ETV Bharat / state

ರಾಜ್ಯಾದ್ಯಂತ ಲೋಕ್​ ಅದಾಲತ್​ ಮೂಲಕ 25 ಲಕ್ಷ ಪ್ರಕರಣಗಳು ಇತ್ಯರ್ಥ!

author img

By ETV Bharat Karnataka Team

Published : Dec 12, 2023, 10:56 PM IST

ಡಿಸೆಂಬರ್ 9 ರಂದು ಲೋಕ್​ ಅದಾಲತ್ ಮೂಲಕ 25.14 ಲಕ್ಷ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾ ಪಿ ಎಸ್​ ದಿನೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

settlement-of-25-lakh-cases-through-lok-adalat-in-karnataka
ರಾಜ್ಯಾದ್ಯಂತ ಲೋಕ್​ ಅದಾಲತ್​ ಮೂಲಕ 25 ಲಕ್ಷ ಪ್ರಕರಣಗಳ ಇತ್ಯರ್ಥ!

ಬೆಂಗಳೂರು: ರಾಜ್ಯಾದ್ಯಂತ ವಿವಿಧ ಹಂತದ ನ್ಯಾಯಾಲಯಗಳಲ್ಲಿ ಕಳೆದ ಶನಿವಾರ (ಡಿ.9) ನಡೆಸಿದ ರಾಷ್ಟ್ರೀಯ ಲೋಕ್‌ ಅದಾಲತ್​ನಲ್ಲಿ 25 ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ. ಇದರಿಂದ ಒಟ್ಟು 1,569 ಕೋಟಿ ರೂ. ಗಳ ಪರಿಹಾರವನ್ನು ಕಕ್ಷಿದಾರರಿಗೆ ಪರಿಹಾರ ರೂಪದಲ್ಲಿ ನೀಡಲಾಗಿದೆ.

ಹೈಕೋರ್ಟ್‌ನ ಕಾನೂನು ಸೇವಾ ಪ್ರಾಧಿಕಾರದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್‌. ದಿನೇಶ್‌ ಕುಮಾರ್‌, ಶನಿವಾರ ಹೈಕೋರ್ಟ್‌ನ ಮೂರು ಪೀಠಗಳು ಸೇರಿದಂತೆ ರಾಜ್ಯಾದ್ಯಂತ ಒಟ್ಟು 1,022 ಪೀಠಗಳು ಅದಾಲತ್​ ನಡೆಸಿದ್ದವು. ಈ ವೇಳೆ, ನ್ಯಾಯಾಲಯದಲ್ಲಿ ಬಾಕಿಯಿದ್ದ 2,24,080 ಪ್ರಕರಣಗಳು ಹಾಗೂ 22,90,263 ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು 25,14,343 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ವಿವರಿಸಿದರು.

