ETV Bharat / state

ನಾಳೆ ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ: ಬಿಬಿಎಂಪಿ ಸುತ್ತ ನಿಷೇಧಾಜ್ಞೆ ಜಾರಿ

author img

By

Published : Dec 3, 2019, 9:34 PM IST

ನಾಳೆ ಬಿಬಿಎಂಪಿ ಸ್ಥಾಯಿ ಸಮಿತಿಯ 12 ಸ್ಥಾನಗಳಿಗೆ ಚುನಾವಣೆ ನಡೆಯುವ ಕಾರಣ, ಬಿಬಿಎಂಪಿ ಟೌನ್ ಹಾಲ್ ಸುತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಬಿಬಿಎಂಪಿ ಸುತ್ತ ನಗರ ಪೊಲೀಸರು ಐಪಿಸಿ 144 ಸೆಕ್ಷನ್ ಜಾರಿ ಮಾಡಿದ್ದಾರೆ.

BBMP
ಬಿಬಿಎಂಪಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಾಳೆ 12 ಸ್ಥಾಯಿ ಸಮಿತಿ ಸ್ಥಾನಗಳ ಚುನಾವಣೆ ನಡೆಯುವ ಕಾರಣ ಬಿಬಿಎಂಪಿ ಟೌನ್ ಹಾಲ್ ಸುತ್ತಮುತ್ತ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು 200ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.

letter
ಪ್ರಕಟಣೆ

ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ನಾಳೆ ಬೆಳಗ್ಗೆ 7ಗಂಟೆಯಿಂದ ಸಂಜೆ 6ರ ವರೆಗೆ ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ನಡೆಸುವುದು, ಮಾರಕಾಸ್ತ್ರ, ದೊಣ್ಣೆ, ಚಾಕು, ಸ್ಪೋಟಕ ವಸ್ತು,‌ ವ್ಯಕ್ತಿಗಳ ಪ್ರತಿಕೃತಿ ದಹನ, ಮೆರವಣಿಗೆ ಪ್ರತಿಭಟನೆ ಮಾಡುವುದು, ಸಂಗೀತ ನುಡಿಸುವುದನ್ನು ನಿಷೇಧಿಸಲಾಗಿದೆ.

ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿ ಕಾನೂನಿನ ವಿರುದ್ದ ನಡೆದುಕೊಂಡರೆ ಅಂಥವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವುದಾಗಿ ನಗರ ಆಯುಕ್ತ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಾಳೆ 12 ಸ್ಥಾಯಿ ಸಮಿತಿ ಸ್ಥಾನಗಳ ಚುನಾವಣೆ ನಡೆಯುವ ಕಾರಣ ಬಿಬಿಎಂಪಿ ಟೌನ್ ಹಾಲ್ ಸುತ್ತಮುತ್ತ ಮುನ್ನೆಚ್ಚರಿಕಾ ಕ್ರಮವಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು 200ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.

letter
ಪ್ರಕಟಣೆ

ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ನಾಳೆ ಬೆಳಗ್ಗೆ 7ಗಂಟೆಯಿಂದ ಸಂಜೆ 6ರ ವರೆಗೆ ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ನಡೆಸುವುದು, ಮಾರಕಾಸ್ತ್ರ, ದೊಣ್ಣೆ, ಚಾಕು, ಸ್ಪೋಟಕ ವಸ್ತು,‌ ವ್ಯಕ್ತಿಗಳ ಪ್ರತಿಕೃತಿ ದಹನ, ಮೆರವಣಿಗೆ ಪ್ರತಿಭಟನೆ ಮಾಡುವುದು, ಸಂಗೀತ ನುಡಿಸುವುದನ್ನು ನಿಷೇಧಿಸಲಾಗಿದೆ.

ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿ ಕಾನೂನಿನ ವಿರುದ್ದ ನಡೆದುಕೊಂಡರೆ ಅಂಥವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವುದಾಗಿ ನಗರ ಆಯುಕ್ತ ಎಚ್ಚರಿಕೆ ನೀಡಿದ್ದಾರೆ.

Intro:ಬಿಬಿಎಂಪಿ ಸ್ಥಾಯಿ ಸಮಿತಿಯ ಸ್ಥಾನಗಳ ಚುನಾವಣೆ
ಬಿಬಿಎಂಪಿಸುತ್ತಾ 144 ಸೆಕ್ಷನ್ ಜಾರಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಾಳೆ ಹನ್ನೆರಡು ಸ್ಥಾಯಿ ಸಮಿತಿಯ ಸ್ಥಾನಗಳ ಚುನಾವಣೆ ನಡೆಯುವ ಕಾರಣ ಬಿಬಿಎಂಪಿ ಟೌನ್ ಹಾಲ್ ಸುತ್ತಾ ಯಾವುದೇ ಅಹಿತಕರ ಘಟನೆ ನಡೆಯದ ರೀತಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು 200ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ನೆಯನ್ನ ಜಾರಿ ಮಾಡಿದ್ದಾರೆ.

ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ನಾಳೆ ಬೆಳ್ಳಗೆ 7ಗಂಟೆಯಿಂದ ಸಂಜೆ 6ರ ವರೆಗೆ ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ನಡೆಸುವುದು, ಮಾರಕಾಸ್ತ್ರ, ದೊಣ್ಣೆ, ಚಾಕು, ಸ್ಪೋಟಕ ವಸ್ತು,‌ ವ್ಯಕ್ತಿಗಳ. ಪ್ರತಿಕೃತಿ ದಹನ, ಮೆರವಣಿಗೆ ಪ್ರತಿಭಟನೆ ಮಾಡುವುದು,ಸಂಗೀತ ನುಡಿಸುವುದನ್ನ ನಿಷೇಧ ಮಾಡಲಾಗಿದೆ.

ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿ ಕಾನೂನು ವಿರುದ್ದ ನಡೆದುಕೊಂಡರೆ ಅಂತವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವುದಾಗಿ ನಗರ ಆಯುಕ್ತ ಎಚ್ಚರಿಕೆ ನೀಡಿದ್ದಾರೆ

Body:kN_BNG_11_144secstion_7204498Conclusion:kN_BNG_11_144secstion_7204498
ETV Bharat Logo

Copyright © 2024 Ushodaya Enterprises Pvt. Ltd., All Rights Reserved.