ETV Bharat / state

ಮೂಲ ವಲಸಿಗ ಮುಖಂಡರ ನಡುವೆ ಸಮನ್ವಯತೆ ಸರ್ಕಸ್ ನಡೆಸುತ್ತಿರುವ ಮುನಿರತ್ನ

ಅಧಿಕೃತವಾಗಿ ಚುನಾವಣಾ ಪ್ರಚಾರ ಕಾರ್ಯ ಆರಂಭಿಸುವ ಮೊದಲು ಪಕ್ಷದಲ್ಲಿನ ಸಣ್ಣಪುಟ್ಟ ಗೊಂದಲ ನಿವಾರಿಸಲು ಮುನಿರತ್ನ ಕಸರತ್ತು ನಡೆಸುತ್ತಿದ್ದಾರೆ.

author img

By

Published : Oct 19, 2020, 11:11 PM IST

Munirathna news
ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್​ನಿಂದ ಮುಖಂಡರನ್ನು ಬಿಜೆಪಿ ಕರೆತರುತ್ತಿರುವ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಮೂಲ ಮತ್ತು ವಲಸಿಗರ ನಡುವೆ ಸಮನ್ವಯ ಸಾಧಿಸಲು ಸಭೆಗಳನ್ನು ನಡೆಸುತ್ತಿದ್ದಾರೆ.

ಆರ್.ಆರ್.ನಗರದ ಐವರು ಕಾಂಗ್ರೆಸ್ ಕಾರ್ಪೊರೇಟರ್​ಗಳು, ಪರಾಜಿತ ಅಭ್ಯರ್ಥಿಗಳು, ಮಾಜಿ ಕಾರ್ಪೊರೇಟರ್​​ಗಳನ್ನು ಬಿಜೆಪಿಗೆ ಕರೆತಂದ ನಂತರ ಆಂತರಿಕ ಕಲಹದ ಸಾಧ್ಯತೆ ಎದುರಾದ ಹಿನ್ನೆಲೆಯಲ್ಲಿ ಮೂಲ ಮತ್ತು ವಲಸಿಗ ಮುಖಂಡರೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ. ಮುಂಬರಲಿರುವ ಬಿಬಿಎಂಪಿ ಚುನಾವಣಾ ಟಿಕೆಟ್ ವಿಷಯದ ಕುರಿತು ಯಾರೂ ಆತಂಕಪಡುವುದು ಬೇಡ, ಅರ್ಹರಿಗೆ ಟಿಕೆಟ್ ಸಿಗಲಿದೆ ಎನ್ನುವ ಭರವಸೆ ನೀಡಿ ಚುನಾವಣೆಯಲ್ಲಿ ಕೆಲಸ ಮಾಡುವಂತೆ ಮನವೊಲಿಸುತ್ತಿದ್ದಾರೆ.

ಇದರ ಜೊತೆ ಆರ್.ಆರ್. ನಗರದ ಬಿಬಿಎಂಪಿ‌ ಮಾಜಿ ಸದಸ್ಯೆ ನಳಿನಿ ಮಂಜುನಾಥ್ ಅವರನ್ನು ಭೇಟಿ ಮಾಡಿ ಕ್ಷೇತ್ರದ ಚುನಾವಣೆ ಕುರಿತು ಅಭ್ಯರ್ಥಿ ಮುನಿರತ್ನ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ನಳಿನಿ ಅವರ ಪತಿ ಮಾಜಿ ನಗರಸಭೆ ಸದಸ್ಯ ಮಂಜುನಾಥ್, ಬಿಜೆಪಿ ಮುಖಂಡರಾದ ರಾಮಚಂದ್ರಪ್ಪ, ವಿ.ಸಿ.ಚಂದ್ರು ಅವರು ಉಪಸ್ಥಿತರಿದ್ದರು.

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್​ನಿಂದ ಮುಖಂಡರನ್ನು ಬಿಜೆಪಿ ಕರೆತರುತ್ತಿರುವ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಮೂಲ ಮತ್ತು ವಲಸಿಗರ ನಡುವೆ ಸಮನ್ವಯ ಸಾಧಿಸಲು ಸಭೆಗಳನ್ನು ನಡೆಸುತ್ತಿದ್ದಾರೆ.

ಆರ್.ಆರ್.ನಗರದ ಐವರು ಕಾಂಗ್ರೆಸ್ ಕಾರ್ಪೊರೇಟರ್​ಗಳು, ಪರಾಜಿತ ಅಭ್ಯರ್ಥಿಗಳು, ಮಾಜಿ ಕಾರ್ಪೊರೇಟರ್​​ಗಳನ್ನು ಬಿಜೆಪಿಗೆ ಕರೆತಂದ ನಂತರ ಆಂತರಿಕ ಕಲಹದ ಸಾಧ್ಯತೆ ಎದುರಾದ ಹಿನ್ನೆಲೆಯಲ್ಲಿ ಮೂಲ ಮತ್ತು ವಲಸಿಗ ಮುಖಂಡರೊಂದಿಗೆ ಸಭೆಗಳನ್ನು ನಡೆಸುತ್ತಿದ್ದಾರೆ. ಮುಂಬರಲಿರುವ ಬಿಬಿಎಂಪಿ ಚುನಾವಣಾ ಟಿಕೆಟ್ ವಿಷಯದ ಕುರಿತು ಯಾರೂ ಆತಂಕಪಡುವುದು ಬೇಡ, ಅರ್ಹರಿಗೆ ಟಿಕೆಟ್ ಸಿಗಲಿದೆ ಎನ್ನುವ ಭರವಸೆ ನೀಡಿ ಚುನಾವಣೆಯಲ್ಲಿ ಕೆಲಸ ಮಾಡುವಂತೆ ಮನವೊಲಿಸುತ್ತಿದ್ದಾರೆ.

ಇದರ ಜೊತೆ ಆರ್.ಆರ್. ನಗರದ ಬಿಬಿಎಂಪಿ‌ ಮಾಜಿ ಸದಸ್ಯೆ ನಳಿನಿ ಮಂಜುನಾಥ್ ಅವರನ್ನು ಭೇಟಿ ಮಾಡಿ ಕ್ಷೇತ್ರದ ಚುನಾವಣೆ ಕುರಿತು ಅಭ್ಯರ್ಥಿ ಮುನಿರತ್ನ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ನಳಿನಿ ಅವರ ಪತಿ ಮಾಜಿ ನಗರಸಭೆ ಸದಸ್ಯ ಮಂಜುನಾಥ್, ಬಿಜೆಪಿ ಮುಖಂಡರಾದ ರಾಮಚಂದ್ರಪ್ಪ, ವಿ.ಸಿ.ಚಂದ್ರು ಅವರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.