ಲೋಕ್‌ ಅದಾಲತ್​ನಿಂದ ತತ್ವರಿತವಾಗಿ ಪ್ರಕರಣ ಇತ್ಯರ್ಥ ಸಾಧ್ಯ: ನ್ಯಾಯಾಲಯದಲ್ಲಿ ಹಲವು ವರ್ಷಗಳ ಕಾಲ ಪ್ರಕರಣ ಬಾಕಿ ಉಳಿಯುವುದರಿಂದ ವ್ಯಾಜ್ಯದಾರನಿಗೆ ವೈಯಕ್ತಿಕವಾಗಿ ಹಾಗೂ ಅವರ ಕುಟುಂಬದವರಿಗೆ ಸಾಕಷ್ಟು ತೊಂದರೆ ಉಂಟಾಗಲಿದೆ. ಲೋಕ್‌ ಅದಾಲತ್​ನಲ್ಲಿ ರಾಜಿ ಸೂತ್ರದ ಮೂಲಕ ತತ್ವರಿತವಾಗಿ ಪ್ರಕರಣ ಇತ್ಯರ್ಥಪಡಿಸಲು ಸಾಧ್ಯವಿದೆ. ಇದರಿಂದ ಕೋರ್ಟ್‌ ಹಾಗೂ ವ್ಯಾಜ್ಯದಾರನ ಸಾಕಷ್ಟು ಸಮಯ ಉಳಿತಾಯವಾಗಲಿದೆ. ಯಾವುದೇ ಖರ್ಚು ಇಲ್ಲದೇ ಪರಿಹಾರ ಕಂಡುಕೊಳ್ಳಬಹುದು. ನ್ಯಾಯಾಲಯಕ್ಕೆ ಅಲೆದಾಡುವುದು ಸಹ ತಪ್ಪುತ್ತದೆ. ಅದಲಾತ್‌ ವೇದಿಕೆಯನ್ನು ವ್ಯಾಜ್ಯದಾರರು ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಅದಲಾತ್‌ಗೆ ಸುಮಾರು 30 ಲಕ್ಷ ಪ್ರಕರಣಗಳನ್ನು ಗುರುತಿಸಲಾಗಿತ್ತು. ಆ ಪೈಕಿ 25 ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಉಳಿದ ಅಂದಾಜು ಐದು ಲಕ್ಷ ಪ್ರಕರಣಗಳು ಕಾರಣಾಂತರಗಳಿಂದ ವಿಲೇವಾರಿ ಮಾಡಲಾಗಲಿಲ್ಲ. ಹೈಕೋರ್ಟ್‌ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ನ್ಯಾ.ಡಾ.ಹೆಚ್‌.ಬಿ. ಪ್ರಭಾಕರ ಶಾಸ್ತ್ರಿ ಅವರು ಬೆಂಗಳೂರು ಪೀಠದಲ್ಲಿ ಲೋಕ್‌ ಅದಾಲತ್‌ನ ನೇತೃತ್ವ ವಹಿಸಿ 1,087 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದಾರೆ. ನ್ಯಾಯಮೂರ್ತಿ ಎಸ್‌.ಸುನೀಲ್‌ ದತ್‌ ಯಾದವ್‌ ಮತ್ತು ನ್ಯಾಯಾಂಗೇತರ ಸಂಧಾನಕಾರ ಶ್ರೀವತ್ಸ ಹೆಗ್ಡೆ ಅವರನ್ನು ಒಳಗೊಂಡ ಪೀಠ, 22 ತಕರಾರು ಅರ್ಜಿಗಳನ್ನು ವಿಲೇವಾರಿ ಮಾಡಿತು ಎಂದು ವಿವರಿಸಿದರು.

ಅಲ್ಲದೇ, ಒಟ್ಟು 1,358 ವೈವಾಹಿಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿ, 262 ದಂಪತಿಗಳು ಮತ್ತೆ ಒಂದುಗೂಡಿಸಲಾಗಿದೆ. ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳಲ್ಲಿ 4,031 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದು, ಒಟ್ಟು 209 ಕೋಟಿ ರೂಗಳನ್ನು ಸಂತ್ರಸ್ತರಿಗೆ ಪರಿಹಾರದ ರೂಪದಲ್ಲಿ ಕೊಡಿಸಲಾಗಿದೆ. 10,513 ಚೆಕ್​ ಬೌನ್ಸ್, 3,125 ವಿಭಾಗ ದಾವೆ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. 522 ಭೂಸ್ವಾಧೀನ ಅಮಲ್ಜಾರಿ (ಎಲ್‌ಎಸಿ ಎಕ್ಸಿಕ್ಯೂಷನ್‌) ಪ್ರಕರಣಗಳಲ್ಲಿ ಇತ್ಯರ್ಥ ಪಡಿಸಿದ್ದು, 120 ಕೋಟಿ ರೂ.ಗಳ ಪರಿಹಾರ ವಿತರಣೆ ಮಾಡಲಾಗಿದೆ.

