ETV Bharat / state

ಪ್ರಥಮ ಪಿಯು ತರಗತಿಗಳ ಆರಂಭಕ್ಕೆ ಉಪನ್ಯಾಸರ ಒತ್ತಾಯ: ಸಚಿವ ಸುರೇಶ್ ಕುಮಾರ್

author img

By

Published : Jan 15, 2021, 6:45 PM IST

ಇಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಅವರ ನೇತೃತ್ವದಲ್ಲಿ ದ್ವಿತೀಯ ಪಿಯು ತರಗತಿಗಳ ಆರಂಭದ ಪ್ರಗತಿ ಕುರಿತು ಸಭೆ ನಡೆಯಿತು. ಈ ವೇಳೆ ವರ್ಷದ ಪ್ರಥಮ ಪದವಿಪೂರ್ವ ತರಗತಿಗಳನ್ನು ಶೀಘ್ರದಲ್ಲೇ ಆರಂಭಿಸಬೇಕೆಂದು ವಿವಿಧ ಜಿಲ್ಲೆಗಳ ಪ್ರಾಚಾರ್ಯರು ಒತ್ತಾಯಿಸಿದರು.

ಸಚಿವ ಸುರೇಶ್​ ಕುಮಾರ್​ ಸಭೆ
Minister suresh kumar meeting

ಬೆಂಗಳೂರು: ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳ ಪೋಷಕರು ಮತ್ತು ವಿದ್ಯಾರ್ಥಿಗಳ ಹೆಚ್ಚಿನ ಒತ್ತಡದ ಹಿನ್ನೆಲೆಯಲ್ಲಿ ಈ ಶೈಕ್ಷಣಿಕ ವರ್ಷದ ಪ್ರಥಮ ಪದವಿಪೂರ್ವ ತರಗತಿಗಳನ್ನು ಶೀಘ್ರದಲ್ಲೇ ಆರಂಭಿಸಬೇಕೆಂದು ವಿವಿಧ ಜಿಲ್ಲೆಗಳ ಪ್ರಾಚಾರ್ಯರು ಒತ್ತಾಯಿಸಿದ್ದಾರೆ.

ದ್ವಿತೀಯ ಪಿಯು ತರಗತಿಗಳ ಆರಂಭದ ಪ್ರಗತಿ ಕುರಿತು ನಗರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ಆಯ್ದ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರು ಭಾಗವಹಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತರಗತಿಗಳನ್ನು ತಕ್ಷಣವೇ ಆರಂಭಿಸಬೇಕೆಂದು ಆಗ್ರಹಿಸಿದರು. ಪ್ರಾಚಾರ್ಯರ ಎಲ್ಲಾ ಅಭಿಪ್ರಾಯಗಳನ್ನು ಆಲಿಸಿದ ಸಚಿವರು ತರಗತಿ ಆರಂಭಿಸುವ ಕುರಿತು ತಮ್ಮ ಇಲಾಖೆ ರಾಜ್ಯ ಕೋವಿಡ್ ತಾಂತ್ರಿಕ ಸಮಿತಿಯ ಅಭಿಪ್ರಾಯ ಪಡೆದು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ ಎಂದರು.

ಈಗಾಗಲೇ ಪದವಿ ತರಗತಿಗಳು ಪೂರ್ಣವಾಗಿ ಆರಂಭವಾಗಿವೆ. ಶಾಲಾರಂಭದ ನಂತರ ತಾವು ಈ ತನಕ ವಿವಿಧ ಜಿಲ್ಲೆಗಳ 150ಕ್ಕೂ ಹೆಚ್ಚು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದಾಗ ಶಾಲಾರಂಭ ಕುರಿತು ಮಕ್ಕಳು ಮತ್ತು ಪೋಷಕರು ಉತ್ಸುಕರಾಗಿದ್ದು, ಶಾಲೆಗಳ ವಾತಾವರಣ ಮತ್ತು ಸುರಕ್ಷತೆ ಕುರಿತು ಭರವಸೆ ಮೂಡಿರುವುದರಿಂದ ಪ್ರಥಮ ಪಿಯು ಮತ್ತು 8 ಹಾಗೂ 9ನೇ ತರಗತಿಗಳನ್ನು ಆರಂಭಿಸಬೇಕೆಂಬ ಒತ್ತಾಯಿಸುತ್ತಿದ್ದಾರೆ ಎಂದು ಸಚಿವರು ಹೇಳಿದರು.

