ETV Bharat / state

ಯಡಿಯೂರಪ್ಪರನ್ನ ಕುರ್ಚಿಯಿಂದ ಇಳಿಸಲು ಕರ್ನಾಟಕದಲ್ಲಿ ಯುದ್ಧ: ಸುರ್ಜೇವಾಲಾ

author img

By

Published : Oct 21, 2020, 8:48 PM IST

ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆ ಎಂಬ ಮಾತು ದಟ್ಟವಾಗಿತ್ತಿದೆ. ಇದನ್ನೇ ರಾಜಕೀಯದ ಲಾಭ ಪಡೆಯಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು ಇದೀಗ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೂಡ ಕಾಂಗ್ರೆಸ್ ನಾಯಕರ ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ..

Randeep Surjewala reaction about BSY
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ

ಬೆಂಗಳೂರು : ರಾಜ್ಯದಲ್ಲಿ ಬಿ ಎಸ್, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ನಡೆಯುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಕೂಡ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ದೆಹಲಿಯ ನೆರವಿನೊಂದಿಗೆ ಬಿ ಎಸ್ ಯಡಿಯೂರಪ್ಪರನ್ನ ಮುಖ್ಯಮಂತ್ರಿ ಕುರ್ಚಿಯಿಂದ ತೆಗೆದು ಹಾಕಲು ಕರ್ನಾಟಕದಲ್ಲಿ ಯುದ್ಧವೇ ನಡೆಯುತ್ತಿದೆ. ಅಧಿಕಾರ ಲಾಲಸೆಯ ದೊಂಬರಾಟದಲ್ಲಿ ಯಾವುದೇ ಬೆಲೆ ತೆತ್ತಾದರೂ ಮಂತ್ರಿಗಿರಿ ಪಡೆಯುವ ಚಟ ಬಿಜೆಪಿ ಮೈಮೇಲೇರಿದೆ. ಆದರೆ, ಪ್ರವಾಹ, ಅತಿವೃಷ್ಟಿ, ಕೊರೊನಾ ಸಂತ್ರಸ್ತ ಕನ್ನಡಿಗರ ಕಷ್ಟ ಇವರಿಗೆ ಕೇಳದಾಗಿದೆ! ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾರಂಭವೊಂದರಲ್ಲಿ ಮಾತನಾಡಿದ ಭಾಷಣದ ತುಣುಕನ್ನು ಲಗತ್ತಿಸಿರುವ ಅವರು, ಬಿಜೆಪಿ ಪಕ್ಷದ ನಾಯಕರೇ ಅಪಸ್ವರ ಎತ್ತಿದ್ದಾರೆ. ಸಿಎಂ ಬಗ್ಗೆ ಬೇಸರದ ಧ್ವನಿ ಎತ್ತಿರುವ ಯತ್ನಾಳ್ ವಿಡಿಯೋವನ್ನ ಲಗತ್ತಿಸಿ ಸಿಎಂ ಬದಲಾವಣೆ ಸಾಧ್ಯತೆ ಹೆಚ್ಚಿದೆ ಎಂಬರ್ಥದಲ್ಲಿ ಟ್ವೀಟ್ ಮಾಡಿದ್ದಾರೆ.

  • ದೆಹಲಿಯ ನೆರವಿನೊಂದಿಗೆ ಬಿಎಸ್ ಯಡಿಯೂರಪ್ಪರನ್ನ ಮುಖ್ಯಮಂತ್ರಿ ಕುರ್ಚಿಯಿಂದ ತೆಗೆದುಹಾಕಲು ಕರ್ನಾಟಕದಲ್ಲಿ ಯುದ್ಧವೇ ನಡೆಯುತ್ತಿದೆ.

    ಅಧಿಕಾರ ಲಾಲಸೆಯ ದೊಂಬರಾಟದಲ್ಲಿ ಯಾವುದೇ ಬೆಲೆ ತೆತ್ತಾದರೂ ಮಂತ್ರಿಗಿರಿ ಪಡೆಯುವ ಚಟ ಬಿಜೆಪಿ ಮೈಮೇಲೆರಿದೆ.

