ETV Bharat / state

ರಾಜ್ಯದಲ್ಲಿ ಶಾಲೆ ಆರಂಭ ವಿಚಾರ: ಹೆಚ್ಚುವರಿ ಅಭಿಪ್ರಾಯ ಸಂಗ್ರಹಿಸಲು ಮುಂದಾದ ಇಲಾಖೆ

author img

By

Published : Nov 11, 2020, 4:14 PM IST

ಕೊರೊನಾ ಹರಡುವ ಭಯದಿಂದಾಗಿ ರಾಜ್ಯದಲ್ಲಿ ಶಾಲೆ ಆರಂಭಿಸುವ ಬಗ್ಗೆ ಇನ್ನೂ ಸಹ ಚರ್ಚೆ ನಡೆಯುತ್ತಿದ್ದು, ಪೋಷಕರೊಂದಿಗೆ ಸಭೆ ನಡೆಸಿ ಹೆಚ್ಚುವರಿ ಅಭಿಪ್ರಾಯ ಸಂಗ್ರಹಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

Representative Image
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಶಾಲೆ ಆರಂಭದ ವಿಚಾರವಾಗಿ ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆಯು ಹೆಚ್ಚುವರಿ ಅಭಿಪ್ರಾಯ ಸೇಪರ್ಡೆಗೆ ಮುಂದಾಗಿದೆ.

ಆರ್​​​ಟಿಇ ಸ್ಟೂಡೆಂಟ್ಸ್ & ಪೇರೆಂಟ್ಸ್ ಅಸೋಸಿಯೇಷನ್ ಹಾಗೂ ರುಪ್ಸಾ(RUPSA- Recognised unaided private school association) ಜೊತೆಗೂ ಸಹ ಈ ಬಗ್ಗೆ ಸಭೆ ನಡೆಸಲು ಸಿದ್ಧತೆ ನಡೆರದಿದೆ. ಶಾಲೆ ಆರಂಭದ ಕುರಿತು ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರಧಾನ ಕಾರ್ಯದರ್ಶಿ ಉಮಾಶಂಕರ್​​ಗೆ ವರದಿ ಸಲ್ಲಿಕೆ ಮಾಡಲಾಗಿದೆ. ವರದಿ ಸಲ್ಲಿಕೆಯಾದ ಬಳಿಕ ತರಗತಿ ಆರಂಭಿಸುವ ಕುರಿತು ಪಾಲಕರಿಂದ ಅಭಿಪ್ರಾಯ ಸಂಗ್ರಸಿಲ್ಲ ಎಂಬ ದೂರು ಪೋಷಕರಿಂದ ಬಂದ ಹಿನ್ನೆಲೆ, ಶಿಕ್ಷಣ ಇಲಾಖೆ ಹೆಚ್ಚುವರಿ ಸಲಹೆಗೆ ಮತ್ತೊಮ್ಮೆ ಸಭೆ ನಡೆಸಲು ಮುಂದಾಗಿದೆ.

ಈ ಸಭೆಯಲ್ಲಿ ಶಾಲೆಗಳನ್ನು ಪ್ರಾರಂಭಿಸಲು ದಿನಾಂಕ ನಿಗದಿಪಡಿಸುವ ಬಗ್ಗೆ, ಅಗತ್ಯ ಸುರಕ್ಷತಾ ಕ್ರಮ, ಶಾಲೆ ನಡೆಯುವ ಅವಧಿ ಸೇರಿದಂತೆ ಎಲ್ಲ ವಿಚಾರದ ಬಗ್ಗೆ ಚರ್ಚೆ ನಡೆಯಲಿದ್ದು, ಇಲ್ಲಿ ವ್ಯಕ್ತವಾಗುವ ಅಭಿಪ್ರಾಯವನ್ನು ವರದಿಗೆ ಸೇರಿಸಲಾಗುತ್ತದೆ. ಆ ಬಳಿಕ ಅಂತಿಮ ವರದಿಯನ್ನು ಇಲಾಖಾ ಕಾರ್ಯದರ್ಶಿ ಶಿಕ್ಷಣ ಸಚಿವರಿಗೆ ನೀಡಲಿದ್ದಾರೆ.

