ETV Bharat / state

ಸುಪ್ರೀಂ ಕೋರ್ಟ್​ ಕದ ತಟ್ಟಲಿರುವ ಅತೃಪ್ತ ಶಾಸಕರು: ಇಂದು ಅಥವಾ ನಾಳೆ ಅರ್ಜಿ ಸಲ್ಲಿಕೆ

author img

By

Published : Jul 29, 2019, 8:40 AM IST

ಅನರ್ಹ ಶಾಸಕರು ಸುಪ್ರೀಂ ಕೋರ್ಟ್​ ಮೊರೆ ಹೋಗುವ ಸಾಧ್ಯತೆಗಳಿದ್ದು, ಇಂದು ಇಲ್ಲವೇ ನಾಳೆ ಅರ್ಜಿ ಸಲ್ಲಿಸಬಹುದು.

ಸುಪ್ರೀಂ ಕೋರ್ಟ್

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿ ಅನರ್ಹಗೊಂಡಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನ 17 ಶಾಸಕರು ಸೋಮವಾರ ಇಲ್ಲವೇ ಮಂಗಳವಾರ ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದಾರೆ.

ಮುಂಬೈನ ಹೋಟೆಲ್ ನಲ್ಲಿ ವಾಸವಾಗಿದ್ದ ಬೆಂಗಳೂರಿನ ಶಾಸಕರು ಭಾನುವಾರ ತಡರಾತ್ರಿ ಬಂದಿದ್ದಾರೆ. ಉಳಿದವರು ಇಂದು ಆಗಮಿಸುವ ಸಾಧ್ಯತೆ ಇದೆ.ರಮೇಶ್ ಜಾರಕಿಹೊಳಿ, ಎಚ್. ವಿಶ್ವನಾಥ್ ಸೇರಿದಂತೆ ಉಳಿದ ಶಾಸಕರು ಸೋಮವಾರ ದೆಹಲಿಗೆ ತೆರಳಿ ಸ್ಪೀಕರ್ ರಮೇಶ್ ಕುಮಾರ್ ತಮ್ಮನ್ನು ಅನರ್ಹಗೊಳಿಸಿರುವ ತೀರ್ಪಿಗೆ ತಕ್ಷಣಕ್ಕೆ ತಡೆಯಾಜ್ಞೆ ತಂದು ಆ ನಂತರ ಅವರ ಆದೇಶ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲು ನಿರ್ಧರಿಸಿದ್ದಾರೆ.

suprime court
ಸುಪ್ರೀಂ ಕೋರ್ಟ್

ಅತೃಪ್ತರೆಲ್ಲರೂ ಒಟ್ಟಾಗಿ ಸಮಾಲೋಚಿಸಿ ನಂತರ ತೆರಳಲು ಯೋಚಿಸಿದರೆ ಅರ್ಜಿ ಸಲ್ಲಿಕೆ ಮಂಗಳವಾರಕ್ಕೆ ತೆರಳುವ ಸಾಧ್ಯತೆ ಇದೆ.ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಈ ಸಂಬಂಧ ಮಾಹಿತಿ ನೀಡಿದ್ದು, ಸ್ಪೀಕರ್ ಯಾವುದೋ ಒತ್ತಡಕ್ಕೆ ಮಣಿದು ಆದೇಶ ನೀಡಿದ್ದಾರೆ. ಅವರ ಆದೇಶ ಪ್ರಶ್ನಿಸಿ ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುತ್ತೇವೆ. ಒಂದೊಮ್ಮೆ ಎಷ್ಟೇ ವಿಳಂಬವಾದರೂ ಮಂಗಳವಾರದವರೆಗೆ ಅರ್ಜಿ ಸಲ್ಲಿಕೆ ಆಗಲಿದೆ. ಕೋರ್ಟ್ ನಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಹೇಳಿದ್ದಾರೆ.

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿ ಅನರ್ಹಗೊಂಡಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನ 17 ಶಾಸಕರು ಸೋಮವಾರ ಇಲ್ಲವೇ ಮಂಗಳವಾರ ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದಾರೆ.

ಮುಂಬೈನ ಹೋಟೆಲ್ ನಲ್ಲಿ ವಾಸವಾಗಿದ್ದ ಬೆಂಗಳೂರಿನ ಶಾಸಕರು ಭಾನುವಾರ ತಡರಾತ್ರಿ ಬಂದಿದ್ದಾರೆ. ಉಳಿದವರು ಇಂದು ಆಗಮಿಸುವ ಸಾಧ್ಯತೆ ಇದೆ.ರಮೇಶ್ ಜಾರಕಿಹೊಳಿ, ಎಚ್. ವಿಶ್ವನಾಥ್ ಸೇರಿದಂತೆ ಉಳಿದ ಶಾಸಕರು ಸೋಮವಾರ ದೆಹಲಿಗೆ ತೆರಳಿ ಸ್ಪೀಕರ್ ರಮೇಶ್ ಕುಮಾರ್ ತಮ್ಮನ್ನು ಅನರ್ಹಗೊಳಿಸಿರುವ ತೀರ್ಪಿಗೆ ತಕ್ಷಣಕ್ಕೆ ತಡೆಯಾಜ್ಞೆ ತಂದು ಆ ನಂತರ ಅವರ ಆದೇಶ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲು ನಿರ್ಧರಿಸಿದ್ದಾರೆ.

