ETV Bharat / state

ಗುರಾಯಿಸಿದ ಎಂದು ಅಟ್ಟಾಡಿಸಿ ಹೊಡೆದ ಪುಡಿರೌಡಿಗಳು! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಪುಡಿರೌಡಿಗಳ ಹಾವಳಿ ಹೆಚ್ಚಾಗಿದ್ದು, ಸದ್ಯ ರೌಡಿಗಳ ಅಟ್ಟಹಾಸದ ದೃಶ್ಯವೊಂದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

author img

By

Published : Nov 15, 2019, 1:19 PM IST

ರೌಡಿಗಳ ಅಟ್ಟಹಾಸ

ಬೆಂಗಳೂರು: ವ್ಯಕ್ತಿಯೊಬ್ಬ ತಮ್ಮನ್ನು ಗುರಾಯಿಸಿದ ಎಂಬ ಕಾರಣಕ್ಕೆ ಆತನನ್ನು ಅಟ್ಟಾಡಿಸಿ ಹೊಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗುರಾಯಿಸಿದ ಎಂದು ಅಟ್ಟಾಡಿಸಿ ಹೊಡೆದ ಪುಡಿರೌಡಿಗಳು, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಘಟನೆಯ ಹಿನ್ನೆಲೆ:

ಜೋಗಯ್ಯ, ಪುನೀತ್, ವಿಕ್ಕಿ ಎಂಬ ಮೂವರು ಹಾಗೂ ಇವರೊಂದಿಗೆ ಇನ್ನೂ ಕೆಲವರು ಸೇರಿಕೊಂಡು ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ರಾಘವನಗರದ ಬಾರೊಂದರಲ್ಲಿ ಸೇವಿಸುತ್ತಿದ್ದರು. ಈ ವೇಳೆ, ಆಟೋ ಚಾಲಕ ಸತೀಶ್ ಎಂಬವರು ಕೂಡ ಬಾರ್​ಗೆ ಬಂದಿದ್ದಾರೆ. ಈ ಸಂದರ್ಭ ಸತೀಶ್​ ತಮ್ಮನ್ನು ಗುರಾಯಿಸಿದ ಎಂದು ಆರೋಪಿಗಳು ಆತನನ್ನು ಅಟ್ಟಾಡಿಸಿಕೊಂಡು ಮಚ್ಚುಗಳಿಂದ ಮನಬಂದಂತೆ ಹಲ್ಲೆ ನಡೆಸಿದ್ದಾರೆ.

ತಕ್ಷಣ ಸ್ಥಳೀಯರು ‌ಹಲ್ಲೆಗೊಳಗಾದ ಸತೀಶ್‌ನನ್ನು ಗಿರಿನಗರದ ಪಲ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಸತೀಶ್​ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸರು ಗಾಯಾಳು ಸತೀಶ್ ಹೇಳಿಕೆ ಹಾಗೂ ಸಿಸಿಟಿವಿ ದೃಶ್ಯ ಆಧರಿಸಿ ನಾಲ್ವರನ್ನು ಬಂಧಿಸಿದ್ದು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರು: ವ್ಯಕ್ತಿಯೊಬ್ಬ ತಮ್ಮನ್ನು ಗುರಾಯಿಸಿದ ಎಂಬ ಕಾರಣಕ್ಕೆ ಆತನನ್ನು ಅಟ್ಟಾಡಿಸಿ ಹೊಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಗುರಾಯಿಸಿದ ಎಂದು ಅಟ್ಟಾಡಿಸಿ ಹೊಡೆದ ಪುಡಿರೌಡಿಗಳು, ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಘಟನೆಯ ಹಿನ್ನೆಲೆ:

