ETV Bharat / state

2217 ಬೂತ್ ಗಳು ಅತಿ ಸೂಕ್ಷ್ಮ ಎಂದು ಗುರುತು: ಮುಖ್ಯ ಆಯುಕ್ತ ತುಷಾರ್ ಗಿರಿನಾಥ

author img

By

Published : Mar 29, 2023, 5:24 PM IST

Updated : Mar 29, 2023, 7:26 PM IST

ಆರ್​ಓಎ ಹಾಗೂ ಆರ್​ಓಗಳು ಆಯಾ ಕ್ಷೇತ್ರದ ಎಲ್ಲಾ ಕೆಲಸಗಳಿಗೂ ಜವಾಬ್ದಾರರಾಗಿರುತ್ತಾರೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ ಅವರು ತಿಳಿಸಿದ್ದಾರೆ.

ಮುಖ್ಯ ಆಯುಕ್ತ ತುಷಾರ್ ಗಿರಿನಾಥ
ಮುಖ್ಯ ಆಯುಕ್ತ ತುಷಾರ್ ಗಿರಿನಾಥ

ಬೆಂಗಳೂರು: ನಗರ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ 8615 ಬೂತ್ ಗಳಿದ್ದು, 2217 ಬೂತ್ ಗಳನ್ನು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಎಲ್ಲ ಬೂತ್ ಗಳಲ್ಲಿ ಅಂಗವಿಕಲರು ಬಂದು ಹೋಗಲು ಪ್ರತ್ಯೇಕ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್, ಪೀಠೋಪಕರಣಗಳು, ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳು ಇರಲಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಬುಧವಾರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ ಚುನಾವಣಾ ಅಧಿಕಾರಿಯ ಹಾಗೂ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಮುಖ್ಯ ಚುನಾವಣಾ ಆಯೋಗ ವಿಧಾನಸಭೆ ದಿನಾಂಕ ಘೋಷಿಸಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ನಗರ ವ್ಯಾಪ್ತಿಯ 28 ಕ್ಷೇತ್ರಗಳಿಗೆ ಆರ್​ಓ ಎಆರ್​ಓ ನೇಮಕ ಮಾಡಲಾಗಿದೆ ಎಂದು ಹೇಳಿದರು.

ಚುನಾವಣಾ ಕರ್ತವ್ಯದಲ್ಲಿರುವ ಎಲ್ಲ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಚುನಾವಣಾ ತರಬೇತಿ ನೀಡಲಾಗಿದೆ. ಈಗಾಗಲೇ ಚುನಾವಣೆಗೆ ಬೇಕಾದ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಕೆಲವು ಕಡೆ ಜಾಗದ ಕೊರತೆ ಇತ್ತು. ಇದನ್ನು ನಿವಾರಿಸಲಾಗಿದೆ. ಆರ್​ಓ ಎಆರ್​ಓಗಳು ಆಯಾ ವಿಧಾನಸಭಾ ಕ್ಷೇತ್ರದ ಎಲ್ಲ ಕೆಲಸಗಳಿಗೆ ಜವಬ್ದಾರರಾಗುತ್ತಾರೆ. ಜಿಲ್ಲಾಮಟ್ಟದಲ್ಲಿ ಮೇಲ್ಮಟ್ಟದ ಸಮಿತಿ ಇರಲಿದೆ ಎಂದು ತಿಳಿಸಿದರು.

ಸೂಕ್ಷ್ಮ ಪ್ರದೇಶದಲ್ಲಿ ಇಬ್ಬರು ಅಧಿಕಾರಿಗಳು: ಸೂಕ್ಷ್ಮ ಪ್ರದೇಶದಲ್ಲಿ ಇಬ್ಬರು ಅಧಿಕಾರಿಗಳನ್ನು ನೇಮಿಸಲಾಗಿದೆ. ನಮ್ಮ ರಾಜ್ಯದಲ್ಲೇ ಇರುವ ಅಧಿಕಾರಿಗಳನ್ನು ಕೂಡ ನೇಮಕ ಮಾಡಿಕೊಳ್ಳುತ್ತಿದ್ದೇವೆ. ಉಳಿದಂತೆ ಚುನಾವಣೆಯ ದಿನ ಮೈಕ್ರೋ ಅಬ್ಸವರ್ಸ್, ವಿಡಿಯೋ ಕವರಜ್ ಕೂಡ ಮಾಡಲಾಗುತ್ತದೆ ಎಂದರು.