ಈ ಎಲ್ಲ ಪ್ರಕ್ರಿಯೆಗಳಿಂದಾಗಿ ಸಿಎಂ ಯಡಿಯೂರಪ್ಪರಿಗೆ ವರದಿ ಸಲ್ಲಿಸುವಲ್ಲಿ ವಿಳಂಬವಾಗಲಿದೆ. ಹೀಗಾಗಿ ದೀಪಾವಳಿ ಹಬ್ಬದ ನಂತರವೇ ಶಾಲಾರಂಭದ ದಿನಾಂಕ ನಿಗದಿಯಾಗಲಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ರಾಜ್ಯದಲ್ಲಿ ಶಾಲೆ ಆರಂಭದ ವಿಚಾರವಾಗಿ ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆಯು ಹೆಚ್ಚುವರಿ ಅಭಿಪ್ರಾಯ ಸೇಪರ್ಡೆಗೆ ಮುಂದಾಗಿದೆ.

ಆರ್​​​ಟಿಇ ಸ್ಟೂಡೆಂಟ್ಸ್ & ಪೇರೆಂಟ್ಸ್ ಅಸೋಸಿಯೇಷನ್ ಹಾಗೂ ರುಪ್ಸಾ(RUPSA- Recognised unaided private school association) ಜೊತೆಗೂ ಸಹ ಈ ಬಗ್ಗೆ ಸಭೆ ನಡೆಸಲು ಸಿದ್ಧತೆ ನಡೆರದಿದೆ. ಶಾಲೆ ಆರಂಭದ ಕುರಿತು ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಪ್ರಧಾನ ಕಾರ್ಯದರ್ಶಿ ಉಮಾಶಂಕರ್​​ಗೆ ವರದಿ ಸಲ್ಲಿಕೆ ಮಾಡಲಾಗಿದೆ. ವರದಿ ಸಲ್ಲಿಕೆಯಾದ ಬಳಿಕ ತರಗತಿ ಆರಂಭಿಸುವ ಕುರಿತು ಪಾಲಕರಿಂದ ಅಭಿಪ್ರಾಯ ಸಂಗ್ರಸಿಲ್ಲ ಎಂಬ ದೂರು ಪೋಷಕರಿಂದ ಬಂದ ಹಿನ್ನೆಲೆ, ಶಿಕ್ಷಣ ಇಲಾಖೆ ಹೆಚ್ಚುವರಿ ಸಲಹೆಗೆ ಮತ್ತೊಮ್ಮೆ ಸಭೆ ನಡೆಸಲು ಮುಂದಾಗಿದೆ.

ಈ ಸಭೆಯಲ್ಲಿ ಶಾಲೆಗಳನ್ನು ಪ್ರಾರಂಭಿಸಲು ದಿನಾಂಕ ನಿಗದಿಪಡಿಸುವ ಬಗ್ಗೆ, ಅಗತ್ಯ ಸುರಕ್ಷತಾ ಕ್ರಮ, ಶಾಲೆ ನಡೆಯುವ ಅವಧಿ ಸೇರಿದಂತೆ ಎಲ್ಲ ವಿಚಾರದ ಬಗ್ಗೆ ಚರ್ಚೆ ನಡೆಯಲಿದ್ದು, ಇಲ್ಲಿ ವ್ಯಕ್ತವಾಗುವ ಅಭಿಪ್ರಾಯವನ್ನು ವರದಿಗೆ ಸೇರಿಸಲಾಗುತ್ತದೆ. ಆ ಬಳಿಕ ಅಂತಿಮ ವರದಿಯನ್ನು ಇಲಾಖಾ ಕಾರ್ಯದರ್ಶಿ ಶಿಕ್ಷಣ ಸಚಿವರಿಗೆ ನೀಡಲಿದ್ದಾರೆ.

ಈ ಎಲ್ಲ ಪ್ರಕ್ರಿಯೆಗಳಿಂದಾಗಿ ಸಿಎಂ ಯಡಿಯೂರಪ್ಪರಿಗೆ ವರದಿ ಸಲ್ಲಿಸುವಲ್ಲಿ ವಿಳಂಬವಾಗಲಿದೆ. ಹೀಗಾಗಿ ದೀಪಾವಳಿ ಹಬ್ಬದ ನಂತರವೇ ಶಾಲಾರಂಭದ ದಿನಾಂಕ ನಿಗದಿಯಾಗಲಿದೆ ಎಂದು ತಿಳಿದುಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.