ETV Bharat / state

ಬೆಂಗಳೂರು ಮಹಾಮಳೆಗೆ ತಗ್ಗಿದ ಕ್ರೈಂ ಕೇಸ್ - ಈಟಿವಿ ಭಾರತ್​ ಕನ್ನಡ

ಮಳೆಯಿಂದ ಬೆಂಗಳೂರಿನಲ್ಲಿ ಜನರಿಗೆ ಒಂದೆಡೆ ತೊಂದರೆಯಾದರೆ ಇನ್ನೊಂದು ರೀತಿಯಲ್ಲಿ ಸಹಕಾರವಾಗಿದೆ. ವಾರಕ್ಕೆ 15 ರಿಂದ 20 ಕಳ್ಳತನ ಕೇಸ್​ಗಳು ಬರುತ್ತಿದ್ದ ನಗರದಲ್ಲಿ ಕಳ್ಳತನ ಕೇಸ್​ಗಳು ಇಳಿಕೆಯಾಗಿವೆ.

reduced crime case in Bangalore
ಬೆಂಗಳೂರು ಮಹಾಮಳೆಗೆ ತಗ್ಗಿದ ಕ್ರೈಂ ಕೇಸ್
author img

By

Published : Sep 10, 2022, 11:25 AM IST

ಬೆಂಗಳೂರು: ರಾಜಧಾನಿಯಲ್ಲಿ ಇತ್ತೀಚೆಗೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಅದರಲ್ಲಿಯೂ ಮೊಬೈಲ್ ರಾಬರಿ, ಲಾಂಗು ಮಚ್ಚು ತೋರಿಸಿ ಹಣ ಸುಲಿಗೆ ಮಾಡೋ ಕೇಸ್​ಗಳಂತೂ ವಿಪರೀತವಾಗಿದ್ದವು. ಆದರೆ ಕಳೆದೊಂದು ವಾರದಿಂದ ಸಿಲಿಕಾನ್ ಸಿಟಿಯಲ್ಲಿ ಮಳೆ ಅಬ್ಬರದಲ್ಲಿ ರಾಬರ್ಸ್ ಕೂಡ ಫುಲ್ ಸೈಲೆಂಟ್ ಆಗಿದ್ದಾರೆ.

ಕಳೆದ ಒಂದು ವಾರದಲ್ಲಿ ನಗರದಲ್ಲಿ ರಾಬರಿ ಕೇಸ್​ಗಳೇ ರಿಪೋರ್ಟ್ ಆಗಿಲ್ಲ. ಪ್ರತಿನಿತ್ಯ ಡಿವಿಷನ್​ಗೆ ಎರಡು ಮೂರು ರಾಬರಿ ಕೇಸ್​ಗಳು ದಾಖಲಾಗುತ್ತಿತ್ತು. ಆದರೆ ವಾರದಿಂದ ಕಂಟ್ರೋಲ್ ರೂಂಗೂ ಕಳ್ಳತನ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ನಗರದ 8 ಡಿವಿಷನ್​ಗಳಲ್ಲಿ ಪ್ರತಿನಿತ್ಯ 15-20 ರಾಬರಿ ಕೇಸ್ ವರದಿ ಆಗುತ್ತಿದ್ದವು. ರಾತ್ರಿ ಒಂಟಿಯಾಗಿ ಬರೋರನ್ನು ಗುರಿಯಾಗಿಸಿ ಮಾಡುತ್ತಿದ್ದ ಕಳ್ಳತನ ಮತ್ತು ಐಟಿ ಬಿಟಿ ಕಂಪನಿ ಹೆಚ್ಚಾಗಿರೋ ಏರಿಯಾದ ಕಳ್ಳತನ ಕೇಸ್ ದಾಖಲಾಗಿಲ್ಲ.

ಮಹದೇವಪುರ, ವೈಟ್ ಫೀಲ್ಡ್, ಮಾರತ್ ಹಳ್ಳಿ, ಬೆಳ್ಳಂದೂರು ವರ್ತೂರು ಸೇರಿದಂತೆ ಹಲವು ಕಡೆಗಳಲ್ಲಿ ರಾಬರಿ ಕೇಸ್ ಹೆಚ್ಚಾಗಿದ್ದವು. ಇತ್ತೀಚೆಗೆ ಈ ಬಗ್ಗೆ ಪೊಲೀಸರಿಗೆ ಸಾಕಷ್ಟು ದೂರುಗಳು ಕೂಡ ಬರುತ್ತಿದ್ದವು. ಇದರಿಂದ ರಾತ್ರಿ ವೇಳೆ ಪೊಲೀಸ್ ಹೊಯ್ಸಳ ಗಸ್ತನ್ನು ಹೆಚ್ಚಳ ಮಾಡಲಾಗಿತ್ತು.