ಮತದಾರರ ಪಟ್ಟಿ ತಿದ್ದುಪಡಿಗೆ ಅವಕಾಶ: ಬೆಂಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ 95,13,830 ಮತದಾರರಿದ್ದಾರೆ. ಇದರಲ್ಲಿ 49,26,270 ಪುರುಷ ಮತದಾರರಾಗಿದ್ದು, 45,85,824 ಮಹಿಳಾ ಮತದಾರರು ಇದ್ದಾರೆ. 18 ರಿಂದ 19 ವಯಸ್ಸಿನ 1,08,494 ಮತದಾರರು ಸೇರ್ಪಡೆಯಾಗಿದ್ದಾರೆ. 80 ವರ್ಷ ಮೇಲ್ಪಟ್ಟ ಮತದಾರರ ಸಂಖ್ಯೆ 2,36,719 ಇದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮನ್ವಯದಲ್ಲಿ ಬೆಂಗಳೂರು ನಗರ ಜಿಲ್ಲೆಯ ಬಹುತೇಕ ಎಲ್ಲಾ ತೃತೀಯ ಲಿಂಗಿ ಮತದಾರರ ನೋಂದಣಿ ಕಾರ್ಯ ಯಶಸ್ವಿಯಾಗಿದೆ.

9182 ಮತದಾರರ ಪೈಕಿ 9125 ಮತದಾರರು ನೋಂದಣಿಯಾಗಿದ್ದರೆ, 42 ಮತದಾರರ ನೋಂದಣಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಕೇವಲ 15 ಜನರ ನೋಂದಣಿಗೆ ಬಾಕಿ ಉಳಿದಿದೆ. ನಾಮಿನೇಷನ್ ಮಾಡುವ ದಿನದವರೆಗೂ ಮತದಾರರ ಪಟ್ಟಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು ಎಂದು ಮಾಹಿತಿ ನೀಡಿದರು.

ಮತದಾನದ ಮಾಹಿತಿಗೆ ಆಪ್: ಯಶವಂತಪುರ, ರಾಜರಾಜೇಶ್ವರಿನಗರ, ಶಿವಾಜಿನಗರ, ಶಾಂತಿನಗರ ಸೇರಿದಂತೆ 19 ಕ್ಷೇತ್ರಗಳಲ್ಲಿ ವೆಚ್ಚ ಜಾಸ್ತಿ ಇದೆ. ಆಪ್ ಕೂಡ ತರಲು ಹೊರಟಿದ್ದೇವೆ. ಮತ ಕಟ್ಟೆಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಿದ್ದೇವೆ. ಬೂತ್ ಬಳಿ ಇರುವ ಸರತಿ ಸಾಲು, ದೂರ ಎಲ್ಲವನ್ನು ಮಾನಿಟರ್ ಮಾಡಲಾಗುತ್ತದೆ. ಆಪ್ ತರಲಾಗುತ್ತಿದ್ದು, ಅದು ಮತದಾನದ ಕುರಿತು ಸಂಪೂರ್ಣ ಮಾಹಿತಿ ನೇರ ಪ್ರಸಾರದಲ್ಲಿ ನೀಡಲಿದೆ ಎಂದು ಹೇಳಿದರು.

