ETV Bharat / state

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಎಫ್ಐಆರ್ ರದ್ದುಕೋರಿ ಕೋರ್ಟ್ ಮೊರೆ‌ಹೋದ ನರೇಶ್, ಶ್ರವಣ್..

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಶ್ ಮತ್ತು ಶ್ರವಣ್ ಎಫ್ಐಆರ್ ರದ್ದುಕೋರಿ ಕೋರ್ಟ್ ಮೊರೆ‌ ಹೋಗಿದ್ದಾರೆ.

author img

By

Published : Jul 2, 2022, 1:57 PM IST

Naresh and Shravan approached court to cancel the FIR, Ramesh Jarakiholi CD case, Ramesh Jarakiholi CD case news, ಎಫ್ಐಆರ್ ರದ್ದುಕೋರಿ ಕೋರ್ಟ್ ಮೊರೆ‌ಹೋದ ನರೇಶ್ ಮತ್ತು ಶ್ರವಣ್, ರಮೇಶ್ ಜಾರಕಿಹೊಳಿ ಸಿಡಿ ಕೇಸ್, ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಸುದ್ದಿ,
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ FIR ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಲಾಗಿದೆ ಎನ್ನುವುದು ಬೆಳಕಿಗೆ ಬಂದಿದೆ. ನರೇಶ್ ಗೌಡ ಮತ್ತು ಶ್ರವಣ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ಸದಾಶಿವನಗರದಲ್ಲಿ ಜಾರಕಿಹೊಳಿ ನೀಡಿದ್ದ ದೂರಿನ ಎಫ್.ಐ.ಆರ್ ರದ್ದು ಮಾಡುವಂತೆ ಹೈಕೋರ್ಟ್​ ಅರ್ಜಿ ಸಲ್ಲಿಕೆಯಾಗಿದೆ.

ಎಫ್.ಐ.ಆರ್​ನಲ್ಲಿ ನಮ್ಮ ಹೆಸರಿಲ್ಲ. ಬ್ಲ್ಯಾಕ್​ಮೇಲ್ ಮತ್ತು ವಸೂಲಿಯಲ್ಲಿ ಭಾಗಿಯಾಗಿಲ್ಲ. ಪ್ರಕರಣ ದಾಖಲಾಗಿ ವರ್ಷ ಕಳೆದಿದೆ. ಹೀಗಾಗಿ ಎಫ್.ಐ.ಆರ್ ರದ್ದು ಗೊಳಿಸುವಂತೆ ಕೋರಿ ಸಿ.ಆರ್.ಪಿ.ಸಿ 482 ಅಡಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.

ಓದಿ: ರಮೇಶ್ ಜಾರಕಿಹೊಳಿ ಸಿಡಿ ಕೇಸ್: ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದ ಹೈಕೋರ್ಟ್

ಪ್ರಕರಣ ಸಿಬಿಐಗೆ?: ಸರ್ಕಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬಹುದು ಎನ್ನುವ ಮಾಹಿತಿ ಹರಿದಾಡ್ತಿರುವ ಹೊತ್ತಿನಲ್ಲಿ ಇದೀಗ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿರೋದು ಕುತೂಹಲ ಕೆರಳಿಸಿದೆ.

ಪ್ರಕರಣದ ಹಿನ್ನೆಲೆ: ಸಿಡಿ ವಿಚಾರವಾಗಿ ಸಚಿವ ಜಾರಕಿಹೋಳಿ ಸದಾಶಿವನಗರ ಠಾಣೆಯಲ್ಲಿ ಬ್ಲಾಕ್​ಮೇಲ್ ದೂರು ದಾಖಲಿಸಿದ್ದರು. ಕಬ್ಬನ್ ಪಾರ್ಕ್​ನಲ್ಲಿ ಸಂತ್ರಸ್ತೆ ಅಧಿಕಾರ‌ ದುರುಪಯೋಗ ಪಡಿಸಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದರು. ಯುವತಿ ದಾಖಲಿಸಿದ ದೂರಿನನ್ವಯ ತನಿಖೆ ನಡೆಸಿದ ಪೊಲೀಸರು ಅತ್ಯಾಚಾರ ಕೇಸ್ ಸಂಬಂಧ ಬಿ ರಿಪೋರ್ಟ್ ಸಲ್ಲಿಸಿದ್ದರು. ಸಿಡಿ ಕೇಸ್​ನಿಂದಾಗಿ ಸಚಿವರಾಗಿದ್ದ ಜಾರಕಿಹೋಳಿ ತಮ್ಮ ಸಚಿವ ಸ್ಥಾನವನ್ನು ಕಳೆದುಕೊಂಡಿದ್ದರು.