ಜೋಗಯ್ಯ, ಪುನೀತ್, ವಿಕ್ಕಿ ಎಂಬ ಮೂವರು ಹಾಗೂ ಇವರೊಂದಿಗೆ ಇನ್ನೂ ಕೆಲವರು ಸೇರಿಕೊಂಡು ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ರಾಘವನಗರದ ಬಾರೊಂದರಲ್ಲಿ ಸೇವಿಸುತ್ತಿದ್ದರು. ಈ ವೇಳೆ, ಆಟೋ ಚಾಲಕ ಸತೀಶ್ ಎಂಬವರು ಕೂಡ ಬಾರ್​ಗೆ ಬಂದಿದ್ದಾರೆ. ಈ ಸಂದರ್ಭ ಸತೀಶ್​ ತಮ್ಮನ್ನು ಗುರಾಯಿಸಿದ ಎಂದು ಆರೋಪಿಗಳು ಆತನನ್ನು ಅಟ್ಟಾಡಿಸಿಕೊಂಡು ಮಚ್ಚುಗಳಿಂದ ಮನಬಂದಂತೆ ಹಲ್ಲೆ ನಡೆಸಿದ್ದಾರೆ.

ತಕ್ಷಣ ಸ್ಥಳೀಯರು ‌ಹಲ್ಲೆಗೊಳಗಾದ ಸತೀಶ್‌ನನ್ನು ಗಿರಿನಗರದ ಪಲ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಸತೀಶ್​ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸರು ಗಾಯಾಳು ಸತೀಶ್ ಹೇಳಿಕೆ ಹಾಗೂ ಸಿಸಿಟಿವಿ ದೃಶ್ಯ ಆಧರಿಸಿ ನಾಲ್ವರನ್ನು ಬಂಧಿಸಿದ್ದು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.

Intro:ಬೆಂಗಳೂರಲ್ಲಿ ಹೆಚ್ಚಾದ ಪುಡಿರೌಡಿಗಳ ಹಾವಳಿ..!
ಬಾರಲ್ಲಿ ಗುರಾಯಿಸಿದಕ್ಕೆ ಅಟ್ಟಾಡಿಸಿಕೊಂಡು ಕೊಚ್ಚಿದ ದುಷ್ಕರ್ಮಿಗಳು

ಬೆಂಗಳೂರಲ್ಲಿ ಪುಡಿರೌಡಿಗಳ ಹಾವಳಿ ಮತ್ತೆ ಹೆಚ್ಚಾಗಿದ್ದು ಸದ್ಯ ರೌಡಿಗಳ ಅಟ್ಟಹಾಸದ ದೃಶ್ಯದ ಸಿಸಿಟಿವಿ ವೈರಲ್ ಆಗಿದೆ. ಈ ದೃಶ್ಯ ಸ್ಥಳೀಯ ಜನರನ್ನೆ ಬೆಚ್ಚಿಬೀಳಿಸುವಂತೆ ಮಾಡಿದೆ.
ಜೋಗಯ್ಯ, ಪುನಿತ್, ವಿಕ್ಕಿ ಸೇರಿ ಕೆಲವರು ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯ ರಾಘವನಗರದಲ್ಲಿ ಬಾರಿ ನಲ್ಲಿ ಎಣ್ಣೆ ಹೊಡಿತಿದ್ರು.

ಈ ವೇಳೆ ಆಟೋ ಚಾಲಕ ಸತೀಶ್ ಕೂಡ ಬಾರ್ಗೆ ಹೋಗಿದ್ದರು. ಈ ವೇಳೆ ಸತೀಶ್ ಆರೋಪಿಗಳನ್ನ ಗುರಾಯಿಸಿದಕ್ಕೆ ಏರಿಯಾದಲ್ಲಿ ಅಟ್ಟಾಡಿಸಿಕೊಂಡು ಮಚ್ಚು ಲಾಂಗ್ ಗಳಿಂದ ಹಲ್ಲೆ ಮಾಡಿದ್ದಾರೆ. ತಕ್ಷಣ ಸ್ಥಳೀಯರು ‌ಹಲ್ಲೆಗೊಳಗಾದ ಸತೀಶ್ ಅವರನ್ನ ಗಿರಿನಗರದ ಪಲ್ಸ್ ಆಸ್ಪತ್ರೆಗೆ ದಾಖಲಿಸಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಪೊಲೀಸರು ಸತೀಶ್ ಹೇಳಿಕೆ ಹಾಗೂ ಸಿಸಿಟಿವಿ ದೃಶ್ಯದ ಆಧಾರದ ಮೇರೆಗೆ ನಾಲ್ವರನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆBody:KN_BNG_02_MURDER_CCTV_7204498Conclusion:KN_BNG_02_MURDER_CCTV_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.