ಚುನಾವಣಾ ಅಕ್ರಮ ತಡೆಯಲು ಚೆಕ್ ಪೋಸ್ಟ್: ಜಿಲ್ಲಾ ಗಡಿಯಲ್ಲಿ ಒಳ ಹೋಗುವ ಹೊರ ಬರುವ ವಾಹನಗಳ ಮೇಲೆ ನಿಗಾ ಇಡಲು 11 ಚೆಕ್​ಪೋಸ್ಟ್ ವ್ಯವಸ್ಥೆ ಮಾಡಲಾಗಿದೆ. ನಗರದ ವ್ಯಾಪ್ತಿಯಲ್ಲಿ 15 ಕಡೆ, ತಮಿಳುನಾಡು ಗಡಿಯಲ್ಲಿ 8 ಚೆಕ್ ಪೋಸ್ಟ್ ಇರಲಿದೆ. ಉಸ್ತುವಾರಿಯನ್ನು ಆಯಾ ವ್ಯಾಪ್ತಿಯ ಡಿಸಿಪಿಗಳಿಗೆ ನೀಡಲಾಗಿದೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಸೇರಿದಂತೆ ವಿವಿಧೆಡೆ ರ್ಯಾಂಡಮ್ ಚೆಕ್ ಅಪ್ ನಡೆಯಲಿದೆ ಎಂದರು.

ಮಾಧ್ಯಮಗಳ ಮೇಲೆ ನಿಗಾ: ಗ್ರೀನ್ ಕಲರ್ ಇವಿಎಂ ವೋಟಿಂಗ್ ಗೆ ಬಳಕೆಯಾಗುತ್ತದೆ. ಯೆಲ್ಲೋ ಕಲರ್ ಇರುವ ಇವಿಎಂ ತರಬೇತಿ ನೀಡುವ ಸಲುವಾಗಿ ಬಳಸಲಾಗುತ್ತದೆ. ಯಾವ ಪಕ್ಷಕ್ಕೂ ಮನೆ ಮನೆಗೆ ಹೋಗಿ ವಿವರಣೆ ಪಡೆಯಲು ಅವಕಾಶವಿಲ್ಲ. ಈಗಾಗಲೇ ಮಹಾದೇವಪುರದಲ್ಲಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಎಫ್ಐಆರ್ ದಾಖಲಿಸಲಾಗಿದೆ. ಸುದ್ದಿ ಮತ್ತು ಜಾಹೀರಾತುಗಳ ಹೆಸರಲ್ಲಿ ಅಭ್ಯರ್ಥಿಗಳ ಪ್ರಚಾರ ನಡೆಸುವಂತಿಲ್ಲ. ಈ ಹಿನ್ನಲೆಯಲ್ಲಿ ಮಾಧ್ಯಮಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳ ಮೇಲೆ ನಿಗಾ ಇಡಲು ಸಮಿತಿ ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಅಕ್ರಮ ತಡೆಯುವ ಕಾರ್ಯಾಚರಣೆ ಚರುಕು: ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ. ಈಗಾಗಲೇ ಚುನಾವಣಾ ಅಕ್ರಮದ ಕುರಿತು ಕಾರ್ಯಾಚರಣೆ ಆರಂಭಿಸಿದ್ದೇವೆ. ಬ್ಯಾಟರಾಯನಪುರದಲ್ಲಿ 3 ಕೋಟಿ 66 ಲಕ್ಷ ಬೆಲೆಬಾಳುವ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಎಫ್ಐಆರ್ ಕೂಡ ದಾಖಲಾಗಿದೆ. ಇಂದಿನಿಂದ ಕೋಡ್ ಆಫ್ ಕಂಡೆಕ್ಟ್ ಜಾರಿಯಾಗಿದ್ದು, ಈ ಹಿನ್ನಲೆಯಲ್ಲಿ ಅಕ್ರಮದ ಬಗ್ಗೆ ಕಾರ್ಯಾಚರಣೆ ತೀವ್ರಗೊಳಿಸುತ್ತೇವೆ ಎಂದು ತಿಳಿಸಿದರು.