839 ಮೋಟಾರು ವಾಹನ ಅಮಲ್ಜಾರಿ ಪ್ರಕರಣಗಳು ಇತ್ಯರ್ಥ ಪಡಿಸಿದ್ದು, 51 ಕೋಟಿ ರೂ.ಗಳ ಪರಿಹಾರ ವಿತರಣೆ ಮಾಡಲಾಗಿದೆ. ಇತರೆ 3,290 ಅಮಲ್ಜಾರಿ ಪ್ರಕರಣಗಳು ಇತ್ಯರ್ಥವಾಗಿದ್ದು, 124 ಕೋಟಿ ರೂ. ಪರಿಹಾರ ವಿತರಣೆ ಮಾಡಲಾಗಿದೆ. 28 ರೇರಾ ಪ್ರಕರಣಗಳ 32 ಲಕ್ಷ ರೂ, ಪರಿಹಾರ, 88 ಗ್ರಾಹಕರ ವ್ಯಾಜ್ಯಗಳ ಪ್ರಕರಣಗಳಲ್ಲಿ 2.47 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಇತ್ಯರ್ಥವಾದ ವಿಶೇಷ ಪ್ರಕರಣಗಳು: ಬೆಂಗಳೂರಿನ 13ನೇ ಲಘು ವ್ಯಾಜ್ಯಗಳ ನ್ಯಾಯಾಲಯ ಮತ್ತು ಬೆಂಗಳೂರಿನ 16ನೇ ಲಘು ವ್ಯಾಜ್ಯಗಳ ನ್ಯಾಯಾಲಯದಲ್ಲಿದ್ದ ಎರಡು ಪ್ರತ್ಯೇಕ ಎಂವಿಸಿ ಪ್ರಕರಣಗಳನ್ನು ಕ್ರಮವಾಗಿ 55 ಲಕ್ಷ ರೂ ಹಾಗೂ 49.65 ಲಕ್ಷ ರೂ ಪರಿಹಾರ ನೀಡಿ ಇತ್ಯರ್ಥಡಿಸಲಾಗಿದೆ.

ಬೆಳಗಾವಿಯ ಖಾನಪುರ ಕೋರ್ಟ್‌ನಲ್ಲಿದ್ದ ಎಂವಿಸಿ ಅಮಲ್ಜಾರಿ ಪ್ರಕರಣವನ್ನು ಇತ್ಯರ್ಥಪಡಿಸಿ, 71,60,566 ರೂ. ಪರಿಹಾರ ಕಲ್ಪಿಸಲಾಗಿದೆ. ಅದೇ ಜಿಲ್ಲೆಯ ಬೈಲಹೊಂಗಲ ಕೋರ್ಟ್‌ನ ಎಂವಿಸಿ ಪ್ರಕರಣವನ್ನು ಪರಿಹರಿಸಿ 50 ಲಕ್ಷ ರೂ. ಪರಿಹಾರ ನೀಡಲಾಗಿದೆ. ಬೆಂಗಳೂರು ಲಘು ವ್ಯಾಜ್ಯಗಳ ಕೋರ್ಟ್‌ನಲ್ಲಿ ಎರಡು ಪ್ರತ್ಯೇಕ ಚೆಕ್‌ ಬೌನ್ಸ್‌ ಪ್ರಕರಣವನ್ನು ಇತ್ಯರ್ಥಪಡಿಸಿ ಕ್ರಮವಾಗಿ 1.18 ಮತ್ತು 1.09 ಕೋಟಿ ರೂ. ಪರಿಹಾರ ನೀಡಲಾಗಿದೆ.

ಚಿತ್ರದುರ್ಗದ ಹಿರಿಯೂರು ಹಿರಿಯ ನ್ಯಾಯಾಲಯದಲ್ಲಿದ್ದ ಪಾಲು ವಿಭಾಗ ಪ್ರಕರಣವೊಂದನ್ನು 57.10 ಲಕ್ಷ ರೂ, ದಕ್ಷಿಣ ಕನ್ನಡ ಜಿಲ್ಲೆಯ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿದ್ದ ವಾಣಿಜ್ಯ ಅಮಲ್ಜಾರಿ ಪ್ರಕರಣವನ್ನು ವಿಲೇವಾರಿ ಮಾಡಿ, 63.07 ಲಕ್ಷ ರೂ ಪರಿಹಾರ ಕೊಡಿಸಲಾಗಿದೆ.
ಮಂಡ್ಯ ಜಿಲ್ಲೆಯ ಪ್ರಧಾನ ಸಿವಿಲ್‌ ನ್ಯಾಯಾಲಯದ ಮುಂದಿದ್ದ 18 ವರ್ಷ ಹಳೆಯ ಪಾಲು ವಿಭಾಗ ಪ್ರಕರಣ ಮತ್ತು ಚಾಮರಾಜನಗರದ ಹೆಚ್ಚುವರಿ ಸಿವಿಲ್‌ ಕೋರ್ಟ್‌ನಲ್ಲಿ 11 ವರ್ಷದಿಂದ ಬಾಕಿ ಉಳಿದಿದ್ದ ಪಾಲು ವಿಭಾಗ ಪ್ರಕರಣವನ್ನು ಇತ್ಯರ್ಥಪಡಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ವಿಡಿಯೋ, ಫೋಟೋ ಪ್ರಸಾರ ಮಾಡದಂತೆ ಮಾಧ್ಯಮಕ್ಕೆ ಹೈಕೋರ್ಟ್​ ತಡೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ಹಂತದ ನ್ಯಾಯಾಲಯಗಳಲ್ಲಿ ಕಳೆದ ಶನಿವಾರ (ಡಿ.9) ನಡೆಸಿದ ರಾಷ್ಟ್ರೀಯ ಲೋಕ್‌ ಅದಾಲತ್​ನಲ್ಲಿ 25 ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ. ಇದರಿಂದ ಒಟ್ಟು 1,569 ಕೋಟಿ ರೂ. ಗಳ ಪರಿಹಾರವನ್ನು ಕಕ್ಷಿದಾರರಿಗೆ ಪರಿಹಾರ ರೂಪದಲ್ಲಿ ನೀಡಲಾಗಿದೆ.