ಪರೀಕ್ಷೆಯ ಮೂಲಕವೇ ಪಾಸಾಗಲು ಮಕ್ಕಳ ಇಚ್ಚೆ:

ಶಾಲಾ ತರಗತಿಗಳನ್ನು ಆರಂಭಿಸಲು ಮತ್ತು ಪರೀಕ್ಷೆಯ ಮೂಲಕವೇ ಉತ್ತೀರ್ಣರಾಗಬೇಕೆಂಬುದು ಎಲ್ಲಾ ಮಕ್ಕಳ ಬಯಕೆಯಾಗಿದೆ. ಪರೀಕ್ಷೆಗಳಿಲ್ಲದೆ ಪಾಸಾಗುವುದನ್ನು ಬಹುತೇಕ ವಿದ್ಯಾರ್ಥಿಗಳು ಬಯಸುವುದಿಲ್ಲ. ಪರೀಕ್ಷೆ ಮೂಲಕವೆ ತಮ್ಮ ಸಾಮರ್ಥ್ಯ ಪ್ರಕಟಿಸಬೇಕೆಂಬುದೇ ಪ್ರತಿಯೊಬ್ಬರ ಇಚ್ಛೆಯಾಗಿರುವುದರಿಂದ ಶಾಲೆಗೆ ಭೌತಿಕವಾಗಿ ಹಾಜರಾಗಲು ಮಕ್ಕಳು ಇಚ್ಛಿಸುತ್ತಿದ್ದಾರೆ. ಇದು ನಾನು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳನ್ನು ಮಾತನಾಡಿಸಿದಾದ ಕಂಡುಕೊಂಡ ಸತ್ಯವಾಗಿದೆ ಎಂದು ಸುರೇಶ್ ಕುಮಾರ್ ತಮ್ಮ ಅನುಭವಗಳನ್ನು ಮೆಲುಕು ಹಾಕಿದರು.

ಶಿಕ್ಷಕರು ಮಕ್ಕಳ ಹಿತಕ್ಕೆ ಪೂರಕವಾಗಿ ಕೆಲಸ ಮಾಡಬೇಕು:

ಇದು ಸಂಕಷ್ಟ ಮತ್ತು ಸವಾಲಿನ ಸಮಯವಾಗಿದ್ದು, ಸಮಾಜದ ಪ್ರತಿಯೊಬ್ಬರೂ ಸಾಮಾಜಿಕ ಜವಾಬ್ದಾರಿಯ ಹಿನ್ನೆಲೆಯಲ್ಲಿ ಕೆಲಸ ಮಾಡಬೇಕಾಗಿದೆ. ಮಕ್ಕಳಿಗೆ ಪರೀಕ್ಷಾ ಸಮಯ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಉಪನ್ಯಾಸಕರು, ಪ್ರಾಚಾರ್ಯರು ನಿಗದಿತ ಪಠ್ಯಾಂಶ ಪೂರ್ಣಗೊಳಿಸಲು ಹೆಚ್ಚಿನ ಸಮಯ ನೀಡುವುದರೊಂದಿಗೆ ಮಕ್ಕಳ ಹಿತಕ್ಕೆ ಪೂರಕವಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ ಎಂದರು.

