ETV Bharat / state

ಉತ್ತರ - ದಕ್ಷಿಣ ಒಳನಾಡಿನಲ್ಲಿ ಇಂದು ಅತೀವ ಮಳೆ ಸಾಧ್ಯತೆ... 7 ಜಿಲ್ಲೆಗಳಲ್ಲಿ Red alert! - ಭಾರೀ ಮಳೆ ಸುದ್ದಿ

ರಾಜ್ಯಾದ್ಯಂತ ಭಾನುವಾರ ನೈರುತ್ಯ ಮುಂಗಾರು ಚುರುಕಾಗಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಈ ಹಿನ್ನೆಲೆ ರಾಜ್ಯದ ಏಳು ಜಿಲ್ಲೆಗಳಲ್ಲಿ ರೆಡ್​​ ಅಲರ್ಟ್​ ಘೋಷಿಸಲಾಗಿದೆ.

seven districts red alert, seven districts red alert for Heavy rain, seven districts red alert for Heavy rain in the Karnataka state, Heavy rain, Heavy rain news, ಏಳು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​, ಭಾರೀ ಮಳೆ ಹಿನ್ನೆಲೆ ಏಳು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​, ಕರ್ನಾಟಕ ರಾಜ್ಯದಲ್ಲಿ ಭಾರೀ ಮಳೆ ಹಿನ್ನೆಲೆ ಏಳು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​, ಭಾರೀ ಮಳೆ, ಭಾರೀ ಮಳೆ ಸುದ್ದಿ,
ಉತ್ತರ-ದಕ್ಷಿಣ ಒಳನಾಡಿನಲ್ಲಿ ಇಂದು ಅತಿವ ಮಳೆ ಸಾಧ್ಯತೆ
author img

By

Published : Jul 19, 2021, 8:06 AM IST

ಬೆಂಗಳೂರು : ಪೂರ್ವ ಅರಬ್ಬಿ ಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಜುಲೈ 21ರಂದು ಬಂಗಾಳ ಉಪಸಾಗರದ ವಾಯವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಇದರ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 18 ರಿಂದ 22ರವರೆಗೆ ಗುಡುಗಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಬಗ್ಗೆ ಮಾತನಾಡಿದ ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್, ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಗುಡುಗಿನಿಂದ ಕೂಡಿದ ಭಾರಿ ಹಾಗೂ ಅತಿಭಾರಿ ಮಳೆ ನಿರೀಕ್ಷಿಸಲಾಗಿದೆ. ಕೆಲವೊಮ್ಮೆ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜುಲೈ 18 ಮತ್ತು 19ರಂದು ರೆಡ್ ಅಲರ್ಟ್ ಹಾಗೂ ಜುಲೈ 20ರಿಂದ 22ರವರೆಗೆ ಆರೆಂಜ್ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಜುಲೈ 18, 19ರಂದು ಆರೆಂಜ್ ಅಲರ್ಟ್, ಜುಲೈ 21 ಮತ್ತು 22ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದರು.

ರಾಜ್ಯಾದ್ಯಂತ ಮುಂಗಾರು ಚುರುಕು : ರಾಜ್ಯಾದ್ಯಂತ ಭಾನುವಾರ ನೈರುತ್ಯ ಮುಂಗಾರು ಚುರುಕಾಗಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ 21 ಸೆಂ.ಮೀ, ದಾವಣಗೆರೆಯ ಉಚ್ಚಂಗಿದುರ್ಗದಲ್ಲಿ 20 ಸೆಂ.ಮೀ, ಉತ್ತರ ಕನ್ನಡದ ಶಿರಾಲಿಯಲ್ಲಿ 18 ಸೆಂ.ಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರು : ಪೂರ್ವ ಅರಬ್ಬಿ ಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಜುಲೈ 21ರಂದು ಬಂಗಾಳ ಉಪಸಾಗರದ ವಾಯವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಇದರ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 18 ರಿಂದ 22ರವರೆಗೆ ಗುಡುಗಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಬಗ್ಗೆ ಮಾತನಾಡಿದ ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್, ಉತ್ತರಕನ್ನಡ, ಉಡುಪಿ, ದಕ್ಷಿಣಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಗುಡುಗಿನಿಂದ ಕೂಡಿದ ಭಾರಿ ಹಾಗೂ ಅತಿಭಾರಿ ಮಳೆ ನಿರೀಕ್ಷಿಸಲಾಗಿದೆ. ಕೆಲವೊಮ್ಮೆ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜುಲೈ 18 ಮತ್ತು 19ರಂದು ರೆಡ್ ಅಲರ್ಟ್ ಹಾಗೂ ಜುಲೈ 20ರಿಂದ 22ರವರೆಗೆ ಆರೆಂಜ್ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಜುಲೈ 18, 19ರಂದು ಆರೆಂಜ್ ಅಲರ್ಟ್, ಜುಲೈ 21 ಮತ್ತು 22ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದರು.

ರಾಜ್ಯಾದ್ಯಂತ ಮುಂಗಾರು ಚುರುಕು : ರಾಜ್ಯಾದ್ಯಂತ ಭಾನುವಾರ ನೈರುತ್ಯ ಮುಂಗಾರು ಚುರುಕಾಗಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ 21 ಸೆಂ.ಮೀ, ದಾವಣಗೆರೆಯ ಉಚ್ಚಂಗಿದುರ್ಗದಲ್ಲಿ 20 ಸೆಂ.ಮೀ, ಉತ್ತರ ಕನ್ನಡದ ಶಿರಾಲಿಯಲ್ಲಿ 18 ಸೆಂ.ಮೀ ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.