ETV Bharat / state

ಪಿಎಸ್​ಐ ಹಗರಣ: ಆರೋಪ ಪಟ್ಟಿ ಸಲ್ಲಿಕೆ ಪ್ರಕ್ರಿಯೆ ಬಗ್ಗೆ ಅಮೃತ್ ಪೌಲ್ ಪರ ವಕೀಲರ ಆಕ್ಷೇಪ

author img

By

Published : Jun 1, 2023, 10:10 PM IST

ಪಿಎಸ್​ಐ ನೇಮಕಾತಿ ಹಗರಣದ ಕುರಿತಂತೆ ಪ್ರಮುಖ ಆರೋಪಿ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿ ನಡೆಯಿತು.

psi-scam-amrit-paul-lawyer-objects-on-submission-of-charge-sheet
ಪಿಎಸ್​ಐ ಹಗರಣ: ಆರೋಪ ಪಟ್ಟಿ ಸಲ್ಲಿಕೆ ಪ್ರಕ್ರಿಯೆ ಬಗ್ಗೆ ಅಮೃತ್ ಪೌಲ್ ಪರ ವಕೀಲರ ಆಕ್ಷೇಪ

ಬೆಂಗಳೂರು : ಪೊಲೀಸ್ ಸಬ್ ಇನ್ಸ್​ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣ ಕುರಿತಂತೆ ವಿಚಾರಣಾ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹಂತ ಹಂತವಾಗಿ ದೋಷಾರೋಪ ಪಟ್ಟಿ ಸಲ್ಲಿಸುತ್ತಿದ್ದು, ಇದು ಅಪರಾಧ ದಂಡ ಪ್ರಕ್ರಿಯಾ ಸಂಹಿತೆ 1973ರ (ಸಿಆರ್​ಪಿಸಿ) ಕಲಂ 173ಕ್ಕೆ ತದ್ವಿರುದ್ಧವಾಗಿದೆ ಎಂದು ಪ್ರಕರಣದ ಪ್ರಮುಖ ಆರೋಪಿ ಆಗಿರುವ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಪರ ವಕೀಲರು ಹೈಕೋರ್ಟ್​​ಗೆ ಮಾಹಿತಿ ನೀಡಿದರು. ನ್ಯಾಯಾಂಗ ಬಂಧನದಲ್ಲಿರುವ ಅಮೃತ್ ಪೌಲ್ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಂ. ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ವಕೀಲರು ಮನವಿ ಮಾಡಿದರು.

ವಿಚಾರಣೆ ವೇಳೆ ಅಮೃತ್ ಪೌಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ.ಎಸ್. ಶ್ಯಾಮಸುಂದರ್, ಅರ್ಜಿದಾರರು ಕಳೆದ ಒಂದು ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮತ್ತು ವಿಚಾರಣಾ ನ್ಯಾಯಾಲಯವು ಅವರ ವಿರುದ್ಧದ ಯಾವುದೇ ಅಪರಾಧಗಳನ್ನು ಸಂಜ್ಞೇಯ ಎಂದು ಪರಿಗಣಿಸದೇ ಇರುವ ಕಾರಣ ಅವರ ಬಂಧನ ಕಾನೂನು ಬಾಹಿರವಾಗಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೇ, ಹಂತ ಹಂತವಾಗಿ ದೋಷಾರೋಪ ಪಟ್ಟಿ ಸಲ್ಲಿಸುವ ಪ್ರಕ್ರಿಯೆ ಸಿಆರ್‌ಪಿಸಿ ಕಲಂ 173ರ ಅಡಿ ಆರೋಪಿಗಳ ಹಕ್ಕುಗಳಿಗೆ ವಿರುದ್ಧವಾಗಿದೆ. ಈ ಅಭ್ಯಾಸ ನಿಲ್ಲಿಸಬೇಕು ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಕರ್ನಾಟಕ ಶಿಕ್ಷಣ ಕಾಯ್ದೆಯಡಿ ನಕಲು ಮಾಡುವುದು ಅತ್ಯಂತ ದುರ್ಬಲ ಅಪರಾಧ ಎನಿಸಿದೆ. ಹೀಗಾಗಿ, ಈ ಪ್ರಕರಣದಲ್ಲಿ ಗಂಭೀರವಾದದ್ದೇನೂ ಇಲ್ಲ ಎಂದು ಅಂದಾಜಿಸಲಾಗಿದೆ. ಅಂತೆಯೇ, ಆರಂಭಿಕವಾಗಿ ಪ್ರಕರಣದ ಅಪರಾಧಗಳನ್ನು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿ ದಾಖಲಿಸಿದ್ದು, ನಂತರ ಇದಕ್ಕೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯನ್ನೂ ಸೇರಿಸಲಾಗಿದೆ. ಹೀಗಾಗಿ ಹಲವು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿ ಇರುವ ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಅವರು ಕೋರಿದರು.