ಕೋವಿಡ್‍ನಂತಹ ಆರ್ಥಿಕ ಸಂಕಷ್ಟದ ಸಮಯದಲ್ಲೂ ಸರ್ಕಾರ ಯಾರೊಬ್ಬರಿಗೂ ವೇತನವನ್ನು ಕಡಿಮೆ ಮಾಡಿಲ್ಲ. ಸವಲತ್ತುಗಳನ್ನು ವ್ಯತ್ಯಯ ಮಾಡಿಲ್ಲ. ಹಾಗಾಗಿ ನಾವೆಲ್ಲರೂ ಇಂತಹ ಸವಾಲಿನ ಸಮಯದಲ್ಲಿ ಸಾಮಾಜಿಕ ಹೊಣೆಗಾರಿಕೆಯನ್ನು ಅರ್ಥೈಸಿಕೊಂಡು ಮುನ್ನಡೆಯಬೇಕಿದೆ. ಈಗಾಗಲೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು ಆರಂಭವಾಗಿವೆ. ಈ ಕುರಿತು ಪ್ರಾಚಾರ್ಯರು ಮಕ್ಕಳಿಗೆ ತಿಳಿ ಹೇಳಬೇಕೆಂದರಲ್ಲದೆ ಪ್ರತಿಯೊಬ್ಬ ಪ್ರಾಚಾರ್ಯರಿಂದ ತಮ್ಮ ಕಾಲೇಜಿನ ಪರಿಸ್ಥಿತಿ, ಮಕ್ಕಳ ಹಾಜರಾತಿ, ಕಾಲೇಜು ಆರಂಭದ ಕುರಿತು ಅಭಿಪ್ರಾಯಗಳನ್ನು ಆಲಿಸಿದರು.

ಇದನ್ನೂ ಓದಿ: ಮೊದಲಿಗೆ ಗ್ರೂಪ್ ಡಿ ನೌಕರರು, ಸಫಾಯಿ ಕರ್ಮಚಾರಿಗಳಿಗೆ ಲಸಿಕೆ: ಸಚಿವ ಡಾ.ಸುಧಾಕರ್

ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡ ವಿವಿಧ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು, ಬಹುತೇಕ ವಿದ್ಯಾರ್ಥಿಗಳು, ಪೋಷಕರು ಪ್ರಥಮ ಪಿಯು ತರಗತಿಗಳನ್ನು ಜ.1ರಿಂದಲೇ ಆರಂಭಿಸಬೇಕಿತ್ತು. ಈಗಾಲಾದರೂ ಕ್ಲಾಸ್​​​ಗಳನ್ನು ಆರಂಭಿಸಬೇಕೆಂದು ಒತ್ತಾಯಿಸಿ ದೂರವಾಣಿ ಕರೆ ಮಾಡುತ್ತಿದ್ದಾರೆ.ಪದವಿ ಪೂರ್ವ ಶಿಕ್ಷಣದಲ್ಲಿ ಪುನರ್ಮನನ ತರಗತಿಗಳನ್ನು ನಡೆಸಬೇಕು ಎನ್ನುತ್ತಿದ್ದಾರೆ.

ಒಂದು ಬೆಂಚಿಗೆ ಇಬ್ಬರು ವಿದ್ಯಾರ್ಥಿಗಳಂತೆ ಕೂರಿಸಲು ಅನುವಾಗುವಂತೆ ಕೋವಿಡ್ ನಿಯಮಗಳಲ್ಲಿ ಸ್ವಲ್ಪ ಸಡಿಲಿಕೆ ಮಾಡಿ, ಮಕ್ಕಳು ಮನೆಯಿಂದ ಊಟ-ಉಪಹಾರ ತರಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು. ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಎದುರಿಸುವ ಮಕ್ಕಳು ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳ ಒಟ್ಟಾರೆ ಪಠ್ಯಗಳ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸಬೇಕಿರುವುದರಿಂದ ಪಿಯು ತರಗತಿಗಳು ಮುಖ್ಯವಾಗಿದೆ. ಹಾಗೆಯೇ ಎಲ್ಲಾ ಪ್ರಾಚಾರ್ಯರು ಪ್ರಥಮ ಪಿಯು ತರಗತಿಗಳನ್ನು ಆರಂಭಿಸಬೇಕೆಂಬ ಪೋಷಕರ ಮತ್ತು ಮಕ್ಕಳ ಒಟ್ಟಾರೆ ಅಭಿಪ್ರಾಯಗಳು ಮತ್ತು ಈ ಸಭೆಯಲ್ಲಿ ವ್ಯಕ್ತವಾದ ಅಂಶಗಳನ್ನು ತಾವು ರಾಜ್ಯ ಕೋವಿಡ್ ತಾಂತ್ರಿಕ ಸಮಿತಿ ಗಮನಕ್ಕೆ ತಂದು ಶೀಘ್ರದಲ್ಲೇ ಪ್ರಥಮ ಪಿಯು ತರಗತಿಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಉಪನ್ಯಾಸಕರ ಕೊರತೆ:

