಂದು ಕ್ರಾಂತಿಕಾರಿ ಹೆಜ್ಜೆ ಇದನ್ನು ನಾನು ಸ್ವಾಗತಿಸುತ್ತೇನೆ ಎಲ್ಲರಿಗೂ ನ್ಯಾಯ ಸಿಕ್ಕಿದೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಟಿ ರವಿ ತಿಳಿಸಿದರು.

ಮೀಸಲಾತಿ ಹಂಚಿಕೆಯಲ್ಲಿ ಬಡವರಿಗೆ ಅನ್ಯಾಯ ಆಗಲ್ಲ:ಈಗಾಗಲೇ ನಮ್ಮ ಬಳಿ ಒಂದು ಮಾದರಿ ಇದೆ. ಆಂಧ್ರದಲ್ಲಿ ಮತೀಯ ಆಧಾರದ ಮೇಲೆ ಮೀಸಲಾತಿ ಕೊಟ್ಟಿದ್ದರು ಮತೀಯ ಆಧಾರದ ಮೇಲೆ ಮೀಸಲಾತಿ ಕೊಡುವುದು ಸಂವಿಧಾನ ಬಾಹಿರ ಆಗಿರುತ್ತದೆ. ಆದರೆ ನಮ್ಮ ಸರ್ಕಾರ ಮಾಡುತ್ತಿರುವ ಮೀಸಲಾತಿ ಹಂಚಿಕೆಯಲ್ಲಿ ಯಾವುದೇ ಬಡವರಿಗೆ ಅನ್ಯಾಯ ಆಗಲ್ಲ. ನಮ್ಮ ಯಾವುದೇ ಯೋಜನೆ ಮತಿಯ ಆಧಾರದ ಮೇಲೆ ವಿಭಜನೆ ಮಾಡಿಲ್ಲ.

1994ರಲ್ಲಿ ಮತೀಯ ಆಧಾರದ ಮೇಲೆ ಮೀಸಲಾತಿ ಕೊಟ್ಟಿದ್ದು ಸಂವಿಧಾನ ವಿರೋಧಿ. ಬಡವರು ಎಲ್ಲಾ ಸಮುದಾಯದಲ್ಲಿ ಇದ್ದಾರೆ, ಆರ್ಥಿಕ ಮೀಸಲಾತಿ ಕೋಟಾದಲ್ಲಿ ನೋಡಿದಾಗ ಮತ್ತೆ ನಮ್ದೆ ಸರ್ಕಾರ ಬರುತ್ತದೆ ನಮಗೆ ವಿಶ್ವಾಸ ಇದೆ, ಇಂಪ್ಲಿಮೆಂಟ್ ಮಾಡಿದವರು ಜಾರಿ ಮಾಡೋಕೆ ಬರಲ್ವಾ..? ಜಾರಿ ಮಾಡೇ ಮಾಡುತ್ತೇವೆ ಎಂದರು.
ಸಂಬಂಧ ಆಧಾರಿತ ಪಕ್ಷ:ಯಡಿಯೂರಪ್ಪ ಮನೆಗೆ ಅಮಿತ್ ಶಾ ಭೇಟಿ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಸಿ.ಟಿ ರವಿ, ಯಡಿಯೂರಪ್ಪ ನಮ್ಮ ಪಕ್ಷದ ಹಿರಿಯ ನಾಯಕರು, ನಾಲ್ಕು ಬಾರಿ ಸಿಎಂ ಆಗಿದ್ದವರು. ನಮ್ಮದು ಸಂಬಂಧ ಆಧಾರಿತ ಪಕ್ಷ.ಇದು ವ್ಯವಹಾರಿಕ ಪಕ್ಷ ಅಲ್ಲ.

ಸಂಬಂಧ ಬೆಸೆಯುವ ಪಕ್ಷ. ಮೋದಿ ಬರ್ತಿತ್ತಾರೆ. ಅಮಿತ್ ಶಾ ಬರ್ತಾರೆ ಹೀಗೆ ಬೇರೆ ಬೇರೆಯವ ಬರ್ತಾರೆ ಕಾರ್ಯ ಪದ್ದತಿ ಇದ್ಧಾಗ, ನಮ್ಮ ಪಕ್ಷ ಹಾಗೆ ನಡೆಸಿಕೊಂಡು ಹೋಗಬೇಕಾಗುತ್ತದೆ. ಹಾಗೆ ‌ನಮ್ಮ ಪಾರ್ಟಿ ಬೆಳೆದಿರುವುದು ಎಂದು ಬಿಎಸ್ವೈ ನಿವಾಸಕ್ಕೆ ಅಮಿತ್ ಶಾ ಭೇಟಿ ನೀಡಿದ್ದನ್ನು ಸಮರ್ಥಿಸಿಕೊಂಡರು.

