ETV Bharat / state

ಪ್ರತ್ಯೇಕ ರಸ್ತೆ ಅಪಘಾತ ಮತ್ತು ವಿದ್ಯುತ್​ ಅವಘಡ : ಸಹೋದರರಿಬ್ಬರು ಸೇರಿ ನಾಲ್ವರು ಸಾವು

author img

By

Published : Jul 18, 2021, 8:30 PM IST

ನೆಲಮಂಗಲದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತ ಹಾಗೂ ವಿದ್ಯುತ್​ ಅವಘಡದಲ್ಲಿ ಇಬ್ಬರು ಸಹೋದರರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ..

road accident
ರಸ್ತೆ ಅಪಘಾತ

ನೆಲಮಂಗಲ : ಇಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತ ಮತ್ತು ವಿದ್ಯುತ್​ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮರಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸಹೋದರರ ಸಾವು

two brother died
ರಸ್ತೆ ಅಪಘಾತದಲ್ಲಿ ಸಹೋದರರಿಬ್ಬರು ಸಾವು

ನೆಲಮಂಗಲದ ತ್ಯಾಮಗೊಂಡ್ಲು ಬಳಿ ಬೈಕ್​ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಹೋದರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಳಲುಘಟ್ಟದ ನವೀನ್( 25), ನಿತೀನ್ (23) ಮೃತ ವ್ಯಕ್ತಿಗಳಾಗಿದ್ದಾರೆ. ಈ ಸಂಬಂಧ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

man died
ಬೈಕ್​ಗೆ ವಾಹನ ಡಿಕ್ಕಿಯಾಗಿ ವ್ಯಕ್ತಿ ಸಾವು

ನೆಲಮಂಗಲದ ಕಂಬಾಳು ಗ್ರಾಮದಲ್ಲಿ ಬೈಕ್​​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಲೂಕಿನ ಮಾಚನಹಳ್ಳಿ ಕಾಲೋನಿ ನಿವಾಸಿ ತಿಮ್ಮರಾಯಪ್ಪ (22) ಮೃತ ವ್ಯಕ್ತಿ. ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು:

man died
ವಿದ್ಯುತ್​ ಸ್ಪರ್ಶಿಸಿ ವ್ಯಕ್ತಿ ಸಾವು

ನಿರ್ಮಾಣ ಹಂತದಲ್ಲಿದ್ದ ಮನೆ ಕಟ್ಟಡಕ್ಕೆ ಕ್ಯೂರಿಂಗ್ ಮಾಡುವ ವೇಳೆ ವಿದ್ಯುತ್​ ಅವಘಡ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಚನ್ನರಾಯಪಟ್ಟಣ ಮೂಲದ ತಮ್ಮಣ್ಣ ( 50) ಎಂಬುವರು ಸಾವನ್ನಪ್ಪಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ: ಬೊಲೆರೊ ಅಪಘಾತ : ಗದ್ದೆ ಕೆಲಸ ಮುಗಿಸಿ ಮನೆಗೆ ಹೊರಟವರು ಆಸ್ಪತ್ರೆಗೆ ದಾಖಲಾದರು

ನೆಲಮಂಗಲ : ಇಲ್ಲಿ ನಡೆದ ಪ್ರತ್ಯೇಕ ರಸ್ತೆ ಅಪಘಾತ ಮತ್ತು ವಿದ್ಯುತ್​ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮರಕ್ಕೆ ಬೈಕ್ ಡಿಕ್ಕಿ : ಸ್ಥಳದಲ್ಲೇ ಸಹೋದರರ ಸಾವು

two brother died
ರಸ್ತೆ ಅಪಘಾತದಲ್ಲಿ ಸಹೋದರರಿಬ್ಬರು ಸಾವು

ನೆಲಮಂಗಲದ ತ್ಯಾಮಗೊಂಡ್ಲು ಬಳಿ ಬೈಕ್​ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಹೋದರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಳಲುಘಟ್ಟದ ನವೀನ್( 25), ನಿತೀನ್ (23) ಮೃತ ವ್ಯಕ್ತಿಗಳಾಗಿದ್ದಾರೆ. ಈ ಸಂಬಂಧ ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

man died
ಬೈಕ್​ಗೆ ವಾಹನ ಡಿಕ್ಕಿಯಾಗಿ ವ್ಯಕ್ತಿ ಸಾವು

ನೆಲಮಂಗಲದ ಕಂಬಾಳು ಗ್ರಾಮದಲ್ಲಿ ಬೈಕ್​​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಲೂಕಿನ ಮಾಚನಹಳ್ಳಿ ಕಾಲೋನಿ ನಿವಾಸಿ ತಿಮ್ಮರಾಯಪ್ಪ (22) ಮೃತ ವ್ಯಕ್ತಿ. ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು:

man died
ವಿದ್ಯುತ್​ ಸ್ಪರ್ಶಿಸಿ ವ್ಯಕ್ತಿ ಸಾವು

ನಿರ್ಮಾಣ ಹಂತದಲ್ಲಿದ್ದ ಮನೆ ಕಟ್ಟಡಕ್ಕೆ ಕ್ಯೂರಿಂಗ್ ಮಾಡುವ ವೇಳೆ ವಿದ್ಯುತ್​ ಅವಘಡ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಚನ್ನರಾಯಪಟ್ಟಣ ಮೂಲದ ತಮ್ಮಣ್ಣ ( 50) ಎಂಬುವರು ಸಾವನ್ನಪ್ಪಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ: ಬೊಲೆರೊ ಅಪಘಾತ : ಗದ್ದೆ ಕೆಲಸ ಮುಗಿಸಿ ಮನೆಗೆ ಹೊರಟವರು ಆಸ್ಪತ್ರೆಗೆ ದಾಖಲಾದರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.