ಪರೀಕ್ಷಾವಧಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಈಗಾಗಲೇ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಂಬಂಧಪಟ್ಟವರೊಂದಿಗೆ ಚರ್ಚಿಸಲಾಗುವುದು. ಇಂತಹ ವಿಷಮ ಸಂದರ್ಭದಲ್ಲಿ ವಿದ್ಯಾರ್ಥಿ ಕಾಳಜಿಯುಳ್ಳ ಸೇವೆಯಿಂದ ನಿವೃತ್ತಿಯಾಗಿರುವ ಉಪನ್ಯಾಸಕರುಗಳು ಉಚಿತವಾಗಿ ಪಾಠ ಮಾಡಲು ಇಚ್ಛಿಸಿದ್ದಲ್ಲಿ ಅವರ ಸನಿಹದ ಕಾಲೇಜುಗಳಲ್ಲಿ ಅವಕಾಶ ನೀಡಲಾಗುತ್ತದೆ. ಈ ಬಗ್ಗೆ ಇಷ್ಟರಲ್ಲಿಯೇ ಎಲ್ಲರಿಗೂ ಪತ್ರ ಬರೆದು ಮನವಿ ಮಾಡಲಾಗುವುದು ಎಂದು ಹೇಳಿದರು.

ಸಂಚಿತ ನಿಧಿ ಬಳಸಿ:

ಶಾಲಾ ಕಾಲೇಜುಗಳ ಸ್ಯಾನಿಟೈಸೇಷನ್ ಮತ್ತು ಶೌಚಾಲಯ ಸ್ವಚ್ಛತೆಯನ್ನು ಸರ್ಕಾರ ಪ್ರಸ್ತುತ ಸಂದರ್ಭದಲ್ಲಿ ಆಯಾ ಮಟ್ಟದ ಸ್ಥಳೀಯ ಸಂಸ್ಥೆಗಳಿಗೆ ವಹಿಸಿದೆ. ಅಗತ್ಯ ಬಿದ್ದರೆ ಶೌಚಾಲಯ ಸ್ವಚ್ಛತೆ ಹಾಗೂ ಗ್ರೂಪ್-ಡಿ ನೌಕರರ ನೇಮಕಕ್ಕೆ ಕಾಲೇಜು ಖಾತೆಯಲ್ಲಿರುವ ಸಂಚಿತ ನಿಧಿ ಹಣವನ್ನು ಬಳಸಿಕೊಳ್ಳಬಹುದಾಗಿದೆ ಎಂದು ಸೂಚಿಸಿದರು.

ವಿಧಾನಪರಿಷತ್ ಸದಸ್ಯ ಹಾಗೂ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಟಿ. ಶ್ರೀಕಂಠೇಗೌಡ ಪ್ರಥಮ ಪಿಯು ತರಗತಿಗಳೂ ಪ್ರಮುಖವಾಗಿರುವುದರಿಂದ ಪ್ರಥಮ ಪಿಯು ತರಗತಿಗಳನ್ನು ತಡಮಾಡದೆ ಆರಂಭಿಸಬೇಕೆಂದು ಒತ್ತಾಯಿಸಿದರು.

