ETV Bharat / state

Praveen Murder.. ಎನ್‌ಐಎಗೆ ಕೇಸ್​ ಕೊಡಲು ಸಿದ್ಧ, ಪೊಲೀಸ್ ತನಿಖೆ ನಂತರ ನಿರ್ಧಾರ: ಆರಗ ಜ್ಞಾನೇಂದ್ರ

author img

By

Published : Jul 27, 2022, 6:13 PM IST

ಪೊಲೀಸ್​ ತನಿಖೆ ನಂತರ ಪ್ರಕರಣ ಎನ್​ಐಎಗೆ ಕೊಡುವ ಬಗ್ಗೆ ನಿರ್ಧಾರ-ಕರ್ನಾಟಕ-ಕೇರಳ ಪೊಲೀಸರಿಂದ ಜಂಟಿ ಕಾರ್ಯಾಚರಣೆ- ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Gyanendra
ಆರಗ ಜ್ಞಾನೇಂದ್ರ

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ಸರ್ಕಾರ ಸಿದ್ಧವಿದೆ. ಆದರೆ ನಮ್ಮ ಪೊಲೀಸರೇ ಈ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗುವ ವಿಶ್ವಾಸವಿದೆ. ಪೊಲೀಸ್ ತನಿಖೆ ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರಗೆ ಸಿಎಂ ಬಸವರಾಜ ಬೊಮ್ಮಾಯಿ ತುರ್ತು ಬುಲಾವ್ ನೀಡಿದ್ದರು. ಗೃಹ ಕಚೇರಿ ಕೃಷ್ಣಾಗೆ ಗೃಹ ಸಚಿವರನ್ನು ಕರೆಸಿಕೊಂಡ ಸಿಎಂ ಬೊಮ್ಮಾಯಿ, ಕಾನೂನು ಸುವ್ಯವಸ್ಥೆ ಬಗ್ಗೆ, ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಗಳ ಬಂಧನ ಕುರಿತು ಚರ್ಚಿಸಿದರು. ನಂತರ ಸಿಎಂ ಜೊತೆಯಲ್ಲೇ ಸಿಎಂ ಖಾಸಗಿ ನಿವಾಸಕ್ಕೆ ತೆರಳಿ ಮತ್ತೊಮ್ಮೆ ಚರ್ಚೆ ನಡೆಸಿದರು. ಎನ್‌ಐಎಗೆ ಪ್ರಕರಣ ವಹಿಸುವ ಒತ್ತಾಯ ಕೇಳಿಬರುತ್ತಿರುವ ಕುರಿತು ಸಮಾಲೋಚನೆ ನಡೆಸಿದರು. ಪರಿಸ್ಥಿತಿ ನೋಡಿ ಮುಂದಿನ ನಿರ್ಧಾರ ಕೈಗೊಳ್ಳುವ ನಿಲುವಿನೊಂದಿಗೆ ಇಂದಿನ ಸಭೆಗೆ ತೆರೆ ಎಳೆದರು.

ಇದನ್ನೂ ಓದಿ: Praveen Murder case.. ತಂದೆಯಿಂದಲೇ ಮಗನ ಚಿತೆಗೆ ಅಗ್ನಿಸ್ಪರ್ಶ, ಕುಟುಂಬಸ್ಥರ ಆಕ್ರಂದನ

ಸಿಎಂ ಜೊತೆಗಿನ ಚರ್ಚೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಇವೆಲ್ಲಾ ಏಕಾಏಕಿ ನಡೆಯುವಂತ ಕೃತ್ಯಗಳು. ಈತರಹದ ಘಟನೆ ನಡೆದಾಗ ಯಾವ ಕೇಸ್ಅನ್ನು ಸಹ ಬಿಟ್ಟಿಲ್ಲ. ಹಿಂದಿನ ಸರ್ಕಾರದಲ್ಲಿ ಕೆಲವು ಕೇಸ್​ಗಳ ತನಿಖೆ ಆಯ್ತು, ಕೆಲವನ್ನು ತನಿಖೆ ಮಾಡಲಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ನಡೆದ ಎಲ್ಲಾ ಕೇಸ್​ಗಳ ತನಿಖೆ ನಡೆಯುತ್ತಿವೆ ಎಂದು ಸಚಿವರು ಸಮರ್ಥಿಸಿಕೊಂಡರು.

