ETV Bharat / state

ಪಿಎಸ್​ಐ ನೇಮಕಾತಿ ಹಗರಣ: ಪ್ರಕರಣ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ ಆರೋಪಿಗಳು

author img

By

Published : May 5, 2022, 9:33 PM IST

ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದಡಿ ಸಿಐಡಿ ಪೊಲೀಸರು ನೀಡಿದ ದೂರಿನಂತೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ನಾಲ್ಕನೇ ರ‍್ಯಾಂಕ್ ಪಡೆದಿರುವ ಜಾಗೃತ್ ಹಾಗೂ ಮಹಿಳಾ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದಿರುವ ರಚನಾ ವಿರುದ್ಧ ಕಳೆದ ಏಪ್ರಿಲ್​ನಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

Two accused Appeal to High Court cancellation of investigation
ಪಿಎಸ್​ಐ ನೇಮಕಾತಿ ಹಗರಣ: ಪ್ರಕರಣ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ ಆರೋಪಿಗಳು

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣ ಸಂಬಂಧ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಪ್ರಕರಣದ ಆರೋಪಿಗಳಾದ ಎಸ್.ಜಾಗೃತ್ ಹಾಗೂ ರಚನಾ ಹೈಕೋರ್ಟ್‌ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇವರ ಪ್ರತ್ಯೇಕ ಅರ್ಜಿಗಳನ್ನು ವಿಚಾರಣೆ ನಡೆಸಿದ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಮೇ 19ಕ್ಕೆ ವಿಚಾರಣೆ ನಿಗದಿ ಮಾಡಿದೆ.

ತಾವು ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಎಸಗಿಲ್ಲ. ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಇತ್ತು. ಅಲ್ಲದೇ, ಪರೀಕ್ಷಾ ಕೇಂದ್ರದ ಮೇಲೆ ಮೇಲ್ವಿಚಾರಕರಲ್ಲದೇ ವಿಚಕ್ಷಣಾ ಸ್ಕ್ವಾಡ್ ಅಧಿಕಾರಿಗಳೂ ನಿಗಾ ಇಟ್ಟಿದ್ದರು. ಪರೀಕ್ಷೆ ನಡೆದು ವರ್ಷದ ಮೇಲಾಗಿದ್ದು, ಫಲಿತಾಂಶ ಪ್ರಕಟಗೊಂಡ ನಂತರ ಎಫ್‌ಐಆರ್ ದಾಖಲಿಸಿರುವುದು ಸರಿಯಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇನ್ನು ದೂರು ದಾಖಲಿಸಿರುವ ಸಿಐಡಿ ಅಧಿಕಾರಿ ನರಸಿಂಹ ಮೂರ್ತಿ ಅವರು ತನಿಖಾ ತಂಡದಲ್ಲಿದ್ದಾರೆ. ಈವರೆಗಿನ ಸಿಐಡಿ ತನಿಖೆಯಲ್ಲಿ ನಾವು ಅಕ್ರಮದಲ್ಲಿ ಭಾಗಿಯಾಗಿರುವ ಕುರಿತು ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಹೀಗಾಗಿ ನಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಅಲ್ಲದೇ, ಈ ಅರ್ಜಿಯನ್ನು ನ್ಯಾಯಾಲಯ ಇತ್ಯರ್ಥ ಮಾಡುವವರೆಗೂ ಪ್ರಕರಣ ಕುರಿತಂತೆ ಪೊಲೀಸರ ತನಿಖೆಗೆ ತಡೆಯಾಜ್ಞೆ ನೀಡಬೇಕೆಂದೂ ಮನವಿ ಮಾಡಿದ್ದಾರೆ.

ಇದನ್ನೂಓದಿ: ಪಿಎಸ್ಐ ಪರೀಕ್ಷಾ ಅಕ್ರಮ.. ಡಿವೈಎಸ್ಪಿ​ ಸಾಲಿ, ಸಿಪಿಐ ಮೇತ್ರೆ ಬಂಧನ

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣ ಸಂಬಂಧ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಪ್ರಕರಣದ ಆರೋಪಿಗಳಾದ ಎಸ್.ಜಾಗೃತ್ ಹಾಗೂ ರಚನಾ ಹೈಕೋರ್ಟ್‌ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇವರ ಪ್ರತ್ಯೇಕ ಅರ್ಜಿಗಳನ್ನು ವಿಚಾರಣೆ ನಡೆಸಿದ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಮೇ 19ಕ್ಕೆ ವಿಚಾರಣೆ ನಿಗದಿ ಮಾಡಿದೆ.

ತಾವು ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಎಸಗಿಲ್ಲ. ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಇತ್ತು. ಅಲ್ಲದೇ, ಪರೀಕ್ಷಾ ಕೇಂದ್ರದ ಮೇಲೆ ಮೇಲ್ವಿಚಾರಕರಲ್ಲದೇ ವಿಚಕ್ಷಣಾ ಸ್ಕ್ವಾಡ್ ಅಧಿಕಾರಿಗಳೂ ನಿಗಾ ಇಟ್ಟಿದ್ದರು. ಪರೀಕ್ಷೆ ನಡೆದು ವರ್ಷದ ಮೇಲಾಗಿದ್ದು, ಫಲಿತಾಂಶ ಪ್ರಕಟಗೊಂಡ ನಂತರ ಎಫ್‌ಐಆರ್ ದಾಖಲಿಸಿರುವುದು ಸರಿಯಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಇನ್ನು ದೂರು ದಾಖಲಿಸಿರುವ ಸಿಐಡಿ ಅಧಿಕಾರಿ ನರಸಿಂಹ ಮೂರ್ತಿ ಅವರು ತನಿಖಾ ತಂಡದಲ್ಲಿದ್ದಾರೆ. ಈವರೆಗಿನ ಸಿಐಡಿ ತನಿಖೆಯಲ್ಲಿ ನಾವು ಅಕ್ರಮದಲ್ಲಿ ಭಾಗಿಯಾಗಿರುವ ಕುರಿತು ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಹೀಗಾಗಿ ನಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಅಲ್ಲದೇ, ಈ ಅರ್ಜಿಯನ್ನು ನ್ಯಾಯಾಲಯ ಇತ್ಯರ್ಥ ಮಾಡುವವರೆಗೂ ಪ್ರಕರಣ ಕುರಿತಂತೆ ಪೊಲೀಸರ ತನಿಖೆಗೆ ತಡೆಯಾಜ್ಞೆ ನೀಡಬೇಕೆಂದೂ ಮನವಿ ಮಾಡಿದ್ದಾರೆ.

ಇದನ್ನೂಓದಿ: ಪಿಎಸ್ಐ ಪರೀಕ್ಷಾ ಅಕ್ರಮ.. ಡಿವೈಎಸ್ಪಿ​ ಸಾಲಿ, ಸಿಪಿಐ ಮೇತ್ರೆ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.