ಸಭೆಯಲ್ಲಿ ರಾಜ್ಯ ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ನಿಂಗೇಗೌಡ, ಮಾಧ್ಯಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಗಂಗಾಧರ ಸೇರಿದಂತೆ 100ಕ್ಕೂ ಹೆಚ್ಚು ಪ್ರಾಚಾರ್ಯರು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್, ಪಿಯು ಇಲಾಖೆ ನಿರ್ದೇಶಕರಿ ಆರ್. ಸ್ನೇಹಲ್ ಸೇರಿದಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಬೆಂಗಳೂರು: ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳ ಪೋಷಕರು ಮತ್ತು ವಿದ್ಯಾರ್ಥಿಗಳ ಹೆಚ್ಚಿನ ಒತ್ತಡದ ಹಿನ್ನೆಲೆಯಲ್ಲಿ ಈ ಶೈಕ್ಷಣಿಕ ವರ್ಷದ ಪ್ರಥಮ ಪದವಿಪೂರ್ವ ತರಗತಿಗಳನ್ನು ಶೀಘ್ರದಲ್ಲೇ ಆರಂಭಿಸಬೇಕೆಂದು ವಿವಿಧ ಜಿಲ್ಲೆಗಳ ಪ್ರಾಚಾರ್ಯರು ಒತ್ತಾಯಿಸಿದ್ದಾರೆ.

ದ್ವಿತೀಯ ಪಿಯು ತರಗತಿಗಳ ಆರಂಭದ ಪ್ರಗತಿ ಕುರಿತು ನಗರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯ ಆಯ್ದ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರು ಭಾಗವಹಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತರಗತಿಗಳನ್ನು ತಕ್ಷಣವೇ ಆರಂಭಿಸಬೇಕೆಂದು ಆಗ್ರಹಿಸಿದರು. ಪ್ರಾಚಾರ್ಯರ ಎಲ್ಲಾ ಅಭಿಪ್ರಾಯಗಳನ್ನು ಆಲಿಸಿದ ಸಚಿವರು ತರಗತಿ ಆರಂಭಿಸುವ ಕುರಿತು ತಮ್ಮ ಇಲಾಖೆ ರಾಜ್ಯ ಕೋವಿಡ್ ತಾಂತ್ರಿಕ ಸಮಿತಿಯ ಅಭಿಪ್ರಾಯ ಪಡೆದು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ ಎಂದರು.

ಈಗಾಗಲೇ ಪದವಿ ತರಗತಿಗಳು ಪೂರ್ಣವಾಗಿ ಆರಂಭವಾಗಿವೆ. ಶಾಲಾರಂಭದ ನಂತರ ತಾವು ಈ ತನಕ ವಿವಿಧ ಜಿಲ್ಲೆಗಳ 150ಕ್ಕೂ ಹೆಚ್ಚು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದಾಗ ಶಾಲಾರಂಭ ಕುರಿತು ಮಕ್ಕಳು ಮತ್ತು ಪೋಷಕರು ಉತ್ಸುಕರಾಗಿದ್ದು, ಶಾಲೆಗಳ ವಾತಾವರಣ ಮತ್ತು ಸುರಕ್ಷತೆ ಕುರಿತು ಭರವಸೆ ಮೂಡಿರುವುದರಿಂದ ಪ್ರಥಮ ಪಿಯು ಮತ್ತು 8 ಹಾಗೂ 9ನೇ ತರಗತಿಗಳನ್ನು ಆರಂಭಿಸಬೇಕೆಂಬ ಒತ್ತಾಯಿಸುತ್ತಿದ್ದಾರೆ ಎಂದು ಸಚಿವರು ಹೇಳಿದರು.