ಹೈಕೋರ್ಟ್‌ನ ಕಾನೂನು ಸೇವಾ ಪ್ರಾಧಿಕಾರದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್‌. ದಿನೇಶ್‌ ಕುಮಾರ್‌, ಶನಿವಾರ ಹೈಕೋರ್ಟ್‌ನ ಮೂರು ಪೀಠಗಳು ಸೇರಿದಂತೆ ರಾಜ್ಯಾದ್ಯಂತ ಒಟ್ಟು 1,022 ಪೀಠಗಳು ಅದಾಲತ್​ ನಡೆಸಿದ್ದವು. ಈ ವೇಳೆ, ನ್ಯಾಯಾಲಯದಲ್ಲಿ ಬಾಕಿಯಿದ್ದ 2,24,080 ಪ್ರಕರಣಗಳು ಹಾಗೂ 22,90,263 ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು 25,14,343 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ ಎಂದು ವಿವರಿಸಿದರು.

ಲೋಕ್‌ ಅದಾಲತ್​ನಿಂದ ತತ್ವರಿತವಾಗಿ ಪ್ರಕರಣ ಇತ್ಯರ್ಥ ಸಾಧ್ಯ: ನ್ಯಾಯಾಲಯದಲ್ಲಿ ಹಲವು ವರ್ಷಗಳ ಕಾಲ ಪ್ರಕರಣ ಬಾಕಿ ಉಳಿಯುವುದರಿಂದ ವ್ಯಾಜ್ಯದಾರನಿಗೆ ವೈಯಕ್ತಿಕವಾಗಿ ಹಾಗೂ ಅವರ ಕುಟುಂಬದವರಿಗೆ ಸಾಕಷ್ಟು ತೊಂದರೆ ಉಂಟಾಗಲಿದೆ. ಲೋಕ್‌ ಅದಾಲತ್​ನಲ್ಲಿ ರಾಜಿ ಸೂತ್ರದ ಮೂಲಕ ತತ್ವರಿತವಾಗಿ ಪ್ರಕರಣ ಇತ್ಯರ್ಥಪಡಿಸಲು ಸಾಧ್ಯವಿದೆ. ಇದರಿಂದ ಕೋರ್ಟ್‌ ಹಾಗೂ ವ್ಯಾಜ್ಯದಾರನ ಸಾಕಷ್ಟು ಸಮಯ ಉಳಿತಾಯವಾಗಲಿದೆ. ಯಾವುದೇ ಖರ್ಚು ಇಲ್ಲದೇ ಪರಿಹಾರ ಕಂಡುಕೊಳ್ಳಬಹುದು. ನ್ಯಾಯಾಲಯಕ್ಕೆ ಅಲೆದಾಡುವುದು ಸಹ ತಪ್ಪುತ್ತದೆ. ಅದಲಾತ್‌ ವೇದಿಕೆಯನ್ನು ವ್ಯಾಜ್ಯದಾರರು ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಅದಲಾತ್‌ಗೆ ಸುಮಾರು 30 ಲಕ್ಷ ಪ್ರಕರಣಗಳನ್ನು ಗುರುತಿಸಲಾಗಿತ್ತು. ಆ ಪೈಕಿ 25 ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಉಳಿದ ಅಂದಾಜು ಐದು ಲಕ್ಷ ಪ್ರಕರಣಗಳು ಕಾರಣಾಂತರಗಳಿಂದ ವಿಲೇವಾರಿ ಮಾಡಲಾಗಲಿಲ್ಲ. ಹೈಕೋರ್ಟ್‌ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ನ್ಯಾ.ಡಾ.ಹೆಚ್‌.ಬಿ. ಪ್ರಭಾಕರ ಶಾಸ್ತ್ರಿ ಅವರು ಬೆಂಗಳೂರು ಪೀಠದಲ್ಲಿ ಲೋಕ್‌ ಅದಾಲತ್‌ನ ನೇತೃತ್ವ ವಹಿಸಿ 1,087 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದಾರೆ. ನ್ಯಾಯಮೂರ್ತಿ ಎಸ್‌.ಸುನೀಲ್‌ ದತ್‌ ಯಾದವ್‌ ಮತ್ತು ನ್ಯಾಯಾಂಗೇತರ ಸಂಧಾನಕಾರ ಶ್ರೀವತ್ಸ ಹೆಗ್ಡೆ ಅವರನ್ನು ಒಳಗೊಂಡ ಪೀಠ, 22 ತಕರಾರು ಅರ್ಜಿಗಳನ್ನು ವಿಲೇವಾರಿ ಮಾಡಿತು ಎಂದು ವಿವರಿಸಿದರು.