ಇದನ್ನೂಓದಿ:ಮೀಸಲಾತಿ ಕುರಿತ ಸರ್ಕಾರದ ನಿರ್ಣಯದ ಬಗ್ಗೆ ನಾಳೆ ಚರ್ಚಿಸಿ ತೀರ್ಮಾನ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ಕೋರ್ಟ್ ತೀರ್ಪು ಅವರ ಪರ ಬಂದರೆ ನ್ಯಾಯಾಂಗದ ಜಯ ಎನ್ನುತ್ತಾರೆ.. ಅದೇ ವಿರುದ್ಧ ಬಂದರೆ ಬೀದಿಗಿಳಿದು ಹೋರಾಟ ಮಾಡುತ್ತಾರೆ. ಬೀದಿಯಲ್ಲಿ ಪ್ರತಿಭಟನೆ ಮಾಡಿದ್ರೆ ನ್ಯಾಯಾಲಯದ ತೀರ್ಪು ಬದಲಾಗುತ್ತಾ..? ನಿಮ್ಮಲ್ಲಿ ಘಟಾನುಘಟಿ ವಕೀಲರು ಇದ್ದಾರೆ. ನಿಮಗೆ ತೀರ್ಪು ಸರಿಯಾಗಿಲ್ಲ ಅಂದರೆ ಹೈಯರ್ ಕೋರ್ಟ್ ಇದೆ. ಅಲ್ಲಿಗೆ ಹೋಗಿ ಎಂದು ರಾಹುಲ್ ಗಾಂಧಿ ಪ್ರಕರಣದಲ್ಲಿ ಕಾಂಗ್ರೆಸ್ ಅನುಸರಿಸುತ್ತಿರುವ ನಡೆ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕಿಡಿಕಾರಿದ್ದಾರೆ.

ಅಧಿಕೃತ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಸಂಸದರಾಗಿದ್ದ ರಾಹುಲ್ ಗಾಂಧಿ ಅವರಿಗೆ ಸಾರ್ವಜನಿಕವಾಗಿ ಯಾವ ಸ್ಟೇಟ್​​​ಮೆಂಟ್ ಕೊಡಬೇಕು ಎನ್ನುವ ವಿಚಾರ ಗೊತ್ತಿಲ್ಲದೇ ಕೋಲಾರದಲ್ಲಿ 2019ರಲ್ಲಿ ಮಾಡಿದ ಭಾಷಣಕ್ಕೆ ಸೂರತ್ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯದ ಆದೇಶ ಮೇಲೆ ಸಂಸದ ಸ್ಥಾನದಿಂದ ಅನರ್ಹ ಆಗಿದೆ. ಆದರೂ ಕಾಂಗ್ರೆಸ್ ಬೀದಿಗೆ ಇಳಿದಿದೆ ಎಂದು ಟೀಕಿಸಿದರು.

ತಮ್ಮ ಹೇಳಿಕೆಗೆ ಕ್ಷಮೆಯಾಚನೆ ಮಾಡದಿರುವುದಕ್ಕೆ ಜೈಲು ಶಿಕ್ಷೆ ವಿಧಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಅವಧಿಯಲ್ಲಿ ಎರಡು ವರ್ಷ ಜೈಲು ಶಿಕ್ಷೆ ಆಗಿದ್ದ ಅತನ ಸಂಸದರನ್ನು ಅನರ್ಹ ಮಾಡುವ ಕುರಿತ ನಿರ್ಧಾರ ಬದಲಾವಣೆ ಮಾಡುವ ಪ್ರಸ್ತಾಪವಾದಾಗ ರಾಹುಲ್ ಗಾಂಧಿ ಸಾರ್ವಜನಿಕ ಪ್ರತಿಯನ್ನು ಹರಿದು ಹಾಕಿದ್ದರು. ಆಗ ಇದನ್ನು ಅವರೇ ಅಸಂಬದ್ಧ ಅಂತ ಹೇಳಿದ್ದರು. ನಿಮ್ಮದೇ ಸರ್ಕಾರ ಇದ್ದರೂ ಕೂಡ ಈ ರೀತಿಯ ನಿರ್ಧಾರ ತೆಗೆದುಕೊಂಡಿತು. ಇದೀಗ ಪ್ರತಿಭಟನೆ ಯಾಕೆ ಮಾಡಬೇಕು ಎಂದು ಪ್ರಶ್ನಿಸಿದರು.