ಪರೀಕ್ಷೆಯ ಮೂಲಕವೇ ಪಾಸಾಗಲು ಮಕ್ಕಳ ಇಚ್ಚೆ:

ಶಾಲಾ ತರಗತಿಗಳನ್ನು ಆರಂಭಿಸಲು ಮತ್ತು ಪರೀಕ್ಷೆಯ ಮೂಲಕವೇ ಉತ್ತೀರ್ಣರಾಗಬೇಕೆಂಬುದು ಎಲ್ಲಾ ಮಕ್ಕಳ ಬಯಕೆಯಾಗಿದೆ. ಪರೀಕ್ಷೆಗಳಿಲ್ಲದೆ ಪಾಸಾಗುವುದನ್ನು ಬಹುತೇಕ ವಿದ್ಯಾರ್ಥಿಗಳು ಬಯಸುವುದಿಲ್ಲ. ಪರೀಕ್ಷೆ ಮೂಲಕವೆ ತಮ್ಮ ಸಾಮರ್ಥ್ಯ ಪ್ರಕಟಿಸಬೇಕೆಂಬುದೇ ಪ್ರತಿಯೊಬ್ಬರ ಇಚ್ಛೆಯಾಗಿರುವುದರಿಂದ ಶಾಲೆಗೆ ಭೌತಿಕವಾಗಿ ಹಾಜರಾಗಲು ಮಕ್ಕಳು ಇಚ್ಛಿಸುತ್ತಿದ್ದಾರೆ. ಇದು ನಾನು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳನ್ನು ಮಾತನಾಡಿಸಿದಾದ ಕಂಡುಕೊಂಡ ಸತ್ಯವಾಗಿದೆ ಎಂದು ಸುರೇಶ್ ಕುಮಾರ್ ತಮ್ಮ ಅನುಭವಗಳನ್ನು ಮೆಲುಕು ಹಾಕಿದರು.

ಶಿಕ್ಷಕರು ಮಕ್ಕಳ ಹಿತಕ್ಕೆ ಪೂರಕವಾಗಿ ಕೆಲಸ ಮಾಡಬೇಕು:

ಇದು ಸಂಕಷ್ಟ ಮತ್ತು ಸವಾಲಿನ ಸಮಯವಾಗಿದ್ದು, ಸಮಾಜದ ಪ್ರತಿಯೊಬ್ಬರೂ ಸಾಮಾಜಿಕ ಜವಾಬ್ದಾರಿಯ ಹಿನ್ನೆಲೆಯಲ್ಲಿ ಕೆಲಸ ಮಾಡಬೇಕಾಗಿದೆ. ಮಕ್ಕಳಿಗೆ ಪರೀಕ್ಷಾ ಸಮಯ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಉಪನ್ಯಾಸಕರು, ಪ್ರಾಚಾರ್ಯರು ನಿಗದಿತ ಪಠ್ಯಾಂಶ ಪೂರ್ಣಗೊಳಿಸಲು ಹೆಚ್ಚಿನ ಸಮಯ ನೀಡುವುದರೊಂದಿಗೆ ಮಕ್ಕಳ ಹಿತಕ್ಕೆ ಪೂರಕವಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ ಎಂದರು.

ಕೋವಿಡ್‍ನಂತಹ ಆರ್ಥಿಕ ಸಂಕಷ್ಟದ ಸಮಯದಲ್ಲೂ ಸರ್ಕಾರ ಯಾರೊಬ್ಬರಿಗೂ ವೇತನವನ್ನು ಕಡಿಮೆ ಮಾಡಿಲ್ಲ. ಸವಲತ್ತುಗಳನ್ನು ವ್ಯತ್ಯಯ ಮಾಡಿಲ್ಲ. ಹಾಗಾಗಿ ನಾವೆಲ್ಲರೂ ಇಂತಹ ಸವಾಲಿನ ಸಮಯದಲ್ಲಿ ಸಾಮಾಜಿಕ ಹೊಣೆಗಾರಿಕೆಯನ್ನು ಅರ್ಥೈಸಿಕೊಂಡು ಮುನ್ನಡೆಯಬೇಕಿದೆ. ಈಗಾಗಲೇ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳು ಆರಂಭವಾಗಿವೆ. ಈ ಕುರಿತು ಪ್ರಾಚಾರ್ಯರು ಮಕ್ಕಳಿಗೆ ತಿಳಿ ಹೇಳಬೇಕೆಂದರಲ್ಲದೆ ಪ್ರತಿಯೊಬ್ಬ ಪ್ರಾಚಾರ್ಯರಿಂದ ತಮ್ಮ ಕಾಲೇಜಿನ ಪರಿಸ್ಥಿತಿ, ಮಕ್ಕಳ ಹಾಜರಾತಿ, ಕಾಲೇಜು ಆರಂಭದ ಕುರಿತು ಅಭಿಪ್ರಾಯಗಳನ್ನು ಆಲಿಸಿದರು.