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ FIR ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಲಾಗಿದೆ ಎನ್ನುವುದು ಬೆಳಕಿಗೆ ಬಂದಿದೆ. ನರೇಶ್ ಗೌಡ ಮತ್ತು ಶ್ರವಣ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದು, ಸದಾಶಿವನಗರದಲ್ಲಿ ಜಾರಕಿಹೊಳಿ ನೀಡಿದ್ದ ದೂರಿನ ಎಫ್.ಐ.ಆರ್ ರದ್ದು ಮಾಡುವಂತೆ ಹೈಕೋರ್ಟ್​ ಅರ್ಜಿ ಸಲ್ಲಿಕೆಯಾಗಿದೆ.

ಎಫ್.ಐ.ಆರ್​ನಲ್ಲಿ ನಮ್ಮ ಹೆಸರಿಲ್ಲ. ಬ್ಲ್ಯಾಕ್​ಮೇಲ್ ಮತ್ತು ವಸೂಲಿಯಲ್ಲಿ ಭಾಗಿಯಾಗಿಲ್ಲ. ಪ್ರಕರಣ ದಾಖಲಾಗಿ ವರ್ಷ ಕಳೆದಿದೆ. ಹೀಗಾಗಿ ಎಫ್.ಐ.ಆರ್ ರದ್ದು ಗೊಳಿಸುವಂತೆ ಕೋರಿ ಸಿ.ಆರ್.ಪಿ.ಸಿ 482 ಅಡಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.

ಓದಿ: ರಮೇಶ್ ಜಾರಕಿಹೊಳಿ ಸಿಡಿ ಕೇಸ್: ವಿಚಾರಣೆಯನ್ನು ಜೂನ್ 27ಕ್ಕೆ ಮುಂದೂಡಿದ ಹೈಕೋರ್ಟ್

ಪ್ರಕರಣ ಸಿಬಿಐಗೆ?: ಸರ್ಕಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬಹುದು ಎನ್ನುವ ಮಾಹಿತಿ ಹರಿದಾಡ್ತಿರುವ ಹೊತ್ತಿನಲ್ಲಿ ಇದೀಗ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿರೋದು ಕುತೂಹಲ ಕೆರಳಿಸಿದೆ.

ಪ್ರಕರಣದ ಹಿನ್ನೆಲೆ: ಸಿಡಿ ವಿಚಾರವಾಗಿ ಸಚಿವ ಜಾರಕಿಹೋಳಿ ಸದಾಶಿವನಗರ ಠಾಣೆಯಲ್ಲಿ ಬ್ಲಾಕ್​ಮೇಲ್ ದೂರು ದಾಖಲಿಸಿದ್ದರು. ಕಬ್ಬನ್ ಪಾರ್ಕ್​ನಲ್ಲಿ ಸಂತ್ರಸ್ತೆ ಅಧಿಕಾರ‌ ದುರುಪಯೋಗ ಪಡಿಸಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದರು. ಯುವತಿ ದಾಖಲಿಸಿದ ದೂರಿನನ್ವಯ ತನಿಖೆ ನಡೆಸಿದ ಪೊಲೀಸರು ಅತ್ಯಾಚಾರ ಕೇಸ್ ಸಂಬಂಧ ಬಿ ರಿಪೋರ್ಟ್ ಸಲ್ಲಿಸಿದ್ದರು. ಸಿಡಿ ಕೇಸ್​ನಿಂದಾಗಿ ಸಚಿವರಾಗಿದ್ದ ಜಾರಕಿಹೋಳಿ ತಮ್ಮ ಸಚಿವ ಸ್ಥಾನವನ್ನು ಕಳೆದುಕೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.