ETV Bharat / state

ಡ್ರಗ್ಸ್ ಪ್ರಕರಣ: ಕೇರಳ ಸಿಪಿಎಂ ರಾಜ್ಯ ಕಾರ್ಯದರ್ಶಿ ಪುತ್ರ ಇಡಿ ವಿಚಾರಣೆಗೆ ಹಾಜರು

author img

By

Published : Oct 6, 2020, 12:18 PM IST

ಸ್ಯಾಂಡಲ್​ವುಡ್​ಗೆ ಡ್ರಗ್ ನಂಟಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.

Sandalwood drug case
ಇಡಿ ವಿಚಾರಣೆಗೆ ಬಿನೀಶ್ ಹಾಜರು

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಂಟು​ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್​ ಶಾಂತಿ ನಗರದಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿಯಾಗಿರುವ ಅನೂಪ್​​ ಎನ್​​ಸಿಬಿ ವಶದಲ್ಲಿದ್ದಾಗ ವಿಚಾರಣೆ ವೇಳೆ ಡ್ರಗ್ಸ್​​ ಕೇಸ್​ನಲ್ಲಿ ಬಿನೀಶ್​​ ಪಾತ್ರದ ಬಗ್ಗೆ ಬಾಯ್ಬಿಟ್ಟಿದ್ದ ಎನ್ನಲಾಗ್ತಿದೆ. ಹೀಗಾಗಿ ಇಡಿ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.

ಇಡಿ ವಿಚಾರಣೆಗೆ ಬಿನೀಶ್ ಹಾಜರು

ಕಮ್ಮನಹಳ್ಳಿ ಬಳಿ ಅನೂಪ್ ಹೋಟೆಲ್ ಇಟ್ಟುಕೊಂಡಿದ್ದು, ಇದಕ್ಕೆ ಬಿನೀಶ್ ಧನಸಹಾಯ ಮಾಡಿದ್ದನಂತೆ. ಈ ಹಿನ್ನೆಲೆ ಬಿನೀಶ್​​ ಹಾಗೂ ಅನೂಪ್​​​ ಸ್ನೇಹದ ಬಗ್ಗೆ ಮಾಹಿತಿ ಸಂಗ್ರಹಿಸಲು ಇಡಿ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗ್ತಿದೆ.

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಂಟು​ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್​ ಶಾಂತಿ ನಗರದಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿಯಾಗಿರುವ ಅನೂಪ್​​ ಎನ್​​ಸಿಬಿ ವಶದಲ್ಲಿದ್ದಾಗ ವಿಚಾರಣೆ ವೇಳೆ ಡ್ರಗ್ಸ್​​ ಕೇಸ್​ನಲ್ಲಿ ಬಿನೀಶ್​​ ಪಾತ್ರದ ಬಗ್ಗೆ ಬಾಯ್ಬಿಟ್ಟಿದ್ದ ಎನ್ನಲಾಗ್ತಿದೆ. ಹೀಗಾಗಿ ಇಡಿ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.

ಇಡಿ ವಿಚಾರಣೆಗೆ ಬಿನೀಶ್ ಹಾಜರು

ಕಮ್ಮನಹಳ್ಳಿ ಬಳಿ ಅನೂಪ್ ಹೋಟೆಲ್ ಇಟ್ಟುಕೊಂಡಿದ್ದು, ಇದಕ್ಕೆ ಬಿನೀಶ್ ಧನಸಹಾಯ ಮಾಡಿದ್ದನಂತೆ. ಈ ಹಿನ್ನೆಲೆ ಬಿನೀಶ್​​ ಹಾಗೂ ಅನೂಪ್​​​ ಸ್ನೇಹದ ಬಗ್ಗೆ ಮಾಹಿತಿ ಸಂಗ್ರಹಿಸಲು ಇಡಿ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.