ETV Bharat / state

ನಾಳೆ ರಾಜ್ಯಾದ್ಯಂತ ರೈಲು ತಡೆ ಚಳವಳಿ: ರಾಜ್ಯ ಐಕ್ಯ ಹೋರಾಟ ಸಮಿತಿ ನೇತೃತ್ವ

author img

By

Published : Feb 17, 2021, 1:41 PM IST

Updated : Feb 17, 2021, 1:59 PM IST

ನಾಳೆ ರಾಜ್ಯಾದ್ಯಂತ ರಾಜ್ಯ ಐಕ್ಯ ಹೋರಾಟ ಸಮಿತಿ ರೈಲು ತಡೆ ಚಳವಳಿಗೆ ಕರೆ ನೀಡಿದೆ. ದೆಹಲಿ ರೈತ ಹೋರಾಟವನ್ನು ಬೆಂಬಲಿಸಲು ಹಾಗೂ ಸರ್ಕಾರ ವಿರುದ್ಧ ಈ ಚಳವಳಿಯನ್ನು ನಡೆಸಲಾಗುತ್ತಿದೆ ಎಂದು ಕುರುಬೂರು ಶಾಂತಕುಮಾರ್ ಹೇಳಿದ್ದಾರೆ.

ಕುರುಬೂರು ಶಾಂತಕುಮಾರ್
Kuruburu Shanthakumar

ಬೆಂಗಳೂರು: ನಾಳೆ ರಾಜ್ಯಾದ್ಯಂತ ರೈಲು ಸೇವೆ ಬಂದ್ ಆಗುವ ಲಕ್ಷಣಗಳಿದ್ದು, ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ರೈತರ ಆಕ್ರೋಶ ಬುಗಿಲೇಳುವ ಸಾಧ್ಯತೆಯಿದೆ.

ರಾಜ್ಯ ಐಕ್ಯ ಹೋರಾಟ ಸಮಿತಿ ರೈಲು ತಡೆ ಚಳವಳಿಗೆ ಕರೆ ನೀಡಿದ್ದು, ನಾಳೆ ರಾಜ್ಯಾದ್ಯಂತ 3 ಗಂಟೆಗಳ ಕಾಲ ಚಳವಳಿ ನಡೆಯಲಿದೆ ಎನ್ನಲಾಗುತ್ತಿದೆ.

ದೆಹಲಿ ರೈತರ ಹೋರಾಟವನ್ನು ಬೆಂಬಲಿಸಿ ರಾಜ್ಯಾದ್ಯಂತ ಮಧ್ಯಾಹ್ನ 12 ರಿಂದ 3ಗಂಟೆವರೆಗೆ ರೈಲು ತಡೆ ಚಳವಳಿ ನಡೆಯಲಿದ್ದು,ಕೃಷಿ ಕಾಯ್ದೆ ವಿರೋಧಿಸಿ ಹಾಗೂ ದೆಹಲಿ ರೈತ ಹೋರಾಟ ಬೆಂಬಲಿಸಿ ರೈಲು ತಡೆ ಚಳವಳಿ ನಡೆಸಲಾಗುವುದು. ಇದರ ಜೊತೆಗೆ ಕೇಂದ್ರ ಸರ್ಕಾರ ರೈತ ಚಳವಳಿಯನ್ನು ಹತ್ತಿಕ್ಕಿರೋದಕ್ಕೆ ವಿರೋಧ ಪಡಿಸುತ್ತೇವೆ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಈ ಸಮಯದಲ್ಲಿ ರೈಲು ಸೇವೆ ಬಂದ್​ ಆಗಲಿದೆಯಾ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ.

ಬೆಂಗಳೂರು: ನಾಳೆ ರಾಜ್ಯಾದ್ಯಂತ ರೈಲು ಸೇವೆ ಬಂದ್ ಆಗುವ ಲಕ್ಷಣಗಳಿದ್ದು, ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ರೈತರ ಆಕ್ರೋಶ ಬುಗಿಲೇಳುವ ಸಾಧ್ಯತೆಯಿದೆ.

ರಾಜ್ಯ ಐಕ್ಯ ಹೋರಾಟ ಸಮಿತಿ ರೈಲು ತಡೆ ಚಳವಳಿಗೆ ಕರೆ ನೀಡಿದ್ದು, ನಾಳೆ ರಾಜ್ಯಾದ್ಯಂತ 3 ಗಂಟೆಗಳ ಕಾಲ ಚಳವಳಿ ನಡೆಯಲಿದೆ ಎನ್ನಲಾಗುತ್ತಿದೆ.

ದೆಹಲಿ ರೈತರ ಹೋರಾಟವನ್ನು ಬೆಂಬಲಿಸಿ ರಾಜ್ಯಾದ್ಯಂತ ಮಧ್ಯಾಹ್ನ 12 ರಿಂದ 3ಗಂಟೆವರೆಗೆ ರೈಲು ತಡೆ ಚಳವಳಿ ನಡೆಯಲಿದ್ದು,ಕೃಷಿ ಕಾಯ್ದೆ ವಿರೋಧಿಸಿ ಹಾಗೂ ದೆಹಲಿ ರೈತ ಹೋರಾಟ ಬೆಂಬಲಿಸಿ ರೈಲು ತಡೆ ಚಳವಳಿ ನಡೆಸಲಾಗುವುದು. ಇದರ ಜೊತೆಗೆ ಕೇಂದ್ರ ಸರ್ಕಾರ ರೈತ ಚಳವಳಿಯನ್ನು ಹತ್ತಿಕ್ಕಿರೋದಕ್ಕೆ ವಿರೋಧ ಪಡಿಸುತ್ತೇವೆ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

ಈ ಸಮಯದಲ್ಲಿ ರೈಲು ಸೇವೆ ಬಂದ್​ ಆಗಲಿದೆಯಾ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ.

Last Updated : Feb 17, 2021, 1:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.