ತೀರ್ಪು ಪ್ರತಿಯೊಬ್ಬರಿಗೂ ಎಚ್ಚರಿಕೆ ಪಾಠ:ಬೀದಿಯಲ್ಲಿ ಪ್ರತಿಭಟನೆ ಮಾಡಿದ್ರೆ ನ್ಯಾಯಾಲಯದ ತೀರ್ಪು ಬದಲಾಗುತ್ತಾ..? ನಿಮ್ಮಲ್ಲಿ ಘಟಾನುಘಟಿ ವಕೀಲರು ಇದ್ದಾರೆ. ಈ ತೀರ್ಪು ಪ್ರತಿಯೊಬ್ಬರಿಗೂ ಎಚ್ಚರಿಕೆ ಪಾಠ ಆಗಬೇಕು, ಇದೊಂದೆ ಸಲ ಅಲ್ಲ ಸಾಕಷ್ಟು ಬಾರಿ ರಾಹುಲ್ ಗಾಂಧಿ ಹೇಳಿಕೆ ಕೊಟ್ಟಿದ್ದಾರೆ.

ಈ ಹೇಳಿಕೆಯನ್ನು ಸರಿ ಮಾಡಿಕೊಳ್ಳದೇ ಪುನರಾವರ್ತನೆ ಮಾಡುವುದು ಸರಿಯಲ್ಲ. ನಿಮಗೆ ತೀರ್ಪು ಸರಿಯಾಗಿಲ್ಲ ಅಂದರೆ ಹೈಯರ್ ಕೋರ್ಟ್ ಇದೆ. ಅಲ್ಲಿಗೆ ಹೋಗಬಹುದು,ಕೋರ್ಟ್ ಅವರ ಪರವಾಗಿ ಕೊಟ್ಟರೆ ನ್ಯಾಯಾಂಗದ ಜಯ ಅಂತಾರೆ ಇಲ್ಲದೇ ಇದ್ದರೆ ಹಾದಿ ಬೀದಿಯಲ್ಲಿ ಪ್ರತಿಭಟನೆ ಮಾಡುತ್ತಾರೆ ಇದರಿಂದ ತೀರ್ಪು ಬದಲಾವಣೆ ಆಗಲ್ಲ ಎಂದು ಆರೋಪಿಸಿದರು.

ಮೀಸಲಾತಿ ವಿಚಾರದಲ್ಲಿ ಐತಿಹಾಸಿಕ ತೀರ್ಮಾನ:ಮೀಸಲಾತಿ ನೀಡಲಿರುವ ವಿಚಾರದಲ್ಲಿ ಐತಿಹಾಸಿಕ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿದೆ. ಇದೊಂದು ಕ್ರಾಂತಿಕಾರಿ ಗೆಲುವು. ಒಳ ಸಮುದಾಯಕ್ಕೆ ಮೀಸಲಾತಿ ನೀಡುವ ಮೂಲಕ ಒಳ ಮೀಸಲಾತಿ ವರ್ಗೀಕರಣ ಮಾಡುವ ಜೊತೆಗೆ ಎಲ್ಲಾ ವರ್ಗದವರಿಗೆ ನ್ಯಾಯ ಕೊಡುವ ಕೆಲಸ ಮಾಡಿದ್ದಾರೆ. ಒಕ್ಕಲಿಗ, ಲಿಂಗಾಯತ ಸಮುದಾಯಕ್ಕೆ‌ ಮೀಸಲಾತಿ ತೀರ್ಪು ಒಂದು ಕ್ರಾಂತಿಕಾರಿ ಹೆಜ್ಜೆ ಇದನ್ನು ನಾನು ಸ್ವಾಗತಿಸುತ್ತೇನೆ ಎಲ್ಲರಿಗೂ ನ್ಯಾಯ ಸಿಕ್ಕಿದೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಟಿ ರವಿ ತಿಳಿಸಿದರು.