ಕರಾವಳಿಯಲ್ಲಿ ಕೇರಳದಿಂದ ಬಂದು ಇಂತಹ ಚಟುವಟಿಕೆ ನಡೆಸುವ ಘಟನೆಗಳು ನಡೆಯುತ್ತಿವೆ. ಕೇರಳ ಸರ್ಕಾರದ ಜೊತೆ ನಮ್ಮ ಡಿಜಿ ಮಾತನಾಡಿದ್ದಾರೆ. ಜಂಟಿಯಾಗಿ ಕಾರ್ಯಚರಣೆ ಮಾಡುತ್ತೇವೆ. ಅಪರಾಧಿಗಳನ್ನ ಹಿಡಿದು ತರುವಲ್ಲಿ ನಮ್ಮ ಪೊಲಿಸರು ಸಫಲರಾಗುತ್ತಾರೆ ಎಂದು ಗೃಹ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವಿಚಾರ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವರು, ಅದು ಸಹಜ. ಅಮಾಯಕರ ಹತ್ಯೆಯಾದಾಗ ನೋವಾಗುತ್ತದೆ, ಮನಸ್ಸು ಕಲಕುತ್ತದೆ, ಸಿಟ್ಟು ಸಹ ಬರುತ್ತದೆ. ಭಾವನೆಗಳು ಕೆದುಕುತ್ತದೆ. ಆರೋಪಿಗಳನ್ನ ಬಂಧಿಸಿದ ಮೇಲೆ ಆಕ್ರೋಶ ಕಡಿಮೆಯಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Praveen murder case: ಅಂತಿಮ ದರ್ಶನಕ್ಕೆ ಬಂದಿದ್ದ ಕಟೀಲ್​ ವಿರುದ್ಧ ಹಿಂದೂ ಕಾರ್ಯಕರ್ತರ ಆಕ್ರೋಶ: ಕಲ್ಲು ತೂರಾಟ, ಲಾಠಿಚಾರ್ಜ್

ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡುವ ಒತ್ತಾಯ ಕೇಳಿಬರುತ್ತಿದೆ, ಅದನ್ನ ಗಮನಿಸುತ್ತೇವೆ. ಪೊಲೀಸರು ಪ್ರಕರಣವನ್ನು ಎನ್‌ಐಎಗೆ ಕೊಡಬೇಕು ಅಂದರೆ, ಆ ಕುರಿತು ವಿಚಾರ ಮಾಡಿದರೆ ಅದಕ್ಕೆ ನಾವು ಸಿದ್ಧರಿದ್ದೇವೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು. ಪ್ರವೀಣ್ ಹತ್ಯೆ ಘಟನೆ ಬಗ್ಗೆ ಸಿಎಂ ಜೊತೆ ಸಮಗ್ರವಾಗಿ ಮಾತನಾಡಿದ್ದೇವೆ. ಪ್ರಕರಣ ಸಂಬಂಧ ಏನೆಲ್ಲ ಬೆಳವಣಿಗೆಯಾಗಿದೆ, ಅದನ್ನ ಪ್ರವೀಣ್ ಸೂದ್ ವಿವರಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದೇವೆ. ಸದ್ಯ 10 ಜನರನ್ನು ವಶಕ್ಕೆ ಪಡೆದಿದ್ದಾರೆ. ಕೇರಳಕ್ಕೆ ತೆರಳಿ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ಸರ್ಕಾರ ಸಿದ್ಧವಿದೆ. ಆದರೆ ನಮ್ಮ ಪೊಲೀಸರೇ ಈ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗುವ ವಿಶ್ವಾಸವಿದೆ. ಪೊಲೀಸ್ ತನಿಖೆ ನೋಡಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರಗೆ ಸಿಎಂ ಬಸವರಾಜ ಬೊಮ್ಮಾಯಿ ತುರ್ತು ಬುಲಾವ್ ನೀಡಿದ್ದರು. ಗೃಹ ಕಚೇರಿ ಕೃಷ್ಣಾಗೆ ಗೃಹ ಸಚಿವರನ್ನು ಕರೆಸಿಕೊಂಡ ಸಿಎಂ ಬೊಮ್ಮಾಯಿ, ಕಾನೂನು ಸುವ್ಯವಸ್ಥೆ ಬಗ್ಗೆ, ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಗಳ ಬಂಧನ ಕುರಿತು ಚರ್ಚಿಸಿದರು. ನಂತರ ಸಿಎಂ ಜೊತೆಯಲ್ಲೇ ಸಿಎಂ ಖಾಸಗಿ ನಿವಾಸಕ್ಕೆ ತೆರಳಿ ಮತ್ತೊಮ್ಮೆ ಚರ್ಚೆ ನಡೆಸಿದರು. ಎನ್‌ಐಎಗೆ ಪ್ರಕರಣ ವಹಿಸುವ ಒತ್ತಾಯ ಕೇಳಿಬರುತ್ತಿರುವ ಕುರಿತು ಸಮಾಲೋಚನೆ ನಡೆಸಿದರು. ಪರಿಸ್ಥಿತಿ ನೋಡಿ ಮುಂದಿನ ನಿರ್ಧಾರ ಕೈಗೊಳ್ಳುವ ನಿಲುವಿನೊಂದಿಗೆ ಇಂದಿನ ಸಭೆಗೆ ತೆರೆ ಎಳೆದರು.