    ಆದರೆ ಪ್ರವಾಹ, ಅತಿವೃಷ್ಠಿ, ಕರೋನಾ ಸಂತ್ರಸ್ತ ಕನ್ನಡಿಗರ ಕಷ್ಟ ಇವರಿಗೆ ಕೇಳದಾಗಿದೆ! pic.twitter.com/jEIqoYrkNi

    — Randeep Singh Surjewala (@rssurjewala) October 21, 2020 " class="align-text-top noRightClick twitterSection" data=" ">

ಬೆಂಗಳೂರು : ರಾಜ್ಯದಲ್ಲಿ ಬಿ ಎಸ್, ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನ ನಡೆಯುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಕೂಡ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ದೆಹಲಿಯ ನೆರವಿನೊಂದಿಗೆ ಬಿ ಎಸ್ ಯಡಿಯೂರಪ್ಪರನ್ನ ಮುಖ್ಯಮಂತ್ರಿ ಕುರ್ಚಿಯಿಂದ ತೆಗೆದು ಹಾಕಲು ಕರ್ನಾಟಕದಲ್ಲಿ ಯುದ್ಧವೇ ನಡೆಯುತ್ತಿದೆ. ಅಧಿಕಾರ ಲಾಲಸೆಯ ದೊಂಬರಾಟದಲ್ಲಿ ಯಾವುದೇ ಬೆಲೆ ತೆತ್ತಾದರೂ ಮಂತ್ರಿಗಿರಿ ಪಡೆಯುವ ಚಟ ಬಿಜೆಪಿ ಮೈಮೇಲೇರಿದೆ. ಆದರೆ, ಪ್ರವಾಹ, ಅತಿವೃಷ್ಟಿ, ಕೊರೊನಾ ಸಂತ್ರಸ್ತ ಕನ್ನಡಿಗರ ಕಷ್ಟ ಇವರಿಗೆ ಕೇಳದಾಗಿದೆ! ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮಾರಂಭವೊಂದರಲ್ಲಿ ಮಾತನಾಡಿದ ಭಾಷಣದ ತುಣುಕನ್ನು ಲಗತ್ತಿಸಿರುವ ಅವರು, ಬಿಜೆಪಿ ಪಕ್ಷದ ನಾಯಕರೇ ಅಪಸ್ವರ ಎತ್ತಿದ್ದಾರೆ. ಸಿಎಂ ಬಗ್ಗೆ ಬೇಸರದ ಧ್ವನಿ ಎತ್ತಿರುವ ಯತ್ನಾಳ್ ವಿಡಿಯೋವನ್ನ ಲಗತ್ತಿಸಿ ಸಿಎಂ ಬದಲಾವಣೆ ಸಾಧ್ಯತೆ ಹೆಚ್ಚಿದೆ ಎಂಬರ್ಥದಲ್ಲಿ ಟ್ವೀಟ್ ಮಾಡಿದ್ದಾರೆ.

  • ದೆಹಲಿಯ ನೆರವಿನೊಂದಿಗೆ ಬಿಎಸ್ ಯಡಿಯೂರಪ್ಪರನ್ನ ಮುಖ್ಯಮಂತ್ರಿ ಕುರ್ಚಿಯಿಂದ ತೆಗೆದುಹಾಕಲು ಕರ್ನಾಟಕದಲ್ಲಿ ಯುದ್ಧವೇ ನಡೆಯುತ್ತಿದೆ.

    ಅಧಿಕಾರ ಲಾಲಸೆಯ ದೊಂಬರಾಟದಲ್ಲಿ ಯಾವುದೇ ಬೆಲೆ ತೆತ್ತಾದರೂ ಮಂತ್ರಿಗಿರಿ ಪಡೆಯುವ ಚಟ ಬಿಜೆಪಿ ಮೈಮೇಲೆರಿದೆ.

    ಆದರೆ ಪ್ರವಾಹ, ಅತಿವೃಷ್ಠಿ, ಕರೋನಾ ಸಂತ್ರಸ್ತ ಕನ್ನಡಿಗರ ಕಷ್ಟ ಇವರಿಗೆ ಕೇಳದಾಗಿದೆ! pic.twitter.com/jEIqoYrkNi

    — Randeep Singh Surjewala (@rssurjewala) October 21, 2020 " class="align-text-top noRightClick twitterSection" data=" ">
ETV Bharat Logo

Copyright © 2024 Ushodaya Enterprises Pvt. Ltd., All Rights Reserved.