ETV Bharat / state

ಮಾಜಿ ಸಿಎಂ ಹೆಚ್​ಡಿಕೆ ವಿರುದ್ಧ ಎಸಿಬಿಗೆ ದೂರು ನೀಡಿದ ನಿವೃತ್ತ ವಿಂಗ್ ಕಮಾಂಡರ್ - Former Chief Minister HD Kumaraswamy

ಹೆಚ್​ಡಿಕೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೆಪಿಎಸ್​ಸಿ ಅಧ್ಯಕ್ಷರ ಮೂಲಕ ಹಲವರಿಗೆ ಹುದ್ದೆ ಕೊಡಿಸಿರುವುದಾಗಿ ಹೇಳಿಕೆ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ. ಅತ್ರಿ ಲಿಖಿತ ದೂರು ಸಲ್ಲಿಸಿದ್ದಾರೆ.

HD Kumaraswamy
ಕುಮಾರಸ್ವಾಮಿ
author img

By

Published : Oct 27, 2020, 3:10 PM IST

ಬೆಂಗಳೂರು: ತಾವು ಮುಖ್ಯಮಂತ್ರಿಯಾಗಿದ್ದಾಗ ಕೆಪಿಎಸ್​ಸಿ ಮೂಲಕ ಸಾಕಷ್ಟು ಜನರಿಗೆ ಉದ್ಯೋಗ ಕೊಡಿಸಲಾಗಿತ್ತು ಎಂದು ಹೇಳಿಕೆ ನೀಡಿದ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ ಅತ್ರಿ ನಗರದ ಭ್ರಷ್ಚಾಚಾರ ನಿಗ್ರಹ ದಳಕ್ಕೆ (ಎಸಿಬಿ) ಲಿಖಿತ ದೂರು ಸಲ್ಲಿಸಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳದ ಮುಖ್ಯಸ್ಥರಾದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದು ಸಲ್ಲಿಸಿರುವ ದೂರಿನಲ್ಲಿ, ಹೆಚ್​ಡಿಕೆ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೆಪಿಎಸ್​ಸಿ ಅಧ್ಯಕ್ಷರ ಮೂಲಕ ಹಲವರಿಗೆ ಹುದ್ದೆ ಕೊಡಿಸಿರುವುದಾಗಿ ಹೇಳಿಕೆ ನೀಡಿದ್ದಾರೆ. ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರದ ವೇಳೆ ಸ್ವತಃ ಅವರೇ ವಿಚಾರವನ್ನು ಪ್ರಸ್ತಾಪಿಸಿದ್ದಾರೆ ಎಂದು ಅತ್ರಿ ಉಲ್ಲೇಖಿಸಿದ್ದಾರೆ.

ಕುಮಾರಸ್ವಾಮಿ ಅವರು ತಾವು ಸಿಎಂ ಆಗಿದ್ದಾಗ ಕೆಪಿಎಸ್​ಸಿ ನೇಮಕಾತಿಯಲ್ಲಿ ಪುಟ್ಟಣ್ಣ ಕಡೆಯವರಿಗೆ 10-12 ಕ್ಲಾಸ್ ಒನ್ ಹುದ್ದೆ ಕೊಡಿಸಿರುವುದಾಗಿ ಹೇಳಿದ್ದಾರೆ. ಅಲ್ಲದೇ 1999-2000 ಅವಧಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರಾಗಿ ಕೃಷ್ಣ ಇದ್ದ ಸಂದರ್ಭದಲ್ಲಿ, ನೂರಾರು ಮಂದಿಗೆ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಹುದ್ದೆ ಕೊಡಿಸಲು ನೆರವು ನೀಡಿದ್ದಾಗಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳಲ್ಲಿ ಹೆಚ್​ಡಿಕೆ ಅವರ ಹೇಳಿಕೆ ಪ್ರಕಟವಾಗಿದೆ ಎಂದು ನಿವೃತ್ತ ವಿಂಗ್​ ಕಮಾಂಡರ್​ ತಿಳಿಸಿದ್ದಾರೆ.

ಮುಖ್ಯಮಂತ್ರಿಯಂತಹ ಜವಾಬ್ದಾರಿಯುತ ಹಾಗೂ ಸಾರ್ವಜನಿಕ ಹುದ್ದೆಯಲ್ಲಿ ಇದ್ದಂತಹ ವ್ಯಕ್ತಿ ಸರ್ಕಾರಿ ನೇಮಕಾತಿಯಲ್ಲಿ ಪ್ರಭಾವ ಬೀರಿರುವುದು ಕಾನೂನು ಬಾಹಿರ. ಜತೆಗೆ ಭ್ರಷ್ಟಾಚಾರ ತಡೆ ಕಾಯ್ದೆ-1998ರ ಸೆಕ್ಷನ್ 8 ಮತ್ತು 9ರ ಉಲ್ಲಂಘನೆ. ಆದ್ದರಿಂದ ಹೆಚ್​ಡಿಕೆ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಬೇಕು ಎಂದು ಜಿ.ಬಿ. ಅತ್ರಿ ಎಸಿಬಿ ಎಡಿಜಿಪಿಗೆ ಬರೆದಿರುವ ಪತ್ರದಲ್ಲಿ ಕೋರಿದ್ದಾರೆ.