ಮಳೆ ಹಿನ್ನೆಲೆ ಬಹುತೇಕ ಪ್ರದೇಶಗಳಲ್ಲಿ ರಾತ್ರಿವೇಳೆಯೂ ಪೊಲೀಸರು ಬೀಡು ಬಿಟ್ಟಿದ್ದು, ಪೊಲೀಸರ ಜೊತೆಗೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಬಿಬಿಎಂಪಿ ಸಿಬ್ಬಂದಿ ಸಹ ರಸ್ತೆಯಲ್ಲೇ ಇದ್ದರು. ಮಳೆ ಹಿನ್ನೆಲೆ ಹೊರಗಡೆ ಓಡಾಡುವ ಸಾರ್ವಜನಿಕರ ಸಂಖ್ಯೆಯೂ ಕಡಿಮೆಯಾಗಿದೆ. ಒಟ್ಟಿನಲ್ಲಿ ಮಳೆಯಿಂದಾಗಿ ಸಾಕಷ್ಟು ಹಾನಿಯಾದರೂ ಈ ಕಳ್ಳಕಾಕರ ಕಾಟ ತಪ್ಪಿದೆ ಅನ್ನೋದೆ ಖುಷಿಯ ವಿಚಾರ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ಬೈಕ್​​ಗೆ ಡಿಕ್ಕಿ ಹೊಡೆದ ಕಾರು.. ಒಂದೇ ಕುಟುಂಬದ ನಾಲ್ವರು ಸಾವು

ಬೆಂಗಳೂರು: ರಾಜಧಾನಿಯಲ್ಲಿ ಇತ್ತೀಚೆಗೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಅದರಲ್ಲಿಯೂ ಮೊಬೈಲ್ ರಾಬರಿ, ಲಾಂಗು ಮಚ್ಚು ತೋರಿಸಿ ಹಣ ಸುಲಿಗೆ ಮಾಡೋ ಕೇಸ್​ಗಳಂತೂ ವಿಪರೀತವಾಗಿದ್ದವು. ಆದರೆ ಕಳೆದೊಂದು ವಾರದಿಂದ ಸಿಲಿಕಾನ್ ಸಿಟಿಯಲ್ಲಿ ಮಳೆ ಅಬ್ಬರದಲ್ಲಿ ರಾಬರ್ಸ್ ಕೂಡ ಫುಲ್ ಸೈಲೆಂಟ್ ಆಗಿದ್ದಾರೆ.

ಕಳೆದ ಒಂದು ವಾರದಲ್ಲಿ ನಗರದಲ್ಲಿ ರಾಬರಿ ಕೇಸ್​ಗಳೇ ರಿಪೋರ್ಟ್ ಆಗಿಲ್ಲ. ಪ್ರತಿನಿತ್ಯ ಡಿವಿಷನ್​ಗೆ ಎರಡು ಮೂರು ರಾಬರಿ ಕೇಸ್​ಗಳು ದಾಖಲಾಗುತ್ತಿತ್ತು. ಆದರೆ ವಾರದಿಂದ ಕಂಟ್ರೋಲ್ ರೂಂಗೂ ಕಳ್ಳತನ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ನಗರದ 8 ಡಿವಿಷನ್​ಗಳಲ್ಲಿ ಪ್ರತಿನಿತ್ಯ 15-20 ರಾಬರಿ ಕೇಸ್ ವರದಿ ಆಗುತ್ತಿದ್ದವು. ರಾತ್ರಿ ಒಂಟಿಯಾಗಿ ಬರೋರನ್ನು ಗುರಿಯಾಗಿಸಿ ಮಾಡುತ್ತಿದ್ದ ಕಳ್ಳತನ ಮತ್ತು ಐಟಿ ಬಿಟಿ ಕಂಪನಿ ಹೆಚ್ಚಾಗಿರೋ ಏರಿಯಾದ ಕಳ್ಳತನ ಕೇಸ್ ದಾಖಲಾಗಿಲ್ಲ.

ಮಹದೇವಪುರ, ವೈಟ್ ಫೀಲ್ಡ್, ಮಾರತ್ ಹಳ್ಳಿ, ಬೆಳ್ಳಂದೂರು ವರ್ತೂರು ಸೇರಿದಂತೆ ಹಲವು ಕಡೆಗಳಲ್ಲಿ ರಾಬರಿ ಕೇಸ್ ಹೆಚ್ಚಾಗಿದ್ದವು. ಇತ್ತೀಚೆಗೆ ಈ ಬಗ್ಗೆ ಪೊಲೀಸರಿಗೆ ಸಾಕಷ್ಟು ದೂರುಗಳು ಕೂಡ ಬರುತ್ತಿದ್ದವು. ಇದರಿಂದ ರಾತ್ರಿ ವೇಳೆ ಪೊಲೀಸ್ ಹೊಯ್ಸಳ ಗಸ್ತನ್ನು ಹೆಚ್ಚಳ ಮಾಡಲಾಗಿತ್ತು.

ಮಳೆ ಹಿನ್ನೆಲೆ ಬಹುತೇಕ ಪ್ರದೇಶಗಳಲ್ಲಿ ರಾತ್ರಿವೇಳೆಯೂ ಪೊಲೀಸರು ಬೀಡು ಬಿಟ್ಟಿದ್ದು, ಪೊಲೀಸರ ಜೊತೆಗೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಬಿಬಿಎಂಪಿ ಸಿಬ್ಬಂದಿ ಸಹ ರಸ್ತೆಯಲ್ಲೇ ಇದ್ದರು. ಮಳೆ ಹಿನ್ನೆಲೆ ಹೊರಗಡೆ ಓಡಾಡುವ ಸಾರ್ವಜನಿಕರ ಸಂಖ್ಯೆಯೂ ಕಡಿಮೆಯಾಗಿದೆ. ಒಟ್ಟಿನಲ್ಲಿ ಮಳೆಯಿಂದಾಗಿ ಸಾಕಷ್ಟು ಹಾನಿಯಾದರೂ ಈ ಕಳ್ಳಕಾಕರ ಕಾಟ ತಪ್ಪಿದೆ ಅನ್ನೋದೆ ಖುಷಿಯ ವಿಚಾರ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ಬೈಕ್​​ಗೆ ಡಿಕ್ಕಿ ಹೊಡೆದ ಕಾರು.. ಒಂದೇ ಕುಟುಂಬದ ನಾಲ್ವರು ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.