ಮೀಸಲಾತಿ ಹಂಚಿಕೆಯಲ್ಲಿ ಬಡವರಿಗೆ ಅನ್ಯಾಯ ಆಗಲ್ಲ:ಈಗಾಗಲೇ ನಮ್ಮ ಬಳಿ ಒಂದು ಮಾದರಿ ಇದೆ. ಆಂಧ್ರದಲ್ಲಿ ಮತೀಯ ಆಧಾರದ ಮೇಲೆ ಮೀಸಲಾತಿ ಕೊಟ್ಟಿದ್ದರು ಮತೀಯ ಆಧಾರದ ಮೇಲೆ ಮೀಸಲಾತಿ ಕೊಡುವುದು ಸಂವಿಧಾನ ಬಾಹಿರ ಆಗಿರುತ್ತದೆ. ಆದರೆ ನಮ್ಮ ಸರ್ಕಾರ ಮಾಡುತ್ತಿರುವ ಮೀಸಲಾತಿ ಹಂಚಿಕೆಯಲ್ಲಿ ಯಾವುದೇ ಬಡವರಿಗೆ ಅನ್ಯಾಯ ಆಗಲ್ಲ. ನಮ್ಮ ಯಾವುದೇ ಯೋಜನೆ ಮತಿಯ ಆಧಾರದ ಮೇಲೆ ವಿಭಜನೆ ಮಾಡಿಲ್ಲ.

1994ರಲ್ಲಿ ಮತೀಯ ಆಧಾರದ ಮೇಲೆ ಮೀಸಲಾತಿ ಕೊಟ್ಟಿದ್ದು ಸಂವಿಧಾನ ವಿರೋಧಿ. ಬಡವರು ಎಲ್ಲಾ ಸಮುದಾಯದಲ್ಲಿ ಇದ್ದಾರೆ, ಆರ್ಥಿಕ ಮೀಸಲಾತಿ ಕೋಟಾದಲ್ಲಿ ನೋಡಿದಾಗ ಮತ್ತೆ ನಮ್ದೆ ಸರ್ಕಾರ ಬರುತ್ತದೆ ನಮಗೆ ವಿಶ್ವಾಸ ಇದೆ, ಇಂಪ್ಲಿಮೆಂಟ್ ಮಾಡಿದವರು ಜಾರಿ ಮಾಡೋಕೆ ಬರಲ್ವಾ..? ಜಾರಿ ಮಾಡೇ ಮಾಡುತ್ತೇವೆ ಎಂದರು.
ಸಂಬಂಧ ಆಧಾರಿತ ಪಕ್ಷ:ಯಡಿಯೂರಪ್ಪ ಮನೆಗೆ ಅಮಿತ್ ಶಾ ಭೇಟಿ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಸಿ.ಟಿ ರವಿ, ಯಡಿಯೂರಪ್ಪ ನಮ್ಮ ಪಕ್ಷದ ಹಿರಿಯ ನಾಯಕರು, ನಾಲ್ಕು ಬಾರಿ ಸಿಎಂ ಆಗಿದ್ದವರು. ನಮ್ಮದು ಸಂಬಂಧ ಆಧಾರಿತ ಪಕ್ಷ.ಇದು ವ್ಯವಹಾರಿಕ ಪಕ್ಷ ಅಲ್ಲ.

ಸಂಬಂಧ ಬೆಸೆಯುವ ಪಕ್ಷ. ಮೋದಿ ಬರ್ತಿತ್ತಾರೆ. ಅಮಿತ್ ಶಾ ಬರ್ತಾರೆ ಹೀಗೆ ಬೇರೆ ಬೇರೆಯವ ಬರ್ತಾರೆ ಕಾರ್ಯ ಪದ್ದತಿ ಇದ್ಧಾಗ, ನಮ್ಮ ಪಕ್ಷ ಹಾಗೆ ನಡೆಸಿಕೊಂಡು ಹೋಗಬೇಕಾಗುತ್ತದೆ. ಹಾಗೆ ‌ನಮ್ಮ ಪಾರ್ಟಿ ಬೆಳೆದಿರುವುದು ಎಂದು ಬಿಎಸ್ವೈ ನಿವಾಸಕ್ಕೆ ಅಮಿತ್ ಶಾ ಭೇಟಿ ನೀಡಿದ್ದನ್ನು ಸಮರ್ಥಿಸಿಕೊಂಡರು.

ಇದನ್ನೂಓದಿ:ಮೀಸಲಾತಿ ಕುರಿತ ಸರ್ಕಾರದ ನಿರ್ಣಯದ ಬಗ್ಗೆ ನಾಳೆ ಚರ್ಚಿಸಿ ತೀರ್ಮಾನ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.