ETV Bharat / state

ಬಿಡಿಎ ನಿರ್ಮಾಣದ ಶಿವರಾಮ ಕಾರಂತ ಬಡಾವಣೆ ಸೈಟ್‌ ದರ ನಿಗದಿ: ಸರ್ಕಾರದ ಅನುಮೋದನೆ ಬಾಕಿ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸಿರುವ ಶಿವರಾಮ ಕಾರಂತ ಬಡಾವಣೆಯ ಸೈಟ್‌ಗಳ ದರ ನಿಗದಿ ಮಾಡಲಾಗಿದ್ದು, ಅನುಷ್ಠಾನಕ್ಕೆ ಸರ್ಕಾರ ಅನುಮೋದನೆ ಮಾಡಲು ಬಾಕಿಯಿದೆ.

author img

By ETV Bharat Karnataka Team

Published : Dec 24, 2023, 7:11 AM IST

Updated : Dec 24, 2023, 1:57 PM IST

Bangalore Development Authority
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

ಬೆಂಗಳೂರು: ಬಿಡಿಎ ನಿರ್ಮಿಸಿರುವ ಶಿವರಾಮ ಕಾರಂತ ಬಡಾವಣೆಯ ಸೈಟ್‌ಗಳ ದರ ನಿಗದಿ ಮಾಡಲಾಗಿದೆ. ಆದರೆ ಅನುಷ್ಠಾನಕ್ಕೆ ಸರ್ಕಾರದ ಅನುಮೋದನೆಗಾಗಿ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಕಾಯುತ್ತಿದೆ ಎನ್ನುವ ಮಾಹಿತಿ ಹೊರಬಿದ್ದಿದೆ.

ಒಟ್ಟು 34 ಸಾವಿರ ಸೈಟ್​ಗಳು ಇಲ್ಲಿ ಹಂಚಿಕೆಗೆ ತಯಾರಿವೆ. ಆರ್ಥಿಕವಾಗಿ ಹಿಂದುಳಿದವರಿಗಾಗಿ 20×30 ಅಡಿ ಅಳತೆಯ ನಿವೇಶನಗಳಿಗೆ 3,850 ರೂ ದರ ನಿಗದಿಪಡಿಸಲು ಉದ್ದೇಶಿಸಲಾಗಿದೆ. ಉಳಿದಂತೆ ಬಡಾವಣೆಯಲ್ಲಿನ 30×40 ಅಡಿ ಮತ್ತು ಅದಕ್ಕಿಂತ ಹೆಚ್ಚಿನ ವಿಸ್ತಿರಣದ ನಿವೇಶನಗಳಿಗೆ ಪ್ರತಿ ಚದರ ಅಡಿಗೆ 4,900 ರೂ. ನಿಗದಿಪಡಿಸಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲಿಗೆ 30×40 ಅಳತೆಯ ನಿವೇಶನವು 59 ಲಕ್ಷ ರೂ. ಆಗಲಿದ್ದು, ಒಟ್ಟು 17 ಸಾವಿರ ನಿವೇಶನಗಳನ್ನು ಮಾರುಕಟ್ಟೆ ದರದಲ್ಲಿ ಮಾರಾಟ ಮಾಡಿದಂತಾಗುತ್ತದೆ.

ಅರ್ಧದಷ್ಟು ಸೈಟುಗಳು ರೈತರಿಗೆ ಮೀಸಲು: ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ 2008 ರಲ್ಲಿ 3,456 ಎಕರೆ ಜಮೀನು ಸ್ವಾಧೀನ ಮಾಡಿಕೊಂಡಿತ್ತು. ಆದರೆ 2008 ರ ಆಧಾರದ ಮೇಲೆ ಪರಿಹಾರ ನೀಡಲು ಮುಂದಾಗಿದ್ದ ಕಾರಣಕ್ಕೆ, ಭೂಮಿ ನೀಡಿದ ರೈತರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಸಮಸ್ಯೆ ಬಗೆಹರಿದಿದೆ. ಇಲ್ಲಿ ಸುಮಾರು ಅರ್ಧದಷ್ಟು ನಿವೇಶನಗಳನ್ನು ರೈತರಿಗೆ ಮೀಸಲಿಡಬೇಕಿದೆ. ಹಾಗೆಯೇ ಬಡಾವಣೆಯ ಸುತ್ತಮುತ್ತಲಿನ ಮಾರುಕಟ್ಟೆ ದರಕ್ಕಿಂತ ಕಡಿಮೆ ದರವನ್ನು ಸರ್ಕಾರಕ್ಕೆ ಪ್ರಸ್ತಾಪಿಸಲಾಗಿದೆ ಎಂದು ಬಿಡಿಎ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:'ಪರಿಹಾರ ನೀಡದೇ ಭೂಸ್ವಾಧೀನಕ್ಕೆ ಸಹಕರಿಸಲ್ಲ': ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ರೈತರ ವಿರೋಧ