ಪ್ರಕರಣದ ಹಿನ್ನೆಲೆ ಏನು ? : ರಾಜ್ಯ ಪೊಲೀಸ್ ನೇಮಕಾತಿ ಮಂಡಳಿಯ ನಿರ್ದೇಶಕರಾಗಿದ್ದ ಅಮೃತ್ ಪೌಲ್ ಅವರ ಸೂಚನೆ ಮೇರೆಗೆ 545 ಪೊಲೀಸ್ ಸಬ್ ಇನ್ಸ್​ಪೆಕ್ಟರ್ ನೇಮಕಾತಿ ಹಗರಣ ನಡೆದಿದೆ ಎಂಬ ಆರೋಪವಿದೆ. ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಅಮೃತ್ ಪೌಲ್ ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಅವರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ರಾಮಾಯಣದ ಸಾಲು ಉಲ್ಲೇಖಿಸಿ ಅನಾರೋಗ್ಯಕ್ಕೀಡಾದ ತಾಯಿ ನೋಡಲು ಕೈದಿಗೆ ಪೆರೋಲ್

ಬೆಂಗಳೂರು : ಪೊಲೀಸ್ ಸಬ್ ಇನ್ಸ್​ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣ ಕುರಿತಂತೆ ವಿಚಾರಣಾ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹಂತ ಹಂತವಾಗಿ ದೋಷಾರೋಪ ಪಟ್ಟಿ ಸಲ್ಲಿಸುತ್ತಿದ್ದು, ಇದು ಅಪರಾಧ ದಂಡ ಪ್ರಕ್ರಿಯಾ ಸಂಹಿತೆ 1973ರ (ಸಿಆರ್​ಪಿಸಿ) ಕಲಂ 173ಕ್ಕೆ ತದ್ವಿರುದ್ಧವಾಗಿದೆ ಎಂದು ಪ್ರಕರಣದ ಪ್ರಮುಖ ಆರೋಪಿ ಆಗಿರುವ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಪರ ವಕೀಲರು ಹೈಕೋರ್ಟ್​​ಗೆ ಮಾಹಿತಿ ನೀಡಿದರು. ನ್ಯಾಯಾಂಗ ಬಂಧನದಲ್ಲಿರುವ ಅಮೃತ್ ಪೌಲ್ ಅವರು ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಂ. ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ವಕೀಲರು ಮನವಿ ಮಾಡಿದರು.

ವಿಚಾರಣೆ ವೇಳೆ ಅಮೃತ್ ಪೌಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ.ಎಸ್. ಶ್ಯಾಮಸುಂದರ್, ಅರ್ಜಿದಾರರು ಕಳೆದ ಒಂದು ವರ್ಷದಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮತ್ತು ವಿಚಾರಣಾ ನ್ಯಾಯಾಲಯವು ಅವರ ವಿರುದ್ಧದ ಯಾವುದೇ ಅಪರಾಧಗಳನ್ನು ಸಂಜ್ಞೇಯ ಎಂದು ಪರಿಗಣಿಸದೇ ಇರುವ ಕಾರಣ ಅವರ ಬಂಧನ ಕಾನೂನು ಬಾಹಿರವಾಗಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೇ, ಹಂತ ಹಂತವಾಗಿ ದೋಷಾರೋಪ ಪಟ್ಟಿ ಸಲ್ಲಿಸುವ ಪ್ರಕ್ರಿಯೆ ಸಿಆರ್‌ಪಿಸಿ ಕಲಂ 173ರ ಅಡಿ ಆರೋಪಿಗಳ ಹಕ್ಕುಗಳಿಗೆ ವಿರುದ್ಧವಾಗಿದೆ. ಈ ಅಭ್ಯಾಸ ನಿಲ್ಲಿಸಬೇಕು ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಕರ್ನಾಟಕ ಶಿಕ್ಷಣ ಕಾಯ್ದೆಯಡಿ ನಕಲು ಮಾಡುವುದು ಅತ್ಯಂತ ದುರ್ಬಲ ಅಪರಾಧ ಎನಿಸಿದೆ. ಹೀಗಾಗಿ, ಈ ಪ್ರಕರಣದಲ್ಲಿ ಗಂಭೀರವಾದದ್ದೇನೂ ಇಲ್ಲ ಎಂದು ಅಂದಾಜಿಸಲಾಗಿದೆ. ಅಂತೆಯೇ, ಆರಂಭಿಕವಾಗಿ ಪ್ರಕರಣದ ಅಪರಾಧಗಳನ್ನು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿ ದಾಖಲಿಸಿದ್ದು, ನಂತರ ಇದಕ್ಕೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯನ್ನೂ ಸೇರಿಸಲಾಗಿದೆ. ಹೀಗಾಗಿ ಹಲವು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿ ಇರುವ ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಅವರು ಕೋರಿದರು.

ಪ್ರಕರಣದ ಹಿನ್ನೆಲೆ ಏನು ? : ರಾಜ್ಯ ಪೊಲೀಸ್ ನೇಮಕಾತಿ ಮಂಡಳಿಯ ನಿರ್ದೇಶಕರಾಗಿದ್ದ ಅಮೃತ್ ಪೌಲ್ ಅವರ ಸೂಚನೆ ಮೇರೆಗೆ 545 ಪೊಲೀಸ್ ಸಬ್ ಇನ್ಸ್​ಪೆಕ್ಟರ್ ನೇಮಕಾತಿ ಹಗರಣ ನಡೆದಿದೆ ಎಂಬ ಆರೋಪವಿದೆ. ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಅಮೃತ್ ಪೌಲ್ ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದರು. ನ್ಯಾಯಾಂಗ ಬಂಧನದಲ್ಲಿರುವ ಅವರು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ: ರಾಮಾಯಣದ ಸಾಲು ಉಲ್ಲೇಖಿಸಿ ಅನಾರೋಗ್ಯಕ್ಕೀಡಾದ ತಾಯಿ ನೋಡಲು ಕೈದಿಗೆ ಪೆರೋಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.