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳಾದ ಡಾ. ದಯಾನಂದ್, ಲಿಂಗಮೂರ್ತಿ, ಡಾ. ಜಗದೀಶ್ ಕೆ. ನಾಯ್ಕ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಬಳ್ಳಾರಿ ಮಹಾನಗರ ಪಾಲಿಕೆಗೆ ನೂತನ ಸಾರಥಿ.. 23ನೇ ವಯಸ್ಸಿಗೇ ಮೇಯರ್ ಪಟ್ಟ ಅಲಂಕರಿಸಿದ ತ್ರಿವೇಣಿ

ಬೆಂಗಳೂರು: ನಗರ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ 8615 ಬೂತ್ ಗಳಿದ್ದು, 2217 ಬೂತ್ ಗಳನ್ನು ಅತಿ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಎಲ್ಲ ಬೂತ್ ಗಳಲ್ಲಿ ಅಂಗವಿಕಲರು ಬಂದು ಹೋಗಲು ಪ್ರತ್ಯೇಕ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್, ಪೀಠೋಪಕರಣಗಳು, ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳು ಇರಲಿದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಬುಧವಾರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ ಚುನಾವಣಾ ಅಧಿಕಾರಿಯ ಹಾಗೂ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಮುಖ್ಯ ಚುನಾವಣಾ ಆಯೋಗ ವಿಧಾನಸಭೆ ದಿನಾಂಕ ಘೋಷಿಸಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ನಗರ ವ್ಯಾಪ್ತಿಯ 28 ಕ್ಷೇತ್ರಗಳಿಗೆ ಆರ್​ಓ ಎಆರ್​ಓ ನೇಮಕ ಮಾಡಲಾಗಿದೆ ಎಂದು ಹೇಳಿದರು.

ಚುನಾವಣಾ ಕರ್ತವ್ಯದಲ್ಲಿರುವ ಎಲ್ಲ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಚುನಾವಣಾ ತರಬೇತಿ ನೀಡಲಾಗಿದೆ. ಈಗಾಗಲೇ ಚುನಾವಣೆಗೆ ಬೇಕಾದ ಎಲ್ಲ ಕ್ರಮ ಕೈಗೊಳ್ಳಲಾಗಿದೆ. ಕೆಲವು ಕಡೆ ಜಾಗದ ಕೊರತೆ ಇತ್ತು. ಇದನ್ನು ನಿವಾರಿಸಲಾಗಿದೆ. ಆರ್​ಓ ಎಆರ್​ಓಗಳು ಆಯಾ ವಿಧಾನಸಭಾ ಕ್ಷೇತ್ರದ ಎಲ್ಲ ಕೆಲಸಗಳಿಗೆ ಜವಬ್ದಾರರಾಗುತ್ತಾರೆ. ಜಿಲ್ಲಾಮಟ್ಟದಲ್ಲಿ ಮೇಲ್ಮಟ್ಟದ ಸಮಿತಿ ಇರಲಿದೆ ಎಂದು ತಿಳಿಸಿದರು.

ಸೂಕ್ಷ್ಮ ಪ್ರದೇಶದಲ್ಲಿ ಇಬ್ಬರು ಅಧಿಕಾರಿಗಳು: ಸೂಕ್ಷ್ಮ ಪ್ರದೇಶದಲ್ಲಿ ಇಬ್ಬರು ಅಧಿಕಾರಿಗಳನ್ನು ನೇಮಿಸಲಾಗಿದೆ. ನಮ್ಮ ರಾಜ್ಯದಲ್ಲೇ ಇರುವ ಅಧಿಕಾರಿಗಳನ್ನು ಕೂಡ ನೇಮಕ ಮಾಡಿಕೊಳ್ಳುತ್ತಿದ್ದೇವೆ. ಉಳಿದಂತೆ ಚುನಾವಣೆಯ ದಿನ ಮೈಕ್ರೋ ಅಬ್ಸವರ್ಸ್, ವಿಡಿಯೋ ಕವರಜ್ ಕೂಡ ಮಾಡಲಾಗುತ್ತದೆ ಎಂದರು.