ಬೆಂಗಳೂರು: ಬಿಡಿಎ ನಿರ್ಮಿಸಿರುವ ಶಿವರಾಮ ಕಾರಂತ ಬಡಾವಣೆಯ ಸೈಟ್‌ಗಳ ದರ ನಿಗದಿ ಮಾಡಲಾಗಿದೆ. ಆದರೆ ಅನುಷ್ಠಾನಕ್ಕೆ ಸರ್ಕಾರದ ಅನುಮೋದನೆಗಾಗಿ ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಕಾಯುತ್ತಿದೆ ಎನ್ನುವ ಮಾಹಿತಿ ಹೊರಬಿದ್ದಿದೆ.

ಒಟ್ಟು 34 ಸಾವಿರ ಸೈಟ್​ಗಳು ಇಲ್ಲಿ ಹಂಚಿಕೆಗೆ ತಯಾರಿವೆ. ಆರ್ಥಿಕವಾಗಿ ಹಿಂದುಳಿದವರಿಗಾಗಿ 20×30 ಅಡಿ ಅಳತೆಯ ನಿವೇಶನಗಳಿಗೆ 3,850 ರೂ ದರ ನಿಗದಿಪಡಿಸಲು ಉದ್ದೇಶಿಸಲಾಗಿದೆ. ಉಳಿದಂತೆ ಬಡಾವಣೆಯಲ್ಲಿನ 30×40 ಅಡಿ ಮತ್ತು ಅದಕ್ಕಿಂತ ಹೆಚ್ಚಿನ ವಿಸ್ತಿರಣದ ನಿವೇಶನಗಳಿಗೆ ಪ್ರತಿ ಚದರ ಅಡಿಗೆ 4,900 ರೂ. ನಿಗದಿಪಡಿಸಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲಿಗೆ 30×40 ಅಳತೆಯ ನಿವೇಶನವು 59 ಲಕ್ಷ ರೂ. ಆಗಲಿದ್ದು, ಒಟ್ಟು 17 ಸಾವಿರ ನಿವೇಶನಗಳನ್ನು ಮಾರುಕಟ್ಟೆ ದರದಲ್ಲಿ ಮಾರಾಟ ಮಾಡಿದಂತಾಗುತ್ತದೆ.

ಅರ್ಧದಷ್ಟು ಸೈಟುಗಳು ರೈತರಿಗೆ ಮೀಸಲು: ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ 2008 ರಲ್ಲಿ 3,456 ಎಕರೆ ಜಮೀನು ಸ್ವಾಧೀನ ಮಾಡಿಕೊಂಡಿತ್ತು. ಆದರೆ 2008 ರ ಆಧಾರದ ಮೇಲೆ ಪರಿಹಾರ ನೀಡಲು ಮುಂದಾಗಿದ್ದ ಕಾರಣಕ್ಕೆ, ಭೂಮಿ ನೀಡಿದ ರೈತರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಸಮಸ್ಯೆ ಬಗೆಹರಿದಿದೆ. ಇಲ್ಲಿ ಸುಮಾರು ಅರ್ಧದಷ್ಟು ನಿವೇಶನಗಳನ್ನು ರೈತರಿಗೆ ಮೀಸಲಿಡಬೇಕಿದೆ. ಹಾಗೆಯೇ ಬಡಾವಣೆಯ ಸುತ್ತಮುತ್ತಲಿನ ಮಾರುಕಟ್ಟೆ ದರಕ್ಕಿಂತ ಕಡಿಮೆ ದರವನ್ನು ಸರ್ಕಾರಕ್ಕೆ ಪ್ರಸ್ತಾಪಿಸಲಾಗಿದೆ ಎಂದು ಬಿಡಿಎ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:'ಪರಿಹಾರ ನೀಡದೇ ಭೂಸ್ವಾಧೀನಕ್ಕೆ ಸಹಕರಿಸಲ್ಲ': ಶಿವರಾಮ ಕಾರಂತ ಬಡಾವಣೆ ನಿರ್ಮಾಣಕ್ಕೆ ರೈತರ ವಿರೋಧ

Last Updated : Dec 24, 2023, 1:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.