ಇದನ್ನೂ ಓದಿ: ಮೊದಲಿಗೆ ಗ್ರೂಪ್ ಡಿ ನೌಕರರು, ಸಫಾಯಿ ಕರ್ಮಚಾರಿಗಳಿಗೆ ಲಸಿಕೆ: ಸಚಿವ ಡಾ.ಸುಧಾಕರ್

ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡ ವಿವಿಧ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರು, ಬಹುತೇಕ ವಿದ್ಯಾರ್ಥಿಗಳು, ಪೋಷಕರು ಪ್ರಥಮ ಪಿಯು ತರಗತಿಗಳನ್ನು ಜ.1ರಿಂದಲೇ ಆರಂಭಿಸಬೇಕಿತ್ತು. ಈಗಾಲಾದರೂ ಕ್ಲಾಸ್​​​ಗಳನ್ನು ಆರಂಭಿಸಬೇಕೆಂದು ಒತ್ತಾಯಿಸಿ ದೂರವಾಣಿ ಕರೆ ಮಾಡುತ್ತಿದ್ದಾರೆ.ಪದವಿ ಪೂರ್ವ ಶಿಕ್ಷಣದಲ್ಲಿ ಪುನರ್ಮನನ ತರಗತಿಗಳನ್ನು ನಡೆಸಬೇಕು ಎನ್ನುತ್ತಿದ್ದಾರೆ.

ಒಂದು ಬೆಂಚಿಗೆ ಇಬ್ಬರು ವಿದ್ಯಾರ್ಥಿಗಳಂತೆ ಕೂರಿಸಲು ಅನುವಾಗುವಂತೆ ಕೋವಿಡ್ ನಿಯಮಗಳಲ್ಲಿ ಸ್ವಲ್ಪ ಸಡಿಲಿಕೆ ಮಾಡಿ, ಮಕ್ಕಳು ಮನೆಯಿಂದ ಊಟ-ಉಪಹಾರ ತರಲು ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು. ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಎದುರಿಸುವ ಮಕ್ಕಳು ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳ ಒಟ್ಟಾರೆ ಪಠ್ಯಗಳ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸಬೇಕಿರುವುದರಿಂದ ಪಿಯು ತರಗತಿಗಳು ಮುಖ್ಯವಾಗಿದೆ. ಹಾಗೆಯೇ ಎಲ್ಲಾ ಪ್ರಾಚಾರ್ಯರು ಪ್ರಥಮ ಪಿಯು ತರಗತಿಗಳನ್ನು ಆರಂಭಿಸಬೇಕೆಂಬ ಪೋಷಕರ ಮತ್ತು ಮಕ್ಕಳ ಒಟ್ಟಾರೆ ಅಭಿಪ್ರಾಯಗಳು ಮತ್ತು ಈ ಸಭೆಯಲ್ಲಿ ವ್ಯಕ್ತವಾದ ಅಂಶಗಳನ್ನು ತಾವು ರಾಜ್ಯ ಕೋವಿಡ್ ತಾಂತ್ರಿಕ ಸಮಿತಿ ಗಮನಕ್ಕೆ ತಂದು ಶೀಘ್ರದಲ್ಲೇ ಪ್ರಥಮ ಪಿಯು ತರಗತಿಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಉಪನ್ಯಾಸಕರ ಕೊರತೆ:

