ಬೆಂಗಳೂರು: ಗೃಹ ಸಚಿವರ ರಾಜೀನಾಮೆ ಕೇಳಲು ಕಾಂಗ್ರೆಸ್ ಪಕ್ಷದವರಿಗೆ ನೈತಿಕ ಹಕ್ಕಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಯುವಕನ ಹತ್ಯೆಯಾಗಿದೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ಯಾರು ಇದನ್ನು ಮಾಡಿದ್ದಾರೆ ಅಂತ ಗೊತ್ತಿದೆ. ಪ್ರಕರಣ ತನಿಖೆ ಹಂತದಲ್ಲಿ ಇದೆ ಎಂದರು.
ಶಿಕ್ಷಣದಲ್ಲಿ ಧರ್ಮ ಬೆರೆಸಬಾರದು. ಇದಕ್ಕೆ ಕಾಂಗ್ರೆಸ್ ಮತ್ತು ಅಂತಾರಾಷ್ಟ್ರೀಯ ಸಂಘಟನೆಗಳು ಕಾರಣ ಎಂದು ಹಿಜಾಬ್ ವಿವಾದ ಕುರಿತು ರೇಣುಕಾಚಾರ್ಯ ಆರೋಪಿಸಿದರು.
ಓದಿ: ಆರ್ಎಸ್ಎಸ್ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಸದಸ್ಯರು: ಕಲಾಪ ನಾಳೆಗೆ ಮುಂದೂಡಿದ ಸ್ಪೀಕರ್