ಅಲ್ಲದೇ, ಒಟ್ಟು 1,358 ವೈವಾಹಿಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿ, 262 ದಂಪತಿಗಳು ಮತ್ತೆ ಒಂದುಗೂಡಿಸಲಾಗಿದೆ. ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳಲ್ಲಿ 4,031 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದು, ಒಟ್ಟು 209 ಕೋಟಿ ರೂಗಳನ್ನು ಸಂತ್ರಸ್ತರಿಗೆ ಪರಿಹಾರದ ರೂಪದಲ್ಲಿ ಕೊಡಿಸಲಾಗಿದೆ. 10,513 ಚೆಕ್​ ಬೌನ್ಸ್, 3,125 ವಿಭಾಗ ದಾವೆ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. 522 ಭೂಸ್ವಾಧೀನ ಅಮಲ್ಜಾರಿ (ಎಲ್‌ಎಸಿ ಎಕ್ಸಿಕ್ಯೂಷನ್‌) ಪ್ರಕರಣಗಳಲ್ಲಿ ಇತ್ಯರ್ಥ ಪಡಿಸಿದ್ದು, 120 ಕೋಟಿ ರೂ.ಗಳ ಪರಿಹಾರ ವಿತರಣೆ ಮಾಡಲಾಗಿದೆ.

839 ಮೋಟಾರು ವಾಹನ ಅಮಲ್ಜಾರಿ ಪ್ರಕರಣಗಳು ಇತ್ಯರ್ಥ ಪಡಿಸಿದ್ದು, 51 ಕೋಟಿ ರೂ.ಗಳ ಪರಿಹಾರ ವಿತರಣೆ ಮಾಡಲಾಗಿದೆ. ಇತರೆ 3,290 ಅಮಲ್ಜಾರಿ ಪ್ರಕರಣಗಳು ಇತ್ಯರ್ಥವಾಗಿದ್ದು, 124 ಕೋಟಿ ರೂ. ಪರಿಹಾರ ವಿತರಣೆ ಮಾಡಲಾಗಿದೆ. 28 ರೇರಾ ಪ್ರಕರಣಗಳ 32 ಲಕ್ಷ ರೂ, ಪರಿಹಾರ, 88 ಗ್ರಾಹಕರ ವ್ಯಾಜ್ಯಗಳ ಪ್ರಕರಣಗಳಲ್ಲಿ 2.47 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಇತ್ಯರ್ಥವಾದ ವಿಶೇಷ ಪ್ರಕರಣಗಳು: ಬೆಂಗಳೂರಿನ 13ನೇ ಲಘು ವ್ಯಾಜ್ಯಗಳ ನ್ಯಾಯಾಲಯ ಮತ್ತು ಬೆಂಗಳೂರಿನ 16ನೇ ಲಘು ವ್ಯಾಜ್ಯಗಳ ನ್ಯಾಯಾಲಯದಲ್ಲಿದ್ದ ಎರಡು ಪ್ರತ್ಯೇಕ ಎಂವಿಸಿ ಪ್ರಕರಣಗಳನ್ನು ಕ್ರಮವಾಗಿ 55 ಲಕ್ಷ ರೂ ಹಾಗೂ 49.65 ಲಕ್ಷ ರೂ ಪರಿಹಾರ ನೀಡಿ ಇತ್ಯರ್ಥಡಿಸಲಾಗಿದೆ.