ಪರೀಕ್ಷಾವಧಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಈಗಾಗಲೇ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸಂಬಂಧಪಟ್ಟವರೊಂದಿಗೆ ಚರ್ಚಿಸಲಾಗುವುದು. ಇಂತಹ ವಿಷಮ ಸಂದರ್ಭದಲ್ಲಿ ವಿದ್ಯಾರ್ಥಿ ಕಾಳಜಿಯುಳ್ಳ ಸೇವೆಯಿಂದ ನಿವೃತ್ತಿಯಾಗಿರುವ ಉಪನ್ಯಾಸಕರುಗಳು ಉಚಿತವಾಗಿ ಪಾಠ ಮಾಡಲು ಇಚ್ಛಿಸಿದ್ದಲ್ಲಿ ಅವರ ಸನಿಹದ ಕಾಲೇಜುಗಳಲ್ಲಿ ಅವಕಾಶ ನೀಡಲಾಗುತ್ತದೆ. ಈ ಬಗ್ಗೆ ಇಷ್ಟರಲ್ಲಿಯೇ ಎಲ್ಲರಿಗೂ ಪತ್ರ ಬರೆದು ಮನವಿ ಮಾಡಲಾಗುವುದು ಎಂದು ಹೇಳಿದರು.

ಸಂಚಿತ ನಿಧಿ ಬಳಸಿ:

ಶಾಲಾ ಕಾಲೇಜುಗಳ ಸ್ಯಾನಿಟೈಸೇಷನ್ ಮತ್ತು ಶೌಚಾಲಯ ಸ್ವಚ್ಛತೆಯನ್ನು ಸರ್ಕಾರ ಪ್ರಸ್ತುತ ಸಂದರ್ಭದಲ್ಲಿ ಆಯಾ ಮಟ್ಟದ ಸ್ಥಳೀಯ ಸಂಸ್ಥೆಗಳಿಗೆ ವಹಿಸಿದೆ. ಅಗತ್ಯ ಬಿದ್ದರೆ ಶೌಚಾಲಯ ಸ್ವಚ್ಛತೆ ಹಾಗೂ ಗ್ರೂಪ್-ಡಿ ನೌಕರರ ನೇಮಕಕ್ಕೆ ಕಾಲೇಜು ಖಾತೆಯಲ್ಲಿರುವ ಸಂಚಿತ ನಿಧಿ ಹಣವನ್ನು ಬಳಸಿಕೊಳ್ಳಬಹುದಾಗಿದೆ ಎಂದು ಸೂಚಿಸಿದರು.

ವಿಧಾನಪರಿಷತ್ ಸದಸ್ಯ ಹಾಗೂ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಕೆ.ಟಿ. ಶ್ರೀಕಂಠೇಗೌಡ ಪ್ರಥಮ ಪಿಯು ತರಗತಿಗಳೂ ಪ್ರಮುಖವಾಗಿರುವುದರಿಂದ ಪ್ರಥಮ ಪಿಯು ತರಗತಿಗಳನ್ನು ತಡಮಾಡದೆ ಆರಂಭಿಸಬೇಕೆಂದು ಒತ್ತಾಯಿಸಿದರು.

ಸಭೆಯಲ್ಲಿ ರಾಜ್ಯ ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ನಿಂಗೇಗೌಡ, ಮಾಧ್ಯಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಗಂಗಾಧರ ಸೇರಿದಂತೆ 100ಕ್ಕೂ ಹೆಚ್ಚು ಪ್ರಾಚಾರ್ಯರು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್, ಪಿಯು ಇಲಾಖೆ ನಿರ್ದೇಶಕರಿ ಆರ್. ಸ್ನೇಹಲ್ ಸೇರಿದಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.