ಮತದಾರರ ಪಟ್ಟಿ ತಿದ್ದುಪಡಿಗೆ ಅವಕಾಶ: ಬೆಂಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ 95,13,830 ಮತದಾರರಿದ್ದಾರೆ. ಇದರಲ್ಲಿ 49,26,270 ಪುರುಷ ಮತದಾರರಾಗಿದ್ದು, 45,85,824 ಮಹಿಳಾ ಮತದಾರರು ಇದ್ದಾರೆ. 18 ರಿಂದ 19 ವಯಸ್ಸಿನ 1,08,494 ಮತದಾರರು ಸೇರ್ಪಡೆಯಾಗಿದ್ದಾರೆ. 80 ವರ್ಷ ಮೇಲ್ಪಟ್ಟ ಮತದಾರರ ಸಂಖ್ಯೆ 2,36,719 ಇದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮನ್ವಯದಲ್ಲಿ ಬೆಂಗಳೂರು ನಗರ ಜಿಲ್ಲೆಯ ಬಹುತೇಕ ಎಲ್ಲಾ ತೃತೀಯ ಲಿಂಗಿ ಮತದಾರರ ನೋಂದಣಿ ಕಾರ್ಯ ಯಶಸ್ವಿಯಾಗಿದೆ.

9182 ಮತದಾರರ ಪೈಕಿ 9125 ಮತದಾರರು ನೋಂದಣಿಯಾಗಿದ್ದರೆ, 42 ಮತದಾರರ ನೋಂದಣಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಕೇವಲ 15 ಜನರ ನೋಂದಣಿಗೆ ಬಾಕಿ ಉಳಿದಿದೆ. ನಾಮಿನೇಷನ್ ಮಾಡುವ ದಿನದವರೆಗೂ ಮತದಾರರ ಪಟ್ಟಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ ಎಂದು ಹೇಳಿದರು ಎಂದು ಮಾಹಿತಿ ನೀಡಿದರು.

ಮತದಾನದ ಮಾಹಿತಿಗೆ ಆಪ್: ಯಶವಂತಪುರ, ರಾಜರಾಜೇಶ್ವರಿನಗರ, ಶಿವಾಜಿನಗರ, ಶಾಂತಿನಗರ ಸೇರಿದಂತೆ 19 ಕ್ಷೇತ್ರಗಳಲ್ಲಿ ವೆಚ್ಚ ಜಾಸ್ತಿ ಇದೆ. ಆಪ್ ಕೂಡ ತರಲು ಹೊರಟಿದ್ದೇವೆ. ಮತ ಕಟ್ಟೆಗಳಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಿದ್ದೇವೆ. ಬೂತ್ ಬಳಿ ಇರುವ ಸರತಿ ಸಾಲು, ದೂರ ಎಲ್ಲವನ್ನು ಮಾನಿಟರ್ ಮಾಡಲಾಗುತ್ತದೆ. ಆಪ್ ತರಲಾಗುತ್ತಿದ್ದು, ಅದು ಮತದಾನದ ಕುರಿತು ಸಂಪೂರ್ಣ ಮಾಹಿತಿ ನೇರ ಪ್ರಸಾರದಲ್ಲಿ ನೀಡಲಿದೆ ಎಂದು ಹೇಳಿದರು.

ಚುನಾವಣಾ ಅಕ್ರಮ ತಡೆಯಲು ಚೆಕ್ ಪೋಸ್ಟ್: ಜಿಲ್ಲಾ ಗಡಿಯಲ್ಲಿ ಒಳ ಹೋಗುವ ಹೊರ ಬರುವ ವಾಹನಗಳ ಮೇಲೆ ನಿಗಾ ಇಡಲು 11 ಚೆಕ್​ಪೋಸ್ಟ್ ವ್ಯವಸ್ಥೆ ಮಾಡಲಾಗಿದೆ. ನಗರದ ವ್ಯಾಪ್ತಿಯಲ್ಲಿ 15 ಕಡೆ, ತಮಿಳುನಾಡು ಗಡಿಯಲ್ಲಿ 8 ಚೆಕ್ ಪೋಸ್ಟ್ ಇರಲಿದೆ. ಉಸ್ತುವಾರಿಯನ್ನು ಆಯಾ ವ್ಯಾಪ್ತಿಯ ಡಿಸಿಪಿಗಳಿಗೆ ನೀಡಲಾಗಿದೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಸೇರಿದಂತೆ ವಿವಿಧೆಡೆ ರ್ಯಾಂಡಮ್ ಚೆಕ್ ಅಪ್ ನಡೆಯಲಿದೆ ಎಂದರು.