ಬೆಂಗಳೂರು: ತಾವು ಮುಖ್ಯಮಂತ್ರಿಯಾಗಿದ್ದಾಗ ಕೆಪಿಎಸ್​ಸಿ ಮೂಲಕ ಸಾಕಷ್ಟು ಜನರಿಗೆ ಉದ್ಯೋಗ ಕೊಡಿಸಲಾಗಿತ್ತು ಎಂದು ಹೇಳಿಕೆ ನೀಡಿದ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ ಅತ್ರಿ ನಗರದ ಭ್ರಷ್ಚಾಚಾರ ನಿಗ್ರಹ ದಳಕ್ಕೆ (ಎಸಿಬಿ) ಲಿಖಿತ ದೂರು ಸಲ್ಲಿಸಿದ್ದಾರೆ.

ಭ್ರಷ್ಟಾಚಾರ ನಿಗ್ರಹ ದಳದ ಮುಖ್ಯಸ್ಥರಾದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದು ಸಲ್ಲಿಸಿರುವ ದೂರಿನಲ್ಲಿ, ಹೆಚ್​ಡಿಕೆ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕೆಪಿಎಸ್​ಸಿ ಅಧ್ಯಕ್ಷರ ಮೂಲಕ ಹಲವರಿಗೆ ಹುದ್ದೆ ಕೊಡಿಸಿರುವುದಾಗಿ ಹೇಳಿಕೆ ನೀಡಿದ್ದಾರೆ. ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರದ ವೇಳೆ ಸ್ವತಃ ಅವರೇ ವಿಚಾರವನ್ನು ಪ್ರಸ್ತಾಪಿಸಿದ್ದಾರೆ ಎಂದು ಅತ್ರಿ ಉಲ್ಲೇಖಿಸಿದ್ದಾರೆ.

ಕುಮಾರಸ್ವಾಮಿ ಅವರು ತಾವು ಸಿಎಂ ಆಗಿದ್ದಾಗ ಕೆಪಿಎಸ್​ಸಿ ನೇಮಕಾತಿಯಲ್ಲಿ ಪುಟ್ಟಣ್ಣ ಕಡೆಯವರಿಗೆ 10-12 ಕ್ಲಾಸ್ ಒನ್ ಹುದ್ದೆ ಕೊಡಿಸಿರುವುದಾಗಿ ಹೇಳಿದ್ದಾರೆ. ಅಲ್ಲದೇ 1999-2000 ಅವಧಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರಾಗಿ ಕೃಷ್ಣ ಇದ್ದ ಸಂದರ್ಭದಲ್ಲಿ, ನೂರಾರು ಮಂದಿಗೆ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಹುದ್ದೆ ಕೊಡಿಸಲು ನೆರವು ನೀಡಿದ್ದಾಗಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳಲ್ಲಿ ಹೆಚ್​ಡಿಕೆ ಅವರ ಹೇಳಿಕೆ ಪ್ರಕಟವಾಗಿದೆ ಎಂದು ನಿವೃತ್ತ ವಿಂಗ್​ ಕಮಾಂಡರ್​ ತಿಳಿಸಿದ್ದಾರೆ.

ಮುಖ್ಯಮಂತ್ರಿಯಂತಹ ಜವಾಬ್ದಾರಿಯುತ ಹಾಗೂ ಸಾರ್ವಜನಿಕ ಹುದ್ದೆಯಲ್ಲಿ ಇದ್ದಂತಹ ವ್ಯಕ್ತಿ ಸರ್ಕಾರಿ ನೇಮಕಾತಿಯಲ್ಲಿ ಪ್ರಭಾವ ಬೀರಿರುವುದು ಕಾನೂನು ಬಾಹಿರ. ಜತೆಗೆ ಭ್ರಷ್ಟಾಚಾರ ತಡೆ ಕಾಯ್ದೆ-1998ರ ಸೆಕ್ಷನ್ 8 ಮತ್ತು 9ರ ಉಲ್ಲಂಘನೆ. ಆದ್ದರಿಂದ ಹೆಚ್​ಡಿಕೆ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕಾನೂನು ಕ್ರಮ ಜರುಗಿಸಬೇಕು ಎಂದು ಜಿ.ಬಿ. ಅತ್ರಿ ಎಸಿಬಿ ಎಡಿಜಿಪಿಗೆ ಬರೆದಿರುವ ಪತ್ರದಲ್ಲಿ ಕೋರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.