suprime court
ಸುಪ್ರೀಂ ಕೋರ್ಟ್

ಅತೃಪ್ತರೆಲ್ಲರೂ ಒಟ್ಟಾಗಿ ಸಮಾಲೋಚಿಸಿ ನಂತರ ತೆರಳಲು ಯೋಚಿಸಿದರೆ ಅರ್ಜಿ ಸಲ್ಲಿಕೆ ಮಂಗಳವಾರಕ್ಕೆ ತೆರಳುವ ಸಾಧ್ಯತೆ ಇದೆ.ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಈ ಸಂಬಂಧ ಮಾಹಿತಿ ನೀಡಿದ್ದು, ಸ್ಪೀಕರ್ ಯಾವುದೋ ಒತ್ತಡಕ್ಕೆ ಮಣಿದು ಆದೇಶ ನೀಡಿದ್ದಾರೆ. ಅವರ ಆದೇಶ ಪ್ರಶ್ನಿಸಿ ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುತ್ತೇವೆ. ಒಂದೊಮ್ಮೆ ಎಷ್ಟೇ ವಿಳಂಬವಾದರೂ ಮಂಗಳವಾರದವರೆಗೆ ಅರ್ಜಿ ಸಲ್ಲಿಕೆ ಆಗಲಿದೆ. ಕೋರ್ಟ್ ನಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಹೇಳಿದ್ದಾರೆ.

Intro:newsBody:ಇಂದು ಇಲ್ಲವೇ ನಾಳೆ ಸುಪ್ರೀಂ ಕೋರ್ಟ್ ಗೆ ಅನರ್ಹಗೊಂಡ ಶಾಸಕರಿಂದ ಅರ್ಜಿ ಸಲ್ಲಿಕೆ

ಬೆಂಗಳೂರು: ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿ ಅನರ್ಹಗೊಂಡಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ನ 17 ಶಾಸಕರು ಸೋಮವಾರ ಇಲ್ಲವೇ ಮಂಗಳವಾರ ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದಾರೆ.
ಮುಂಬೈನ ಹೋಟೆಲ್ ನಲ್ಲಿ ವಾಸವಾಗಿದ್ದ ಬೆಂಗಳೂರಿನ ಶಾಸಕರು ಭಾನುವಾರ ತಡರಾತ್ರಿ ಬಂದಿದ್ದಾರೆ. ಉಳಿದವರು ಇಂದು ಆಗಮಿಸುವ ಸಾಧ್ಯತೆ
ರಮೇಶ್ ಜಾರಕಿಹೊಳಿ, ಎಚ್. ವಿಶ್ವನಾಥ್ ಸೇರಿದಂತೆ ಉಳಿದ ಶಾಸಕರು ಸೋಮವಾರ ದೆಹಲಿಗೆ ತೆರಳಿ ಸ್ಪೀಕರ್ ರಮೇಶ್ ಕುಮಾರ್ ತಮ್ಮನ್ನು ಅನರ್ಹಗೊಳಿಸಿರುವ ತೀರ್ಪಿಗೆ ತಕ್ಷಣಕ್ಕೆ ತಡೆಯಾಜ್ಞೆ ರಂದು ಆ ನಂತರ ಅವರ ಆದೇಶ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲು ನಿರ್ಧರಿಸಿದ್ದಾರೆ. ಅತೃಪ್ತರೆಲ್ಲರೂ ಒಟ್ಟಾಗಿ ಸಮಾಲೋಚಿಸಿ ನಂತರ ತೆರಳಲು ಯೋಚಿಸಿದರೆ ಅರ್ಜಿ ಸಲ್ಲಿಕೆ ಮಂಗಳವಾರಕ್ಕೆ ತೆರಳುವ ಸಾಧ್ಯತೆಇದೆ.
ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಈ ಸಂಬಂಧ ಮಾಹಿತಿ ನೀಡಿದ್ದು, ಸ್ಪೀಕರ್ ಯಾವುದೋ ಒತ್ತಡಕ್ಕೆ ಮಣಿದು ಆದೇಶ ನೀಡಿದ್ದಾರೆ. ಅವರ ಆದೇಶ ಪ್ರಶ್ನಿಸಿ ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುತ್ತೇವೆ. ಒಂದೊಮ್ಮೆ ಎಷ್ಟೇ ವಿಳಂಬವಾದರೂ ಮಂಗಳವಾರದವರೆಗೆ ಅರ್ಜಿ ಸಲ್ಲಿಕೆ ಆಗಲಿದೆ. ಕೋರ್ಟ್ ನಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಹೇಳಿದರು.Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.