ಮಾಧ್ಯಮಗಳ ಮೇಲೆ ನಿಗಾ: ಗ್ರೀನ್ ಕಲರ್ ಇವಿಎಂ ವೋಟಿಂಗ್ ಗೆ ಬಳಕೆಯಾಗುತ್ತದೆ. ಯೆಲ್ಲೋ ಕಲರ್ ಇರುವ ಇವಿಎಂ ತರಬೇತಿ ನೀಡುವ ಸಲುವಾಗಿ ಬಳಸಲಾಗುತ್ತದೆ. ಯಾವ ಪಕ್ಷಕ್ಕೂ ಮನೆ ಮನೆಗೆ ಹೋಗಿ ವಿವರಣೆ ಪಡೆಯಲು ಅವಕಾಶವಿಲ್ಲ. ಈಗಾಗಲೇ ಮಹಾದೇವಪುರದಲ್ಲಿ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಎಫ್ಐಆರ್ ದಾಖಲಿಸಲಾಗಿದೆ. ಸುದ್ದಿ ಮತ್ತು ಜಾಹೀರಾತುಗಳ ಹೆಸರಲ್ಲಿ ಅಭ್ಯರ್ಥಿಗಳ ಪ್ರಚಾರ ನಡೆಸುವಂತಿಲ್ಲ. ಈ ಹಿನ್ನಲೆಯಲ್ಲಿ ಮಾಧ್ಯಮಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳ ಮೇಲೆ ನಿಗಾ ಇಡಲು ಸಮಿತಿ ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಅಕ್ರಮ ತಡೆಯುವ ಕಾರ್ಯಾಚರಣೆ ಚರುಕು: ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ. ಈಗಾಗಲೇ ಚುನಾವಣಾ ಅಕ್ರಮದ ಕುರಿತು ಕಾರ್ಯಾಚರಣೆ ಆರಂಭಿಸಿದ್ದೇವೆ. ಬ್ಯಾಟರಾಯನಪುರದಲ್ಲಿ 3 ಕೋಟಿ 66 ಲಕ್ಷ ಬೆಲೆಬಾಳುವ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ಎಫ್ಐಆರ್ ಕೂಡ ದಾಖಲಾಗಿದೆ. ಇಂದಿನಿಂದ ಕೋಡ್ ಆಫ್ ಕಂಡೆಕ್ಟ್ ಜಾರಿಯಾಗಿದ್ದು, ಈ ಹಿನ್ನಲೆಯಲ್ಲಿ ಅಕ್ರಮದ ಬಗ್ಗೆ ಕಾರ್ಯಾಚರಣೆ ತೀವ್ರಗೊಳಿಸುತ್ತೇವೆ ಎಂದು ತಿಳಿಸಿದರು.

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳಾದ ಡಾ. ದಯಾನಂದ್, ಲಿಂಗಮೂರ್ತಿ, ಡಾ. ಜಗದೀಶ್ ಕೆ. ನಾಯ್ಕ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಬಳ್ಳಾರಿ ಮಹಾನಗರ ಪಾಲಿಕೆಗೆ ನೂತನ ಸಾರಥಿ.. 23ನೇ ವಯಸ್ಸಿಗೇ ಮೇಯರ್ ಪಟ್ಟ ಅಲಂಕರಿಸಿದ ತ್ರಿವೇಣಿ

Last Updated : Mar 29, 2023, 7:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.