ಬೆಳಗಾವಿಯ ಖಾನಪುರ ಕೋರ್ಟ್‌ನಲ್ಲಿದ್ದ ಎಂವಿಸಿ ಅಮಲ್ಜಾರಿ ಪ್ರಕರಣವನ್ನು ಇತ್ಯರ್ಥಪಡಿಸಿ, 71,60,566 ರೂ. ಪರಿಹಾರ ಕಲ್ಪಿಸಲಾಗಿದೆ. ಅದೇ ಜಿಲ್ಲೆಯ ಬೈಲಹೊಂಗಲ ಕೋರ್ಟ್‌ನ ಎಂವಿಸಿ ಪ್ರಕರಣವನ್ನು ಪರಿಹರಿಸಿ 50 ಲಕ್ಷ ರೂ. ಪರಿಹಾರ ನೀಡಲಾಗಿದೆ. ಬೆಂಗಳೂರು ಲಘು ವ್ಯಾಜ್ಯಗಳ ಕೋರ್ಟ್‌ನಲ್ಲಿ ಎರಡು ಪ್ರತ್ಯೇಕ ಚೆಕ್‌ ಬೌನ್ಸ್‌ ಪ್ರಕರಣವನ್ನು ಇತ್ಯರ್ಥಪಡಿಸಿ ಕ್ರಮವಾಗಿ 1.18 ಮತ್ತು 1.09 ಕೋಟಿ ರೂ. ಪರಿಹಾರ ನೀಡಲಾಗಿದೆ.

ಚಿತ್ರದುರ್ಗದ ಹಿರಿಯೂರು ಹಿರಿಯ ನ್ಯಾಯಾಲಯದಲ್ಲಿದ್ದ ಪಾಲು ವಿಭಾಗ ಪ್ರಕರಣವೊಂದನ್ನು 57.10 ಲಕ್ಷ ರೂ, ದಕ್ಷಿಣ ಕನ್ನಡ ಜಿಲ್ಲೆಯ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿದ್ದ ವಾಣಿಜ್ಯ ಅಮಲ್ಜಾರಿ ಪ್ರಕರಣವನ್ನು ವಿಲೇವಾರಿ ಮಾಡಿ, 63.07 ಲಕ್ಷ ರೂ ಪರಿಹಾರ ಕೊಡಿಸಲಾಗಿದೆ.
ಮಂಡ್ಯ ಜಿಲ್ಲೆಯ ಪ್ರಧಾನ ಸಿವಿಲ್‌ ನ್ಯಾಯಾಲಯದ ಮುಂದಿದ್ದ 18 ವರ್ಷ ಹಳೆಯ ಪಾಲು ವಿಭಾಗ ಪ್ರಕರಣ ಮತ್ತು ಚಾಮರಾಜನಗರದ ಹೆಚ್ಚುವರಿ ಸಿವಿಲ್‌ ಕೋರ್ಟ್‌ನಲ್ಲಿ 11 ವರ್ಷದಿಂದ ಬಾಕಿ ಉಳಿದಿದ್ದ ಪಾಲು ವಿಭಾಗ ಪ್ರಕರಣವನ್ನು ಇತ್ಯರ್ಥಪಡಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ವಿಡಿಯೋ, ಫೋಟೋ ಪ್ರಸಾರ ಮಾಡದಂತೆ ಮಾಧ್ಯಮಕ್ಕೆ ಹೈಕೋರ್ಟ್​ ತಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.