ಇದನ್ನೂ ಓದಿ: Praveen Murder case.. ತಂದೆಯಿಂದಲೇ ಮಗನ ಚಿತೆಗೆ ಅಗ್ನಿಸ್ಪರ್ಶ, ಕುಟುಂಬಸ್ಥರ ಆಕ್ರಂದನ

ಸಿಎಂ ಜೊತೆಗಿನ ಚರ್ಚೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಇವೆಲ್ಲಾ ಏಕಾಏಕಿ ನಡೆಯುವಂತ ಕೃತ್ಯಗಳು. ಈತರಹದ ಘಟನೆ ನಡೆದಾಗ ಯಾವ ಕೇಸ್ಅನ್ನು ಸಹ ಬಿಟ್ಟಿಲ್ಲ. ಹಿಂದಿನ ಸರ್ಕಾರದಲ್ಲಿ ಕೆಲವು ಕೇಸ್​ಗಳ ತನಿಖೆ ಆಯ್ತು, ಕೆಲವನ್ನು ತನಿಖೆ ಮಾಡಲಿಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ನಡೆದ ಎಲ್ಲಾ ಕೇಸ್​ಗಳ ತನಿಖೆ ನಡೆಯುತ್ತಿವೆ ಎಂದು ಸಚಿವರು ಸಮರ್ಥಿಸಿಕೊಂಡರು.

ಕರಾವಳಿಯಲ್ಲಿ ಕೇರಳದಿಂದ ಬಂದು ಇಂತಹ ಚಟುವಟಿಕೆ ನಡೆಸುವ ಘಟನೆಗಳು ನಡೆಯುತ್ತಿವೆ. ಕೇರಳ ಸರ್ಕಾರದ ಜೊತೆ ನಮ್ಮ ಡಿಜಿ ಮಾತನಾಡಿದ್ದಾರೆ. ಜಂಟಿಯಾಗಿ ಕಾರ್ಯಚರಣೆ ಮಾಡುತ್ತೇವೆ. ಅಪರಾಧಿಗಳನ್ನ ಹಿಡಿದು ತರುವಲ್ಲಿ ನಮ್ಮ ಪೊಲಿಸರು ಸಫಲರಾಗುತ್ತಾರೆ ಎಂದು ಗೃಹ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವಿಚಾರ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವರು, ಅದು ಸಹಜ. ಅಮಾಯಕರ ಹತ್ಯೆಯಾದಾಗ ನೋವಾಗುತ್ತದೆ, ಮನಸ್ಸು ಕಲಕುತ್ತದೆ, ಸಿಟ್ಟು ಸಹ ಬರುತ್ತದೆ. ಭಾವನೆಗಳು ಕೆದುಕುತ್ತದೆ. ಆರೋಪಿಗಳನ್ನ ಬಂಧಿಸಿದ ಮೇಲೆ ಆಕ್ರೋಶ ಕಡಿಮೆಯಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Praveen murder case: ಅಂತಿಮ ದರ್ಶನಕ್ಕೆ ಬಂದಿದ್ದ ಕಟೀಲ್​ ವಿರುದ್ಧ ಹಿಂದೂ ಕಾರ್ಯಕರ್ತರ ಆಕ್ರೋಶ: ಕಲ್ಲು ತೂರಾಟ, ಲಾಠಿಚಾರ್ಜ್

ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡುವ ಒತ್ತಾಯ ಕೇಳಿಬರುತ್ತಿದೆ, ಅದನ್ನ ಗಮನಿಸುತ್ತೇವೆ. ಪೊಲೀಸರು ಪ್ರಕರಣವನ್ನು ಎನ್‌ಐಎಗೆ ಕೊಡಬೇಕು ಅಂದರೆ, ಆ ಕುರಿತು ವಿಚಾರ ಮಾಡಿದರೆ ಅದಕ್ಕೆ ನಾವು ಸಿದ್ಧರಿದ್ದೇವೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು. ಪ್ರವೀಣ್ ಹತ್ಯೆ ಘಟನೆ ಬಗ್ಗೆ ಸಿಎಂ ಜೊತೆ ಸಮಗ್ರವಾಗಿ ಮಾತನಾಡಿದ್ದೇವೆ. ಪ್ರಕರಣ ಸಂಬಂಧ ಏನೆಲ್ಲ ಬೆಳವಣಿಗೆಯಾಗಿದೆ, ಅದನ್ನ ಪ್ರವೀಣ್ ಸೂದ್ ವಿವರಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದೇವೆ. ಸದ್ಯ 10 ಜನರನ್ನು ವಶಕ್ಕೆ ಪಡೆದಿದ್ದಾರೆ. ಕೇರಳಕ್ಕೆ ತೆರಳಿ ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.