ETV Bharat / state

ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: ಕರಾವಳಿ ಜಿಲ್ಲೆಗಳಿಗೆ ಜುಲೈ 12ರವರೆಗೆ 'ರೆಡ್ ಅಲರ್ಟ್'

author img

By

Published : Jul 10, 2022, 1:06 PM IST

ಮಲೆನಾಡಿನ ನಾಲ್ಕು ಜಿಲ್ಲೆಗಳ ಪೈಕಿ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಜುಲೈ 12ರವರೆಗೆ ಮೂರು ದಿನ ಧಾರಾಕಾರವಾಗಿ ಮಳೆ ಬೀಳಲಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ.

red-alert-in-karnataka-coastal-district-till-july-12
ರಾಜ್ಯದಲ್ಲಿ ಮುಂದುವರೆದ ಮಳೆ ಅಬ್ಬರ: ಕರಾವಳಿ ಜಿಲ್ಲೆಗಳಿಗೆ ಜುಲೈ 12ರವರೆಗೆ 'ರೆಡ್ ಅಲರ್ಟ್'

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಬಿರುಸು ಪಡೆದ ಮಳೆ ಇನ್ನೆರಡು ದಿನ ಮುಂದುವರೆಯಲಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ ಜುಲೈ 12ರವರೆಗೆ ಭಾರಿ ವರ್ಷಧಾರೆ ನಿರೀಕ್ಷೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದಲ್ಲಿ ಜುಲೈ 12ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, 205 ಮಿ.ಮೀ.ಗಿಂತಲೂ ಅಧಿಕ ಮಳೆಯಾಗುವ ನಿರೀಕ್ಷೆ ಇದೆ. ಗಾಳಿಯ ಜೊತೆಗೆ ಸಮುದ್ರದ ಅಬ್ಬರ ಹೆಚ್ಚಾಗಲಿದೆ. ಜುಲೈ 13 ಮತ್ತು 14ರಂದು ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಮಲೆನಾಡಿನ ನಾಲ್ಕು ಜಿಲ್ಲೆಗಳ ಪೈಕಿ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಜುಲೈ 12ರವರೆಗೆ ಮೂರು ದಿನ ಧಾರಾಕಾರವಾಗಿ ಮಳೆ ಬೀಳಲಿದ್ದು ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಜುಲೈ 14ರವರೆಗೆ ಹಾಸನ ಜಿಲ್ಲೆಗೆ ಯೆಲ್ಲೋ ಅಲರ್ಟ್ ಇರಲಿದೆ.

ಉತ್ತರ ಒಳನಾಡಿನಲ್ಲೂ ಯೆಲ್ಲೋ ಅಲರ್ಟ್: ಉತ್ತರ ಒಳನಾಡಿನಲ್ಲಿ ಚದುರಿದಂತೆ ಮಳೆ ಬೀಳಲಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಭಾನುವಾರ ಮತ್ತು ಸೋಮವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: ಅಪಾಯ ಮಟ್ಟ ತಲುಪಿದ ನೇತ್ರಾವತಿ: ಅದ್ಯಪಾಡಿಯಲ್ಲಿ 35 ಮನೆ, ಕೃಷಿಭೂಮಿ ಜಲಾವೃತ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಬಿರುಸು ಪಡೆದ ಮಳೆ ಇನ್ನೆರಡು ದಿನ ಮುಂದುವರೆಯಲಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ ಜುಲೈ 12ರವರೆಗೆ ಭಾರಿ ವರ್ಷಧಾರೆ ನಿರೀಕ್ಷೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದಲ್ಲಿ ಜುಲೈ 12ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, 205 ಮಿ.ಮೀ.ಗಿಂತಲೂ ಅಧಿಕ ಮಳೆಯಾಗುವ ನಿರೀಕ್ಷೆ ಇದೆ. ಗಾಳಿಯ ಜೊತೆಗೆ ಸಮುದ್ರದ ಅಬ್ಬರ ಹೆಚ್ಚಾಗಲಿದೆ. ಜುಲೈ 13 ಮತ್ತು 14ರಂದು ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಮಲೆನಾಡಿನ ನಾಲ್ಕು ಜಿಲ್ಲೆಗಳ ಪೈಕಿ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಜುಲೈ 12ರವರೆಗೆ ಮೂರು ದಿನ ಧಾರಾಕಾರವಾಗಿ ಮಳೆ ಬೀಳಲಿದ್ದು ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಜುಲೈ 14ರವರೆಗೆ ಹಾಸನ ಜಿಲ್ಲೆಗೆ ಯೆಲ್ಲೋ ಅಲರ್ಟ್ ಇರಲಿದೆ.

ಉತ್ತರ ಒಳನಾಡಿನಲ್ಲೂ ಯೆಲ್ಲೋ ಅಲರ್ಟ್: ಉತ್ತರ ಒಳನಾಡಿನಲ್ಲಿ ಚದುರಿದಂತೆ ಮಳೆ ಬೀಳಲಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಭಾನುವಾರ ಮತ್ತು ಸೋಮವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ಓದಿ: ಅಪಾಯ ಮಟ್ಟ ತಲುಪಿದ ನೇತ್ರಾವತಿ: ಅದ್ಯಪಾಡಿಯಲ್ಲಿ 35 ಮನೆ, ಕೃಷಿಭೂಮಿ ಜಲಾವೃತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.